Homeಮುಖಪುಟಮೃತ ಮಹಿಳೆಯ ಮಾನಹಾನಿ: ಬಿಜೆಪಿಯ ಮಾಜಿ ಮುಖ್ಯಮಂತ್ರಿ ಸೇರಿದಂತೆ 6 ಜನರ ವಿರುದ್ಧ ಪ್ರಕರಣ

ಮೃತ ಮಹಿಳೆಯ ಮಾನಹಾನಿ: ಬಿಜೆಪಿಯ ಮಾಜಿ ಮುಖ್ಯಮಂತ್ರಿ ಸೇರಿದಂತೆ 6 ಜನರ ವಿರುದ್ಧ ಪ್ರಕರಣ

- Advertisement -
- Advertisement -

ಮೃತ ಮಹಿಳೆಯ ಮಾನಹಾನಿ ಮಾಡಿದ್ದಾರೆ ಎಂದು ಆರೋಪಿಸಿ ಬಿಜೆಪಿ ಮುಖಂಡ ಮತ್ತು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಸೇರಿದಂತೆ ಆರು ಮಂದಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಪುಣೆ ಮೂಲದ ಮಹಿಳೆಯ ಮಾನನಷ್ಟ ಮಾಡಿದ ಆರೋಪದಲ್ಲಿ ಭಾರತೀಯ ದಂಡಸಂಹಿತೆಯ ಸೆಕ್ಷನ್ 500 ಮತ್ತು 501ರ ಅನ್ವಯ ಮನೋರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಾಶಿಮ್ ಜಿಲ್ಲೆಯ ರಾಷ್ಟ್ರೀಯ ಬಂಜಾರ ಪರಿಷತ್‌ನ ಯುವ ವಿಭಾಗದ ಮುಖ್ಯಸ್ಥರಾಗಿರುವ ಶ್ಯಾಮ್ ಸರ್ದಾರ್ ರಾಥೋಡ್ ಅವರು ದೂರು ದಾಖಲಿಸಿದ್ದಾರೆ ಎಂದು ಮುಂಬೈ ಮಿರರ್ ವರದಿ ಮಾಡಿದೆ.

ಕೆಲ ಸುದ್ದಿವಾಹಿನಿಗಳು ಕೂಡಾ ಮೃತ ಮಹಿಳೆ ಮತ್ತು ಬಂಜಾರ ಸಮುದಾಯವನ್ನು ಅವಮಾನಿಸಿವೆ ಎಂದು ಅವರು ದೂರಿದ್ದಾರೆ. ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ, ಪ್ರತಿಭಟನೆ ಹಮ್ಮಿಕೊಳ್ಳುವುದಾಗಿಯೂ ಅವರು ಎಚ್ಚರಿಕೆ ನೀಡಿದ್ದಾರೆ.

ಮಹಾರಾಷ್ಟ್ರ ಸಚಿವರ ರಾಜೀನಾಮೆಗೆ ಕಾರಣವಾದ ಸಾವಿನ ಪ್ರಕರಣ ಸಂಬಂಧದಲ್ಲಿ, ಫಡ್ನವೀಸ್ ಜತೆಗೆ ವಿಧಾನ ಪರಿಷತ್ ವಿರೋಧ ಪಕ್ಷದ ಮುಖಂಡ ಪ್ರವೀಣ್ ದಾರೇಕರ್, ಮಾಜಿ ಸಚಿವರಾದ ಸುಧೀರ್ ಮುಗಂಟಿವಾರ್, ಆಶೀಶ್ ಶೇಲರ್, ಮುಂಬೈ ಶಾಸಕ ಅತುಲ್ ಭಟ್ಕಳ್‌ಕರ್ ಹಾಗೂ ಬಿಜೆಪಿ ನಾಯಕಿ ಚಿತ್ರಾ ವಾಘ್ ವಿರುದ್ಧವೂ ಪ್ರಕರಣ ದಾಖಲಾಗಿದೆ. ಜೊತೆಗೆ ದೂರಿನಲ್ಲಿ ಪ್ರಸಾದ್ ಲಾಡ್, ಶಾಂತಾಬಾಯಿ ಚವ್ಹಾಣ್ ಮತ್ತು ಮಹಿಳಾ ಹೋರಾಟಗಾರ್ತಿ ತೃಪ್ತಿ ದೇಸಾಯಿ ಅವರನ್ನೂ ಹೆಸರಿಸಲಾಗಿದೆ.

ಇದನ್ನೂ ಓದಿ: ಕೇರಳ ಚುನಾವಣೆ: ಸದ್ಯದ ಸ್ಥಿತಿ ಮತ್ತು ಮೈತ್ರಿಕೂಟಗಳಲ್ಲಿ ಸೀಟು ಹಂಚಿಕೆ ಹಗ್ಗಜಗ್ಗಾಟ

ಪುಣೆಯ ಹಡಪಸಾರ್ ಎಂಬಲ್ಲಿ 23 ವರ್ಷ ಮಹಿಳೆ ಇತ್ತೀಚೆಗೆ ಮೃತಪಟ್ಟಿದ್ದರು. ಮಹಿಳೆಯ ಸಾವಿನ ಹಿಂದೆ ಶಿವಸೇನೆ ಶಾಸಕ ಸಂಜಯ್ ರಾಥೋಡ್ ಅವರ ಕೈವಾಡವಿದೆ ಎಂದು ಬಿಜೆಪಿ ಆಪಾದಿಸಿದ ಹಿನ್ನೆಲೆಯಲ್ಲಿ ರಾಜಕೀಯ ವಿವಾದ ಸೃಷ್ಟಿಯಾಗಿತ್ತು. ಬಂಜಾರ ಸಮುದಾಯಕ್ಕೆ ಸೇರಿದ ರಾಥೋಡ್, ರಾಜ್ಯದ ಅರಣ್ಯ ಸಚಿವ ಹುದ್ದೆಗೆ ರವಿವಾರ ರಾಜೀನಾಮೆ ನೀಡಿದ್ದರು. ಆದರೆ ತಮ್ಮ ವಿರುದ್ಧದ ಆರೋಪಗಳನ್ನು ನಿರಾಕರಿಸಿದ್ದರು.

ಮಹಾರಾಷ್ಟ್ರದ ಬೀಡ್ ಜಿಲ್ಲೆಯ ಪೂಜಾ ಚೌವಾಣ್ ಎಂಬ 23 ವರ್ಷದ ಯುವತಿ ಇಂಗ್ಲಿಷ್ ಸ್ಪೀಕಿಂಗ್ ಕೋರ್ಸ್ ಕಲಿಯಲು ಪುಣೆಯಲ್ಲಿ ತನ್ನ ಸಹೋದರ ಮತ್ತು ಸ್ನೇಹಿತರೊಂದಿಗೆ ವಾಸಿಸುತ್ತಿದ್ದಳು. ಫೆಬ್ರವರಿ 8 ರಂದು ಈ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದರು.

ಯುವತಿಯ ಸಾವಿನ ಎರಡು ದಿನಗಳ ನಂತರ, ಸಾಮಾಜಿಕ ಜಾಲತಾಣದಲ್ಲಿ ಆಡಿಯೋ ಕ್ಲಿಪ್ ಬಿಡುಗಡೆಯಾಗಿದ್ದು, ಇದರಲ್ಲಿ ಇಬ್ಬರು ವ್ಯಕ್ತಿಗಳು ಯುವತಿಯ ಸಾವಿನ ಬಗ್ಗೆ ಮಾತನಾಡಿದ್ದಾರೆ. ಆಡಿಯೋ ಕ್ಲಿಪ್‌ನಲ್ಲಿರುವ ವ್ಯಕ್ತಿಗಳಲ್ಲಿ ಒಬ್ಬರು ಸಂಜಯ್ ರಾಥೋಡ್ ಎಂದು ಬಿಜೆಪಿ ಆರೋಪಿಸಿದೆ. ಈ ಆರೋಪವನ್ನು ಸಂಜಯ್ ರಾಥೋಡ್ ನಿರಾಕರಿಸಿದ್ದಾರೆ.

ಪ್ರಕರಣದ ಬಗ್ಗೆ ಮಾಹಿತಿ ನೀಡಿರುವ ಪೊಲೀಸರು, ’ಆಕೆ ಆತ್ಮಹತ್ಯೆ ಮಾಡಿಕೊಂಡಂತೆ ಕಾಣಿಸಿಕೊಂಡರೂ, ಅದನ್ನು ಕ್ರಿಮಿನಲ್ ಪ್ರಕರಣ ಎಂದು ತನಿಖೆ ನಡೆಸುತ್ತಿದ್ದೇವೆ ಎಂದು ಕಳೆದ ವಾರ ತಿಳಿಸಿದ್ದರು.

ಇದನ್ನೂ ಓದಿ: ಮಕ್ಕಳನ್ನು ಹೆರುವುದು ನೀವು, ಸರ್ಕಾರ ವೆಚ್ಚ ಭರಿಸಬೇಕಾ?: ಬಿಜೆಪಿ ಶಾಸಕನ ವಿವಾದಾತ್ಮಕ ಹೇಳಿಕೆ

ಸಚಿವ ಸಂಜಯ್ ರಾಥೋಡ್‌ಗೂ ಮೃತ ಯುವತಿಯ ಸಾವಿಗೂ ಸಂಬಂಧವಿದೆ ಎಂದು ಬಿಜೆಪಿ ಆರೋಪಿಸಿ, ಅವರ ಬಂಧನಕ್ಕೆ ಪಕ್ಷ ಒತ್ತಾಯಿಸುತ್ತಿತ್ತು. ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ಸಾವಿನ ಬಗ್ಗೆ ಮಹಾರಾಷ್ಟ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದರು.

“ಪೂಜಾ ಚೌವಾಣ್ ಆತ್ಮಹತ್ಯೆ ಪ್ರಕರಣದಲ್ಲಿ ಗಂಭೀರ ಆರೋಪ ಹೊಂದಿರುವ ಸಚಿವರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ, ಬೀಡ್ ಜಿಲ್ಲೆಯಲ್ಲಿ ಸಂಜಯ್ ರಾಥೋಡ್ ಅವರ ಪ್ರತಿಮೆಯನ್ನು ಸುಟ್ಟು ಬಿಜೆಪಿ ಪ್ರತಿಭಟನೆ ನಡೆಸಿತ್ತು” ಎಂದು ಬಿಜೆಪಿ ಮಹಾರಾಷ್ಟ್ರ ಕಳೆದ ವಾರ ಟ್ವೀಟ್ ಮಾಡಿದೆ.

“ಸಂಜಯ್ ರಾಥೋಡ್ ವಿರುದ್ಧ ಸಾಕಷ್ಟು ಪುರಾವೆಗಳಿವೆ ಆದರೆ ಏನೂ ಆಗುತ್ತಿಲ್ಲ. ಮಾಧ್ಯಮ ವರದಿಗಳು ಹೊರಬರದಿದ್ದರೆ ಏನೂ ಆಗುತ್ತಿರಲಿಲ್ಲ. ರಾಜ್ಯದ ಪೊಲೀಸರು ಒತ್ತಡದಲ್ಲಿದ್ದಾರೆ. ಮೊದಲು, ಪೋಲಿಸ್ ತನಿಖೆಯ ಬಗ್ಗೆ ತನಿಖೆ ನಡೆಸಬೇಕಾಗಿದೆ” ಎಂದು ಫಡ್ನವಿಸ್ ಕಳೆದ ವಾರ ಹೇಳಿದ್ದರು.


ಇದನ್ನೂ ಓದಿ: ಭಾರತದ ಪವರ್‌ಗ್ರಿಡ್‌ಗಳು ಚೀನಾ ಹ್ಯಾಕರ್‌ಗಳ ಟಾರ್ಗೆಟ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...