Homeಕರ್ನಾಟಕಉಪ ಚುನಾವಣೆ: ಇದು ಪ್ರಜಾಪ್ರಭುತ್ವದ ಸೋಲು - ಸಿದ್ದರಾಮಯ್ಯ

ಉಪ ಚುನಾವಣೆ: ಇದು ಪ್ರಜಾಪ್ರಭುತ್ವದ ಸೋಲು – ಸಿದ್ದರಾಮಯ್ಯ

ಅಕ್ರಮ ಗಳಿಕೆಯ ಹಣ ಮತ್ತು ಆಡಳಿತ ಯಂತ್ರದ ದುರುಪಯೋಗಕ್ಕೆ ಸಿಕ್ಕಿರುವ ಗೆಲುವು ಎನ್ನುವುದು ವಿಷಾದದ ಸಂಗತಿ.

- Advertisement -
- Advertisement -

ರಾಜ್ಯದಲ್ಲಿ ನಡೆದ ಶಿರಾ ಮತ್ತು ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ ಸೋಲು ಕಂಡಿದೆ. ಇದಕ್ಕೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಜನರ ತೀರ್ಪು ಒಪ್ಪಿಕೊಂಡಿದ್ದೇವೆ ಎಂದಿದ್ದಾರೆ.

ರಾಜರಾಜೇಶ್ವರಿ ನಗರದಲ್ಲಿ ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರಿದ್ದ ಮುನಿರತ್ನ ಅವರು ಭಾರಿ ಬಹುಮತದೊಂದಿಗೆ, ಕಾಂಗ್ರೆಸ್ ಅಭ್ಯರ್ಥಿ ಎಚ್.ಕುಸುಮಾ ವಿರುದ್ಧ ಗೆಲುವು ಸಾಧಿಸಿದ್ದಾರೆ. ಇತ್ತ ಶಿರಾ ವಿಧಾನಸಭಾ ಕ್ಷೇತ್ರದಲ್ಲೂ ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ.ಜಯಚಂದ್ರ ವಿರುದ್ಧ ಬಿಜೆಪಿ ಅಭ್ಯರ್ಥಿ ರಾಜೇಶ್‌ಗೌಡ ವಿಜಯ ಸಾಧಿಸಿದ್ದಾರೆ.

“ರಾಜರಾಜೇಶ್ವರಿ ನಗರ ಮತ್ತು ಶಿರಾ ಕ್ಷೇತ್ರದ ಸೋಲನ್ನು ನಾವು ವಿನೀತರಾಗಿ ಒಪ್ಪಿಕೊಂಡಿದ್ದೇವೆ. ಆದರೆ ಇದು ಪ್ರಜಾಪ್ರಭುತ್ವದ ಸೋಲು. ಅಕ್ರಮ ಗಳಿಕೆಯ ಹಣ ಮತ್ತು ಆಡಳಿತ ಯಂತ್ರದ ದುರುಪಯೋಗಕ್ಕೆ ಸಿಕ್ಕಿರುವ ಗೆಲುವು ಎನ್ನುವುದು ವಿಷಾದದ ಸಂಗತಿ” ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಅಧ್ಯಕ್ಷೀಯ ಚುನಾವಣೆಯಲ್ಲಿ ಸೋಲು: ಟ್ರಂಪ್‌ಗೆ ವಿಚ್ಛೇಧನ ನೀಡಲಿರುವ ಮೆಲೆನಿಯಾ?

ಸಾಮಾನ್ಯವಾಗಿ ಉಪಚುನಾವಣೆಗಳಲ್ಲಿ ಅಧಿಕಾರರೂಢ ಪಕ್ಷದ ಅಭ್ಯರ್ಥಿಗಳು ಗೆಲ್ಲುತ್ತಾರೆ. ಆಡಳಿತ ಪಕ್ಷದ ಶಾಸಕರಿದ್ದರೆ ತಮ್ಮ ಕ್ಷೇತ್ರಕ್ಕೆ ಅನುಕೂಲವಾಗುತ್ತದೆ ಎಂಬ ಅಭಿಪ್ರಾಯ ಜನರಲ್ಲಿರುತ್ತದೆ. ಇದೇ ಫಲಿತಾಂಶ ಸಾಮಾನ್ಯ ಚುನಾವಣೆಯಲ್ಲಿ ನಿರೀಕ್ಷಿಸಲಾಗದು ಎಂದು ಕಾಂಗ್ರೆಸ್ ಮುಂದಿನ ಚುನಾವಣೆಯಲ್ಲಿ ಗೆಲ್ಲುವ ಭರವಸೆಯನ್ನು ಸಿದ್ದರಾಮಯ್ಯ ವ್ಯಕ್ತಪಡಿಸಿದ್ದಾರೆ.

ಬಿಜೆಪಿ ಅಭ್ಯರ್ಥಿಗಳ ಗೆಲುವಿಗೆ ಜೆಡಿಎಸ್ ಕೂಟ ಕಾರಣ ಎಂದು ಆರೋಪಿಸಿರುವ ಸಿದ್ದರಾಮಯ್ಯ, “ಎರಡೂ ಕ್ಷೇತ್ರಗಳಲ್ಲಿ ಜೆಡಿಎಸ್ ಹೀನಾಯವಾಗಿ ಸೋತಿರುವುದರಿಂದ ಆ ಪಕ್ಷದ ಮತಗಳು ಬಿಜೆಪಿ ಬುಟ್ಟಿಗೆ ಬಿದ್ದು ಅವರ ಗೆಲುವಿಗೆ ನೆರವಾಯಿತು. ಮುಖ್ಯವಾಗಿ ಶಿರಾದಲ್ಲಿ ಜೆಡಿಎಸ್ ತನ್ನ ಮತಗಳನ್ನಾದರೂ ಉಳಿಸಿಕೊಂಡಿದ್ದರೆ ಖಂಡಿತ ಬಿಜೆಪಿ ಇಷ್ಟು ಸುಲಭದಲ್ಲಿ ಗೆಲ್ಲುತ್ತಿರಲಿಲ್ಲ” ಎಂದು ಆರೋಪಿಸಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌, “ಪಕ್ಷದ ಅಧ್ಯಕ್ಷನಾಗಿ ಈ ಸೋಲಿನ ಹೊಣೆ ನಾನು ಹೊರುತ್ತೇನೆಯೇ ಹೊರತು, ಬೇರೆಯವರ ಮೇಲೆ ಹಾಕುವುದಿಲ್ಲ ಎಂದಿದ್ದಾರೆ. ಉಪಚುನಾವಣೆಯಲ್ಲಿ ಮತದಾರ ಕೊಟ್ಟ ತೀರ್ಪನ್ನು ನಾವು ಗೌರವಯುತವಾಗಿ ಒಪ್ಪುತ್ತೇವೆ. ಪಕ್ಷದ ಮುಂದಿನ ದಿನಗಳಲ್ಲಿ ಪಕ್ಷ ಸಂಘಟಿಸಿ ಸರ್ಕಾರದ ವೈಫಲ್ಯದ ವಿರುದ್ಧ ಹೋರಾಟ ಮುಂದುವರಿಸುತ್ತೇವೆ” ಎಂದು ತಿಳಿಸಿದ್ದಾರೆ.

’ಶಿರಾದಲ್ಲಿ ನಮ್ಮ ಲೆಕ್ಕಾಚಾರ ತಪ್ಪಾಗಿದೆ. ಅಲ್ಲಿ ನಾವು ಗೆದ್ದೇ ಗೆಲ್ಲುತ್ತೇವೆ ಎಂದು ನಮ್ಮ ಪಕ್ಷದ ಎಲ್ಲ ಮುಖಂಡರು ನಿರೀಕ್ಷಿಸಿದ್ದೆವು. ಅಲ್ಲಿ ಬಿಜೆಪಿಗೆ ಹೊಸದಾಗಿ ಅಷ್ಟು ಮತ ಹೋಗಿರುವುದು ಅಚ್ಚರಿ ತಂದಿದೆ. ಮುಂದಿನ ದಿನಗಳಲ್ಲಿ ಜನರ ವಿಶ್ವಾಸ ಹೇಗೆ ಪಡೆಯುವುದು, ಕ್ಷೇತ್ರಕ್ಕಾಗಿ ಹೇಗೆ ದುಡಿಯಬೇಕು ಎಂಬುದನ್ನು ಚರ್ಚೆ ಮಾಡುತ್ತೇವೆ’ ಎಂದಿದ್ದಾರೆ.

ಇದನ್ನೂ ಓದಿ: ತಡರಾತ್ರಿಯವರೆಗೆ ಎಣಿಕೆ ಮುಂದುವರಿಯುತ್ತದೆ. ಸರ್ಕಾರ ನಮ್ಮದೆ: RJD ವಿಶ್ವಾಸ

ಡಿಕೆ ಸಹೋದರರ ಪ್ರತಿಷ್ಠೆಯ ಕಣ ಎಂದೇ ಗುರುತಿಸಲಾದ ಆರ್‌ಆರ್‌ ನಗರದ ಸೋಲಿನ ಬಗ್ಗೆ ಸಂಸದ ಡಿ.ಕೆ.ಸುರೇಶ್ ಕೂಡ ಟ್ವೀಟ್ ಮಾಡಿ, ಮತದಾರರ ತೀರ್ಪಿಗೆ ನಾವೆಲ್ಲ ತಲೆಬಾಗಲೇಬೇಕಿದೆ ಎಂದಿದ್ದಾರೆ.

“ಮೊದಲಿಗೆ RR ನಗರ ಉಪಚುನಾವಣೆ ಸಂದರ್ಭದಲ್ಲಿ ನಮ್ಮ ಪಕ್ಷವನ್ನು ಪ್ರತ್ಯಕ್ಷ ಮತ್ತು ಪರೋಕ್ಷವಾಗಿ ಬೆಂಬಲಿಸಿದ ಪ್ರತಿಯೊಬ್ಬರಿಗೂ ಧನ್ಯವಾದಗಳು. ಮತದಾರರ ತೀರ್ಪಿಗೆ ನಾವೆಲ್ಲ ತಲೆಬಾಗಲೇಬೇಕಿದೆ. ಈ ಫಲಿತಾಂಶದಿಂದ ಯಾವ ಕಾರ್ಯಕರ್ತರೂ ಧೃತಿಗೆಡುವ ಅವಶ್ಯಕತೆಯಿಲ್ಲ. ಸೋಲು, ಗೆಲುವನ್ನು ಸಮಾನವಾಗಿ ಸ್ವೀಕರಿಸುವ ಮನೋಭಾವವನ್ನು ಬೆಳೆಸಿಕೊಳ್ಳೋಣ” ಎಂದಿದ್ದಾರೆ.

ರಾಜರಾಜೇಶ್ವರಿ ನಗರ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಕೂಡ ಜನರ ತೀರ್ಫಿಗೆ ತಲೆಬಾಗುತ್ತೇನೆ ಎಂದಿದ್ದಾರೆ. ಆರ್‌ಆರ್‌ ನಗರ ಜನತೆಗೆ  ಟ್ವಿಟರ್‌ನಲ್ಲಿ ಧನ್ಯವಾದ ತಿಳಿಸಿದ್ದಾರೆ.

ಉಪಚುನಾವಣೆ ಸೋಲನ್ನು ಕಾಂಗ್ರೆಸ್ ಪಕ್ಷ ಸ್ವಾಗತಿಸಿದೆ. ಆದರೆ ತಮ್ಮ ಆತ್ಮಾವಲೋಕನ ಮಾಡಿಕೊಳ್ಳುವುದು ಅನಿವಾರ್ಯ ಎಂಬುದನ್ನು ಒಪ್ಪಿಕೊಂಡಿದೆ. ಸೋಲಿನ ಬಗ್ಗೆ, ಪಕ್ಷ ಸಂಘಟನೆ ಮಾಡುವ ಬಗ್ಗೆ ಚರ್ಚಿಸುವುದಾಗಿ ಪಕ್ಷದ ಮುಖಂಡರು ತಿಳಿಸಿದ್ದಾರೆ.


ಇದನ್ನೂ ಓದಿ:ಬಿಹಾರ; ಎನ್‌ಡಿಎ ಗೆದ್ದರೂ, ನಿತೀಶ್ ಮುಖ್ಯಮಂತ್ರಿ ಪಟ್ಟ ಬಿಜೆಪಿ ಕೈಯಲ್ಲಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...