Homeಮುಖಪುಟಮೃತ ಮಹಿಳೆಯ ಮಾನಹಾನಿ: ಬಿಜೆಪಿಯ ಮಾಜಿ ಮುಖ್ಯಮಂತ್ರಿ ಸೇರಿದಂತೆ 6 ಜನರ ವಿರುದ್ಧ ಪ್ರಕರಣ

ಮೃತ ಮಹಿಳೆಯ ಮಾನಹಾನಿ: ಬಿಜೆಪಿಯ ಮಾಜಿ ಮುಖ್ಯಮಂತ್ರಿ ಸೇರಿದಂತೆ 6 ಜನರ ವಿರುದ್ಧ ಪ್ರಕರಣ

- Advertisement -
- Advertisement -

ಮೃತ ಮಹಿಳೆಯ ಮಾನಹಾನಿ ಮಾಡಿದ್ದಾರೆ ಎಂದು ಆರೋಪಿಸಿ ಬಿಜೆಪಿ ಮುಖಂಡ ಮತ್ತು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಸೇರಿದಂತೆ ಆರು ಮಂದಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಪುಣೆ ಮೂಲದ ಮಹಿಳೆಯ ಮಾನನಷ್ಟ ಮಾಡಿದ ಆರೋಪದಲ್ಲಿ ಭಾರತೀಯ ದಂಡಸಂಹಿತೆಯ ಸೆಕ್ಷನ್ 500 ಮತ್ತು 501ರ ಅನ್ವಯ ಮನೋರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಾಶಿಮ್ ಜಿಲ್ಲೆಯ ರಾಷ್ಟ್ರೀಯ ಬಂಜಾರ ಪರಿಷತ್‌ನ ಯುವ ವಿಭಾಗದ ಮುಖ್ಯಸ್ಥರಾಗಿರುವ ಶ್ಯಾಮ್ ಸರ್ದಾರ್ ರಾಥೋಡ್ ಅವರು ದೂರು ದಾಖಲಿಸಿದ್ದಾರೆ ಎಂದು ಮುಂಬೈ ಮಿರರ್ ವರದಿ ಮಾಡಿದೆ.

ಕೆಲ ಸುದ್ದಿವಾಹಿನಿಗಳು ಕೂಡಾ ಮೃತ ಮಹಿಳೆ ಮತ್ತು ಬಂಜಾರ ಸಮುದಾಯವನ್ನು ಅವಮಾನಿಸಿವೆ ಎಂದು ಅವರು ದೂರಿದ್ದಾರೆ. ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ, ಪ್ರತಿಭಟನೆ ಹಮ್ಮಿಕೊಳ್ಳುವುದಾಗಿಯೂ ಅವರು ಎಚ್ಚರಿಕೆ ನೀಡಿದ್ದಾರೆ.

ಮಹಾರಾಷ್ಟ್ರ ಸಚಿವರ ರಾಜೀನಾಮೆಗೆ ಕಾರಣವಾದ ಸಾವಿನ ಪ್ರಕರಣ ಸಂಬಂಧದಲ್ಲಿ, ಫಡ್ನವೀಸ್ ಜತೆಗೆ ವಿಧಾನ ಪರಿಷತ್ ವಿರೋಧ ಪಕ್ಷದ ಮುಖಂಡ ಪ್ರವೀಣ್ ದಾರೇಕರ್, ಮಾಜಿ ಸಚಿವರಾದ ಸುಧೀರ್ ಮುಗಂಟಿವಾರ್, ಆಶೀಶ್ ಶೇಲರ್, ಮುಂಬೈ ಶಾಸಕ ಅತುಲ್ ಭಟ್ಕಳ್‌ಕರ್ ಹಾಗೂ ಬಿಜೆಪಿ ನಾಯಕಿ ಚಿತ್ರಾ ವಾಘ್ ವಿರುದ್ಧವೂ ಪ್ರಕರಣ ದಾಖಲಾಗಿದೆ. ಜೊತೆಗೆ ದೂರಿನಲ್ಲಿ ಪ್ರಸಾದ್ ಲಾಡ್, ಶಾಂತಾಬಾಯಿ ಚವ್ಹಾಣ್ ಮತ್ತು ಮಹಿಳಾ ಹೋರಾಟಗಾರ್ತಿ ತೃಪ್ತಿ ದೇಸಾಯಿ ಅವರನ್ನೂ ಹೆಸರಿಸಲಾಗಿದೆ.

ಇದನ್ನೂ ಓದಿ: ಕೇರಳ ಚುನಾವಣೆ: ಸದ್ಯದ ಸ್ಥಿತಿ ಮತ್ತು ಮೈತ್ರಿಕೂಟಗಳಲ್ಲಿ ಸೀಟು ಹಂಚಿಕೆ ಹಗ್ಗಜಗ್ಗಾಟ

ಪುಣೆಯ ಹಡಪಸಾರ್ ಎಂಬಲ್ಲಿ 23 ವರ್ಷ ಮಹಿಳೆ ಇತ್ತೀಚೆಗೆ ಮೃತಪಟ್ಟಿದ್ದರು. ಮಹಿಳೆಯ ಸಾವಿನ ಹಿಂದೆ ಶಿವಸೇನೆ ಶಾಸಕ ಸಂಜಯ್ ರಾಥೋಡ್ ಅವರ ಕೈವಾಡವಿದೆ ಎಂದು ಬಿಜೆಪಿ ಆಪಾದಿಸಿದ ಹಿನ್ನೆಲೆಯಲ್ಲಿ ರಾಜಕೀಯ ವಿವಾದ ಸೃಷ್ಟಿಯಾಗಿತ್ತು. ಬಂಜಾರ ಸಮುದಾಯಕ್ಕೆ ಸೇರಿದ ರಾಥೋಡ್, ರಾಜ್ಯದ ಅರಣ್ಯ ಸಚಿವ ಹುದ್ದೆಗೆ ರವಿವಾರ ರಾಜೀನಾಮೆ ನೀಡಿದ್ದರು. ಆದರೆ ತಮ್ಮ ವಿರುದ್ಧದ ಆರೋಪಗಳನ್ನು ನಿರಾಕರಿಸಿದ್ದರು.

ಮಹಾರಾಷ್ಟ್ರದ ಬೀಡ್ ಜಿಲ್ಲೆಯ ಪೂಜಾ ಚೌವಾಣ್ ಎಂಬ 23 ವರ್ಷದ ಯುವತಿ ಇಂಗ್ಲಿಷ್ ಸ್ಪೀಕಿಂಗ್ ಕೋರ್ಸ್ ಕಲಿಯಲು ಪುಣೆಯಲ್ಲಿ ತನ್ನ ಸಹೋದರ ಮತ್ತು ಸ್ನೇಹಿತರೊಂದಿಗೆ ವಾಸಿಸುತ್ತಿದ್ದಳು. ಫೆಬ್ರವರಿ 8 ರಂದು ಈ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದರು.

ಯುವತಿಯ ಸಾವಿನ ಎರಡು ದಿನಗಳ ನಂತರ, ಸಾಮಾಜಿಕ ಜಾಲತಾಣದಲ್ಲಿ ಆಡಿಯೋ ಕ್ಲಿಪ್ ಬಿಡುಗಡೆಯಾಗಿದ್ದು, ಇದರಲ್ಲಿ ಇಬ್ಬರು ವ್ಯಕ್ತಿಗಳು ಯುವತಿಯ ಸಾವಿನ ಬಗ್ಗೆ ಮಾತನಾಡಿದ್ದಾರೆ. ಆಡಿಯೋ ಕ್ಲಿಪ್‌ನಲ್ಲಿರುವ ವ್ಯಕ್ತಿಗಳಲ್ಲಿ ಒಬ್ಬರು ಸಂಜಯ್ ರಾಥೋಡ್ ಎಂದು ಬಿಜೆಪಿ ಆರೋಪಿಸಿದೆ. ಈ ಆರೋಪವನ್ನು ಸಂಜಯ್ ರಾಥೋಡ್ ನಿರಾಕರಿಸಿದ್ದಾರೆ.

ಪ್ರಕರಣದ ಬಗ್ಗೆ ಮಾಹಿತಿ ನೀಡಿರುವ ಪೊಲೀಸರು, ’ಆಕೆ ಆತ್ಮಹತ್ಯೆ ಮಾಡಿಕೊಂಡಂತೆ ಕಾಣಿಸಿಕೊಂಡರೂ, ಅದನ್ನು ಕ್ರಿಮಿನಲ್ ಪ್ರಕರಣ ಎಂದು ತನಿಖೆ ನಡೆಸುತ್ತಿದ್ದೇವೆ ಎಂದು ಕಳೆದ ವಾರ ತಿಳಿಸಿದ್ದರು.

ಇದನ್ನೂ ಓದಿ: ಮಕ್ಕಳನ್ನು ಹೆರುವುದು ನೀವು, ಸರ್ಕಾರ ವೆಚ್ಚ ಭರಿಸಬೇಕಾ?: ಬಿಜೆಪಿ ಶಾಸಕನ ವಿವಾದಾತ್ಮಕ ಹೇಳಿಕೆ

ಸಚಿವ ಸಂಜಯ್ ರಾಥೋಡ್‌ಗೂ ಮೃತ ಯುವತಿಯ ಸಾವಿಗೂ ಸಂಬಂಧವಿದೆ ಎಂದು ಬಿಜೆಪಿ ಆರೋಪಿಸಿ, ಅವರ ಬಂಧನಕ್ಕೆ ಪಕ್ಷ ಒತ್ತಾಯಿಸುತ್ತಿತ್ತು. ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ಸಾವಿನ ಬಗ್ಗೆ ಮಹಾರಾಷ್ಟ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದರು.

“ಪೂಜಾ ಚೌವಾಣ್ ಆತ್ಮಹತ್ಯೆ ಪ್ರಕರಣದಲ್ಲಿ ಗಂಭೀರ ಆರೋಪ ಹೊಂದಿರುವ ಸಚಿವರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ, ಬೀಡ್ ಜಿಲ್ಲೆಯಲ್ಲಿ ಸಂಜಯ್ ರಾಥೋಡ್ ಅವರ ಪ್ರತಿಮೆಯನ್ನು ಸುಟ್ಟು ಬಿಜೆಪಿ ಪ್ರತಿಭಟನೆ ನಡೆಸಿತ್ತು” ಎಂದು ಬಿಜೆಪಿ ಮಹಾರಾಷ್ಟ್ರ ಕಳೆದ ವಾರ ಟ್ವೀಟ್ ಮಾಡಿದೆ.

“ಸಂಜಯ್ ರಾಥೋಡ್ ವಿರುದ್ಧ ಸಾಕಷ್ಟು ಪುರಾವೆಗಳಿವೆ ಆದರೆ ಏನೂ ಆಗುತ್ತಿಲ್ಲ. ಮಾಧ್ಯಮ ವರದಿಗಳು ಹೊರಬರದಿದ್ದರೆ ಏನೂ ಆಗುತ್ತಿರಲಿಲ್ಲ. ರಾಜ್ಯದ ಪೊಲೀಸರು ಒತ್ತಡದಲ್ಲಿದ್ದಾರೆ. ಮೊದಲು, ಪೋಲಿಸ್ ತನಿಖೆಯ ಬಗ್ಗೆ ತನಿಖೆ ನಡೆಸಬೇಕಾಗಿದೆ” ಎಂದು ಫಡ್ನವಿಸ್ ಕಳೆದ ವಾರ ಹೇಳಿದ್ದರು.


ಇದನ್ನೂ ಓದಿ: ಭಾರತದ ಪವರ್‌ಗ್ರಿಡ್‌ಗಳು ಚೀನಾ ಹ್ಯಾಕರ್‌ಗಳ ಟಾರ್ಗೆಟ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...