Homeಮುಖಪುಟಮಾನನಷ್ಟ ಮೊಕದ್ದಮೆ: BBC, ಇಂಟರ್ನೆಟ್ ಆರ್ಕೈವ್, ವಿಕಿಮೀಡಿಯಾಗೆ ದೆಹಲಿ ಕೋರ್ಟ್‌ನಿಂದ ಹೊಸ ಸಮನ್ಸ್

ಮಾನನಷ್ಟ ಮೊಕದ್ದಮೆ: BBC, ಇಂಟರ್ನೆಟ್ ಆರ್ಕೈವ್, ವಿಕಿಮೀಡಿಯಾಗೆ ದೆಹಲಿ ಕೋರ್ಟ್‌ನಿಂದ ಹೊಸ ಸಮನ್ಸ್

- Advertisement -
- Advertisement -

2002ರ ಗುಜರಾತ್ ಗಲಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಪಾತ್ರದ ಕುರಿತ ಬಿಬಿಸಿ ಸಾಕ್ಷ್ಯಚಿತ್ರದ ಸಂಬಂದ ಮಾನನಷ್ಟ ಮೊಕದ್ದಮೆಯಲ್ಲಿ ದೆಹಲಿ ನ್ಯಾಯಾಲಯವು ಶುಕ್ರವಾರ BBCಗೆ  ಹೊಸ ಸಮನ್ಸ್ ನೀಡಿದೆ.

ಬಿಬಿಸಿ ಜೊತೆಗೆ ಲಾಭರಹಿತ ಸಂಸ್ಥೆ ವಿಕಿಮೀಡಿಯಾ ಮತ್ತು ಡಿಜಿಟಲ್ ಲೈಬ್ರರಿ ಇಂಟರ್ನೆಟ್ ಆರ್ಕೈವ್‌ಗೆ ನ್ಯಾಯಾಲಯವು ಸಮನ್ಸ್ ಜಾರಿ ಮಾಡಿದೆ ಎಂದು ಲೈವ್ ಲಾ ವರದಿ ಮಾಡಿದೆ.

ಬಿಜೆಪಿ ಸದಸ್ಯ ಬಿನಯ್ ಕುಮಾರ್ ಸಿಂಗ್ ಅವರು ಮಾನನಷ್ಟ ದೂರು ದಾಖಲಿಸಿದ್ದು, ”ಸಾಕ್ಷ್ಯಚಿತ್ರವನ್ನು ಭಾರತದಲ್ಲಿ ಅಧಿಕೃತವಾಗಿ ಬಿಡುಗಡೆ ಮಾಡದಿದ್ದರೂ, ವಿಕಿಪೀಡಿಯಾದಲ್ಲಿ ಅದನ್ನು ವೀಕ್ಷಿಸಲು ಲಿಂಕ್‌ಗಳನ್ನು ಒದಗಿಸುತ್ತದೆ ಮತ್ತು ಆ ಬಗ್ಗೆ ಇಂಟರ್ನೆಟ್ ಆರ್ಕೈವ್‌ನಲ್ಲಿ ವಿಷಯವು ಇನ್ನೂ ಲಭ್ಯವಿದೆ” ಎಂದು ಅವರು ಆರೋಪಿಸಿದ್ದಾರೆ.

ವಿಕಿಮೀಡಿಯಾ ಫೌಂಡೇಶನ್ ವಿಕಿಪೀಡಿಯಾ ವೆಬ್‌ಸೈಟ್‌ಗೆ ಹಣ ನೀಡುತ್ತದೆ. ವಿಕಿಮೀಡಿಯಾ ಮತ್ತು ಇಂಟರ್ನೆಟ್ ಆರ್ಕೈವ್ ಎರಡೂ ಅಮೇರಿಕನ್ ಕಂಪನಿಗಳಾಗಿವೆ, ಆದರೆ BBC ಬ್ರಿಟಿಷ್ ಮಾಧ್ಯಮ ಸಂಸ್ಥೆಯಾಗಿದೆ.

ಮೇ 3 ರಂದು, ನ್ಯಾಯಾಲಯವು ಮೊದಲು ಸಮನ್ಸ್ ಜಾರಿಗೊಳಿಸಿದಾಗ, ಇಂಗ್ಲೆಂಡ್ ಮತ್ತು ಅಮೆರಿಕದಲ್ಲಿರುವ ಎರಡು ವಿದೇಶಿ ಘಟಕಗಳ ವಕೀಲರು ತಮ್ಮ ವಿರುದ್ಧದ ಮಾನನಷ್ಟ ಮೊಕದ್ದಮೆ ಹೂಡುವ ಅಧಿಕಾರ ಇಲ್ಲ ಎಂದು ಹೇಳಿದ್ದರು.

”ಹೇಗ್ ಕನ್ವೆನ್ಷನ್ ಮತ್ತು ಭಾರತ ಸರ್ಕಾರದ ನಿಯಮಗಳ ಪ್ರಕಾರ, ವಿದೇಶಗಳಲ್ಲಿ ಸಮನ್ಸ್ ಅಥವಾ ನೋಟಿಸ್‌ಗಳನ್ನು ಕಾನೂನು ವ್ಯವಹಾರಗಳ ಇಲಾಖೆ, ಕಾನೂನು ಮತ್ತು ನ್ಯಾಯ ಸಚಿವಾಲಯದ ಮೂಲಕ ಮಾತ್ರ ಜಾರಿಗೊಳಿಸಬಹುದು ಎಂದು ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶ ರುಚಿಕಾ ಸಿಂಗ್ಲಾ ಗಮನಿಸಿದ್ದಾರೆ” ಎಂದು ದಿ ಹಿಂದೂ ವರದಿ ಮಾಡಿದೆ.

ಇದೀಗ ನ್ಯಾಯಾಲಯವು ಎರಡೂ ವಿದೇಶಿ ಸಂಸ್ಥೆಗಳಿಗೆ ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವಾಲಯದ ಮೂಲಕ ಶುಕ್ರವಾರ ಹೊಸ ಸಮನ್ಸ್ ನೀಡಲಾಗಿದೆ.

”ಭಾರತ: ಮೋದಿ ಪ್ರಶ್ನೆ” ಎಂಬ ಎರಡು ಭಾಗಗಳ ಸಾಕ್ಷ್ಯಚಿತ್ರದ ಮೊದಲ ಸಂಚಿಕೆಯನ್ನು ಬಿಬಿಸಿ ಜನವರಿ 17ರಂದು ಬಿಡುಗಡೆ ಮಾಡಿತ್ತು. 2002ರ ಗುಜರಾತ್ ಗಲಭೆಗಳ ಕುರಿತು ಮತ್ತು ಇದರಲ್ಲಿ ರಾಜ್ಯದ ಮುಖ್ಯಮಂತ್ರಿಯಾಗಿದ್ದ ಮೋದಿಯವರ ಪಾತ್ರ ಏನು ಎಂಬ ಬಗ್ಗೆ ಸಾಕ್ಷ್ಯಚಿತ್ರ ತೋರಿಸಿದೆ. ಹಿಂಸಾಚಾರಕ್ಕೆ ಕಾರಣವಾದವರ ವಿರುದ್ಧ ಶಿಕ್ಷೆಯಿಲ್ಲದ ವಾತಾವರಣಕ್ಕೆ ಮುಖ್ಯಮಂತ್ರಿ ನೇರ ಹೊಣೆಗಾರರಾಗಿದ್ದರು ಎಂದು ಆ ಸಾಕ್ಷ್ಯಚಿತ್ರಗಳು ಹೇಳುತ್ತವೆ. ಗಲಭೆಯಲ್ಲಿ 790 ಮುಸ್ಲಿಮರು ಮತ್ತು 254 ಹಿಂದೂಗಳು ಸಾವನ್ನಪ್ಪಿದ್ದಾರೆ ಎಂದು ಅಧಿಕೃತ ದಾಖಲೆಗಳು ತೋರಿಸುತ್ತವೆ.

ಯುನೈಟೆಡ್ ಕಿಂಗ್‌ಡಮ್ ಸರ್ಕಾರದಿಂದ ಕಳುಹಿಸಲಾದ ತನಿಖಾಧಿಕಾರಿಗಳಲ್ಲಿ ಮಾಜಿ ಹಿರಿಯ ರಾಜತಾಂತ್ರಿಕರನ್ನು ಒಳಗೊಂಡಿತ್ತು. ಅವರಲ್ಲಿ ಒಬ್ಬರು ಸಾಕ್ಷ್ಯಚಿತ್ರದಲ್ಲಿ ಮಾತನಾಡಿದ್ದು, ಈ ಹಿಂಸಾಚಾರವನ್ನು ಆರ್‌ಎಸ್ಎಸ್‌ ಅಂಗಸಂಸ್ಥೆಯಾದ ವಿಶ್ವ ಹಿಂದೂ ಪರಿಷತ್‌ನಿಂದ ಯೋಜಿಸಲಾಗಿದೆ ಎಂದು ಹೇಳಿದ್ದಾರೆ.

ಈ ಸಾಕ್ಷ್ಯಚಿತ್ರವನ್ನು ಆಡಳಿತಾರೂಢ ಬಿಜೆಪಿ ಸರ್ಕಾರ ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಜನವರಿ 21ರಂದು, ಕೇಂದ್ರವು ಸಾಕ್ಷ್ಯಚಿತ್ರದ ಲಿಂಕ್‌ಗಳನ್ನು ತೆಗೆದುಹಾಕಲು ಯೂಟ್ಯೂಬ್ ಮತ್ತು ಟ್ವಿಟರ್‌ಗೆ ನಿರ್ದೇಶಿಸಿತ್ತು. ವಿದೇಶಾಂಗ ಸಚಿವ ಎಸ್ ಜೈಶಂಕರ್ ಸಾಕ್ಷ್ಯಚಿತ್ರವನ್ನು ರಾಜಕೀಯ ದುರುದ್ದೇಶ ಎಂದು ಕರೆದಿದ್ದರು.

ವಿಶ್ವ ಹಿಂದೂ ಪರಿಷತ್ ಮತ್ತು ಮೋದಿ ವಿರುದ್ಧ ಮಾನಹಾನಿಕರ ಮತ್ತು ಆಧಾರರಹಿತ ಆರೋಪಗಳನ್ನು ಸಾಕ್ಷ್ಯಚಿತ್ರ ಒಳಗೊಂಡಿದೆ ಎಂದು ಸಿಂಗ್ ತಮ್ಮ ಮನವಿಯಲ್ಲಿ ಆರೋಪಿಸಿದ್ದಾರೆ. ಸಾಕ್ಷ್ಯಚಿತ್ರವನ್ನು ಪ್ರಕಟಿಸದಂತೆ ಬಿಬಿಸಿ, ವಿಕಿಪೀಡಿಯಾ ಮತ್ತು ಇಂಟರ್ನೆಟ್ ಆರ್ಕೈವ್ ಅನ್ನು ನಿರ್ಬಂಧಿಸಲು ಅವರು ನ್ಯಾಯಾಲಯದಿಂದ ನಿರ್ದೇಶನಗಳನ್ನು ಕೋರಿದ್ದಾರೆ.

ಆರ್‌ಎಸ್‌ಎಸ್ ಮತ್ತು ವಿಎಚ್‌ಪಿಗೆ ಬೇಷರತ್ ಕ್ಷಮೆಯಾಚಿಸಲು ಮತ್ತು 10 ಲಕ್ಷ ರೂಪಾಯಿ ಪರಿಹಾರವನ್ನು ನೀಡುವಂತೆ ಬಿಬಿಸಿ, ವಿಕಿಮೀಡಿಯಾ ಮತ್ತು ಇಂಟರ್ನೆಟ್ ಆರ್ಕೈವ್‌ಗೆ ನಿರ್ದೇಶನ ನೀಡುವಂತೆ ಅವರು ನ್ಯಾಯಾಲಯವನ್ನು ಕೋರಿದ್ದಾರೆ.

ಇದನ್ನೂ ಓದಿ: ಮೋದಿ ಸರ್ಕಾರ ಬಿಬಿಸಿ ಸಾಕ್ಷ್ಯಚಿತ್ರವನ್ನು ಅಕ್ರಮವಾಗಿ ನಿಷೇಧಿಸಿದ್ದು ಹೇಗೆ?: ಸಾಕೇತ್ ಗೋಖಲೆ ಹಂಚಿಕೊಂಡ ವಿವರವಾದ ಮಾಹಿತಿ ಇಲ್ಲಿದೆ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...