Homeಕರ್ನಾಟಕಉಪ ಚುನಾವಣೆ: ಇದು ಪ್ರಜಾಪ್ರಭುತ್ವದ ಸೋಲು - ಸಿದ್ದರಾಮಯ್ಯ

ಉಪ ಚುನಾವಣೆ: ಇದು ಪ್ರಜಾಪ್ರಭುತ್ವದ ಸೋಲು – ಸಿದ್ದರಾಮಯ್ಯ

ಅಕ್ರಮ ಗಳಿಕೆಯ ಹಣ ಮತ್ತು ಆಡಳಿತ ಯಂತ್ರದ ದುರುಪಯೋಗಕ್ಕೆ ಸಿಕ್ಕಿರುವ ಗೆಲುವು ಎನ್ನುವುದು ವಿಷಾದದ ಸಂಗತಿ.

- Advertisement -
- Advertisement -

ರಾಜ್ಯದಲ್ಲಿ ನಡೆದ ಶಿರಾ ಮತ್ತು ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ ಸೋಲು ಕಂಡಿದೆ. ಇದಕ್ಕೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಜನರ ತೀರ್ಪು ಒಪ್ಪಿಕೊಂಡಿದ್ದೇವೆ ಎಂದಿದ್ದಾರೆ.

ರಾಜರಾಜೇಶ್ವರಿ ನಗರದಲ್ಲಿ ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರಿದ್ದ ಮುನಿರತ್ನ ಅವರು ಭಾರಿ ಬಹುಮತದೊಂದಿಗೆ, ಕಾಂಗ್ರೆಸ್ ಅಭ್ಯರ್ಥಿ ಎಚ್.ಕುಸುಮಾ ವಿರುದ್ಧ ಗೆಲುವು ಸಾಧಿಸಿದ್ದಾರೆ. ಇತ್ತ ಶಿರಾ ವಿಧಾನಸಭಾ ಕ್ಷೇತ್ರದಲ್ಲೂ ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ.ಜಯಚಂದ್ರ ವಿರುದ್ಧ ಬಿಜೆಪಿ ಅಭ್ಯರ್ಥಿ ರಾಜೇಶ್‌ಗೌಡ ವಿಜಯ ಸಾಧಿಸಿದ್ದಾರೆ.

“ರಾಜರಾಜೇಶ್ವರಿ ನಗರ ಮತ್ತು ಶಿರಾ ಕ್ಷೇತ್ರದ ಸೋಲನ್ನು ನಾವು ವಿನೀತರಾಗಿ ಒಪ್ಪಿಕೊಂಡಿದ್ದೇವೆ. ಆದರೆ ಇದು ಪ್ರಜಾಪ್ರಭುತ್ವದ ಸೋಲು. ಅಕ್ರಮ ಗಳಿಕೆಯ ಹಣ ಮತ್ತು ಆಡಳಿತ ಯಂತ್ರದ ದುರುಪಯೋಗಕ್ಕೆ ಸಿಕ್ಕಿರುವ ಗೆಲುವು ಎನ್ನುವುದು ವಿಷಾದದ ಸಂಗತಿ” ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಅಧ್ಯಕ್ಷೀಯ ಚುನಾವಣೆಯಲ್ಲಿ ಸೋಲು: ಟ್ರಂಪ್‌ಗೆ ವಿಚ್ಛೇಧನ ನೀಡಲಿರುವ ಮೆಲೆನಿಯಾ?

ಸಾಮಾನ್ಯವಾಗಿ ಉಪಚುನಾವಣೆಗಳಲ್ಲಿ ಅಧಿಕಾರರೂಢ ಪಕ್ಷದ ಅಭ್ಯರ್ಥಿಗಳು ಗೆಲ್ಲುತ್ತಾರೆ. ಆಡಳಿತ ಪಕ್ಷದ ಶಾಸಕರಿದ್ದರೆ ತಮ್ಮ ಕ್ಷೇತ್ರಕ್ಕೆ ಅನುಕೂಲವಾಗುತ್ತದೆ ಎಂಬ ಅಭಿಪ್ರಾಯ ಜನರಲ್ಲಿರುತ್ತದೆ. ಇದೇ ಫಲಿತಾಂಶ ಸಾಮಾನ್ಯ ಚುನಾವಣೆಯಲ್ಲಿ ನಿರೀಕ್ಷಿಸಲಾಗದು ಎಂದು ಕಾಂಗ್ರೆಸ್ ಮುಂದಿನ ಚುನಾವಣೆಯಲ್ಲಿ ಗೆಲ್ಲುವ ಭರವಸೆಯನ್ನು ಸಿದ್ದರಾಮಯ್ಯ ವ್ಯಕ್ತಪಡಿಸಿದ್ದಾರೆ.

ಬಿಜೆಪಿ ಅಭ್ಯರ್ಥಿಗಳ ಗೆಲುವಿಗೆ ಜೆಡಿಎಸ್ ಕೂಟ ಕಾರಣ ಎಂದು ಆರೋಪಿಸಿರುವ ಸಿದ್ದರಾಮಯ್ಯ, “ಎರಡೂ ಕ್ಷೇತ್ರಗಳಲ್ಲಿ ಜೆಡಿಎಸ್ ಹೀನಾಯವಾಗಿ ಸೋತಿರುವುದರಿಂದ ಆ ಪಕ್ಷದ ಮತಗಳು ಬಿಜೆಪಿ ಬುಟ್ಟಿಗೆ ಬಿದ್ದು ಅವರ ಗೆಲುವಿಗೆ ನೆರವಾಯಿತು. ಮುಖ್ಯವಾಗಿ ಶಿರಾದಲ್ಲಿ ಜೆಡಿಎಸ್ ತನ್ನ ಮತಗಳನ್ನಾದರೂ ಉಳಿಸಿಕೊಂಡಿದ್ದರೆ ಖಂಡಿತ ಬಿಜೆಪಿ ಇಷ್ಟು ಸುಲಭದಲ್ಲಿ ಗೆಲ್ಲುತ್ತಿರಲಿಲ್ಲ” ಎಂದು ಆರೋಪಿಸಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌, “ಪಕ್ಷದ ಅಧ್ಯಕ್ಷನಾಗಿ ಈ ಸೋಲಿನ ಹೊಣೆ ನಾನು ಹೊರುತ್ತೇನೆಯೇ ಹೊರತು, ಬೇರೆಯವರ ಮೇಲೆ ಹಾಕುವುದಿಲ್ಲ ಎಂದಿದ್ದಾರೆ. ಉಪಚುನಾವಣೆಯಲ್ಲಿ ಮತದಾರ ಕೊಟ್ಟ ತೀರ್ಪನ್ನು ನಾವು ಗೌರವಯುತವಾಗಿ ಒಪ್ಪುತ್ತೇವೆ. ಪಕ್ಷದ ಮುಂದಿನ ದಿನಗಳಲ್ಲಿ ಪಕ್ಷ ಸಂಘಟಿಸಿ ಸರ್ಕಾರದ ವೈಫಲ್ಯದ ವಿರುದ್ಧ ಹೋರಾಟ ಮುಂದುವರಿಸುತ್ತೇವೆ” ಎಂದು ತಿಳಿಸಿದ್ದಾರೆ.

’ಶಿರಾದಲ್ಲಿ ನಮ್ಮ ಲೆಕ್ಕಾಚಾರ ತಪ್ಪಾಗಿದೆ. ಅಲ್ಲಿ ನಾವು ಗೆದ್ದೇ ಗೆಲ್ಲುತ್ತೇವೆ ಎಂದು ನಮ್ಮ ಪಕ್ಷದ ಎಲ್ಲ ಮುಖಂಡರು ನಿರೀಕ್ಷಿಸಿದ್ದೆವು. ಅಲ್ಲಿ ಬಿಜೆಪಿಗೆ ಹೊಸದಾಗಿ ಅಷ್ಟು ಮತ ಹೋಗಿರುವುದು ಅಚ್ಚರಿ ತಂದಿದೆ. ಮುಂದಿನ ದಿನಗಳಲ್ಲಿ ಜನರ ವಿಶ್ವಾಸ ಹೇಗೆ ಪಡೆಯುವುದು, ಕ್ಷೇತ್ರಕ್ಕಾಗಿ ಹೇಗೆ ದುಡಿಯಬೇಕು ಎಂಬುದನ್ನು ಚರ್ಚೆ ಮಾಡುತ್ತೇವೆ’ ಎಂದಿದ್ದಾರೆ.

ಇದನ್ನೂ ಓದಿ: ತಡರಾತ್ರಿಯವರೆಗೆ ಎಣಿಕೆ ಮುಂದುವರಿಯುತ್ತದೆ. ಸರ್ಕಾರ ನಮ್ಮದೆ: RJD ವಿಶ್ವಾಸ

ಡಿಕೆ ಸಹೋದರರ ಪ್ರತಿಷ್ಠೆಯ ಕಣ ಎಂದೇ ಗುರುತಿಸಲಾದ ಆರ್‌ಆರ್‌ ನಗರದ ಸೋಲಿನ ಬಗ್ಗೆ ಸಂಸದ ಡಿ.ಕೆ.ಸುರೇಶ್ ಕೂಡ ಟ್ವೀಟ್ ಮಾಡಿ, ಮತದಾರರ ತೀರ್ಪಿಗೆ ನಾವೆಲ್ಲ ತಲೆಬಾಗಲೇಬೇಕಿದೆ ಎಂದಿದ್ದಾರೆ.

“ಮೊದಲಿಗೆ RR ನಗರ ಉಪಚುನಾವಣೆ ಸಂದರ್ಭದಲ್ಲಿ ನಮ್ಮ ಪಕ್ಷವನ್ನು ಪ್ರತ್ಯಕ್ಷ ಮತ್ತು ಪರೋಕ್ಷವಾಗಿ ಬೆಂಬಲಿಸಿದ ಪ್ರತಿಯೊಬ್ಬರಿಗೂ ಧನ್ಯವಾದಗಳು. ಮತದಾರರ ತೀರ್ಪಿಗೆ ನಾವೆಲ್ಲ ತಲೆಬಾಗಲೇಬೇಕಿದೆ. ಈ ಫಲಿತಾಂಶದಿಂದ ಯಾವ ಕಾರ್ಯಕರ್ತರೂ ಧೃತಿಗೆಡುವ ಅವಶ್ಯಕತೆಯಿಲ್ಲ. ಸೋಲು, ಗೆಲುವನ್ನು ಸಮಾನವಾಗಿ ಸ್ವೀಕರಿಸುವ ಮನೋಭಾವವನ್ನು ಬೆಳೆಸಿಕೊಳ್ಳೋಣ” ಎಂದಿದ್ದಾರೆ.

ರಾಜರಾಜೇಶ್ವರಿ ನಗರ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಕೂಡ ಜನರ ತೀರ್ಫಿಗೆ ತಲೆಬಾಗುತ್ತೇನೆ ಎಂದಿದ್ದಾರೆ. ಆರ್‌ಆರ್‌ ನಗರ ಜನತೆಗೆ  ಟ್ವಿಟರ್‌ನಲ್ಲಿ ಧನ್ಯವಾದ ತಿಳಿಸಿದ್ದಾರೆ.

ಉಪಚುನಾವಣೆ ಸೋಲನ್ನು ಕಾಂಗ್ರೆಸ್ ಪಕ್ಷ ಸ್ವಾಗತಿಸಿದೆ. ಆದರೆ ತಮ್ಮ ಆತ್ಮಾವಲೋಕನ ಮಾಡಿಕೊಳ್ಳುವುದು ಅನಿವಾರ್ಯ ಎಂಬುದನ್ನು ಒಪ್ಪಿಕೊಂಡಿದೆ. ಸೋಲಿನ ಬಗ್ಗೆ, ಪಕ್ಷ ಸಂಘಟನೆ ಮಾಡುವ ಬಗ್ಗೆ ಚರ್ಚಿಸುವುದಾಗಿ ಪಕ್ಷದ ಮುಖಂಡರು ತಿಳಿಸಿದ್ದಾರೆ.


ಇದನ್ನೂ ಓದಿ:ಬಿಹಾರ; ಎನ್‌ಡಿಎ ಗೆದ್ದರೂ, ನಿತೀಶ್ ಮುಖ್ಯಮಂತ್ರಿ ಪಟ್ಟ ಬಿಜೆಪಿ ಕೈಯಲ್ಲಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...