Homeಕರ್ನಾಟಕಮಾನನಷ್ಟ ಮೊಕದ್ದಮೆ ಪ್ರಕರಣ; ರಾಹುಲ್, ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್‌ಗೆ ಕೋರ್ಟ್ ಸಮನ್ಸ್

ಮಾನನಷ್ಟ ಮೊಕದ್ದಮೆ ಪ್ರಕರಣ; ರಾಹುಲ್, ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್‌ಗೆ ಕೋರ್ಟ್ ಸಮನ್ಸ್

- Advertisement -
- Advertisement -

ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿಯವರ ವಿರುದ್ಧ ಕರ್ನಾಟಕದಲ್ಲಿ ಮತ್ತೊಂದು ಮಾನನಷ್ಟ ಮೊಕದ್ದಮೆ ದಾಖಲಾಗಿದೆ. ಜೊತೆಗೆ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೂ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಸಮನ್ಸ್ ನೀಡಿದ್ದಾರೆ.

ಮೇ 9ರಂದು ರಾಜ್ಯ ಬಿಜೆಪಿ ರಾಜ್ಯ ಕಾರ್ಯದರ್ಶಿ ಕೇಶವಪ್ರಸಾದ್ ಅವರು ಸಲ್ಲಿಸಿರುವ ದೂರಿನ ಅನ್ವಯ ಈ ಪ್ರಕರಣ ದಾಖಲಾಗಿದೆ. ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯ ಪೂರ್ವದಲ್ಲಿ ಶೇ 40ರಷ್ಟು ಭ್ರಷ್ಟಾಚಾರದ ಆರೋಪಗಳನ್ನು ಕಾಂಗ್ರೆಸ್ ಮಾಡಿತ್ತು. ಈ ಸಂಬಂಧ ಬಿಜೆಪಿ ಕಾನೂನು ಸಮರಕ್ಕೆ ಇಳಿದಿದೆ.

ಚುನಾಯಿತ ಮಾಜಿ ಮತ್ತು ಹಾಲಿ ಸಂಸದರು/ಶಾಸಕರಿಗೆ ಸಂಬಂಧಿಸಿದ ಕ್ರಿಮಿನಲ್ ಮೊಕದ್ದಮೆಗಳನ್ನು ವಿಚಾರಣೆ ನಡೆಸುವ ವಿಶೇಷ ನ್ಯಾಯಾಲಯವು ಹೇಳಿಕೆಯನ್ನು ದಾಖಲಿಸಲು ಪ್ರಕರಣವನ್ನು ಜುಲೈ 27 ರಂದು ನಿಗದಿಪಡಿಸಿದೆ.

ಮೇ 5, 2023 ರಂದು ಪತ್ರಿಕೆಗಳಿಗೆ ಕಾಂಗ್ರೆಸ್‌ ನೀಡಿದ ಜಾಹೀರಾತಿನ ವಿರುದ್ಧ ಬಿಜೆಪಿ ಹೋರಾಟ ನಡೆಸುತ್ತಿದೆ. “ಬಿಜೆಪಿ ಸರ್ಕಾರವು ಶೇಕಡಾ 40 ರಷ್ಟು ಭ್ರಷ್ಟಾಚಾರದಲ್ಲಿ ತೊಡಗಿದೆ, ಹಿಂದಿನ ನಾಲ್ಕು ವರ್ಷಗಳಲ್ಲಿ ₹ 1.5 ಲಕ್ಷ ಕೋಟಿ ಲೂಟಿ ಮಾಡಿದೆ” ಎಂದು ಜಾಹೀರಾತು ಪ್ರಕಟಿಸಲಾಗಿತ್ತು.

ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ ಪತ್ರಿಕೆಗಳಿಗೆ ನೀಡಿದ ‘ಭ್ರಷ್ಟಾಚಾರದ ರೇಟ್ ಕಾರ್ಡ್’ ಜಾಹೀರಾತಿಗೆ ಸಂಬಂಧಿಸಿದಂತೆ ಚುನಾವಣಾ ಆಯೋಗ ಕೂಡ ಚುನಾವಣೆ ಸಂದರ್ಭದಲ್ಲಿ ನೋಟೀಸ್ ಕೂಡ ಜಾರಿ ಮಾಡಿತ್ತು.

“ರಾಜ್ಯದಲ್ಲಿನ ಬಿಜೆಪಿ ನೇತೃತ್ವದ ಸರ್ಕಾರದ ಅಡಿಯಲ್ಲಿ, ಉದ್ಯೋಗ ನೇಮಕಾತಿ ಮತ್ತು ವರ್ಗಾವಣೆಗಳಿಗಾಗಿ ಜನರು ಲಂಚವನ್ನು ನೀಡಬೇಕಾಗಿದೆ” ಎಂದು ಆರೋಪಿಸಿದ್ದ ಕಾಂಗ್ರೆಸ್, “ಯಾವ ಯಾವ ಕೆಲಸಕ್ಕೆ ಎಷ್ಟು ಹಣ ಪಾವತಿಸಬೇಕಾಗಿದೆ” ಎಂಬ ವಿವರಗಳನ್ನು ಪ್ರಕಟಿಸಿತ್ತು.

ಮೇಲ್ನೋಟಕ್ಕೆ ಕಾಂಗ್ರೆಸ್ ಮಾದರಿ ನೀತಿ ಸಂಹಿತೆಯ ನಿಬಂಧನೆಗಳನ್ನು ಉಲ್ಲಂಘಿಸಿರುವುದು ಕಂಡುಬಂದಿದೆ ಎಂದು ಆಯೋಗ ಅಭಿಪ್ರಾಯಪಟ್ಟಿತ್ತು.

ಜಾಹೀರಾತಿನಲ್ಲಿ ಏನಿದೆ?

“ಈ ಟ್ರಬಲ್ ಇಂಜಿನ್ ಸರ್ಕಾರ- ಭ್ರಷ್ಟಾಚಾರದ ರೇಟ್ ಕಾರ್ಡ್ 2019-2023” ಎಂದ ಶೀರ್ಷಿಕೆಯೊಂದಿಗೆ ಕಾಂಗ್ರೆಸ್ ಜಾಹೀರಾತು ಪ್ರಕಟಿಸಿತ್ತು.

“ಸಿಎಂ ಹುದ್ದೆಗೆ 2500 ಕೋಟಿ ರೂ., ಮಂತ್ರಿಗಳ ಹುದ್ದೆಗೆ 500 ಕೋಟಿ ರೂಗಳನ್ನು ಬಿಜೆಪಿ ಪಡೆಯುತ್ತದೆ” ಎಂದು ಆರೋಪಿಸಲಾಗಿತ್ತು.

ನೇಮಕಾತಿ ಮತ್ತು ವರ್ಗಾವಣೆ ದರ

ಕೆಎಸ್‌ಡಿಎಲ್: 5ರಿಂ 15 ಕೋಟಿ ರೂ.,

ಇಂಜಿನಿಯರ್‌: 1ರಿಂದ 5 ಕೋಟಿ ರೂ.

ಸಬ್‌ ರಿಜಿಸ್ಟ್ರಾರ್‌: 50 ಲಕ್ಷ ರೂ.ಗಳಿಂದ 5 ಕೋಟಿ ರೂ.

ಬೆಸ್ಕಾ: 1 ಕೋಟಿ ರೂ.

ಪಿಎಸ್‌ಐ: 80 ಲಕ್ಷ ರೂ.

ಸಹಾಯಕ ಪ್ರಾಧ್ಯಾಪಕ: 50 ಲಕ್ಷ – 70 ಲಕ್ಷ ರೂ.

ಉಪನ್ಯಾಸಕ: 30 ಲಕ್ಷ- 50 ಲಕ್ಷ ರೂ.

ಎಫ್‌ಡಿಎ:30 ಲಕ್ಷ ರೂ.

ಸಹಾಯಕ ಇಂಜಿನಿಯರ್‌: 30 ಲಕ್ಷ ರೂ.

ಬಮುಲ್- 25 ಲಕ್ಷ ರೂ.

ಪಿಡಬ್ಲ್ಯುಡಿ ಸಹಾಯಕ ಇಂಜಿನಿಯರ್‌ 10 ಲಕ್ಷ ರೂ.

ಪೊಲೀಸ್ ಪೇದೆ 10 ಲಕ್ಷ ರೂ.

***

ಹುದ್ದೆಗಳ ದರ 

ಬಿಡಿಎ ಆಯುಕ್ತ : 10 ಕೋಟಿ – 15 ಕೋಟಿ ರೂ.

ಕೆಪಿಎಸ್‌ಸಿ ಅಧ್ಯಕ್ಷ: 5 ರಿಂದ 15 ಕೋಟಿ ರೂ.

ಡಿಸಿ ಮತ್ತು ಎಸ್‌ಪಿ:  5 ರಿಂದ 15 ಕೋಟಿ ರೂ.

ಉಪಕುಲಪತಿ: 5 ರಿಂದ 10 ಕೋಟಿ ರೂ.

ಎಸಿ ಮತ್ತು ತಹಸೀಲ್ದಾರ್‌ 50 ಲಕ್ಷ- 3 ಕೋಟಿ ರೂ.

***

ಸರ್ಕಾರದ ಡೀಲ್‌ಗಳು

ಕೋವಿಡ್ ಕಿಟ್ ಪೂರೈಕೆ: 75%

ಪಿಡಬ್ಲ್ಯುಡಿ ಗುತ್ತಿಗೆಗಳು: 40 %

ಮಠಕ್ಕೆ ಅನುದಾನ: 30%

ಉಪಕರಣಗಳ ಪೂರೈಕೆ: 40%

ಮೊಟ್ಟೆ ಪೂರೈಕೆ: 30%

ರಸ್ತೆ ಗುತ್ತಿಗೆಗಳು: 40%

-ಹೀಗೆ ಜಾಹೀರಾತಿನಲ್ಲಿ ಆರೋಪಗಳನ್ನು ಕಾಂಗ್ರೆಸ್ ಮಾಡಿತ್ತು. “ಕಳೆದ ನಾಲ್ಕೇ ವರ್ಷಗಳಲ್ಲಿ 40% ಸರ್ಕಾರ ಕನ್ನಡಿಗರಿಂದ  1,50,000 ಕೋಟಿ ರೂ.ಗೂ ಹೆಚ್ಚು ಹಣವನ್ನು ಲೂಟಿ ಮಾಡಿದೆ. ಇದೇ ಗತಿಯಲ್ಲಿ ಸಾಗಿದರೆ ನಮ್ಮ ರಾಜ್ಯವೇ ನಾಶವಾಗುತ್ತದೆ. ಈ ಲೂಟಿಯನ್ನು ನಿಲ್ಲಿಸಿ. ಬದಲಾವಣೆ ಹಾಗೂ ಪ್ರಗತಿಗೆ ನಿಮ್ಮ ಮತ ನೀಡಿ. ಕಾಂಗ್ರೆಸ್‌ಗೆ ಮತ ನೀಡಿ” ಎಂದು ಜಾಹೀರಾತಿನಲ್ಲಿ ಉಲ್ಲೇಖಿಸಲಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...