Homeಮುಖಪುಟಮೃತ ಮಹಿಳೆಯ ಮಾನಹಾನಿ: ಬಿಜೆಪಿಯ ಮಾಜಿ ಮುಖ್ಯಮಂತ್ರಿ ಸೇರಿದಂತೆ 6 ಜನರ ವಿರುದ್ಧ ಪ್ರಕರಣ

ಮೃತ ಮಹಿಳೆಯ ಮಾನಹಾನಿ: ಬಿಜೆಪಿಯ ಮಾಜಿ ಮುಖ್ಯಮಂತ್ರಿ ಸೇರಿದಂತೆ 6 ಜನರ ವಿರುದ್ಧ ಪ್ರಕರಣ

- Advertisement -
- Advertisement -

ಮೃತ ಮಹಿಳೆಯ ಮಾನಹಾನಿ ಮಾಡಿದ್ದಾರೆ ಎಂದು ಆರೋಪಿಸಿ ಬಿಜೆಪಿ ಮುಖಂಡ ಮತ್ತು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಸೇರಿದಂತೆ ಆರು ಮಂದಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಪುಣೆ ಮೂಲದ ಮಹಿಳೆಯ ಮಾನನಷ್ಟ ಮಾಡಿದ ಆರೋಪದಲ್ಲಿ ಭಾರತೀಯ ದಂಡಸಂಹಿತೆಯ ಸೆಕ್ಷನ್ 500 ಮತ್ತು 501ರ ಅನ್ವಯ ಮನೋರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಾಶಿಮ್ ಜಿಲ್ಲೆಯ ರಾಷ್ಟ್ರೀಯ ಬಂಜಾರ ಪರಿಷತ್‌ನ ಯುವ ವಿಭಾಗದ ಮುಖ್ಯಸ್ಥರಾಗಿರುವ ಶ್ಯಾಮ್ ಸರ್ದಾರ್ ರಾಥೋಡ್ ಅವರು ದೂರು ದಾಖಲಿಸಿದ್ದಾರೆ ಎಂದು ಮುಂಬೈ ಮಿರರ್ ವರದಿ ಮಾಡಿದೆ.

ಕೆಲ ಸುದ್ದಿವಾಹಿನಿಗಳು ಕೂಡಾ ಮೃತ ಮಹಿಳೆ ಮತ್ತು ಬಂಜಾರ ಸಮುದಾಯವನ್ನು ಅವಮಾನಿಸಿವೆ ಎಂದು ಅವರು ದೂರಿದ್ದಾರೆ. ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ, ಪ್ರತಿಭಟನೆ ಹಮ್ಮಿಕೊಳ್ಳುವುದಾಗಿಯೂ ಅವರು ಎಚ್ಚರಿಕೆ ನೀಡಿದ್ದಾರೆ.

ಮಹಾರಾಷ್ಟ್ರ ಸಚಿವರ ರಾಜೀನಾಮೆಗೆ ಕಾರಣವಾದ ಸಾವಿನ ಪ್ರಕರಣ ಸಂಬಂಧದಲ್ಲಿ, ಫಡ್ನವೀಸ್ ಜತೆಗೆ ವಿಧಾನ ಪರಿಷತ್ ವಿರೋಧ ಪಕ್ಷದ ಮುಖಂಡ ಪ್ರವೀಣ್ ದಾರೇಕರ್, ಮಾಜಿ ಸಚಿವರಾದ ಸುಧೀರ್ ಮುಗಂಟಿವಾರ್, ಆಶೀಶ್ ಶೇಲರ್, ಮುಂಬೈ ಶಾಸಕ ಅತುಲ್ ಭಟ್ಕಳ್‌ಕರ್ ಹಾಗೂ ಬಿಜೆಪಿ ನಾಯಕಿ ಚಿತ್ರಾ ವಾಘ್ ವಿರುದ್ಧವೂ ಪ್ರಕರಣ ದಾಖಲಾಗಿದೆ. ಜೊತೆಗೆ ದೂರಿನಲ್ಲಿ ಪ್ರಸಾದ್ ಲಾಡ್, ಶಾಂತಾಬಾಯಿ ಚವ್ಹಾಣ್ ಮತ್ತು ಮಹಿಳಾ ಹೋರಾಟಗಾರ್ತಿ ತೃಪ್ತಿ ದೇಸಾಯಿ ಅವರನ್ನೂ ಹೆಸರಿಸಲಾಗಿದೆ.

ಇದನ್ನೂ ಓದಿ: ಕೇರಳ ಚುನಾವಣೆ: ಸದ್ಯದ ಸ್ಥಿತಿ ಮತ್ತು ಮೈತ್ರಿಕೂಟಗಳಲ್ಲಿ ಸೀಟು ಹಂಚಿಕೆ ಹಗ್ಗಜಗ್ಗಾಟ

ಪುಣೆಯ ಹಡಪಸಾರ್ ಎಂಬಲ್ಲಿ 23 ವರ್ಷ ಮಹಿಳೆ ಇತ್ತೀಚೆಗೆ ಮೃತಪಟ್ಟಿದ್ದರು. ಮಹಿಳೆಯ ಸಾವಿನ ಹಿಂದೆ ಶಿವಸೇನೆ ಶಾಸಕ ಸಂಜಯ್ ರಾಥೋಡ್ ಅವರ ಕೈವಾಡವಿದೆ ಎಂದು ಬಿಜೆಪಿ ಆಪಾದಿಸಿದ ಹಿನ್ನೆಲೆಯಲ್ಲಿ ರಾಜಕೀಯ ವಿವಾದ ಸೃಷ್ಟಿಯಾಗಿತ್ತು. ಬಂಜಾರ ಸಮುದಾಯಕ್ಕೆ ಸೇರಿದ ರಾಥೋಡ್, ರಾಜ್ಯದ ಅರಣ್ಯ ಸಚಿವ ಹುದ್ದೆಗೆ ರವಿವಾರ ರಾಜೀನಾಮೆ ನೀಡಿದ್ದರು. ಆದರೆ ತಮ್ಮ ವಿರುದ್ಧದ ಆರೋಪಗಳನ್ನು ನಿರಾಕರಿಸಿದ್ದರು.

ಮಹಾರಾಷ್ಟ್ರದ ಬೀಡ್ ಜಿಲ್ಲೆಯ ಪೂಜಾ ಚೌವಾಣ್ ಎಂಬ 23 ವರ್ಷದ ಯುವತಿ ಇಂಗ್ಲಿಷ್ ಸ್ಪೀಕಿಂಗ್ ಕೋರ್ಸ್ ಕಲಿಯಲು ಪುಣೆಯಲ್ಲಿ ತನ್ನ ಸಹೋದರ ಮತ್ತು ಸ್ನೇಹಿತರೊಂದಿಗೆ ವಾಸಿಸುತ್ತಿದ್ದಳು. ಫೆಬ್ರವರಿ 8 ರಂದು ಈ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದರು.

ಯುವತಿಯ ಸಾವಿನ ಎರಡು ದಿನಗಳ ನಂತರ, ಸಾಮಾಜಿಕ ಜಾಲತಾಣದಲ್ಲಿ ಆಡಿಯೋ ಕ್ಲಿಪ್ ಬಿಡುಗಡೆಯಾಗಿದ್ದು, ಇದರಲ್ಲಿ ಇಬ್ಬರು ವ್ಯಕ್ತಿಗಳು ಯುವತಿಯ ಸಾವಿನ ಬಗ್ಗೆ ಮಾತನಾಡಿದ್ದಾರೆ. ಆಡಿಯೋ ಕ್ಲಿಪ್‌ನಲ್ಲಿರುವ ವ್ಯಕ್ತಿಗಳಲ್ಲಿ ಒಬ್ಬರು ಸಂಜಯ್ ರಾಥೋಡ್ ಎಂದು ಬಿಜೆಪಿ ಆರೋಪಿಸಿದೆ. ಈ ಆರೋಪವನ್ನು ಸಂಜಯ್ ರಾಥೋಡ್ ನಿರಾಕರಿಸಿದ್ದಾರೆ.

ಪ್ರಕರಣದ ಬಗ್ಗೆ ಮಾಹಿತಿ ನೀಡಿರುವ ಪೊಲೀಸರು, ’ಆಕೆ ಆತ್ಮಹತ್ಯೆ ಮಾಡಿಕೊಂಡಂತೆ ಕಾಣಿಸಿಕೊಂಡರೂ, ಅದನ್ನು ಕ್ರಿಮಿನಲ್ ಪ್ರಕರಣ ಎಂದು ತನಿಖೆ ನಡೆಸುತ್ತಿದ್ದೇವೆ ಎಂದು ಕಳೆದ ವಾರ ತಿಳಿಸಿದ್ದರು.

ಇದನ್ನೂ ಓದಿ: ಮಕ್ಕಳನ್ನು ಹೆರುವುದು ನೀವು, ಸರ್ಕಾರ ವೆಚ್ಚ ಭರಿಸಬೇಕಾ?: ಬಿಜೆಪಿ ಶಾಸಕನ ವಿವಾದಾತ್ಮಕ ಹೇಳಿಕೆ

ಸಚಿವ ಸಂಜಯ್ ರಾಥೋಡ್‌ಗೂ ಮೃತ ಯುವತಿಯ ಸಾವಿಗೂ ಸಂಬಂಧವಿದೆ ಎಂದು ಬಿಜೆಪಿ ಆರೋಪಿಸಿ, ಅವರ ಬಂಧನಕ್ಕೆ ಪಕ್ಷ ಒತ್ತಾಯಿಸುತ್ತಿತ್ತು. ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ಸಾವಿನ ಬಗ್ಗೆ ಮಹಾರಾಷ್ಟ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದರು.

“ಪೂಜಾ ಚೌವಾಣ್ ಆತ್ಮಹತ್ಯೆ ಪ್ರಕರಣದಲ್ಲಿ ಗಂಭೀರ ಆರೋಪ ಹೊಂದಿರುವ ಸಚಿವರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ, ಬೀಡ್ ಜಿಲ್ಲೆಯಲ್ಲಿ ಸಂಜಯ್ ರಾಥೋಡ್ ಅವರ ಪ್ರತಿಮೆಯನ್ನು ಸುಟ್ಟು ಬಿಜೆಪಿ ಪ್ರತಿಭಟನೆ ನಡೆಸಿತ್ತು” ಎಂದು ಬಿಜೆಪಿ ಮಹಾರಾಷ್ಟ್ರ ಕಳೆದ ವಾರ ಟ್ವೀಟ್ ಮಾಡಿದೆ.

“ಸಂಜಯ್ ರಾಥೋಡ್ ವಿರುದ್ಧ ಸಾಕಷ್ಟು ಪುರಾವೆಗಳಿವೆ ಆದರೆ ಏನೂ ಆಗುತ್ತಿಲ್ಲ. ಮಾಧ್ಯಮ ವರದಿಗಳು ಹೊರಬರದಿದ್ದರೆ ಏನೂ ಆಗುತ್ತಿರಲಿಲ್ಲ. ರಾಜ್ಯದ ಪೊಲೀಸರು ಒತ್ತಡದಲ್ಲಿದ್ದಾರೆ. ಮೊದಲು, ಪೋಲಿಸ್ ತನಿಖೆಯ ಬಗ್ಗೆ ತನಿಖೆ ನಡೆಸಬೇಕಾಗಿದೆ” ಎಂದು ಫಡ್ನವಿಸ್ ಕಳೆದ ವಾರ ಹೇಳಿದ್ದರು.


ಇದನ್ನೂ ಓದಿ: ಭಾರತದ ಪವರ್‌ಗ್ರಿಡ್‌ಗಳು ಚೀನಾ ಹ್ಯಾಕರ್‌ಗಳ ಟಾರ್ಗೆಟ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...