Homeಮುಖಪುಟಜೈಪುರ್ ಪಿಂಕ್ ಪ್ಯಾಂಥರ್ಸ್‌ಗೆ ಸೋಲು: ಪ್ಲೇಆಫ್ ಹಂತ ತಲುಪಿದ ಬೆಂಗಳೂರು ಬುಲ್ಸ್

ಜೈಪುರ್ ಪಿಂಕ್ ಪ್ಯಾಂಥರ್ಸ್‌ಗೆ ಸೋಲು: ಪ್ಲೇಆಫ್ ಹಂತ ತಲುಪಿದ ಬೆಂಗಳೂರು ಬುಲ್ಸ್

- Advertisement -
- Advertisement -

ಪ್ರೊ ಕಬಡ್ಡಿ ಲೀಗ್‌ ಹಂತದ ಪಂದ್ಯದಲ್ಲಿ ಜೈಪುರ್ ಪಿಂಕ್ ಪ್ಯಾಂಥರ್ಸ್ ತಂಡವು ಪುಣೇರಿ ಪಲ್ಟನ್ ವಿರುದ್ಧ 7 ಅಂಕಗಳ ಅಂತರದಿಂದ ಸೋಲುವುದರೊಂದಿಗೆ ಬೆಂಗಳೂರು ಬುಲ್ಸ್ ತಂಡಕ್ಕೆ ಪ್ಲೇಆಫ್ ಸ್ಥಾನ ಖಚಿತವಾಗಿದೆ. ಈಗಾಗಲೇ ಬೆಂಗಳೂರು ಜೊತೆಗೆ ಪಟ್ನಾ ಪೈರೇಟ್ಸ್, ದಬಾಂಗ್ ಡೆಲ್ಲಿ ಮತ್ತು ಯು.ಪಿ ಯೋಧ ತಂಡಗಳು ಪ್ಲೇ-ಆಫ್‌ ಪ್ರವೇಶಿಸಿವೆ. ತೆಲುಗು ಟೈಟನ್ಸ್, ಬೆಂಗಾಲ್ ವಾರಿಯರ್ಸ್, ಯು ಮುಂಬಾ ಮತ್ತು ತಮಿಳು ತಲೈವಾಸ್ ತಂಡಗಳು ಪ್ಲೇ-ಆಫ್‌ ರೇಸ್‌ನಿಂದ ಹೊರಬಿದ್ದಿವೆ.

ಪ್ಲೇ-ಆಫ್‌ ನ ಉಳಿದ ಎರಡು ಸ್ಥಾನಕ್ಕಾಗಿ ಪುಣೇರಿ ಪಲ್ಟನ್ (66 ಅಂಕ), ಜೈಪುರ್ ಪಿಂಕ್ ಪ್ಯಾಂಥರ್ಸ್(63 ಅಂಕ), ಹರಿಯಾಣ ಸ್ಟೀಲರ್ಸ್(63 ಅಂಕ), ಗುಜರಾತ್ ಜೈಂಟ್ಸ್ (62 ಅಂಕ) ಸೇರಿ ನಾಲ್ಕು ತಂಡಗಳು ಪೈಪೋಟಿ ನಡೆಸುತ್ತಿವೆ.

ಅಂಕಪಟ್ಟಿ ಲೆಕ್ಕಾಚಾರ

ಕಬಡ್ಡಿ ಅಂಕಪಟ್ಟಿಯ ಮೊದಲ ನಾಲ್ಕು ಸ್ಥಾನದಲ್ಲಿರುವ ಪಾಟ್ನಾ ಪೈರೇಟ್ಸ್ (81 ಅಂಕ) ದಬಾಂಗ್ ಡೆಲ್ಲಿ(75 ಅಂಕ) ಮತ್ತು ಯುಪಿ ಯೋಧ (68 ಅಂಕ), ಬೆಂಗಳೂರು ಬುಲ್ಸ್ (66 ಅಂಕ) ಗಳೊಂದಿಗೆ ಈಗಾಗಲೇ ಪ್ಲೇ-ಆಫ್ ತಲುಪಿವೆ.

ಎರಡನೇ ಪಂದ್ಯ: ಗುಜರಾತ್ ಜೈಂಟ್ಸ್ v/s ಯು ಮುಂಬಾ 

ಗುಜರಾತ್ ಜೈಂಟ್ಸ್ 62 ಅಂಕ ಗಳಿಸಿದೆ. ಆದರೆ ಯು ಮುಂಬಾ ರೇಸ್‌ನಿಂದ ಹೊರಹೋಗಿದ್ದು ಕೊನೆಯ ಔಪಚಾರಿಕ ಲೀಗ್ ಪಂದ್ಯ ಆಡುತ್ತಿದೆ. ಇಲ್ಲಿ ಗುಜರಾತ್ ಅನ್ನು ಯು ಮುಂಬಾ ಮಣಿಸಿದರೆ ಗುಜರಾತ್ ಸಹ ಸ್ಪರ್ಧೆಯಿಂದ ಹೊರಗುಳಿಯುತ್ತದೆ.

ಮೂರನೇ ಪಂದ್ಯ: ಪಟ್ನಾ ಪೈರೇಟ್ಸ್ v/s ಹರ್ಯಾಣ ಸ್ಟೀಲರ್ಸ್

ಪಟ್ನಾ ಪೈರೇಟ್ಸ್ ಈಗಾಗಲೇ ಪ್ಲೆ ಆಫ್ ಪ್ರವೇಶಿಸಿ ಅಗ್ರಸ್ಥಾನದಲ್ಲಿಗೆ. ಮೊದಲ ಸ್ಥಾನದಲ್ಲಿರುವ ಕಾರಣ ನೇರವಾಗಿ ಸೆಮಿಫೈನಲ್ ತಲುಪಿದೆ. ಅದು ತನ್ನ ಕೊನೆಯ ಪಂದ್ಯವನ್ನು 63 ಅಂಕಗಳನ್ನು ಗಳಿಸಿರುವ  ಹರ್ಯಾಣ ಸ್ಟೀಲರ್ಸ್ ಎದರು ಆಡಲಿದೆ. ಇಲ್ಲಿ ಪಟ್ನಾ ಗೆದ್ದರೆ ಹರಿಯಾಣ ಹೊರಬೀಳುವ ಆತಂಕದಲ್ಲಿರುತ್ತದೆ.

ಪ್ಲೇಆಫ್ ಪಂದ್ಯಾವಳಿ

ಪ್ಲೇಆಫ್‌ನ ಮೊದಲೆರಡು ಸ್ಥಾನದಲ್ಲಿರುವ ಪಟ್ನಾ ಮತ್ತು ಡೆಲ್ಲಿ ನೇರವಾಗಿ ಸೆಮಿಫೈನಲ್ ತಲುಪಲಿವೆ. ಫೆಬ್ರವರಿ 21 ರಂದು 3 v/s 6 ನೇ ಸ್ಥಾನದ ತಂಡಗಳು ಮತ್ತು 4 v/s5 ನೇ ಸ್ಥಾನದ ತಂಡಗಳು ಎಲಿಮಿನೇಟರ್ ಪಂದ್ಯಗಳನ್ನು ಆಡಲಿವೆ. ಅಲ್ಲಿ ಗೆದ್ದವರು ಫೆಬ್ರವರಿ 23 ರಂದು ಸೆಮಿಫೈನಲ್‌ನಲ್ಲಿ ಸೆಣಸಲಿವೆ. ಫೆಬ್ರವರಿ 25 ರಂದು ಫೈನಲ್ ಪಂದ್ಯ ನಡೆಯಲಿದೆ.


ಇದನ್ನೂ ಓದಿ: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರ 2023: ಎಚ್.ಡಿ ಕುಮಾರಸ್ವಾಮಿ V/S ಯೋಗೇಶ್ವರ್ ನಡುವೆ ಗೆಲುವು ಯಾರಿಗೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...