Homeಮುಖಪುಟಮಾನಹಾನಿ ಪ್ರಕರಣ: ಶಿಕ್ಷೆಗೆ ತಡೆ ಕೋರಿ ಸುಪ್ರೀಂ ಮೆಟ್ಟಿಲೇರಿದ ರಾಹುಲ್ ಗಾಂಧಿ

ಮಾನಹಾನಿ ಪ್ರಕರಣ: ಶಿಕ್ಷೆಗೆ ತಡೆ ಕೋರಿ ಸುಪ್ರೀಂ ಮೆಟ್ಟಿಲೇರಿದ ರಾಹುಲ್ ಗಾಂಧಿ

- Advertisement -
- Advertisement -

ಮಾನನಷ್ಟ ಮೊಕದ್ದಮೆಯಲ್ಲಿ ತನ್ನ ಮೇಲಿನ ಅಪರಾಧ ಮತ್ತು ಎರಡು ವರ್ಷಗಳ ಜೈಲು ಶಿಕ್ಷೆಯನ್ನು ತಡೆಹಿಡಿಯಲು ನಿರಾಕರಿಸಿದ ಗುಜರಾತ್ ಹೈಕೋರ್ಟ್ ಆದೇಶದ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

2019ರ ಲೋಕಸಭೆ ಚುನಾವಣೆಗೆ ಮುನ್ನ ಮಾಡಿದ ಭಾಷಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ರಾಹುಲ್ ಗಾಂಧಿ ಅವರನ್ನು ಮಾರ್ಚ್‌ನಲ್ಲಿ ದೋಷಿ ಎಂದು ಘೋಷಿಸಲಾಯಿತು ಮತ್ತು ಎರಡು ವರ್ಷ ಜೈಲು ಶಿಕ್ಷೆಯ ತೀರ್ಪು ನಿಡಲಾಯಿತು. ಇದರಿಂದ ಅವರನ್ನು ಲೋಕಸಭಾ ಸಂಸದ ಸ್ಥಾನದಿಂದ ತಕ್ಷಣವೇ ಅನರ್ಹಗೊಳಿಸಲಾಯಿತು.

ರಾಹುಲ್ ಗಾಂಧಿಯವರು ಭಾರತದಲ್ಲಿ ವಾಸಿಸುವ 13 ಕೋಟಿ ಜನರನ್ನು ಮೋದಿ ಎಂಬ ಉಪನಾಮದಿಂದ ಅವಮಾನಿಸಿದ್ದಾರೆ ಎಂದು ದೂರುದಾರ ಬಿಜೆಪಿ ಶಾಸಕ ಪೂರ್ಣೇಶ್ ಮೋದಿ ಆರೋಪಿಸಿದ್ದಾರೆ.

ಜುಲೈ 7ರಂದು ಗುಜರಾತ್ ಹೈಕೋರ್ಟ್‌ನ ನ್ಯಾಯಮೂರ್ತಿ ಹೇಮಂತ್ ಪ್ರಚ್ಚಕ್ ಅವರು ತಮ್ಮ ಆದೇಶದಲ್ಲಿ ಅಪರಾಧ ನಿರ್ಣಯಕ್ಕೆ ತಡೆ ನೀಡುವುದು ನಿಯಮವಲ್ಲ ಆದರೆ ಅಪರೂಪದ ಪ್ರಕರಣಗಳಲ್ಲಿ ಆಶ್ರಯಿಸಬೇಕಾದ ವಿನಾಯಿತಿ ಎಂದು ಹೇಳಿದರು.

ತೀರ್ಪಿಗೆ ತಡೆ ನೀಡದಿದ್ದಲ್ಲಿ ವಾಕ್‌ಸ್ವಾತಂತ್ರ್ಯಕ್ಕೆ ಧಕ್ಕೆಯಾಗುತ್ತದೆ ಎಂದು ಶನಿವಾರ ಸಲ್ಲಿಸಿರುವ ಮೇಲ್ಮನವಿಯಲ್ಲಿ ರಾಹುಲ್ ಹೇಳಿದ್ದಾರೆ.

ಇದು ”ಪ್ರಜಾಪ್ರಭುತ್ವ ಸಂಸ್ಥೆಗಳನ್ನು ವ್ಯವಸ್ಥಿತವಾಗಿ ಭ್ರಷ್ಟಗೊಳಿಸುವಿಕೆಯ ಭಾಗವಾಗಿದೆ. ಪ್ರಜಾಪ್ರಭುತ್ವದ ಕತ್ತು ಹಿಸುಕಲಾಗುತ್ತಿದೆ. ಇದು ಭಾರತದ ರಾಜಕೀಯ ವಾತಾವರಣ ಮತ್ತು ಭವಿಷ್ಯಕ್ಕೆ ತೀವ್ರವಾಗಿ ಹಾನಿಕಾರಕವಾಗಿದೆ” ಎಂದು ಅವರು ವಾದಿಸಿದರು.

”ಪ್ರಧಾನಿ ನರೇಂದ್ರ ಮೋದಿಯವರನ್ನು ಟೀಕಿಸಿದ್ದಕ್ಕಾಗಿ ಕಠಿಣ ಶಿಕ್ಷೆಯಾಗುವಂತೆ ಮಾಡಿದ್ದಾರೆ. ಈ ಮೂಲಕ ನನ್ನನ್ನು ಸಂಸತ್ತಿನಿಂದ ಹೊರಗಿಟ್ಟು ಪ್ರಶ್ನೆ ಮಾಡದಂತೆ ಪಿತೂರಿ ಮಾಡಲಾಗಿದೆ” ಎಂದು ರಾಹುಲ್ ಹೇಳಿದ್ದಾರೆ.

”ರಾಜಕೀಯ ಪ್ರಚಾರದ ಮಧ್ಯೆ ನೀಡಿರುವ ಹೇಳಿಕೆಗೆ ಶಿಕ್ಷೆ ನೀಡುವುದು ಪ್ರಜಾಸತ್ತಾತ್ಮಕ ವಾಕ್ ಸ್ವಾತಂತ್ರ್ಯಕ್ಕೆ ತೀವ್ರವಾಗಿ ಹಾನಿಕಾರಕವಾಗಿದೆ. ಇದು ರಾಜಕೀಯ ಸಂವಾದ ಅಥವಾ ಚರ್ಚೆಯನ್ನು ಹತ್ತಿಕ್ಕುವ ಪ್ರಯತ್ನವಾಗಿದೆ” ಎಂದಿದ್ದಾರೆ.

ರಾಹುಲ್ ಗಾಂಧಿ ಅವರು, 4,31,770 ಮತಗಳ ದಾಖಲೆಯ ಅಂತರದಿಂದ ಚುನಾಯಿತರಾಗಿದ್ದಾರೆ ಮತ್ತು ಅವರ ದೋಷಾರೋಪಣೆಗೆ ತಡೆ ನೀಡುವುದರಿಂದ ಲೋಕಸಭೆಯ ಸಂಸದರಾಗಿ ಮರುಸ್ಥಾಪನೆಗೆ ದಾರಿ ಮಾಡಿಕೊಡಬಹುದು ಎಂದು ಸುಪ್ರೀಂ ಕೋರ್ಟ್‌ಗೆ ತಿಳಿಸಿದ್ದಾರೆ.

”ರಾಜಕೀಯ ಸನ್ನಿವೇಶದಲ್ಲಿ ಮಾಡಿದ ವಿಡಂಬನಾತ್ಮಕ ಹೇಳಿಕೆಯನ್ನು ನೈತಿಕವಾಗಿ ಅಧಃಪತನ ಎಂದು ನಿರೂಪಿಸಲು ಸಾಧ್ಯವಿಲ್ಲ” ಎಂದು ಗಾಂಧಿ ಹೇಳಿದರು.

ಇದನ್ನೂ ಓದಿ: ಮಾನಹಾನಿ ಪ್ರಕರಣ: ರಾಹುಲ್ ಮೇಲ್ಮನವಿ ಅರ್ಜಿ ತಿರಸ್ಕರಿಸಿದ ಗುಜರಾತ್ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...