Homeಮುಖಪುಟಮಾನನಷ್ಟ ಕೇಸ್: ವಿಚಾರಣೆಗೆ ಖುದ್ದು ಹಾಜರಾಗದಿದ್ದರೆ ವಾರಂಟ್ - ನಟಿ ಕಂಗನಾಗೆ ಮುಂಬೈ ಕೋರ್ಟ್ ಎಚ್ಚರಿಕೆ

ಮಾನನಷ್ಟ ಕೇಸ್: ವಿಚಾರಣೆಗೆ ಖುದ್ದು ಹಾಜರಾಗದಿದ್ದರೆ ವಾರಂಟ್ – ನಟಿ ಕಂಗನಾಗೆ ಮುಂಬೈ ಕೋರ್ಟ್ ಎಚ್ಚರಿಕೆ

- Advertisement -
- Advertisement -

ಬಾಲಿವುಡ್ ಬರಹಗಾರ, ಸಾಹಿತಿ ಜಾವೇದ್ ಅಖ್ತರ್‌, ನಟಿ ಕಂಗನಾ ರಣಾವತ್ ವಿರುದ್ಧ ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ಮುಂದಿನ ವಿಚಾರಣೆಗೆ ಖುದ್ದು ಹಾಜರಾಗದಿದ್ದಲ್ಲಿ ವಾರಂಟ್ ಹೊರಡಿಸುವುದಾಗಿ ಮುಂಬೈ ಕೋರ್ಟ್ ಎಚ್ಚರಿಕೆ ನೀಡಿದೆ.

ಇಂದು (ಮಂಗಳವಾರ) ನಡೆದ ವಿಚಾರಣೆಗೆ ನಟಿ ಕಂಗನಾ ರಣಾವತ್ ಅವರ ವೈಯಕ್ತಿಕ ಹಾಜರಾತಿಗೆ ವಿನಾಯಿತಿ ನೀಡಿದ ಮುಂಬೈ ಕೋರ್ಟ್, ಮುಂದಿನ ವಿಚಾರಣೆಯ ದಿನಾಂಕ ಸೆಪ್ಟಂಬರ್ 20 ರಂದು ನ್ಯಾಯಾಲಯಕ್ಕೆ ಹಾಜರಾಗಲು ವಿಫಲವಾದರೆ ನಟಿಯ ವಿರುದ್ಧ ವಾರಂಟ್ ಹೊರಡಿಸುವುದಾಗಿ ಎಚ್ಚರಿಕೆ ನೀಡಿದೆ.

ಮಾನನಷ್ಟ ಮೊಕದ್ದಮೆ ಪ್ರಕರಣ ವಿಚಾರಣೆಗೆ ಬರುತ್ತಿದ್ದಂತೆ, ನಟಿ ಕಂಗನಾ ರಣಾವತ್ ಅವರ ಆರೋಗ್ಯ ಸರಿಯಿಲ್ಲದ ಕಾರಣ ಆ ದಿನದ ವೈಯಕ್ತಿಕ ಹಾಜರಾತಿಯಿಂದ ವಿನಾಯಿತಿ ನೀಡುವಂತೆ ನಟಿ ಪರ ವಕೀಲರು ಕೋರಿದ್ದರು.

ಇದನ್ನೂ ಓದಿ: ಜಾವೇದ್ ಅಖ್ತರ್ V/s ಕಂಗನಾ: ವಾರೆಂಟ್ ಪ್ರಶ್ನಿಸಿ ಅರ್ಜಿ ಸಲ್ಲಿಸಿದ ನಟಿ

ವಕೀಲರು ನ್ಯಾಯಾಲಯಕ್ಕೆ ವೈದ್ಯಕೀಯ ಪ್ರಮಾಣಪತ್ರವನ್ನು ಸಲ್ಲಿಸಿದ್ದಾರೆ. ಜೊತೆಗೆ ನಟಿ ತನ್ನ ಚಿತ್ರದ ಪ್ರಚಾರಕ್ಕಾಗಿ ಪ್ರಯಾಣಿಸುತಿದ್ದು, ಕೊರೊನಾ ರೋಗಲಕ್ಷಣಗಳು ಕಾಣಿಸಿಕೊಂಡಿವೆ ಎಂದು ಹೇಳಿದ್ದಾರೆ.

ಇದನ್ನು ಖಂಡಿಸಿರುವ ಜಾವೇದ್ ಅಖ್ತರ್ ಪರ ವಕೀಲರು ಇದು ಪ್ರಕರಣದ ವಿಚಾರಣೆಯನ್ನು ವಿಳಂಬಗೊಳಿಸುವ ಒಂದು ತಂತ್ರ ಎಂದಿದ್ದಾರೆ.

ವಾದಗಳನ್ನು ಆಲಿಸಿದ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಆರ್‌ಆರ್ ಖಾನ್, ನಟಿ ಕಂಗನಾ ರಣಾವತ್‌ಗೆ ಈ  ದಿನದ ವಿಚಾರಣೆಯಿಂದ ವಿನಾಯಿತಿ ನೀಡಿದ್ದು, ಮುಂದಿನ ವಿಚಾರಣೆಗೆ ಹಾಜರಾಗಬೇಕು ಎಂದು ತಿಳಿಸಿ  ಸೆಪ್ಟೆಂಬರ್ 20 ರಂದು ವಿಚಾರಣೆಯನ್ನು ಮುಂದೂಡಿದ್ದಾರೆ.

ಜೊತೆಗೆ ಮುಂದಿನ ವಿಚಾರಣೆಗೆ ನಟಿ ಹಾಜರಾಗಲು ವಿಫಲವಾದರೆ, ಆಕೆಯ ವಿರುದ್ಧ ವಾರಂಟ್ ಹೊರಡಿಸಲಾಗುವುದು ಎಂದು ಮ್ಯಾಜಿಸ್ಟ್ರೇಟ್ ಎಚ್ಚರಿಕೆ ನೀಡಿದ್ದಾರೆ.

ಟಿವಿ ಸಂದರ್ಶನವೊಂದರಲ್ಲಿ ನಟಿ ಕಂಗನಾ ತಮ್ಮ ವಿರುದ್ಧ ಮಾನಹಾನಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಜಾವೇದ್‌ ಅಖ್ತರ್‌ ಕಳೆದ ನವೆಂಬರ್‌ನಲ್ಲಿ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ದೂರು ದಾಖಲಿಸಿದ್ದರು. ಕಳೆದ ವರ್ಷ ಜೂನ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ ನಟ ಸುಶಾಂತ್ ಸಿಂಗ್ ರಜಪೂತ್‌ ಪ್ರಕರಣದಲ್ಲಿ ಕಂಗನಾ ತಮ್ಮ ಹೆಸರನ್ನು ವಿನಾಃ ಕಾರಣ ಎಳೆದು ತಂದಿದ್ದಾರೆ ಎಂದು ಜಾವೇದ್ ಅಖ್ತರ್‌ ತಮ್ಮ ದೂರಿನಲ್ಲಿ ತಿಳಿಸಿದ್ದಾರೆ.

ಅಂದಿನಿಂದ ವಿಚಾರಣೆಯಿಂದ ತಪ್ಪಿಸಿಕೊಳ್ಳಲು ಹಲವು ಬಾರಿ ಪ್ರಯತ್ನಿಸಿದ್ದಾರೆ. ಪ್ರಕರಣದಲ್ಲಿ ವೈಯಕ್ತಿಕ ಹಾಜರಾತಿಯಿಂದ ವಿನಾಯಿತಿ ನೀಡಬೇಕೆಂದು ನಟಿ ಹಲವು ಬಾರಿ ಮನವಿ ಮಾಡಿದ್ದಾರೆ. ಜುಲೈ 17 ರಂದು ವಿಚಾರಣೆ ನಡೆಸಿದ್ದ ನ್ಯಾಯಾಲಯ ಇದು ಕೊನೆಯ ಅವಕಾಶ ಎಂದಿತ್ತು. ಆದರೂ ಈ ಬಾರಿ ಮತ್ತೆ ಅನಾರೋಗ್ಯದ ಕಾರಣ ನೀಡಿದ್ದಾರೆ. ಹೀಗಾಗಿ ಮುಂದಿನ ವಿಚಾರಣೆಗೆ ಹಾಜರಾಗದಿದ್ದಲ್ಲಿ ವಾರಂಟ್ ಹೊರಡಿಸುವ ಎಚ್ಚರಿಕೆ ನೀಡಲಾಗಿದೆ.


ಇದನ್ನೂ ಓದಿ: RSS, ವಿಎಚ್‌ಪಿ, ತಾಲಿಬಾನ್ ಒಂದೇ ಮನಸ್ಥಿತಿಯವು: ಸಾಹಿತಿ ಜಾವೇದ್ ಅಖ್ತರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...