Homeಮುಖಪುಟಸುವೆಂದು ಅಧಿಕಾರಿ ವಿರುದ್ಧ ಸೋಲು: ಕೋರ್ಟಿಗೆ ಹೋಗುತ್ತೇನೆಂದ ಮಮತಾ ಬ್ಯಾನರ್ಜಿ

ಸುವೆಂದು ಅಧಿಕಾರಿ ವಿರುದ್ಧ ಸೋಲು: ಕೋರ್ಟಿಗೆ ಹೋಗುತ್ತೇನೆಂದ ಮಮತಾ ಬ್ಯಾನರ್ಜಿ

- Advertisement -
- Advertisement -

ತೀವ್ರ ಕುತೂಹಲ ಕೆರೆಳಿಸಿ, ದೇಶದ ಗಮನ ಸೆಳೆದಿದ್ದ ಪಶ್ಚಿಮ ಬಂಗಾಳದ ನಂದಿಗ್ರಾಮ ಕ್ಷೇತ್ರದಲ್ಲಿ ಕೊನೆಗೂ ಸಿಎಂ ಮಮತಾ ಬ್ಯಾನರ್ಜಿ ಕೊನೆಗೂ ರೋಚಕ ಗೆಲುವು ಸಾಧಿಸಿದ್ದಾರೆ ಎಂದು ಎಎನ್‌ಐ ಸೇರಿದಂತೆ ಹಲವು ಮಾಧ್ಯಮಗಳು ವರದಿ ಮಾಡಿದ್ದವು. ಅವರು ತಮ್ಮ ಹಳೆಯ ಸಹೋದ್ಯೋಗಿ ಮತ್ತು ಈಗಿನ ಪ್ರತಿಸ್ಪರ್ಧಿ ಬಿಜೆಪಿಯ ಸುವೇಂದು ಅಧಿಕಾರಿ ವಿರುದ್ಧ 1200 ಮತಗಳ ಅಂತರದಿಂದ ಜಯಗಳಿಸಿದ್ದಾರೆ ಎನ್ನಲಾಗಿತ್ತು. ಆದರೆ ಈ ಕುರಿತು ಗೊಂದಲಗಳು ಏರ್ಪಟ್ಟು ಸುವೇಂದು ಅಧಿಕಾರಿ ಜಯಗಳಿಸಿದ್ದಾರೆ ಎಂದು ವರದಿಯಾಗಿತ್ತು.

ಆದರೆ ಚುನಾವಣಾ ಆಯೋಗ ಬಿಜೆಪಿಯ ಸುವೇಂದು ಅಧಿಕಾರಿ ಮಮತಾ ಬ್ಯಾನರ್ಜಿ ವಿರುದ್ಧ 1,736 ಮತಗಳ ಅಂತರದಿಂದ ಜಯಗಳಿಸಿದ್ದಾರೆ ಎಂದು ಘೋಷಿಸಿದೆ. ಈ ನಡುವೆ “ನಂದಿಗ್ರಾಮದಲ್ಲಿ ಇನ್ನೂ ಎಣಿಕೆ ಮುಗಿದಿಲ್ಲ, ತಾಳ್ಮೆಯಿಂದಿರಿ, ವದಂತಿಗಳನ್ನು ಹರಡಬೇಡಿ” ಎಂದು ಟಿಎಂಸಿ ಟ್ವೀಟ್ ಮಾಡಿತ್ತು.

ಈ ಕ್ಷೇತ್ರದಲ್ಲಿ ಆರಂಭದಿಂದ ಬಿಜೆಪಿಯ ಸುವೇಂದು ಅಧಿಕಾರಿ ಮುನ್ನಡೆ ಸಾಧಿಸಿದ್ದರು. ನಂತರ ಮಮತಾ ಬ್ಯಾನರ್ಜಿ ಮುನ್ನಡೆ ಸಾಧಿಸಿದ್ದರು. ಈ ರೀತಿಯ ಹಗ್ಗ ಜಗ್ಗಾಟ ಕೊನೆ ಹಂತದವರೆಗೂ ಮುಂದುವರೆದಿದ್ದು ಕೊನೆಗೂ ಮಮತಾ ಬ್ಯಾನರ್ಜಿಗೆ ಸೋಲಾಗಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಮಮತಾ ಬ್ಯಾನರ್ಜಿ “ನಂದಿಗ್ರಾಮದ ಜನತೆ ಯಾವುದೇ ತೀರ್ಪು ಕೊಟ್ಟರೂ ಸ್ವೀಕರಿಸುತ್ತೇನೆ. ನಮ್ಮ ಬೃಹತ್ ವಿಜಯದಲ್ಲಿ ನಂದಿಗ್ರಾಮವನ್ನು ತ್ಯಾಗಮಾಡಬೇಕಾಗಿ ಬಂದಿದೆ. ಆದರೆ ನಾವು ಇಡೀ ರಾಜ್ಯವನ್ನು ಗೆದ್ದಿದ್ದೇವೆ. ಇದುವರೆಗೆ ಏನಾಗಿದೆಯೊ ಅದು ನಮಗೆ ಒಳಿತಾಗಿದೆ. ಆದರೆ ನಾನು ನಂದಿಗ್ರಾಮದ ಫಲಿತಾಂಶದ ವಿಚಾರದಲ್ಲಿ ಕೋರ್ಟಿಗೆ ಹೋಗುತ್ತೇನೆ. ಅಲ್ಲಿ ಕೆಲವು ದುಷ್ಕೃತ್ಯಗಳು ನಡೆದಿವೆ ಎಂದು ನಾನು ಕೇಳಿದ್ದೇನೆ” ಎಂದು ತಿಳಿಸಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಟಿಎಂಸಿಯು ಭರ್ಜರಿ ಸಾಧನೆ ಮಾಡಿದೆ. ಒಟ್ಟು 294 ಕ್ಷೇತ್ರಗಳಲ್ಲಿ 213 ಸ್ಥಾನಗಳು ಅದು ಮುನ್ನಡೆ ಸಾಧಿಸುವ ಮೂಲಕ ಸೂಪರ್ ವಿಕ್ಟರಿಯತ್ತ ಮುನ್ನುಗ್ಗುತ್ತಿದೆ. ಬಿಜೆಪಿ 78 ಕ್ಷೇತ್ರಗಳಲ್ಲಿ ಮಾತ್ರ ಮುನ್ನಡೆ ಸಾಧಿಸಿದೆ.

ಒಂದು ಕಾಲದಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಆಪ್ತ ಮತ್ತು ಪಕ್ಷದ ಪ್ರಬಲ ಮುಖಂಡನಾಗಿದ್ದ ಮತ್ತು ಈಗ ಬಿಜೆಪಿ ಸೇರಿ ಅಭ್ಯರ್ಥಿಯಾಗಿರುವ ಸುವೇಂಧು ಅಧಿಕಾರಿ ಈ ಚುನಾವಣೆಯಲ್ಲಿ ಸಿಎಂ ವಿರುದ್ಧ 50 ಸಾವಿರ ಮತಗಳ ಅಂತರದಲ್ಲಿ ಜಯಗಳಿಸುವುದಾಗಿ ಸವಾಲು ಹಾಕಿದ್ದರು.

ನಂದಿಗ್ರಾಮ ಸುವೇಂಧು ಅಧಿಕಾರಿಯವರ ಪ್ರಬಲ ಭದ್ರಕೋಟೆಯಾಗಿತ್ತು. ಅಂತಹ ಭದ್ರಕೋಟೆಯಲ್ಲಿ ಸ್ಪರ್ಧಿಸುವ ಮೂಲಕ ಮಮತಾ ಬ್ಯಾನರ್ಜಿ ಬಹುದೊಡ್ಡ ರಿಸ್ಕ್ ಅನ್ನು ತೆಗೆದುಕೊಂಡಿದ್ದರು. ಅಲ್ಲದೇ ಅವರು ಬೇರೆ ಯಾವುದೇ ಕ್ಷೇತ್ರದಲ್ಲಿ ಸ್ಪರ್ಧಿಸುವುದಿಲ್ಲ ಎಂದು ತೀರ್ಮಾನಿಸಿದ್ದರು.


ಇದನ್ನೂ ಓದಿ: Election Results 2021 Live Updates | ಎಡಪಕ್ಷಕ್ಕೆ ಬಹುಮತ; ಸಂಪ್ರದಾಯ ಬದಲಿಸಿದ ಪಿಣರಾಯಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...