Homeಕರ್ನಾಟಕಮಾನನಷ್ಟ ಮೊಕದ್ದಮೆ ಪ್ರಕರಣ; ರಾಹುಲ್, ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್‌ಗೆ ಕೋರ್ಟ್ ಸಮನ್ಸ್

ಮಾನನಷ್ಟ ಮೊಕದ್ದಮೆ ಪ್ರಕರಣ; ರಾಹುಲ್, ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್‌ಗೆ ಕೋರ್ಟ್ ಸಮನ್ಸ್

- Advertisement -
- Advertisement -

ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿಯವರ ವಿರುದ್ಧ ಕರ್ನಾಟಕದಲ್ಲಿ ಮತ್ತೊಂದು ಮಾನನಷ್ಟ ಮೊಕದ್ದಮೆ ದಾಖಲಾಗಿದೆ. ಜೊತೆಗೆ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೂ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಸಮನ್ಸ್ ನೀಡಿದ್ದಾರೆ.

ಮೇ 9ರಂದು ರಾಜ್ಯ ಬಿಜೆಪಿ ರಾಜ್ಯ ಕಾರ್ಯದರ್ಶಿ ಕೇಶವಪ್ರಸಾದ್ ಅವರು ಸಲ್ಲಿಸಿರುವ ದೂರಿನ ಅನ್ವಯ ಈ ಪ್ರಕರಣ ದಾಖಲಾಗಿದೆ. ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯ ಪೂರ್ವದಲ್ಲಿ ಶೇ 40ರಷ್ಟು ಭ್ರಷ್ಟಾಚಾರದ ಆರೋಪಗಳನ್ನು ಕಾಂಗ್ರೆಸ್ ಮಾಡಿತ್ತು. ಈ ಸಂಬಂಧ ಬಿಜೆಪಿ ಕಾನೂನು ಸಮರಕ್ಕೆ ಇಳಿದಿದೆ.

ಚುನಾಯಿತ ಮಾಜಿ ಮತ್ತು ಹಾಲಿ ಸಂಸದರು/ಶಾಸಕರಿಗೆ ಸಂಬಂಧಿಸಿದ ಕ್ರಿಮಿನಲ್ ಮೊಕದ್ದಮೆಗಳನ್ನು ವಿಚಾರಣೆ ನಡೆಸುವ ವಿಶೇಷ ನ್ಯಾಯಾಲಯವು ಹೇಳಿಕೆಯನ್ನು ದಾಖಲಿಸಲು ಪ್ರಕರಣವನ್ನು ಜುಲೈ 27 ರಂದು ನಿಗದಿಪಡಿಸಿದೆ.

ಮೇ 5, 2023 ರಂದು ಪತ್ರಿಕೆಗಳಿಗೆ ಕಾಂಗ್ರೆಸ್‌ ನೀಡಿದ ಜಾಹೀರಾತಿನ ವಿರುದ್ಧ ಬಿಜೆಪಿ ಹೋರಾಟ ನಡೆಸುತ್ತಿದೆ. “ಬಿಜೆಪಿ ಸರ್ಕಾರವು ಶೇಕಡಾ 40 ರಷ್ಟು ಭ್ರಷ್ಟಾಚಾರದಲ್ಲಿ ತೊಡಗಿದೆ, ಹಿಂದಿನ ನಾಲ್ಕು ವರ್ಷಗಳಲ್ಲಿ ₹ 1.5 ಲಕ್ಷ ಕೋಟಿ ಲೂಟಿ ಮಾಡಿದೆ” ಎಂದು ಜಾಹೀರಾತು ಪ್ರಕಟಿಸಲಾಗಿತ್ತು.

ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ ಪತ್ರಿಕೆಗಳಿಗೆ ನೀಡಿದ ‘ಭ್ರಷ್ಟಾಚಾರದ ರೇಟ್ ಕಾರ್ಡ್’ ಜಾಹೀರಾತಿಗೆ ಸಂಬಂಧಿಸಿದಂತೆ ಚುನಾವಣಾ ಆಯೋಗ ಕೂಡ ಚುನಾವಣೆ ಸಂದರ್ಭದಲ್ಲಿ ನೋಟೀಸ್ ಕೂಡ ಜಾರಿ ಮಾಡಿತ್ತು.

“ರಾಜ್ಯದಲ್ಲಿನ ಬಿಜೆಪಿ ನೇತೃತ್ವದ ಸರ್ಕಾರದ ಅಡಿಯಲ್ಲಿ, ಉದ್ಯೋಗ ನೇಮಕಾತಿ ಮತ್ತು ವರ್ಗಾವಣೆಗಳಿಗಾಗಿ ಜನರು ಲಂಚವನ್ನು ನೀಡಬೇಕಾಗಿದೆ” ಎಂದು ಆರೋಪಿಸಿದ್ದ ಕಾಂಗ್ರೆಸ್, “ಯಾವ ಯಾವ ಕೆಲಸಕ್ಕೆ ಎಷ್ಟು ಹಣ ಪಾವತಿಸಬೇಕಾಗಿದೆ” ಎಂಬ ವಿವರಗಳನ್ನು ಪ್ರಕಟಿಸಿತ್ತು.

ಮೇಲ್ನೋಟಕ್ಕೆ ಕಾಂಗ್ರೆಸ್ ಮಾದರಿ ನೀತಿ ಸಂಹಿತೆಯ ನಿಬಂಧನೆಗಳನ್ನು ಉಲ್ಲಂಘಿಸಿರುವುದು ಕಂಡುಬಂದಿದೆ ಎಂದು ಆಯೋಗ ಅಭಿಪ್ರಾಯಪಟ್ಟಿತ್ತು.

ಜಾಹೀರಾತಿನಲ್ಲಿ ಏನಿದೆ?

“ಈ ಟ್ರಬಲ್ ಇಂಜಿನ್ ಸರ್ಕಾರ- ಭ್ರಷ್ಟಾಚಾರದ ರೇಟ್ ಕಾರ್ಡ್ 2019-2023” ಎಂದ ಶೀರ್ಷಿಕೆಯೊಂದಿಗೆ ಕಾಂಗ್ರೆಸ್ ಜಾಹೀರಾತು ಪ್ರಕಟಿಸಿತ್ತು.

“ಸಿಎಂ ಹುದ್ದೆಗೆ 2500 ಕೋಟಿ ರೂ., ಮಂತ್ರಿಗಳ ಹುದ್ದೆಗೆ 500 ಕೋಟಿ ರೂಗಳನ್ನು ಬಿಜೆಪಿ ಪಡೆಯುತ್ತದೆ” ಎಂದು ಆರೋಪಿಸಲಾಗಿತ್ತು.

ನೇಮಕಾತಿ ಮತ್ತು ವರ್ಗಾವಣೆ ದರ

ಕೆಎಸ್‌ಡಿಎಲ್: 5ರಿಂ 15 ಕೋಟಿ ರೂ.,

ಇಂಜಿನಿಯರ್‌: 1ರಿಂದ 5 ಕೋಟಿ ರೂ.

ಸಬ್‌ ರಿಜಿಸ್ಟ್ರಾರ್‌: 50 ಲಕ್ಷ ರೂ.ಗಳಿಂದ 5 ಕೋಟಿ ರೂ.

ಬೆಸ್ಕಾ: 1 ಕೋಟಿ ರೂ.

ಪಿಎಸ್‌ಐ: 80 ಲಕ್ಷ ರೂ.

ಸಹಾಯಕ ಪ್ರಾಧ್ಯಾಪಕ: 50 ಲಕ್ಷ – 70 ಲಕ್ಷ ರೂ.

ಉಪನ್ಯಾಸಕ: 30 ಲಕ್ಷ- 50 ಲಕ್ಷ ರೂ.

ಎಫ್‌ಡಿಎ:30 ಲಕ್ಷ ರೂ.

ಸಹಾಯಕ ಇಂಜಿನಿಯರ್‌: 30 ಲಕ್ಷ ರೂ.

ಬಮುಲ್- 25 ಲಕ್ಷ ರೂ.

ಪಿಡಬ್ಲ್ಯುಡಿ ಸಹಾಯಕ ಇಂಜಿನಿಯರ್‌ 10 ಲಕ್ಷ ರೂ.

ಪೊಲೀಸ್ ಪೇದೆ 10 ಲಕ್ಷ ರೂ.

***

ಹುದ್ದೆಗಳ ದರ 

ಬಿಡಿಎ ಆಯುಕ್ತ : 10 ಕೋಟಿ – 15 ಕೋಟಿ ರೂ.

ಕೆಪಿಎಸ್‌ಸಿ ಅಧ್ಯಕ್ಷ: 5 ರಿಂದ 15 ಕೋಟಿ ರೂ.

ಡಿಸಿ ಮತ್ತು ಎಸ್‌ಪಿ:  5 ರಿಂದ 15 ಕೋಟಿ ರೂ.

ಉಪಕುಲಪತಿ: 5 ರಿಂದ 10 ಕೋಟಿ ರೂ.

ಎಸಿ ಮತ್ತು ತಹಸೀಲ್ದಾರ್‌ 50 ಲಕ್ಷ- 3 ಕೋಟಿ ರೂ.

***

ಸರ್ಕಾರದ ಡೀಲ್‌ಗಳು

ಕೋವಿಡ್ ಕಿಟ್ ಪೂರೈಕೆ: 75%

ಪಿಡಬ್ಲ್ಯುಡಿ ಗುತ್ತಿಗೆಗಳು: 40 %

ಮಠಕ್ಕೆ ಅನುದಾನ: 30%

ಉಪಕರಣಗಳ ಪೂರೈಕೆ: 40%

ಮೊಟ್ಟೆ ಪೂರೈಕೆ: 30%

ರಸ್ತೆ ಗುತ್ತಿಗೆಗಳು: 40%

-ಹೀಗೆ ಜಾಹೀರಾತಿನಲ್ಲಿ ಆರೋಪಗಳನ್ನು ಕಾಂಗ್ರೆಸ್ ಮಾಡಿತ್ತು. “ಕಳೆದ ನಾಲ್ಕೇ ವರ್ಷಗಳಲ್ಲಿ 40% ಸರ್ಕಾರ ಕನ್ನಡಿಗರಿಂದ  1,50,000 ಕೋಟಿ ರೂ.ಗೂ ಹೆಚ್ಚು ಹಣವನ್ನು ಲೂಟಿ ಮಾಡಿದೆ. ಇದೇ ಗತಿಯಲ್ಲಿ ಸಾಗಿದರೆ ನಮ್ಮ ರಾಜ್ಯವೇ ನಾಶವಾಗುತ್ತದೆ. ಈ ಲೂಟಿಯನ್ನು ನಿಲ್ಲಿಸಿ. ಬದಲಾವಣೆ ಹಾಗೂ ಪ್ರಗತಿಗೆ ನಿಮ್ಮ ಮತ ನೀಡಿ. ಕಾಂಗ್ರೆಸ್‌ಗೆ ಮತ ನೀಡಿ” ಎಂದು ಜಾಹೀರಾತಿನಲ್ಲಿ ಉಲ್ಲೇಖಿಸಲಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...

ಯುಪಿ: ಮೊಹರಂ ಮೆರವಣಿಗೆಯಲ್ಲಿ ಪಿತೂರಿ: ಪಾಕ್ ಪರ ಘೋಷಣೆಯ ಸುಳ್ಳು ವಿಡಿಯೋ ಹರಿಬಿಟ್ಟ ಇಬ್ಬರು ಹಿಂದುತ್ವವಾದಿಗಳ ಬಂಧನ 

ಬರೇಲಿ (ಉತ್ತರ ಪ್ರದೇಶ): ಮೊಹರಂ ಮೆರವಣಿಗೆಯೊಂದರಲ್ಲಿ "ಪಾಕಿಸ್ತಾನ್ ಜಿಂದಾಬಾದ್" ಎಂದು ದೇಶವಿರೋಧಿ ಘೋಷಣೆ ಕೂಗಲಾಗಿದೆ ಎಂಬ ನಕಲಿ ವೀಡಿಯೋ ಸೃಷ್ಟಿಸಿ, ಮುಸ್ಲಿಂ ಸಮುದಾಯದ ಮೇಲೆ ಸುಳ್ಳು ಆರೋಪ ಹೊರಿಸಲು ಯತ್ನಿಸಿದ ಇಬ್ಬರು ಹಿಂದುತ್ವವಾದಿ...

ಮಕ್ಕಳಿಗೆ ಆರ್‌ಎಸ್‌ಎಸ್‌ ತರಬೇತಿ ನೀಡುವುದನ್ನು ಟೀಕಿಸಿ ವಿಡಿಯೋ ಹಂಚಿಕೆ : ಯುವಕನನ್ನು ವಶಕ್ಕೆ ಪಡೆದ ಪೊಲೀಸರು!

ರಾಜಸ್ಥಾನದ ಜುಂಜುನು ಜಿಲ್ಲೆಯ ನವೀನ್ ಚೌಧರಿ ಎಂಬ 25 ವರ್ಷದ ಯುವಕ, ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್‌) ಕುರಿತು ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದರು. 'ಜುಂಜುನು ಎಕ್ಸ್‌ಪ್ರೆಸ್' ಎಂಬ ಇನ್‌ಸ್ಟಾಗ್ರಾಮ್ ಪೇಜ್‌ನಲ್ಲಿ...

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...