Homeಮುಖಪುಟಮೃತ ಮಹಿಳೆಯ ಮಾನಹಾನಿ: ಬಿಜೆಪಿಯ ಮಾಜಿ ಮುಖ್ಯಮಂತ್ರಿ ಸೇರಿದಂತೆ 6 ಜನರ ವಿರುದ್ಧ ಪ್ರಕರಣ

ಮೃತ ಮಹಿಳೆಯ ಮಾನಹಾನಿ: ಬಿಜೆಪಿಯ ಮಾಜಿ ಮುಖ್ಯಮಂತ್ರಿ ಸೇರಿದಂತೆ 6 ಜನರ ವಿರುದ್ಧ ಪ್ರಕರಣ

- Advertisement -
- Advertisement -

ಮೃತ ಮಹಿಳೆಯ ಮಾನಹಾನಿ ಮಾಡಿದ್ದಾರೆ ಎಂದು ಆರೋಪಿಸಿ ಬಿಜೆಪಿ ಮುಖಂಡ ಮತ್ತು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಸೇರಿದಂತೆ ಆರು ಮಂದಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಪುಣೆ ಮೂಲದ ಮಹಿಳೆಯ ಮಾನನಷ್ಟ ಮಾಡಿದ ಆರೋಪದಲ್ಲಿ ಭಾರತೀಯ ದಂಡಸಂಹಿತೆಯ ಸೆಕ್ಷನ್ 500 ಮತ್ತು 501ರ ಅನ್ವಯ ಮನೋರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಾಶಿಮ್ ಜಿಲ್ಲೆಯ ರಾಷ್ಟ್ರೀಯ ಬಂಜಾರ ಪರಿಷತ್‌ನ ಯುವ ವಿಭಾಗದ ಮುಖ್ಯಸ್ಥರಾಗಿರುವ ಶ್ಯಾಮ್ ಸರ್ದಾರ್ ರಾಥೋಡ್ ಅವರು ದೂರು ದಾಖಲಿಸಿದ್ದಾರೆ ಎಂದು ಮುಂಬೈ ಮಿರರ್ ವರದಿ ಮಾಡಿದೆ.

ಕೆಲ ಸುದ್ದಿವಾಹಿನಿಗಳು ಕೂಡಾ ಮೃತ ಮಹಿಳೆ ಮತ್ತು ಬಂಜಾರ ಸಮುದಾಯವನ್ನು ಅವಮಾನಿಸಿವೆ ಎಂದು ಅವರು ದೂರಿದ್ದಾರೆ. ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ, ಪ್ರತಿಭಟನೆ ಹಮ್ಮಿಕೊಳ್ಳುವುದಾಗಿಯೂ ಅವರು ಎಚ್ಚರಿಕೆ ನೀಡಿದ್ದಾರೆ.

ಮಹಾರಾಷ್ಟ್ರ ಸಚಿವರ ರಾಜೀನಾಮೆಗೆ ಕಾರಣವಾದ ಸಾವಿನ ಪ್ರಕರಣ ಸಂಬಂಧದಲ್ಲಿ, ಫಡ್ನವೀಸ್ ಜತೆಗೆ ವಿಧಾನ ಪರಿಷತ್ ವಿರೋಧ ಪಕ್ಷದ ಮುಖಂಡ ಪ್ರವೀಣ್ ದಾರೇಕರ್, ಮಾಜಿ ಸಚಿವರಾದ ಸುಧೀರ್ ಮುಗಂಟಿವಾರ್, ಆಶೀಶ್ ಶೇಲರ್, ಮುಂಬೈ ಶಾಸಕ ಅತುಲ್ ಭಟ್ಕಳ್‌ಕರ್ ಹಾಗೂ ಬಿಜೆಪಿ ನಾಯಕಿ ಚಿತ್ರಾ ವಾಘ್ ವಿರುದ್ಧವೂ ಪ್ರಕರಣ ದಾಖಲಾಗಿದೆ. ಜೊತೆಗೆ ದೂರಿನಲ್ಲಿ ಪ್ರಸಾದ್ ಲಾಡ್, ಶಾಂತಾಬಾಯಿ ಚವ್ಹಾಣ್ ಮತ್ತು ಮಹಿಳಾ ಹೋರಾಟಗಾರ್ತಿ ತೃಪ್ತಿ ದೇಸಾಯಿ ಅವರನ್ನೂ ಹೆಸರಿಸಲಾಗಿದೆ.

ಇದನ್ನೂ ಓದಿ: ಕೇರಳ ಚುನಾವಣೆ: ಸದ್ಯದ ಸ್ಥಿತಿ ಮತ್ತು ಮೈತ್ರಿಕೂಟಗಳಲ್ಲಿ ಸೀಟು ಹಂಚಿಕೆ ಹಗ್ಗಜಗ್ಗಾಟ

ಪುಣೆಯ ಹಡಪಸಾರ್ ಎಂಬಲ್ಲಿ 23 ವರ್ಷ ಮಹಿಳೆ ಇತ್ತೀಚೆಗೆ ಮೃತಪಟ್ಟಿದ್ದರು. ಮಹಿಳೆಯ ಸಾವಿನ ಹಿಂದೆ ಶಿವಸೇನೆ ಶಾಸಕ ಸಂಜಯ್ ರಾಥೋಡ್ ಅವರ ಕೈವಾಡವಿದೆ ಎಂದು ಬಿಜೆಪಿ ಆಪಾದಿಸಿದ ಹಿನ್ನೆಲೆಯಲ್ಲಿ ರಾಜಕೀಯ ವಿವಾದ ಸೃಷ್ಟಿಯಾಗಿತ್ತು. ಬಂಜಾರ ಸಮುದಾಯಕ್ಕೆ ಸೇರಿದ ರಾಥೋಡ್, ರಾಜ್ಯದ ಅರಣ್ಯ ಸಚಿವ ಹುದ್ದೆಗೆ ರವಿವಾರ ರಾಜೀನಾಮೆ ನೀಡಿದ್ದರು. ಆದರೆ ತಮ್ಮ ವಿರುದ್ಧದ ಆರೋಪಗಳನ್ನು ನಿರಾಕರಿಸಿದ್ದರು.

ಮಹಾರಾಷ್ಟ್ರದ ಬೀಡ್ ಜಿಲ್ಲೆಯ ಪೂಜಾ ಚೌವಾಣ್ ಎಂಬ 23 ವರ್ಷದ ಯುವತಿ ಇಂಗ್ಲಿಷ್ ಸ್ಪೀಕಿಂಗ್ ಕೋರ್ಸ್ ಕಲಿಯಲು ಪುಣೆಯಲ್ಲಿ ತನ್ನ ಸಹೋದರ ಮತ್ತು ಸ್ನೇಹಿತರೊಂದಿಗೆ ವಾಸಿಸುತ್ತಿದ್ದಳು. ಫೆಬ್ರವರಿ 8 ರಂದು ಈ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದರು.

ಯುವತಿಯ ಸಾವಿನ ಎರಡು ದಿನಗಳ ನಂತರ, ಸಾಮಾಜಿಕ ಜಾಲತಾಣದಲ್ಲಿ ಆಡಿಯೋ ಕ್ಲಿಪ್ ಬಿಡುಗಡೆಯಾಗಿದ್ದು, ಇದರಲ್ಲಿ ಇಬ್ಬರು ವ್ಯಕ್ತಿಗಳು ಯುವತಿಯ ಸಾವಿನ ಬಗ್ಗೆ ಮಾತನಾಡಿದ್ದಾರೆ. ಆಡಿಯೋ ಕ್ಲಿಪ್‌ನಲ್ಲಿರುವ ವ್ಯಕ್ತಿಗಳಲ್ಲಿ ಒಬ್ಬರು ಸಂಜಯ್ ರಾಥೋಡ್ ಎಂದು ಬಿಜೆಪಿ ಆರೋಪಿಸಿದೆ. ಈ ಆರೋಪವನ್ನು ಸಂಜಯ್ ರಾಥೋಡ್ ನಿರಾಕರಿಸಿದ್ದಾರೆ.

ಪ್ರಕರಣದ ಬಗ್ಗೆ ಮಾಹಿತಿ ನೀಡಿರುವ ಪೊಲೀಸರು, ’ಆಕೆ ಆತ್ಮಹತ್ಯೆ ಮಾಡಿಕೊಂಡಂತೆ ಕಾಣಿಸಿಕೊಂಡರೂ, ಅದನ್ನು ಕ್ರಿಮಿನಲ್ ಪ್ರಕರಣ ಎಂದು ತನಿಖೆ ನಡೆಸುತ್ತಿದ್ದೇವೆ ಎಂದು ಕಳೆದ ವಾರ ತಿಳಿಸಿದ್ದರು.

ಇದನ್ನೂ ಓದಿ: ಮಕ್ಕಳನ್ನು ಹೆರುವುದು ನೀವು, ಸರ್ಕಾರ ವೆಚ್ಚ ಭರಿಸಬೇಕಾ?: ಬಿಜೆಪಿ ಶಾಸಕನ ವಿವಾದಾತ್ಮಕ ಹೇಳಿಕೆ

ಸಚಿವ ಸಂಜಯ್ ರಾಥೋಡ್‌ಗೂ ಮೃತ ಯುವತಿಯ ಸಾವಿಗೂ ಸಂಬಂಧವಿದೆ ಎಂದು ಬಿಜೆಪಿ ಆರೋಪಿಸಿ, ಅವರ ಬಂಧನಕ್ಕೆ ಪಕ್ಷ ಒತ್ತಾಯಿಸುತ್ತಿತ್ತು. ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ಸಾವಿನ ಬಗ್ಗೆ ಮಹಾರಾಷ್ಟ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದರು.

“ಪೂಜಾ ಚೌವಾಣ್ ಆತ್ಮಹತ್ಯೆ ಪ್ರಕರಣದಲ್ಲಿ ಗಂಭೀರ ಆರೋಪ ಹೊಂದಿರುವ ಸಚಿವರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ, ಬೀಡ್ ಜಿಲ್ಲೆಯಲ್ಲಿ ಸಂಜಯ್ ರಾಥೋಡ್ ಅವರ ಪ್ರತಿಮೆಯನ್ನು ಸುಟ್ಟು ಬಿಜೆಪಿ ಪ್ರತಿಭಟನೆ ನಡೆಸಿತ್ತು” ಎಂದು ಬಿಜೆಪಿ ಮಹಾರಾಷ್ಟ್ರ ಕಳೆದ ವಾರ ಟ್ವೀಟ್ ಮಾಡಿದೆ.

“ಸಂಜಯ್ ರಾಥೋಡ್ ವಿರುದ್ಧ ಸಾಕಷ್ಟು ಪುರಾವೆಗಳಿವೆ ಆದರೆ ಏನೂ ಆಗುತ್ತಿಲ್ಲ. ಮಾಧ್ಯಮ ವರದಿಗಳು ಹೊರಬರದಿದ್ದರೆ ಏನೂ ಆಗುತ್ತಿರಲಿಲ್ಲ. ರಾಜ್ಯದ ಪೊಲೀಸರು ಒತ್ತಡದಲ್ಲಿದ್ದಾರೆ. ಮೊದಲು, ಪೋಲಿಸ್ ತನಿಖೆಯ ಬಗ್ಗೆ ತನಿಖೆ ನಡೆಸಬೇಕಾಗಿದೆ” ಎಂದು ಫಡ್ನವಿಸ್ ಕಳೆದ ವಾರ ಹೇಳಿದ್ದರು.


ಇದನ್ನೂ ಓದಿ: ಭಾರತದ ಪವರ್‌ಗ್ರಿಡ್‌ಗಳು ಚೀನಾ ಹ್ಯಾಕರ್‌ಗಳ ಟಾರ್ಗೆಟ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...