Homeಮುಖಪುಟಮಾನನಷ್ಟ ಕೇಸ್: ವಿಚಾರಣೆಗೆ ಖುದ್ದು ಹಾಜರಾಗದಿದ್ದರೆ ವಾರಂಟ್ - ನಟಿ ಕಂಗನಾಗೆ ಮುಂಬೈ ಕೋರ್ಟ್ ಎಚ್ಚರಿಕೆ

ಮಾನನಷ್ಟ ಕೇಸ್: ವಿಚಾರಣೆಗೆ ಖುದ್ದು ಹಾಜರಾಗದಿದ್ದರೆ ವಾರಂಟ್ – ನಟಿ ಕಂಗನಾಗೆ ಮುಂಬೈ ಕೋರ್ಟ್ ಎಚ್ಚರಿಕೆ

- Advertisement -
- Advertisement -

ಬಾಲಿವುಡ್ ಬರಹಗಾರ, ಸಾಹಿತಿ ಜಾವೇದ್ ಅಖ್ತರ್‌, ನಟಿ ಕಂಗನಾ ರಣಾವತ್ ವಿರುದ್ಧ ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ಮುಂದಿನ ವಿಚಾರಣೆಗೆ ಖುದ್ದು ಹಾಜರಾಗದಿದ್ದಲ್ಲಿ ವಾರಂಟ್ ಹೊರಡಿಸುವುದಾಗಿ ಮುಂಬೈ ಕೋರ್ಟ್ ಎಚ್ಚರಿಕೆ ನೀಡಿದೆ.

ಇಂದು (ಮಂಗಳವಾರ) ನಡೆದ ವಿಚಾರಣೆಗೆ ನಟಿ ಕಂಗನಾ ರಣಾವತ್ ಅವರ ವೈಯಕ್ತಿಕ ಹಾಜರಾತಿಗೆ ವಿನಾಯಿತಿ ನೀಡಿದ ಮುಂಬೈ ಕೋರ್ಟ್, ಮುಂದಿನ ವಿಚಾರಣೆಯ ದಿನಾಂಕ ಸೆಪ್ಟಂಬರ್ 20 ರಂದು ನ್ಯಾಯಾಲಯಕ್ಕೆ ಹಾಜರಾಗಲು ವಿಫಲವಾದರೆ ನಟಿಯ ವಿರುದ್ಧ ವಾರಂಟ್ ಹೊರಡಿಸುವುದಾಗಿ ಎಚ್ಚರಿಕೆ ನೀಡಿದೆ.

ಮಾನನಷ್ಟ ಮೊಕದ್ದಮೆ ಪ್ರಕರಣ ವಿಚಾರಣೆಗೆ ಬರುತ್ತಿದ್ದಂತೆ, ನಟಿ ಕಂಗನಾ ರಣಾವತ್ ಅವರ ಆರೋಗ್ಯ ಸರಿಯಿಲ್ಲದ ಕಾರಣ ಆ ದಿನದ ವೈಯಕ್ತಿಕ ಹಾಜರಾತಿಯಿಂದ ವಿನಾಯಿತಿ ನೀಡುವಂತೆ ನಟಿ ಪರ ವಕೀಲರು ಕೋರಿದ್ದರು.

ಇದನ್ನೂ ಓದಿ: ಜಾವೇದ್ ಅಖ್ತರ್ V/s ಕಂಗನಾ: ವಾರೆಂಟ್ ಪ್ರಶ್ನಿಸಿ ಅರ್ಜಿ ಸಲ್ಲಿಸಿದ ನಟಿ

ವಕೀಲರು ನ್ಯಾಯಾಲಯಕ್ಕೆ ವೈದ್ಯಕೀಯ ಪ್ರಮಾಣಪತ್ರವನ್ನು ಸಲ್ಲಿಸಿದ್ದಾರೆ. ಜೊತೆಗೆ ನಟಿ ತನ್ನ ಚಿತ್ರದ ಪ್ರಚಾರಕ್ಕಾಗಿ ಪ್ರಯಾಣಿಸುತಿದ್ದು, ಕೊರೊನಾ ರೋಗಲಕ್ಷಣಗಳು ಕಾಣಿಸಿಕೊಂಡಿವೆ ಎಂದು ಹೇಳಿದ್ದಾರೆ.

ಇದನ್ನು ಖಂಡಿಸಿರುವ ಜಾವೇದ್ ಅಖ್ತರ್ ಪರ ವಕೀಲರು ಇದು ಪ್ರಕರಣದ ವಿಚಾರಣೆಯನ್ನು ವಿಳಂಬಗೊಳಿಸುವ ಒಂದು ತಂತ್ರ ಎಂದಿದ್ದಾರೆ.

ವಾದಗಳನ್ನು ಆಲಿಸಿದ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಆರ್‌ಆರ್ ಖಾನ್, ನಟಿ ಕಂಗನಾ ರಣಾವತ್‌ಗೆ ಈ  ದಿನದ ವಿಚಾರಣೆಯಿಂದ ವಿನಾಯಿತಿ ನೀಡಿದ್ದು, ಮುಂದಿನ ವಿಚಾರಣೆಗೆ ಹಾಜರಾಗಬೇಕು ಎಂದು ತಿಳಿಸಿ  ಸೆಪ್ಟೆಂಬರ್ 20 ರಂದು ವಿಚಾರಣೆಯನ್ನು ಮುಂದೂಡಿದ್ದಾರೆ.

ಜೊತೆಗೆ ಮುಂದಿನ ವಿಚಾರಣೆಗೆ ನಟಿ ಹಾಜರಾಗಲು ವಿಫಲವಾದರೆ, ಆಕೆಯ ವಿರುದ್ಧ ವಾರಂಟ್ ಹೊರಡಿಸಲಾಗುವುದು ಎಂದು ಮ್ಯಾಜಿಸ್ಟ್ರೇಟ್ ಎಚ್ಚರಿಕೆ ನೀಡಿದ್ದಾರೆ.

ಟಿವಿ ಸಂದರ್ಶನವೊಂದರಲ್ಲಿ ನಟಿ ಕಂಗನಾ ತಮ್ಮ ವಿರುದ್ಧ ಮಾನಹಾನಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಜಾವೇದ್‌ ಅಖ್ತರ್‌ ಕಳೆದ ನವೆಂಬರ್‌ನಲ್ಲಿ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ದೂರು ದಾಖಲಿಸಿದ್ದರು. ಕಳೆದ ವರ್ಷ ಜೂನ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ ನಟ ಸುಶಾಂತ್ ಸಿಂಗ್ ರಜಪೂತ್‌ ಪ್ರಕರಣದಲ್ಲಿ ಕಂಗನಾ ತಮ್ಮ ಹೆಸರನ್ನು ವಿನಾಃ ಕಾರಣ ಎಳೆದು ತಂದಿದ್ದಾರೆ ಎಂದು ಜಾವೇದ್ ಅಖ್ತರ್‌ ತಮ್ಮ ದೂರಿನಲ್ಲಿ ತಿಳಿಸಿದ್ದಾರೆ.

ಅಂದಿನಿಂದ ವಿಚಾರಣೆಯಿಂದ ತಪ್ಪಿಸಿಕೊಳ್ಳಲು ಹಲವು ಬಾರಿ ಪ್ರಯತ್ನಿಸಿದ್ದಾರೆ. ಪ್ರಕರಣದಲ್ಲಿ ವೈಯಕ್ತಿಕ ಹಾಜರಾತಿಯಿಂದ ವಿನಾಯಿತಿ ನೀಡಬೇಕೆಂದು ನಟಿ ಹಲವು ಬಾರಿ ಮನವಿ ಮಾಡಿದ್ದಾರೆ. ಜುಲೈ 17 ರಂದು ವಿಚಾರಣೆ ನಡೆಸಿದ್ದ ನ್ಯಾಯಾಲಯ ಇದು ಕೊನೆಯ ಅವಕಾಶ ಎಂದಿತ್ತು. ಆದರೂ ಈ ಬಾರಿ ಮತ್ತೆ ಅನಾರೋಗ್ಯದ ಕಾರಣ ನೀಡಿದ್ದಾರೆ. ಹೀಗಾಗಿ ಮುಂದಿನ ವಿಚಾರಣೆಗೆ ಹಾಜರಾಗದಿದ್ದಲ್ಲಿ ವಾರಂಟ್ ಹೊರಡಿಸುವ ಎಚ್ಚರಿಕೆ ನೀಡಲಾಗಿದೆ.


ಇದನ್ನೂ ಓದಿ: RSS, ವಿಎಚ್‌ಪಿ, ತಾಲಿಬಾನ್ ಒಂದೇ ಮನಸ್ಥಿತಿಯವು: ಸಾಹಿತಿ ಜಾವೇದ್ ಅಖ್ತರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...