Homeಕರ್ನಾಟಕದಿನೇಶ್‌ ಪತ್ನಿ ಮುಸ್ಲಿಂ ಆದ ಮಾತ್ರಕ್ಕೆ ಅವರ ಮನೆಯನ್ನು ಅರ್ಧ ಪಾಕಿಸ್ತಾನ ಎನ್ನಬಹುದೇ? ಯತ್ನಾಳ್‌ಗೆ ಹೈಕೋರ್ಟ್‌...

ದಿನೇಶ್‌ ಪತ್ನಿ ಮುಸ್ಲಿಂ ಆದ ಮಾತ್ರಕ್ಕೆ ಅವರ ಮನೆಯನ್ನು ಅರ್ಧ ಪಾಕಿಸ್ತಾನ ಎನ್ನಬಹುದೇ? ಯತ್ನಾಳ್‌ಗೆ ಹೈಕೋರ್ಟ್‌ ತರಾಟೆ

- Advertisement -
- Advertisement -

“ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರ ಮನೆಯಲ್ಲಿ ಅರ್ಧ ಪಾಕಿಸ್ತಾನವಿದೆ” ಎಂಬ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರನ್ನು ಹೈಕೋರ್ಟ್ ತೀವ್ರ ತರಾಟೆಗೆ ತೆಗದುಕೊಂಡಿದೆ ಎಂದು ವರದಿಯಾಗಿದೆ.

ದಿನೇಶ್ ಗುಂಡೂರಾವ್ ಅವರ ಪತ್ನಿ ತಬು ರಾವ್ (ತಬಸ್ಸುಂ ರಾವ್) ಅವರು ಹೂಡಿರುವ ಮಾನನಷ್ಟ ಮೊಕದ್ದಮೆಗೆ ತಡೆಕೋರಿ ಯತ್ನಾಳ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದೆ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಏಕಸದಸ್ಯ ಪೀಠ, ಯತ್ನಾಳ್ ವಿರುದ್ದ ಕಿಡಿಕಾರಿದೆ ಎಂದು ಬಾರ್ & ಬೆಂಚ್ ವರದಿ ಮಾಡಿದೆ.

ವಿಚಾರಣೆ ಆರಂಭವಾಗುತ್ತಿದ್ದಂತೆ ಯತ್ನಾಳ್ ಅವರಿಗೆ ಪ್ರಶ್ನೆಯೆತ್ತಿದ್ದ ನ್ಯಾಯಮೂರ್ತಿ, “ಯತ್ನಾಳ್ ಅವರೇ ಇದೆಲ್ಲ ನಿಮಗೆ ಏಕೆ ಬೇಕು? ಪಾಕಿಸ್ತಾನ ಇದೆ ಎಂದರೆ ಏನರ್ಥ? ನೀವ್ಯಾಕೆ ಹೇಳಿಕೆ ಕೊಡಬೇಕು? ಅದರಿಂದ ನಿಮಗೇನು ಸಿಗುತ್ತದೆ? ನಾನು ಪ್ರತಿ ಬಾರಿ ಹೇಳುತ್ತಿದ್ದೇನೆ, ಕೆಸರೆರಚಾಟ ನಿಲ್ಲಬೇಕು” ಎಂದಿದ್ದಾರೆ.

“ಯಾರದ್ದೋ ಪತ್ನಿ ಮುಸ್ಲಿಂ ಎಂದ ಮಾತ್ರಕ್ಕೆ ಅರ್ಧ ಪಾಕಿಸ್ತಾನ ಎನ್ನಬಹುದೇ? ಏನದು? ಇದು ಮಾತನಾಡುವ ರೀತಿಯಲ್ಲ. ಇದು ಸರಿಯಲ್ಲ. ನೀವು ವೈಯಕ್ತಿಕ ಹೇಳಿಕೆ ಏಕೆ ನೀಡುತ್ತೀರಿ? ನಾನು ಇದಕ್ಕೆ ತಡೆ ನೀಡುವುದಿಲ್ಲ. ನೀವು ಎಲ್ಲರನ್ನೂ ಹಾಗೆ ವ್ಯಾಖ್ಯಾನಿಸುವುದು ಸರಿಯಲ್ಲ” ಎಂದು ಹೇಳಿದ್ದಾರೆ.

ನ್ಯಾಯಾಲಯಕ್ಕೆ ಹಾಜರಾಗಿದ್ದ ತಬು ರಾವ್‌ ಪರ ವಕೀಲರಾದ ಎಸ್‌ ಎ ಅಹ್ಮದ್‌ ಮತ್ತು ಸೂರ್ಯ ಮುಕುಂದರಾಜ್‌ ಅವರು “ಅರ್ಜಿದಾರರು ರಾಜಕೀಯದಲ್ಲಿಲ್ಲ. ಆದರೂ, ಈ ರೀತಿಯ ಹೇಳಿಕೆ ನೀಡಲಾಗಿದೆ”ಎಂದಿದ್ದಾರೆ.

ಯತ್ನಾಳ್‌ ಅವರನ್ನು ಪ್ರತಿನಿಧಿಸಿದ್ದ ವಕೀಲ ವೆಂಕಟೇಶ್‌ ದಳವಾಯಿ ಅವರು “ದಿನೇಶ್‌ ಹೇಳಿಕೆಗೆ ಪ್ರತಿಯಾಗಿ ಹೇಳಿಕೆ ನೀಡಲಾಗಿದೆಯಷ್ಟೆ. ಮಾರನೆಯ ದಿನ ಸ್ಪಷ್ಟನೆಯನ್ನೂ ನೀಡಲಾಗಿದೆ. ಉದ್ದೇಶ ಪೂರ್ವಕವಾಗಿ ಆ ಹೇಳಿಕೆ ನೀಡಿಲ್ಲ. ನಾಳೆಗೆ ವಿಚಾರಣಾಧೀನ ನ್ಯಾಯಾಲಯದ ಮುಂದೆ ಹಾಜರಾಗಬೇಕಿದೆ. ಅದಕ್ಕೆ ತಡೆ ನೀಡಬೇಕು” ಎಂದು ಕೋರಿದ್ದಾರೆ.

ತಡೆ ನೀಡಲು ನಿರಾಕರಿಸಿದ ನ್ಯಾಯಾಧೀಶರು, ತಬು ರಾವ್ ಪರ ವಕೀಲ ಎಸ್‌ ಎ ಅಹ್ಮದ್‌ ಅವರಿಗೆ ಆಕ್ಷೇಪಣೆ ಸಲ್ಲಿಸಲು ಸೂಚಿಸಿ ವಿಚಾರಣೆ ಮುಂದೂಡಿದ್ದಾರೆ.

ಪ್ರಕರಣದ ಹಿನ್ನೆಲೆ : ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ತೀರ್ಥಹಳ್ಳಿಯ ಬಿಜೆಪಿ ಮುಖಂಡ ಸಾಯಿಪ್ರಸಾದ್‌ನನ್ನು ಎನ್‌ಐಎ ತಂಡ ವಿಚಾರಣೆಗೆ ಒಳಪಡಿಸಿದೆ ಎಂದು ಏಪ್ರಿಲ್ 5, 2024ರಂದು ವರದಿಯಾಗಿತ್ತು.

ಈ ಬೆನ್ನಲ್ಲೇ ಎಕ್ಸ್ ಮೂಲಕ ಪ್ರತಿಕ್ರಿಯಿಸಿದ್ದ ಸಚಿವ ದಿನೇಶ್ ಗುಂಡೂರಾವ್, “ಸ್ಫೋಟಕ್ಕೆ ನಮ್ಮ ಸರ್ಕಾರವೇ ಕಾರಣ ಅನ್ನೋವಂತೆ ಮಾತಾನಾಡುತ್ತಿದ್ದ ರಾಜ್ಯದ ಕೇಸರಿ ಕಲಿಗಳು ಈಗ ಏನು ಹೇಳುತ್ತಾರೆ? ಬಿಜೆಪಿ ಮುಖಂಡನನ್ನು ಎನ್‌ಐಎ ವಶಕ್ಕೆ ಪಡೆದಿದೆ ಎಂದ ಮೇಲೆ ರಾಮೇಶ್ವರಂ ಕೆಫೆ ಸ್ಫೋಟದಲ್ಲಿ ಬಿಜೆಪಿ ಕೈವಾಡ ಇದೆ ಎಂದು ಅರ್ಥಅಲ್ಲವೇ? ರಾಷ್ಟ್ರದ ಭದ್ರತೆ ವಿಚಾರವನ್ನೂ ಲೆಕ್ಕಿಸದೇ ರಾಮೇಶ್ವರಂ ಬಾಂಬ್‌ ಸ್ಫೋಟ ಪ್ರಕರಣವನ್ನು ಕಾಂಗ್ರೆಸ್‌ ಸರ್ಕಾರದ ಮೇಲೆ ಹೊರೆಸಿದ ರಾಜ್ಯ ಬಿಜೆಪಿ ನಾಯಕರು ಈಗ ಉತ್ತರ ನೀಡಲೇ ಬೇಕು” ಎಂದಿದ್ದರು.

ಈ ಕುರಿತು ಮಾಧ್ಯವರ ಪ್ರಶ್ನೆಗೆ ಉತ್ತರಿಸಿದ್ದ ಯತ್ನಾಳ್ “ಹೆಚ್ಚು ಕಡಿಮೆ ಗುಂಡೂರಾವ್ ಅವರ ಮನೆಯಲ್ಲಿ ಅರ್ಧ ಪಾಕಿಸ್ತಾನ ಇದೆ. ದೇಶದ ವಿರುದ್ದ ಹೇಳಿಕೆ ಕೊಡುವುದು ಗುಂಡೂರಾವ್‌ಗೆ ಚಟ ಆಗಿಬಿಟ್ಟಿದೆ” ಎಂದಿದ್ದರು.

ಯತ್ನಾಳ್ ಹೇಳಿಕೆ ತಿರುಗೇಟು ನೀಡಿದ್ದ ದಿನೇಶ್ ಗುಂಡೂರಾವ್ ಪತ್ನಿ ತಬು ರಾವ್ “ದಿನೇಶ್ ಗುಂಡೂರಾವ್ ಅವರ ಮನೆಯಲ್ಲಿ ಅರ್ಧ ಪಾಕಿಸ್ತಾನ ಇದೆ ಎಂಬ ಯತ್ನಾಳ್ ಅವರ ಹೇಳಿಕೆಯು ಅವಹೇಳನಕಾರಿ ಮತ್ತು ಮಾನಹಾನಿಕರವಾಗಿದೆ. ನಾನು ಮುಸಲ್ಮಾನಳಾಗಿ ಹುಟ್ಟಿರಬಹುದು. ಹಾಗಂತ ನನ್ನ ಭಾರತೀಯತೆಯನ್ನು ಯಾರೂ ಪ್ರಶ್ನಿಸಲು ಸಾಧ್ಯವಿಲ್ಲ. ಭಾರತೀಯ ಚುನಾವಣಾ ಆಯೋಗ ಈ ಸಂಬಂಧ ಕ್ರಮ ಕೈಗೊಳ್ಳಲಿದೆಯಾ? ಪ್ರಧಾನಿ ಮೋದಿ, ಜೆಪಿ ನಡ್ಡಾ ಅವರು ಈ ವಾಡಿಕೆಯ ತಪ್ಪಿತಸ್ಥನ ವಿರುದ್ದ ಕ್ರಮ ಕೈಗೊಳ್ಳುತ್ತಾರಾ? ಎಂದು ಪ್ರಶ್ನಿಸಿದ್ದರು. ಡಿಸಿಎಂ ಡಿ.ಕೆ ಶಿವಕುಮಾರ್ ಅವರಿಗೆ ಎಕ್ಸ್ ಪೋಸ್ಟ್ ಟ್ಯಾಗ್ ಮಾಡಿದ್ದರು.

ತಬುರಾವ್ ಅವರ ದೂರು ಪರಿಗಣಿಸಿದ್ದ ಜನಪ್ರತಿನಿಧಿಗಳ ವಿಶೇಷ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಲು ಆದೇಶಿಸಿತ್ತು.

ಇದನ್ನೂ ಓದಿ : ಬೆಂಗಳೂರಿನ ಮುಸ್ಲಿಂ ಬಾಹುಳ್ಯದ ಪ್ರದೇಶವನ್ನು ‘ಪಾಕಿಸ್ತಾನ’ ಎಂದ ಹೈಕೋರ್ಟ್ ನ್ಯಾಯಾಧೀಶ : ವ್ಯಾಪಕ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...