Homeಕರ್ನಾಟಕಉಪ ಚುನಾವಣೆ: ಇದು ಪ್ರಜಾಪ್ರಭುತ್ವದ ಸೋಲು - ಸಿದ್ದರಾಮಯ್ಯ

ಉಪ ಚುನಾವಣೆ: ಇದು ಪ್ರಜಾಪ್ರಭುತ್ವದ ಸೋಲು – ಸಿದ್ದರಾಮಯ್ಯ

ಅಕ್ರಮ ಗಳಿಕೆಯ ಹಣ ಮತ್ತು ಆಡಳಿತ ಯಂತ್ರದ ದುರುಪಯೋಗಕ್ಕೆ ಸಿಕ್ಕಿರುವ ಗೆಲುವು ಎನ್ನುವುದು ವಿಷಾದದ ಸಂಗತಿ.

- Advertisement -
- Advertisement -

ರಾಜ್ಯದಲ್ಲಿ ನಡೆದ ಶಿರಾ ಮತ್ತು ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ ಸೋಲು ಕಂಡಿದೆ. ಇದಕ್ಕೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಜನರ ತೀರ್ಪು ಒಪ್ಪಿಕೊಂಡಿದ್ದೇವೆ ಎಂದಿದ್ದಾರೆ.

ರಾಜರಾಜೇಶ್ವರಿ ನಗರದಲ್ಲಿ ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರಿದ್ದ ಮುನಿರತ್ನ ಅವರು ಭಾರಿ ಬಹುಮತದೊಂದಿಗೆ, ಕಾಂಗ್ರೆಸ್ ಅಭ್ಯರ್ಥಿ ಎಚ್.ಕುಸುಮಾ ವಿರುದ್ಧ ಗೆಲುವು ಸಾಧಿಸಿದ್ದಾರೆ. ಇತ್ತ ಶಿರಾ ವಿಧಾನಸಭಾ ಕ್ಷೇತ್ರದಲ್ಲೂ ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ.ಜಯಚಂದ್ರ ವಿರುದ್ಧ ಬಿಜೆಪಿ ಅಭ್ಯರ್ಥಿ ರಾಜೇಶ್‌ಗೌಡ ವಿಜಯ ಸಾಧಿಸಿದ್ದಾರೆ.

“ರಾಜರಾಜೇಶ್ವರಿ ನಗರ ಮತ್ತು ಶಿರಾ ಕ್ಷೇತ್ರದ ಸೋಲನ್ನು ನಾವು ವಿನೀತರಾಗಿ ಒಪ್ಪಿಕೊಂಡಿದ್ದೇವೆ. ಆದರೆ ಇದು ಪ್ರಜಾಪ್ರಭುತ್ವದ ಸೋಲು. ಅಕ್ರಮ ಗಳಿಕೆಯ ಹಣ ಮತ್ತು ಆಡಳಿತ ಯಂತ್ರದ ದುರುಪಯೋಗಕ್ಕೆ ಸಿಕ್ಕಿರುವ ಗೆಲುವು ಎನ್ನುವುದು ವಿಷಾದದ ಸಂಗತಿ” ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಅಧ್ಯಕ್ಷೀಯ ಚುನಾವಣೆಯಲ್ಲಿ ಸೋಲು: ಟ್ರಂಪ್‌ಗೆ ವಿಚ್ಛೇಧನ ನೀಡಲಿರುವ ಮೆಲೆನಿಯಾ?

ಸಾಮಾನ್ಯವಾಗಿ ಉಪಚುನಾವಣೆಗಳಲ್ಲಿ ಅಧಿಕಾರರೂಢ ಪಕ್ಷದ ಅಭ್ಯರ್ಥಿಗಳು ಗೆಲ್ಲುತ್ತಾರೆ. ಆಡಳಿತ ಪಕ್ಷದ ಶಾಸಕರಿದ್ದರೆ ತಮ್ಮ ಕ್ಷೇತ್ರಕ್ಕೆ ಅನುಕೂಲವಾಗುತ್ತದೆ ಎಂಬ ಅಭಿಪ್ರಾಯ ಜನರಲ್ಲಿರುತ್ತದೆ. ಇದೇ ಫಲಿತಾಂಶ ಸಾಮಾನ್ಯ ಚುನಾವಣೆಯಲ್ಲಿ ನಿರೀಕ್ಷಿಸಲಾಗದು ಎಂದು ಕಾಂಗ್ರೆಸ್ ಮುಂದಿನ ಚುನಾವಣೆಯಲ್ಲಿ ಗೆಲ್ಲುವ ಭರವಸೆಯನ್ನು ಸಿದ್ದರಾಮಯ್ಯ ವ್ಯಕ್ತಪಡಿಸಿದ್ದಾರೆ.

ಬಿಜೆಪಿ ಅಭ್ಯರ್ಥಿಗಳ ಗೆಲುವಿಗೆ ಜೆಡಿಎಸ್ ಕೂಟ ಕಾರಣ ಎಂದು ಆರೋಪಿಸಿರುವ ಸಿದ್ದರಾಮಯ್ಯ, “ಎರಡೂ ಕ್ಷೇತ್ರಗಳಲ್ಲಿ ಜೆಡಿಎಸ್ ಹೀನಾಯವಾಗಿ ಸೋತಿರುವುದರಿಂದ ಆ ಪಕ್ಷದ ಮತಗಳು ಬಿಜೆಪಿ ಬುಟ್ಟಿಗೆ ಬಿದ್ದು ಅವರ ಗೆಲುವಿಗೆ ನೆರವಾಯಿತು. ಮುಖ್ಯವಾಗಿ ಶಿರಾದಲ್ಲಿ ಜೆಡಿಎಸ್ ತನ್ನ ಮತಗಳನ್ನಾದರೂ ಉಳಿಸಿಕೊಂಡಿದ್ದರೆ ಖಂಡಿತ ಬಿಜೆಪಿ ಇಷ್ಟು ಸುಲಭದಲ್ಲಿ ಗೆಲ್ಲುತ್ತಿರಲಿಲ್ಲ” ಎಂದು ಆರೋಪಿಸಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌, “ಪಕ್ಷದ ಅಧ್ಯಕ್ಷನಾಗಿ ಈ ಸೋಲಿನ ಹೊಣೆ ನಾನು ಹೊರುತ್ತೇನೆಯೇ ಹೊರತು, ಬೇರೆಯವರ ಮೇಲೆ ಹಾಕುವುದಿಲ್ಲ ಎಂದಿದ್ದಾರೆ. ಉಪಚುನಾವಣೆಯಲ್ಲಿ ಮತದಾರ ಕೊಟ್ಟ ತೀರ್ಪನ್ನು ನಾವು ಗೌರವಯುತವಾಗಿ ಒಪ್ಪುತ್ತೇವೆ. ಪಕ್ಷದ ಮುಂದಿನ ದಿನಗಳಲ್ಲಿ ಪಕ್ಷ ಸಂಘಟಿಸಿ ಸರ್ಕಾರದ ವೈಫಲ್ಯದ ವಿರುದ್ಧ ಹೋರಾಟ ಮುಂದುವರಿಸುತ್ತೇವೆ” ಎಂದು ತಿಳಿಸಿದ್ದಾರೆ.

’ಶಿರಾದಲ್ಲಿ ನಮ್ಮ ಲೆಕ್ಕಾಚಾರ ತಪ್ಪಾಗಿದೆ. ಅಲ್ಲಿ ನಾವು ಗೆದ್ದೇ ಗೆಲ್ಲುತ್ತೇವೆ ಎಂದು ನಮ್ಮ ಪಕ್ಷದ ಎಲ್ಲ ಮುಖಂಡರು ನಿರೀಕ್ಷಿಸಿದ್ದೆವು. ಅಲ್ಲಿ ಬಿಜೆಪಿಗೆ ಹೊಸದಾಗಿ ಅಷ್ಟು ಮತ ಹೋಗಿರುವುದು ಅಚ್ಚರಿ ತಂದಿದೆ. ಮುಂದಿನ ದಿನಗಳಲ್ಲಿ ಜನರ ವಿಶ್ವಾಸ ಹೇಗೆ ಪಡೆಯುವುದು, ಕ್ಷೇತ್ರಕ್ಕಾಗಿ ಹೇಗೆ ದುಡಿಯಬೇಕು ಎಂಬುದನ್ನು ಚರ್ಚೆ ಮಾಡುತ್ತೇವೆ’ ಎಂದಿದ್ದಾರೆ.

ಇದನ್ನೂ ಓದಿ: ತಡರಾತ್ರಿಯವರೆಗೆ ಎಣಿಕೆ ಮುಂದುವರಿಯುತ್ತದೆ. ಸರ್ಕಾರ ನಮ್ಮದೆ: RJD ವಿಶ್ವಾಸ

ಡಿಕೆ ಸಹೋದರರ ಪ್ರತಿಷ್ಠೆಯ ಕಣ ಎಂದೇ ಗುರುತಿಸಲಾದ ಆರ್‌ಆರ್‌ ನಗರದ ಸೋಲಿನ ಬಗ್ಗೆ ಸಂಸದ ಡಿ.ಕೆ.ಸುರೇಶ್ ಕೂಡ ಟ್ವೀಟ್ ಮಾಡಿ, ಮತದಾರರ ತೀರ್ಪಿಗೆ ನಾವೆಲ್ಲ ತಲೆಬಾಗಲೇಬೇಕಿದೆ ಎಂದಿದ್ದಾರೆ.

“ಮೊದಲಿಗೆ RR ನಗರ ಉಪಚುನಾವಣೆ ಸಂದರ್ಭದಲ್ಲಿ ನಮ್ಮ ಪಕ್ಷವನ್ನು ಪ್ರತ್ಯಕ್ಷ ಮತ್ತು ಪರೋಕ್ಷವಾಗಿ ಬೆಂಬಲಿಸಿದ ಪ್ರತಿಯೊಬ್ಬರಿಗೂ ಧನ್ಯವಾದಗಳು. ಮತದಾರರ ತೀರ್ಪಿಗೆ ನಾವೆಲ್ಲ ತಲೆಬಾಗಲೇಬೇಕಿದೆ. ಈ ಫಲಿತಾಂಶದಿಂದ ಯಾವ ಕಾರ್ಯಕರ್ತರೂ ಧೃತಿಗೆಡುವ ಅವಶ್ಯಕತೆಯಿಲ್ಲ. ಸೋಲು, ಗೆಲುವನ್ನು ಸಮಾನವಾಗಿ ಸ್ವೀಕರಿಸುವ ಮನೋಭಾವವನ್ನು ಬೆಳೆಸಿಕೊಳ್ಳೋಣ” ಎಂದಿದ್ದಾರೆ.

ರಾಜರಾಜೇಶ್ವರಿ ನಗರ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಕೂಡ ಜನರ ತೀರ್ಫಿಗೆ ತಲೆಬಾಗುತ್ತೇನೆ ಎಂದಿದ್ದಾರೆ. ಆರ್‌ಆರ್‌ ನಗರ ಜನತೆಗೆ  ಟ್ವಿಟರ್‌ನಲ್ಲಿ ಧನ್ಯವಾದ ತಿಳಿಸಿದ್ದಾರೆ.

ಉಪಚುನಾವಣೆ ಸೋಲನ್ನು ಕಾಂಗ್ರೆಸ್ ಪಕ್ಷ ಸ್ವಾಗತಿಸಿದೆ. ಆದರೆ ತಮ್ಮ ಆತ್ಮಾವಲೋಕನ ಮಾಡಿಕೊಳ್ಳುವುದು ಅನಿವಾರ್ಯ ಎಂಬುದನ್ನು ಒಪ್ಪಿಕೊಂಡಿದೆ. ಸೋಲಿನ ಬಗ್ಗೆ, ಪಕ್ಷ ಸಂಘಟನೆ ಮಾಡುವ ಬಗ್ಗೆ ಚರ್ಚಿಸುವುದಾಗಿ ಪಕ್ಷದ ಮುಖಂಡರು ತಿಳಿಸಿದ್ದಾರೆ.


ಇದನ್ನೂ ಓದಿ:ಬಿಹಾರ; ಎನ್‌ಡಿಎ ಗೆದ್ದರೂ, ನಿತೀಶ್ ಮುಖ್ಯಮಂತ್ರಿ ಪಟ್ಟ ಬಿಜೆಪಿ ಕೈಯಲ್ಲಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...