Homeಮುಖಪುಟಮಾನನಷ್ಟ ಮೊಕದ್ದಮೆ: BBC, ಇಂಟರ್ನೆಟ್ ಆರ್ಕೈವ್, ವಿಕಿಮೀಡಿಯಾಗೆ ದೆಹಲಿ ಕೋರ್ಟ್‌ನಿಂದ ಹೊಸ ಸಮನ್ಸ್

ಮಾನನಷ್ಟ ಮೊಕದ್ದಮೆ: BBC, ಇಂಟರ್ನೆಟ್ ಆರ್ಕೈವ್, ವಿಕಿಮೀಡಿಯಾಗೆ ದೆಹಲಿ ಕೋರ್ಟ್‌ನಿಂದ ಹೊಸ ಸಮನ್ಸ್

- Advertisement -
- Advertisement -

2002ರ ಗುಜರಾತ್ ಗಲಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಪಾತ್ರದ ಕುರಿತ ಬಿಬಿಸಿ ಸಾಕ್ಷ್ಯಚಿತ್ರದ ಸಂಬಂದ ಮಾನನಷ್ಟ ಮೊಕದ್ದಮೆಯಲ್ಲಿ ದೆಹಲಿ ನ್ಯಾಯಾಲಯವು ಶುಕ್ರವಾರ BBCಗೆ  ಹೊಸ ಸಮನ್ಸ್ ನೀಡಿದೆ.

ಬಿಬಿಸಿ ಜೊತೆಗೆ ಲಾಭರಹಿತ ಸಂಸ್ಥೆ ವಿಕಿಮೀಡಿಯಾ ಮತ್ತು ಡಿಜಿಟಲ್ ಲೈಬ್ರರಿ ಇಂಟರ್ನೆಟ್ ಆರ್ಕೈವ್‌ಗೆ ನ್ಯಾಯಾಲಯವು ಸಮನ್ಸ್ ಜಾರಿ ಮಾಡಿದೆ ಎಂದು ಲೈವ್ ಲಾ ವರದಿ ಮಾಡಿದೆ.

ಬಿಜೆಪಿ ಸದಸ್ಯ ಬಿನಯ್ ಕುಮಾರ್ ಸಿಂಗ್ ಅವರು ಮಾನನಷ್ಟ ದೂರು ದಾಖಲಿಸಿದ್ದು, ”ಸಾಕ್ಷ್ಯಚಿತ್ರವನ್ನು ಭಾರತದಲ್ಲಿ ಅಧಿಕೃತವಾಗಿ ಬಿಡುಗಡೆ ಮಾಡದಿದ್ದರೂ, ವಿಕಿಪೀಡಿಯಾದಲ್ಲಿ ಅದನ್ನು ವೀಕ್ಷಿಸಲು ಲಿಂಕ್‌ಗಳನ್ನು ಒದಗಿಸುತ್ತದೆ ಮತ್ತು ಆ ಬಗ್ಗೆ ಇಂಟರ್ನೆಟ್ ಆರ್ಕೈವ್‌ನಲ್ಲಿ ವಿಷಯವು ಇನ್ನೂ ಲಭ್ಯವಿದೆ” ಎಂದು ಅವರು ಆರೋಪಿಸಿದ್ದಾರೆ.

ವಿಕಿಮೀಡಿಯಾ ಫೌಂಡೇಶನ್ ವಿಕಿಪೀಡಿಯಾ ವೆಬ್‌ಸೈಟ್‌ಗೆ ಹಣ ನೀಡುತ್ತದೆ. ವಿಕಿಮೀಡಿಯಾ ಮತ್ತು ಇಂಟರ್ನೆಟ್ ಆರ್ಕೈವ್ ಎರಡೂ ಅಮೇರಿಕನ್ ಕಂಪನಿಗಳಾಗಿವೆ, ಆದರೆ BBC ಬ್ರಿಟಿಷ್ ಮಾಧ್ಯಮ ಸಂಸ್ಥೆಯಾಗಿದೆ.

ಮೇ 3 ರಂದು, ನ್ಯಾಯಾಲಯವು ಮೊದಲು ಸಮನ್ಸ್ ಜಾರಿಗೊಳಿಸಿದಾಗ, ಇಂಗ್ಲೆಂಡ್ ಮತ್ತು ಅಮೆರಿಕದಲ್ಲಿರುವ ಎರಡು ವಿದೇಶಿ ಘಟಕಗಳ ವಕೀಲರು ತಮ್ಮ ವಿರುದ್ಧದ ಮಾನನಷ್ಟ ಮೊಕದ್ದಮೆ ಹೂಡುವ ಅಧಿಕಾರ ಇಲ್ಲ ಎಂದು ಹೇಳಿದ್ದರು.

”ಹೇಗ್ ಕನ್ವೆನ್ಷನ್ ಮತ್ತು ಭಾರತ ಸರ್ಕಾರದ ನಿಯಮಗಳ ಪ್ರಕಾರ, ವಿದೇಶಗಳಲ್ಲಿ ಸಮನ್ಸ್ ಅಥವಾ ನೋಟಿಸ್‌ಗಳನ್ನು ಕಾನೂನು ವ್ಯವಹಾರಗಳ ಇಲಾಖೆ, ಕಾನೂನು ಮತ್ತು ನ್ಯಾಯ ಸಚಿವಾಲಯದ ಮೂಲಕ ಮಾತ್ರ ಜಾರಿಗೊಳಿಸಬಹುದು ಎಂದು ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶ ರುಚಿಕಾ ಸಿಂಗ್ಲಾ ಗಮನಿಸಿದ್ದಾರೆ” ಎಂದು ದಿ ಹಿಂದೂ ವರದಿ ಮಾಡಿದೆ.

ಇದೀಗ ನ್ಯಾಯಾಲಯವು ಎರಡೂ ವಿದೇಶಿ ಸಂಸ್ಥೆಗಳಿಗೆ ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವಾಲಯದ ಮೂಲಕ ಶುಕ್ರವಾರ ಹೊಸ ಸಮನ್ಸ್ ನೀಡಲಾಗಿದೆ.

”ಭಾರತ: ಮೋದಿ ಪ್ರಶ್ನೆ” ಎಂಬ ಎರಡು ಭಾಗಗಳ ಸಾಕ್ಷ್ಯಚಿತ್ರದ ಮೊದಲ ಸಂಚಿಕೆಯನ್ನು ಬಿಬಿಸಿ ಜನವರಿ 17ರಂದು ಬಿಡುಗಡೆ ಮಾಡಿತ್ತು. 2002ರ ಗುಜರಾತ್ ಗಲಭೆಗಳ ಕುರಿತು ಮತ್ತು ಇದರಲ್ಲಿ ರಾಜ್ಯದ ಮುಖ್ಯಮಂತ್ರಿಯಾಗಿದ್ದ ಮೋದಿಯವರ ಪಾತ್ರ ಏನು ಎಂಬ ಬಗ್ಗೆ ಸಾಕ್ಷ್ಯಚಿತ್ರ ತೋರಿಸಿದೆ. ಹಿಂಸಾಚಾರಕ್ಕೆ ಕಾರಣವಾದವರ ವಿರುದ್ಧ ಶಿಕ್ಷೆಯಿಲ್ಲದ ವಾತಾವರಣಕ್ಕೆ ಮುಖ್ಯಮಂತ್ರಿ ನೇರ ಹೊಣೆಗಾರರಾಗಿದ್ದರು ಎಂದು ಆ ಸಾಕ್ಷ್ಯಚಿತ್ರಗಳು ಹೇಳುತ್ತವೆ. ಗಲಭೆಯಲ್ಲಿ 790 ಮುಸ್ಲಿಮರು ಮತ್ತು 254 ಹಿಂದೂಗಳು ಸಾವನ್ನಪ್ಪಿದ್ದಾರೆ ಎಂದು ಅಧಿಕೃತ ದಾಖಲೆಗಳು ತೋರಿಸುತ್ತವೆ.

ಯುನೈಟೆಡ್ ಕಿಂಗ್‌ಡಮ್ ಸರ್ಕಾರದಿಂದ ಕಳುಹಿಸಲಾದ ತನಿಖಾಧಿಕಾರಿಗಳಲ್ಲಿ ಮಾಜಿ ಹಿರಿಯ ರಾಜತಾಂತ್ರಿಕರನ್ನು ಒಳಗೊಂಡಿತ್ತು. ಅವರಲ್ಲಿ ಒಬ್ಬರು ಸಾಕ್ಷ್ಯಚಿತ್ರದಲ್ಲಿ ಮಾತನಾಡಿದ್ದು, ಈ ಹಿಂಸಾಚಾರವನ್ನು ಆರ್‌ಎಸ್ಎಸ್‌ ಅಂಗಸಂಸ್ಥೆಯಾದ ವಿಶ್ವ ಹಿಂದೂ ಪರಿಷತ್‌ನಿಂದ ಯೋಜಿಸಲಾಗಿದೆ ಎಂದು ಹೇಳಿದ್ದಾರೆ.

ಈ ಸಾಕ್ಷ್ಯಚಿತ್ರವನ್ನು ಆಡಳಿತಾರೂಢ ಬಿಜೆಪಿ ಸರ್ಕಾರ ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಜನವರಿ 21ರಂದು, ಕೇಂದ್ರವು ಸಾಕ್ಷ್ಯಚಿತ್ರದ ಲಿಂಕ್‌ಗಳನ್ನು ತೆಗೆದುಹಾಕಲು ಯೂಟ್ಯೂಬ್ ಮತ್ತು ಟ್ವಿಟರ್‌ಗೆ ನಿರ್ದೇಶಿಸಿತ್ತು. ವಿದೇಶಾಂಗ ಸಚಿವ ಎಸ್ ಜೈಶಂಕರ್ ಸಾಕ್ಷ್ಯಚಿತ್ರವನ್ನು ರಾಜಕೀಯ ದುರುದ್ದೇಶ ಎಂದು ಕರೆದಿದ್ದರು.

ವಿಶ್ವ ಹಿಂದೂ ಪರಿಷತ್ ಮತ್ತು ಮೋದಿ ವಿರುದ್ಧ ಮಾನಹಾನಿಕರ ಮತ್ತು ಆಧಾರರಹಿತ ಆರೋಪಗಳನ್ನು ಸಾಕ್ಷ್ಯಚಿತ್ರ ಒಳಗೊಂಡಿದೆ ಎಂದು ಸಿಂಗ್ ತಮ್ಮ ಮನವಿಯಲ್ಲಿ ಆರೋಪಿಸಿದ್ದಾರೆ. ಸಾಕ್ಷ್ಯಚಿತ್ರವನ್ನು ಪ್ರಕಟಿಸದಂತೆ ಬಿಬಿಸಿ, ವಿಕಿಪೀಡಿಯಾ ಮತ್ತು ಇಂಟರ್ನೆಟ್ ಆರ್ಕೈವ್ ಅನ್ನು ನಿರ್ಬಂಧಿಸಲು ಅವರು ನ್ಯಾಯಾಲಯದಿಂದ ನಿರ್ದೇಶನಗಳನ್ನು ಕೋರಿದ್ದಾರೆ.

ಆರ್‌ಎಸ್‌ಎಸ್ ಮತ್ತು ವಿಎಚ್‌ಪಿಗೆ ಬೇಷರತ್ ಕ್ಷಮೆಯಾಚಿಸಲು ಮತ್ತು 10 ಲಕ್ಷ ರೂಪಾಯಿ ಪರಿಹಾರವನ್ನು ನೀಡುವಂತೆ ಬಿಬಿಸಿ, ವಿಕಿಮೀಡಿಯಾ ಮತ್ತು ಇಂಟರ್ನೆಟ್ ಆರ್ಕೈವ್‌ಗೆ ನಿರ್ದೇಶನ ನೀಡುವಂತೆ ಅವರು ನ್ಯಾಯಾಲಯವನ್ನು ಕೋರಿದ್ದಾರೆ.

ಇದನ್ನೂ ಓದಿ: ಮೋದಿ ಸರ್ಕಾರ ಬಿಬಿಸಿ ಸಾಕ್ಷ್ಯಚಿತ್ರವನ್ನು ಅಕ್ರಮವಾಗಿ ನಿಷೇಧಿಸಿದ್ದು ಹೇಗೆ?: ಸಾಕೇತ್ ಗೋಖಲೆ ಹಂಚಿಕೊಂಡ ವಿವರವಾದ ಮಾಹಿತಿ ಇಲ್ಲಿದೆ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಜನರೊಂದಿಗೆ ಒಗ್ಗಟ್ಟು ಪ್ರದರ್ಶನ: ದೆಹಲಿಯ ಮೆಕ್‌ಡೊನಾಲ್ಡ್ಸ್ ಹೊರಗೆ ಪ್ರತಿಭಟನೆ

ಪ್ಯಾಲೆಸ್ಟೈನ್ ಜೊತೆ ಒಗ್ಗಟ್ಟಿನ ಭಾರತೀಯ ಜನರು (ಐಪಿಎಸ್‌ಪಿ) ಗುಂಪಿನ ಸದಸ್ಯರು (ಏ.3) ಜನಪಥ್ ಪ್ರದೇಶದ ಮೆಕ್‌ಡೊನಾಲ್ಡ್ಸ್ ಔಟ್‌ಲೆಟ್‌ನ ಹೊರಗೆ ದಿಢೀರ್ ಪ್ರತಿಭಟನೆಯನ್ನು ಆಯೋಜಿಸಿದ್ದರು. ಪ್ಯಾಲೆಸ್ತೀನಿಯನ್ನರನ್ನು ಒಳಗೊಂಡ ನಡೆಯುತ್ತಿರುವ ಸಂಘರ್ಷದಲ್ಲಿ ಮೆಕ್‌ಡೊನಾಲ್ಡ್ಸ್ ಮತ್ತು ಕೋಕಾ-ಕೋಲಾದಂತಹ ಬಹುರಾಷ್ಟ್ರೀಯ...

‘ಇರಾನಿಯನ್ನರು ಸ್ಮಾರ್ಟ್ ಚೆಸ್ ಆಡುತ್ತಿದ್ದು, ಟ್ರಂಪ್ ಭ್ರಮಾಲೋಕದಲ್ಲಿದ್ದಾರೆ..’; ಮಾಜಿ ರಾಜತಾಂತ್ರಿಕ ಅಧಿಕಾರಿ ಕೆ.ಪಿ. ಫ್ಯಾಬಿಯನ್

ಪ್ರಸ್ತುತ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದ ಭಾರತದ ಮಾಜಿ ರಾಯಭಾರಿ ಕೆ.ಪಿ. ಫ್ಯಾಬಿಯನ್, "ಇರಾನಿಯನ್ನರು ಸ್ಮಾರ್ಟ್ ಚೆಸ್ ಆಟವನ್ನು ಆಡುತ್ತಿದ್ದಾರೆ. ಆದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳು...

‘ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ’ : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್ ಚಡ್ಡಾ

ತನ್ನ ವಿರುದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಮಾಡಿರುವ ಎಲ್ಲಾ ಆರೋಪಗಳನ್ನು ರಾಘವ್ ಚಡ್ಡಾ ಶನಿವಾರ (ಏ.4) ಅಲ್ಲಗಳೆದಿದ್ದು, "ಅವೆಲ್ಲವೂ ಸುಳ್ಳು ಮತ್ತು ಸಂಘಟಿತ ಅಭಿಯಾನದ ಭಾಗ" ಎಂದಿದ್ದಾರೆ. "ಸಂಸತ್ತಿನಲ್ಲಿ ನನ್ನ ಉದ್ದೇಶ...

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...