Homeಮುಖಪುಟಮಾನನಷ್ಟ ಕೇಸ್: ವಿಚಾರಣೆಗೆ ಖುದ್ದು ಹಾಜರಾಗದಿದ್ದರೆ ವಾರಂಟ್ - ನಟಿ ಕಂಗನಾಗೆ ಮುಂಬೈ ಕೋರ್ಟ್ ಎಚ್ಚರಿಕೆ

ಮಾನನಷ್ಟ ಕೇಸ್: ವಿಚಾರಣೆಗೆ ಖುದ್ದು ಹಾಜರಾಗದಿದ್ದರೆ ವಾರಂಟ್ – ನಟಿ ಕಂಗನಾಗೆ ಮುಂಬೈ ಕೋರ್ಟ್ ಎಚ್ಚರಿಕೆ

- Advertisement -
- Advertisement -

ಬಾಲಿವುಡ್ ಬರಹಗಾರ, ಸಾಹಿತಿ ಜಾವೇದ್ ಅಖ್ತರ್‌, ನಟಿ ಕಂಗನಾ ರಣಾವತ್ ವಿರುದ್ಧ ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ಮುಂದಿನ ವಿಚಾರಣೆಗೆ ಖುದ್ದು ಹಾಜರಾಗದಿದ್ದಲ್ಲಿ ವಾರಂಟ್ ಹೊರಡಿಸುವುದಾಗಿ ಮುಂಬೈ ಕೋರ್ಟ್ ಎಚ್ಚರಿಕೆ ನೀಡಿದೆ.

ಇಂದು (ಮಂಗಳವಾರ) ನಡೆದ ವಿಚಾರಣೆಗೆ ನಟಿ ಕಂಗನಾ ರಣಾವತ್ ಅವರ ವೈಯಕ್ತಿಕ ಹಾಜರಾತಿಗೆ ವಿನಾಯಿತಿ ನೀಡಿದ ಮುಂಬೈ ಕೋರ್ಟ್, ಮುಂದಿನ ವಿಚಾರಣೆಯ ದಿನಾಂಕ ಸೆಪ್ಟಂಬರ್ 20 ರಂದು ನ್ಯಾಯಾಲಯಕ್ಕೆ ಹಾಜರಾಗಲು ವಿಫಲವಾದರೆ ನಟಿಯ ವಿರುದ್ಧ ವಾರಂಟ್ ಹೊರಡಿಸುವುದಾಗಿ ಎಚ್ಚರಿಕೆ ನೀಡಿದೆ.

ಮಾನನಷ್ಟ ಮೊಕದ್ದಮೆ ಪ್ರಕರಣ ವಿಚಾರಣೆಗೆ ಬರುತ್ತಿದ್ದಂತೆ, ನಟಿ ಕಂಗನಾ ರಣಾವತ್ ಅವರ ಆರೋಗ್ಯ ಸರಿಯಿಲ್ಲದ ಕಾರಣ ಆ ದಿನದ ವೈಯಕ್ತಿಕ ಹಾಜರಾತಿಯಿಂದ ವಿನಾಯಿತಿ ನೀಡುವಂತೆ ನಟಿ ಪರ ವಕೀಲರು ಕೋರಿದ್ದರು.

ಇದನ್ನೂ ಓದಿ: ಜಾವೇದ್ ಅಖ್ತರ್ V/s ಕಂಗನಾ: ವಾರೆಂಟ್ ಪ್ರಶ್ನಿಸಿ ಅರ್ಜಿ ಸಲ್ಲಿಸಿದ ನಟಿ

ವಕೀಲರು ನ್ಯಾಯಾಲಯಕ್ಕೆ ವೈದ್ಯಕೀಯ ಪ್ರಮಾಣಪತ್ರವನ್ನು ಸಲ್ಲಿಸಿದ್ದಾರೆ. ಜೊತೆಗೆ ನಟಿ ತನ್ನ ಚಿತ್ರದ ಪ್ರಚಾರಕ್ಕಾಗಿ ಪ್ರಯಾಣಿಸುತಿದ್ದು, ಕೊರೊನಾ ರೋಗಲಕ್ಷಣಗಳು ಕಾಣಿಸಿಕೊಂಡಿವೆ ಎಂದು ಹೇಳಿದ್ದಾರೆ.

ಇದನ್ನು ಖಂಡಿಸಿರುವ ಜಾವೇದ್ ಅಖ್ತರ್ ಪರ ವಕೀಲರು ಇದು ಪ್ರಕರಣದ ವಿಚಾರಣೆಯನ್ನು ವಿಳಂಬಗೊಳಿಸುವ ಒಂದು ತಂತ್ರ ಎಂದಿದ್ದಾರೆ.

ವಾದಗಳನ್ನು ಆಲಿಸಿದ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಆರ್‌ಆರ್ ಖಾನ್, ನಟಿ ಕಂಗನಾ ರಣಾವತ್‌ಗೆ ಈ  ದಿನದ ವಿಚಾರಣೆಯಿಂದ ವಿನಾಯಿತಿ ನೀಡಿದ್ದು, ಮುಂದಿನ ವಿಚಾರಣೆಗೆ ಹಾಜರಾಗಬೇಕು ಎಂದು ತಿಳಿಸಿ  ಸೆಪ್ಟೆಂಬರ್ 20 ರಂದು ವಿಚಾರಣೆಯನ್ನು ಮುಂದೂಡಿದ್ದಾರೆ.

ಜೊತೆಗೆ ಮುಂದಿನ ವಿಚಾರಣೆಗೆ ನಟಿ ಹಾಜರಾಗಲು ವಿಫಲವಾದರೆ, ಆಕೆಯ ವಿರುದ್ಧ ವಾರಂಟ್ ಹೊರಡಿಸಲಾಗುವುದು ಎಂದು ಮ್ಯಾಜಿಸ್ಟ್ರೇಟ್ ಎಚ್ಚರಿಕೆ ನೀಡಿದ್ದಾರೆ.

ಟಿವಿ ಸಂದರ್ಶನವೊಂದರಲ್ಲಿ ನಟಿ ಕಂಗನಾ ತಮ್ಮ ವಿರುದ್ಧ ಮಾನಹಾನಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಜಾವೇದ್‌ ಅಖ್ತರ್‌ ಕಳೆದ ನವೆಂಬರ್‌ನಲ್ಲಿ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ದೂರು ದಾಖಲಿಸಿದ್ದರು. ಕಳೆದ ವರ್ಷ ಜೂನ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ ನಟ ಸುಶಾಂತ್ ಸಿಂಗ್ ರಜಪೂತ್‌ ಪ್ರಕರಣದಲ್ಲಿ ಕಂಗನಾ ತಮ್ಮ ಹೆಸರನ್ನು ವಿನಾಃ ಕಾರಣ ಎಳೆದು ತಂದಿದ್ದಾರೆ ಎಂದು ಜಾವೇದ್ ಅಖ್ತರ್‌ ತಮ್ಮ ದೂರಿನಲ್ಲಿ ತಿಳಿಸಿದ್ದಾರೆ.

ಅಂದಿನಿಂದ ವಿಚಾರಣೆಯಿಂದ ತಪ್ಪಿಸಿಕೊಳ್ಳಲು ಹಲವು ಬಾರಿ ಪ್ರಯತ್ನಿಸಿದ್ದಾರೆ. ಪ್ರಕರಣದಲ್ಲಿ ವೈಯಕ್ತಿಕ ಹಾಜರಾತಿಯಿಂದ ವಿನಾಯಿತಿ ನೀಡಬೇಕೆಂದು ನಟಿ ಹಲವು ಬಾರಿ ಮನವಿ ಮಾಡಿದ್ದಾರೆ. ಜುಲೈ 17 ರಂದು ವಿಚಾರಣೆ ನಡೆಸಿದ್ದ ನ್ಯಾಯಾಲಯ ಇದು ಕೊನೆಯ ಅವಕಾಶ ಎಂದಿತ್ತು. ಆದರೂ ಈ ಬಾರಿ ಮತ್ತೆ ಅನಾರೋಗ್ಯದ ಕಾರಣ ನೀಡಿದ್ದಾರೆ. ಹೀಗಾಗಿ ಮುಂದಿನ ವಿಚಾರಣೆಗೆ ಹಾಜರಾಗದಿದ್ದಲ್ಲಿ ವಾರಂಟ್ ಹೊರಡಿಸುವ ಎಚ್ಚರಿಕೆ ನೀಡಲಾಗಿದೆ.


ಇದನ್ನೂ ಓದಿ: RSS, ವಿಎಚ್‌ಪಿ, ತಾಲಿಬಾನ್ ಒಂದೇ ಮನಸ್ಥಿತಿಯವು: ಸಾಹಿತಿ ಜಾವೇದ್ ಅಖ್ತರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...