Homeಕರ್ನಾಟಕಮಾನನಷ್ಟ ಪ್ರಕರಣದ ವಿಚಾರಣೆ ನ್ಯಾಯಯುತವಾಗಿಲ್ಲ, ನ್ಯಾಯಾಧೀಶರು ತಪ್ಪುದಾರಿಗೆಳೆದಿದ್ದಾರೆ: ರಾಹುಲ್ ಪರ ವಕೀಲ

ಮಾನನಷ್ಟ ಪ್ರಕರಣದ ವಿಚಾರಣೆ ನ್ಯಾಯಯುತವಾಗಿಲ್ಲ, ನ್ಯಾಯಾಧೀಶರು ತಪ್ಪುದಾರಿಗೆಳೆದಿದ್ದಾರೆ: ರಾಹುಲ್ ಪರ ವಕೀಲ

- Advertisement -
- Advertisement -

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಮೇಲಿನ ಕ್ರಿಮಿನಲ್ ಮಾನನಷ್ಟ ಪ್ರಕರಣದ ವಿಚಾರಣೆ ನ್ಯಾಯಯುತವಾಗಿಲ್ಲ, ನ್ಯಾಯಾಧೀಶರು ತಪ್ಪುದಾರಿಗೆಳೆದಿದ್ದಾರೆ ಎಂದು ರಾಹುಲ್ ಪರ ವಕೀಲರು ಗುರುವಾರ ಸೂರತ್ ನ್ಯಾಯಾಲಯಕ್ಕೆ ತಿಳಿಸಿದರು ಎಂದು ಬಾರ್ ಬೆಂಚ್ ವರದಿ ಮಾಡಿದೆ.

ಮೋದಿ ಸರ್‌ನೇಮ್‌ ಕುರಿತು ನೀಡಿದ ಹೇಳಿಕೆಗೆ ಸಂಬಂಧಿಸಿದ ಪ್ರಕರಣದಲ್ಲಿ ಶಿಕ್ಷೆಗೆ ತಡೆ ಕೋರಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಾಲಯ ನಡೆಸುತ್ತಿದೆ.

ಗುರುವಾರದ ವಿಚಾರಣೆಯಲ್ಲಿ, ರಾಹುಲ್ ಗಾಂಧಿ ಪರ ವಾದ ಮಂಡಿಸಿದ ಹಿರಿಯ ವಕೀಲ ಆರ್.ಎಸ್.ಚೀಮಾ ಅವರು, ವಿಚಾರಣಾ ನ್ಯಾಯಾಲಯದ ನ್ಯಾಯಾಧೀಶರು ರಾಜಕಾರಣಿ ಮಾಡಿದ ಮೂಲ ಭಾಷಣವನ್ನು ಸಾಕ್ಷಿಯಾಗಿ ಪರಿಗಣಿಸಿಲ್ಲ ಮತ್ತು ಮಾಧ್ಯಮ ವರದಿಗಳನ್ನು ಅವಲಂಬಿಸಿದ್ದಾರೆ ಎಂದು ವಾದಿಸಿದರು.

”ಭಾಷಣ ಸಿಡಿ ಸೂಚಿಸಿದ್ದಕ್ಕಿಂತ ವಿಭಿನ್ನವಾಗಿ ಪತ್ರಿಕೆಗಳ ಕಟಿಂಗ್ ಬಗ್ಗೆ ಮಾತನಾಡಿದ್ದರಿಂದ, ಅದರ ಆಧಾರದ ಮೇಲೆಯೇ  ವಿಚಾರಣಾ ನ್ಯಾಯಾಲಯದ ನ್ಯಾಯಾಧೀಶರು ವಿಚಿತ್ರ ತೀರ್ಪನ್ನು ನೀಡಿದ್ದಾರೆ” ಎಂದು ಚೀಮಾ ನ್ಯಾಯಾಲಯಕ್ಕೆ ತಿಳಿಸಿದರು.

”ಬೆಳಿಗ್ಗೆ 11:51ಕ್ಕೆ ನನ್ನ ಕಕ್ಷಿದಾರನನ್ನು ತಪ್ಪಿತಸ್ಥ ಎಂದು ಘೋಷಿಸಲಾಗುತ್ತದೆ ಮತ್ತು ಅರ್ಧ ಗಂಟೆಯೊಳಗೆ ಅವನಿಗೆ ಕಠಿಣ ಮತ್ತು ಗರಿಷ್ಠ ಶಿಕ್ಷೆಯನ್ನು ನೀಡಲಾಯಿತು ಎಂದು ನ್ಯಾಯಲಯಕ್ಕೆ ಹೇಳಿದರು.

ಮಾರ್ಚ್ 23ರಂದು, ಗಾಂಧಿಯವರು 2019ರ ಲೋಕಸಭಾ ಚುನಾವಣೆಯ ಮೊದಲು ಮಾಡಿದ ಭಾಷಣಕ್ಕಾಗಿ ಎರಡು ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಲಾಯಿತು, ಇದರಲ್ಲಿ ಅವರು ”ಎಲ್ಲಾ ಕಳ್ಳರು ಮೋದಿ ಉಪನಾಮವನ್ನು ಏಕೆ ಹೊಂದಿರುತ್ತಾರೆ? ಎನ್ನುವ ರಾಹುಲ್ ಹೇಳಿಕೆ ಉಲ್ಲೇಖಿಸಿದ್ದರು. ಭಾರತೀಯ ದಂಡ ಸಂಹಿತೆಯ ಸೆಕ್ಷನ್ 499 (ಮಾನನಷ್ಟ) ಮತ್ತು 500 (ಮಾನನಷ್ಟಕ್ಕೆ ಶಿಕ್ಷೆ) ಅಡಿಯಲ್ಲಿ ಕಾಂಗ್ರೆಸ್ ನಾಯಕನನ್ನು ದೋಷಿ ಎಂದು ಘೋಷಿಸಲಾಗಿದೆ. ಆದರೆ ನ್ಯಾಯಾಲಯ ಅವರಿಗೆ ಜಾಮೀನು ನೀಡಿದ್ದು, ಶಿಕ್ಷೆಯನ್ನು 30 ದಿನಗಳ ಕಾಲ ಅಮಾನತುಗೊಳಿಸಿದೆ.

1951ರ ಜನತಾ ಪ್ರಾತಿನಿಧ್ಯ ಕಾಯಿದೆಯಡಿಯಲ್ಲಿ ಗಾಂಧಿಯವರು ಲೋಕಸಭಾ ಸಂಸದರಾಗಿ ಅನರ್ಹಗೊಂಡರು. ಕಾನೂನಿನ ಸೆಕ್ಷನ್ 8(3)ರ ಪ್ರಕಾರ ಎರಡು ವರ್ಷ ಅಥವಾ ಅದಕ್ಕಿಂತ ಹೆಚ್ಚು ಕಾಲ ಜೈಲು ಶಿಕ್ಷೆಗೆ ಗುರಿಯಾದ ಶಾಸಕರು ಅನರ್ಹರಾಗುತ್ತಾರೆ. ಆರು ವರ್ಷಗಳ ಕಾಲ ಅವರು ಚುನಾವಣೆಗೆ ಸ್ಪರ್ಧೆ ಮಾಡುವಂತಿಲ್ಲ.

ನ್ಯಾಯಾಲಯವು ಅವರ ಅಪರಾಧವನ್ನು ತಡೆಹಿಡಿದರೆ ಲೋಕಸಭೆಯಿಂದ ಗಾಂಧಿಯವರ ಅನರ್ಹತೆಯನ್ನು ರದ್ದುಗೊಳಿಸಲಾಗುತ್ತದೆ. ಏಪ್ರಿಲ್ 3ರಂದು ಸೂರತ್ ನ್ಯಾಯಾಲಯವು ಅವರ ಜಾಮೀನನ್ನು ಏಪ್ರಿಲ್ 13 ರವರೆಗೆ ವಿಸ್ತರಿಸಿತ್ತು. ಗುರುವಾರ ಮತ್ತೆ ವಿಚಾರಣೆ ಆರಂಭವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....