Homeಮುಖಪುಟಸುವೆಂದು ಅಧಿಕಾರಿ ವಿರುದ್ಧ ಸೋಲು: ಕೋರ್ಟಿಗೆ ಹೋಗುತ್ತೇನೆಂದ ಮಮತಾ ಬ್ಯಾನರ್ಜಿ

ಸುವೆಂದು ಅಧಿಕಾರಿ ವಿರುದ್ಧ ಸೋಲು: ಕೋರ್ಟಿಗೆ ಹೋಗುತ್ತೇನೆಂದ ಮಮತಾ ಬ್ಯಾನರ್ಜಿ

- Advertisement -
- Advertisement -

ತೀವ್ರ ಕುತೂಹಲ ಕೆರೆಳಿಸಿ, ದೇಶದ ಗಮನ ಸೆಳೆದಿದ್ದ ಪಶ್ಚಿಮ ಬಂಗಾಳದ ನಂದಿಗ್ರಾಮ ಕ್ಷೇತ್ರದಲ್ಲಿ ಕೊನೆಗೂ ಸಿಎಂ ಮಮತಾ ಬ್ಯಾನರ್ಜಿ ಕೊನೆಗೂ ರೋಚಕ ಗೆಲುವು ಸಾಧಿಸಿದ್ದಾರೆ ಎಂದು ಎಎನ್‌ಐ ಸೇರಿದಂತೆ ಹಲವು ಮಾಧ್ಯಮಗಳು ವರದಿ ಮಾಡಿದ್ದವು. ಅವರು ತಮ್ಮ ಹಳೆಯ ಸಹೋದ್ಯೋಗಿ ಮತ್ತು ಈಗಿನ ಪ್ರತಿಸ್ಪರ್ಧಿ ಬಿಜೆಪಿಯ ಸುವೇಂದು ಅಧಿಕಾರಿ ವಿರುದ್ಧ 1200 ಮತಗಳ ಅಂತರದಿಂದ ಜಯಗಳಿಸಿದ್ದಾರೆ ಎನ್ನಲಾಗಿತ್ತು. ಆದರೆ ಈ ಕುರಿತು ಗೊಂದಲಗಳು ಏರ್ಪಟ್ಟು ಸುವೇಂದು ಅಧಿಕಾರಿ ಜಯಗಳಿಸಿದ್ದಾರೆ ಎಂದು ವರದಿಯಾಗಿತ್ತು.

ಆದರೆ ಚುನಾವಣಾ ಆಯೋಗ ಬಿಜೆಪಿಯ ಸುವೇಂದು ಅಧಿಕಾರಿ ಮಮತಾ ಬ್ಯಾನರ್ಜಿ ವಿರುದ್ಧ 1,736 ಮತಗಳ ಅಂತರದಿಂದ ಜಯಗಳಿಸಿದ್ದಾರೆ ಎಂದು ಘೋಷಿಸಿದೆ. ಈ ನಡುವೆ “ನಂದಿಗ್ರಾಮದಲ್ಲಿ ಇನ್ನೂ ಎಣಿಕೆ ಮುಗಿದಿಲ್ಲ, ತಾಳ್ಮೆಯಿಂದಿರಿ, ವದಂತಿಗಳನ್ನು ಹರಡಬೇಡಿ” ಎಂದು ಟಿಎಂಸಿ ಟ್ವೀಟ್ ಮಾಡಿತ್ತು.

ಈ ಕ್ಷೇತ್ರದಲ್ಲಿ ಆರಂಭದಿಂದ ಬಿಜೆಪಿಯ ಸುವೇಂದು ಅಧಿಕಾರಿ ಮುನ್ನಡೆ ಸಾಧಿಸಿದ್ದರು. ನಂತರ ಮಮತಾ ಬ್ಯಾನರ್ಜಿ ಮುನ್ನಡೆ ಸಾಧಿಸಿದ್ದರು. ಈ ರೀತಿಯ ಹಗ್ಗ ಜಗ್ಗಾಟ ಕೊನೆ ಹಂತದವರೆಗೂ ಮುಂದುವರೆದಿದ್ದು ಕೊನೆಗೂ ಮಮತಾ ಬ್ಯಾನರ್ಜಿಗೆ ಸೋಲಾಗಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಮಮತಾ ಬ್ಯಾನರ್ಜಿ “ನಂದಿಗ್ರಾಮದ ಜನತೆ ಯಾವುದೇ ತೀರ್ಪು ಕೊಟ್ಟರೂ ಸ್ವೀಕರಿಸುತ್ತೇನೆ. ನಮ್ಮ ಬೃಹತ್ ವಿಜಯದಲ್ಲಿ ನಂದಿಗ್ರಾಮವನ್ನು ತ್ಯಾಗಮಾಡಬೇಕಾಗಿ ಬಂದಿದೆ. ಆದರೆ ನಾವು ಇಡೀ ರಾಜ್ಯವನ್ನು ಗೆದ್ದಿದ್ದೇವೆ. ಇದುವರೆಗೆ ಏನಾಗಿದೆಯೊ ಅದು ನಮಗೆ ಒಳಿತಾಗಿದೆ. ಆದರೆ ನಾನು ನಂದಿಗ್ರಾಮದ ಫಲಿತಾಂಶದ ವಿಚಾರದಲ್ಲಿ ಕೋರ್ಟಿಗೆ ಹೋಗುತ್ತೇನೆ. ಅಲ್ಲಿ ಕೆಲವು ದುಷ್ಕೃತ್ಯಗಳು ನಡೆದಿವೆ ಎಂದು ನಾನು ಕೇಳಿದ್ದೇನೆ” ಎಂದು ತಿಳಿಸಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಟಿಎಂಸಿಯು ಭರ್ಜರಿ ಸಾಧನೆ ಮಾಡಿದೆ. ಒಟ್ಟು 294 ಕ್ಷೇತ್ರಗಳಲ್ಲಿ 213 ಸ್ಥಾನಗಳು ಅದು ಮುನ್ನಡೆ ಸಾಧಿಸುವ ಮೂಲಕ ಸೂಪರ್ ವಿಕ್ಟರಿಯತ್ತ ಮುನ್ನುಗ್ಗುತ್ತಿದೆ. ಬಿಜೆಪಿ 78 ಕ್ಷೇತ್ರಗಳಲ್ಲಿ ಮಾತ್ರ ಮುನ್ನಡೆ ಸಾಧಿಸಿದೆ.

ಒಂದು ಕಾಲದಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಆಪ್ತ ಮತ್ತು ಪಕ್ಷದ ಪ್ರಬಲ ಮುಖಂಡನಾಗಿದ್ದ ಮತ್ತು ಈಗ ಬಿಜೆಪಿ ಸೇರಿ ಅಭ್ಯರ್ಥಿಯಾಗಿರುವ ಸುವೇಂಧು ಅಧಿಕಾರಿ ಈ ಚುನಾವಣೆಯಲ್ಲಿ ಸಿಎಂ ವಿರುದ್ಧ 50 ಸಾವಿರ ಮತಗಳ ಅಂತರದಲ್ಲಿ ಜಯಗಳಿಸುವುದಾಗಿ ಸವಾಲು ಹಾಕಿದ್ದರು.

ನಂದಿಗ್ರಾಮ ಸುವೇಂಧು ಅಧಿಕಾರಿಯವರ ಪ್ರಬಲ ಭದ್ರಕೋಟೆಯಾಗಿತ್ತು. ಅಂತಹ ಭದ್ರಕೋಟೆಯಲ್ಲಿ ಸ್ಪರ್ಧಿಸುವ ಮೂಲಕ ಮಮತಾ ಬ್ಯಾನರ್ಜಿ ಬಹುದೊಡ್ಡ ರಿಸ್ಕ್ ಅನ್ನು ತೆಗೆದುಕೊಂಡಿದ್ದರು. ಅಲ್ಲದೇ ಅವರು ಬೇರೆ ಯಾವುದೇ ಕ್ಷೇತ್ರದಲ್ಲಿ ಸ್ಪರ್ಧಿಸುವುದಿಲ್ಲ ಎಂದು ತೀರ್ಮಾನಿಸಿದ್ದರು.


ಇದನ್ನೂ ಓದಿ: Election Results 2021 Live Updates | ಎಡಪಕ್ಷಕ್ಕೆ ಬಹುಮತ; ಸಂಪ್ರದಾಯ ಬದಲಿಸಿದ ಪಿಣರಾಯಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...