Homeಮುಖಪುಟಮಾನನಷ್ಟ ಕೇಸ್: ವಿಚಾರಣೆಗೆ ಖುದ್ದು ಹಾಜರಾಗದಿದ್ದರೆ ವಾರಂಟ್ - ನಟಿ ಕಂಗನಾಗೆ ಮುಂಬೈ ಕೋರ್ಟ್ ಎಚ್ಚರಿಕೆ

ಮಾನನಷ್ಟ ಕೇಸ್: ವಿಚಾರಣೆಗೆ ಖುದ್ದು ಹಾಜರಾಗದಿದ್ದರೆ ವಾರಂಟ್ – ನಟಿ ಕಂಗನಾಗೆ ಮುಂಬೈ ಕೋರ್ಟ್ ಎಚ್ಚರಿಕೆ

- Advertisement -
- Advertisement -

ಬಾಲಿವುಡ್ ಬರಹಗಾರ, ಸಾಹಿತಿ ಜಾವೇದ್ ಅಖ್ತರ್‌, ನಟಿ ಕಂಗನಾ ರಣಾವತ್ ವಿರುದ್ಧ ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ಮುಂದಿನ ವಿಚಾರಣೆಗೆ ಖುದ್ದು ಹಾಜರಾಗದಿದ್ದಲ್ಲಿ ವಾರಂಟ್ ಹೊರಡಿಸುವುದಾಗಿ ಮುಂಬೈ ಕೋರ್ಟ್ ಎಚ್ಚರಿಕೆ ನೀಡಿದೆ.

ಇಂದು (ಮಂಗಳವಾರ) ನಡೆದ ವಿಚಾರಣೆಗೆ ನಟಿ ಕಂಗನಾ ರಣಾವತ್ ಅವರ ವೈಯಕ್ತಿಕ ಹಾಜರಾತಿಗೆ ವಿನಾಯಿತಿ ನೀಡಿದ ಮುಂಬೈ ಕೋರ್ಟ್, ಮುಂದಿನ ವಿಚಾರಣೆಯ ದಿನಾಂಕ ಸೆಪ್ಟಂಬರ್ 20 ರಂದು ನ್ಯಾಯಾಲಯಕ್ಕೆ ಹಾಜರಾಗಲು ವಿಫಲವಾದರೆ ನಟಿಯ ವಿರುದ್ಧ ವಾರಂಟ್ ಹೊರಡಿಸುವುದಾಗಿ ಎಚ್ಚರಿಕೆ ನೀಡಿದೆ.

ಮಾನನಷ್ಟ ಮೊಕದ್ದಮೆ ಪ್ರಕರಣ ವಿಚಾರಣೆಗೆ ಬರುತ್ತಿದ್ದಂತೆ, ನಟಿ ಕಂಗನಾ ರಣಾವತ್ ಅವರ ಆರೋಗ್ಯ ಸರಿಯಿಲ್ಲದ ಕಾರಣ ಆ ದಿನದ ವೈಯಕ್ತಿಕ ಹಾಜರಾತಿಯಿಂದ ವಿನಾಯಿತಿ ನೀಡುವಂತೆ ನಟಿ ಪರ ವಕೀಲರು ಕೋರಿದ್ದರು.

ಇದನ್ನೂ ಓದಿ: ಜಾವೇದ್ ಅಖ್ತರ್ V/s ಕಂಗನಾ: ವಾರೆಂಟ್ ಪ್ರಶ್ನಿಸಿ ಅರ್ಜಿ ಸಲ್ಲಿಸಿದ ನಟಿ

ವಕೀಲರು ನ್ಯಾಯಾಲಯಕ್ಕೆ ವೈದ್ಯಕೀಯ ಪ್ರಮಾಣಪತ್ರವನ್ನು ಸಲ್ಲಿಸಿದ್ದಾರೆ. ಜೊತೆಗೆ ನಟಿ ತನ್ನ ಚಿತ್ರದ ಪ್ರಚಾರಕ್ಕಾಗಿ ಪ್ರಯಾಣಿಸುತಿದ್ದು, ಕೊರೊನಾ ರೋಗಲಕ್ಷಣಗಳು ಕಾಣಿಸಿಕೊಂಡಿವೆ ಎಂದು ಹೇಳಿದ್ದಾರೆ.

ಇದನ್ನು ಖಂಡಿಸಿರುವ ಜಾವೇದ್ ಅಖ್ತರ್ ಪರ ವಕೀಲರು ಇದು ಪ್ರಕರಣದ ವಿಚಾರಣೆಯನ್ನು ವಿಳಂಬಗೊಳಿಸುವ ಒಂದು ತಂತ್ರ ಎಂದಿದ್ದಾರೆ.

ವಾದಗಳನ್ನು ಆಲಿಸಿದ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಆರ್‌ಆರ್ ಖಾನ್, ನಟಿ ಕಂಗನಾ ರಣಾವತ್‌ಗೆ ಈ  ದಿನದ ವಿಚಾರಣೆಯಿಂದ ವಿನಾಯಿತಿ ನೀಡಿದ್ದು, ಮುಂದಿನ ವಿಚಾರಣೆಗೆ ಹಾಜರಾಗಬೇಕು ಎಂದು ತಿಳಿಸಿ  ಸೆಪ್ಟೆಂಬರ್ 20 ರಂದು ವಿಚಾರಣೆಯನ್ನು ಮುಂದೂಡಿದ್ದಾರೆ.

ಜೊತೆಗೆ ಮುಂದಿನ ವಿಚಾರಣೆಗೆ ನಟಿ ಹಾಜರಾಗಲು ವಿಫಲವಾದರೆ, ಆಕೆಯ ವಿರುದ್ಧ ವಾರಂಟ್ ಹೊರಡಿಸಲಾಗುವುದು ಎಂದು ಮ್ಯಾಜಿಸ್ಟ್ರೇಟ್ ಎಚ್ಚರಿಕೆ ನೀಡಿದ್ದಾರೆ.

ಟಿವಿ ಸಂದರ್ಶನವೊಂದರಲ್ಲಿ ನಟಿ ಕಂಗನಾ ತಮ್ಮ ವಿರುದ್ಧ ಮಾನಹಾನಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಜಾವೇದ್‌ ಅಖ್ತರ್‌ ಕಳೆದ ನವೆಂಬರ್‌ನಲ್ಲಿ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ದೂರು ದಾಖಲಿಸಿದ್ದರು. ಕಳೆದ ವರ್ಷ ಜೂನ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ ನಟ ಸುಶಾಂತ್ ಸಿಂಗ್ ರಜಪೂತ್‌ ಪ್ರಕರಣದಲ್ಲಿ ಕಂಗನಾ ತಮ್ಮ ಹೆಸರನ್ನು ವಿನಾಃ ಕಾರಣ ಎಳೆದು ತಂದಿದ್ದಾರೆ ಎಂದು ಜಾವೇದ್ ಅಖ್ತರ್‌ ತಮ್ಮ ದೂರಿನಲ್ಲಿ ತಿಳಿಸಿದ್ದಾರೆ.

ಅಂದಿನಿಂದ ವಿಚಾರಣೆಯಿಂದ ತಪ್ಪಿಸಿಕೊಳ್ಳಲು ಹಲವು ಬಾರಿ ಪ್ರಯತ್ನಿಸಿದ್ದಾರೆ. ಪ್ರಕರಣದಲ್ಲಿ ವೈಯಕ್ತಿಕ ಹಾಜರಾತಿಯಿಂದ ವಿನಾಯಿತಿ ನೀಡಬೇಕೆಂದು ನಟಿ ಹಲವು ಬಾರಿ ಮನವಿ ಮಾಡಿದ್ದಾರೆ. ಜುಲೈ 17 ರಂದು ವಿಚಾರಣೆ ನಡೆಸಿದ್ದ ನ್ಯಾಯಾಲಯ ಇದು ಕೊನೆಯ ಅವಕಾಶ ಎಂದಿತ್ತು. ಆದರೂ ಈ ಬಾರಿ ಮತ್ತೆ ಅನಾರೋಗ್ಯದ ಕಾರಣ ನೀಡಿದ್ದಾರೆ. ಹೀಗಾಗಿ ಮುಂದಿನ ವಿಚಾರಣೆಗೆ ಹಾಜರಾಗದಿದ್ದಲ್ಲಿ ವಾರಂಟ್ ಹೊರಡಿಸುವ ಎಚ್ಚರಿಕೆ ನೀಡಲಾಗಿದೆ.


ಇದನ್ನೂ ಓದಿ: RSS, ವಿಎಚ್‌ಪಿ, ತಾಲಿಬಾನ್ ಒಂದೇ ಮನಸ್ಥಿತಿಯವು: ಸಾಹಿತಿ ಜಾವೇದ್ ಅಖ್ತರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...