Homeಮುಖಪುಟಪಕ್ಷಾಂತರದ ‘ಮಹಿಮೆ’: ಬಂಗಾಳದ ಬಿಜೆಪಿ ಕಚೇರಿಗಳಲ್ಲಿ ಹೊಡೆದಾಟ, ಬೀದಿ ರಂಪಾಟ, ವಾಹನಗಳಿಗೆ ಬೆಂಕಿ!

ಪಕ್ಷಾಂತರದ ‘ಮಹಿಮೆ’: ಬಂಗಾಳದ ಬಿಜೆಪಿ ಕಚೇರಿಗಳಲ್ಲಿ ಹೊಡೆದಾಟ, ಬೀದಿ ರಂಪಾಟ, ವಾಹನಗಳಿಗೆ ಬೆಂಕಿ!

ಟಿಎಂಸಿಯಿಂದ ಬಿಜೆಪಿಗೆ ಸೇರ್ಪಡೆಗೊಂಡವರು ಮತ್ತು ಅಲ್ಲಿನ ಮೂಲ ಬಿಜೆಪಿಗರ ನಡುವೆ ಕಿತ್ತಾಟ ನಡೆಯುತ್ತಿದ್ದು, ಸದ್ಯ ಎರಡು ಬಿಜೆಪಿ ಕಚೇರಿಗಳಲ್ಲಿ ಇದು ತಾರಕಕ್ಕೆ ಮುಟ್ಟಿದ ಘಟನೆ ಗುರುವಾರ ನಡೆದಿದೆ.

- Advertisement -
- Advertisement -

ಪಶ್ಚಿಮ ಬಂಗಾಳದ ಅಸಾನ್‌ಸೋಲ್‌ನಲ್ಲಿ ಬಿಜೆಪಿ ಪಕ್ಷದ ಕಚೇರಿಯಲ್ಲಿ ಬಾಗಿಲು ಮುಚ್ಚಿ ನಡೆಸಿದ ವಿಶೇಷ ಸಭೆಯಲ್ಲಿ ಟಿಎಂಸಿಯಿಂದ ಬಂದವರು ಮತ್ತು ಮೂಲ ಬಿಜೆಪಿಗರ ನಡುವೆ ಹೊಡೆದಾಟ ಸಂಭವಿಸಿದೆ. ಕೇಂದ್ರ ಸಚಿವ ಬಾಬುಲ್ ಸುಪ್ರಿಯೋ ಮತ್ತು ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಅತುಲ್ ಮೆನನ್ ಸಮ್ಮುಖದಲ್ಲೇ ಈ ಬಡಿದಾಟ ನಡೆದಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಬುರ್ದ್ವಾನ್ ಪಟ್ಟಣದಲ್ಲಿ ಬಿಜೆಪಿ ಕಚೇರಿ ಹೊರಗೆ ಬೀದಿಯಲ್ಲಿಯೇ ಕಾರ್ಯಕರ್ತರ ನಡುವೆ ಬಡಿದಾಟ ನಡೆದಿದ್ದು, ಪಾರ್ಟಿ ಕಚೇರಿಯ ಮೇಲೆ ಕಲ್ಲು ತೂರಲಾಗಿದೆ ಮತ್ತು ಕಚೇರಿ ಹೊರಗೆ ನಿಲ್ಲಿಸಿದ್ದ ಬೈಕ್ ಮತ್ತು ಇತರ ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ. ಮಧ್ಯಪ್ರವೇಶಿಸಿದ ಪೊಲೀಸರ ಜೊತೆಯೂ ಘರ್ಷಣೆ ನಡೆದಿದೆ.

ಮೂರು ತಿಂಗಳಲ್ಲಿ ರಾಜ್ಯದಲ್ಲಿ ವಿಧಾನಸಭಾ ಚುನಾವಣೆಗಳು ಇರುವ ಕಾರಣ, ಆಂತರಿಕ ದ್ವೇಷವು ಪಕ್ಷದ ಉನ್ನತ ನಾಯಕರಿಗೆ ಕಳವಳ ಮೂಡಿಸಿದೆ. ಇದು ಪಕ್ಷದ ಶಿಸ್ತನ್ನು ಹಾಳು ಮಾಡುವುದಷ್ಟೇ ಅಲ್ಲ, “ಬಿಜೆಪಿಯ ಟಿಎಂಸಿಕರಣ”ದ ಪ್ರಕ್ರಿಯೆಯಿಂದ ನಷ್ಟವೂ ಸಂಭವಿಸಬಹುದು ಎಂದು ಬಿಜೆಪಿ ನಾಯಕರು ಆತಂಕಕ್ಕೆ ಒಳಗಾಗಿದ್ದಾರೆ ಎನ್ನಲಾಗಿದೆ.

“ಬಿಜೆಪಿ ಟಿಎಂಸಿ ಜನರಿಂದ ತುಂಬಿ ಹೋದರೆ, ನಮ್ಮ ಬಿಜೆಪಿ ಟಿಎಂಸಿ ‘ಟೀಮ್ ಬಿ’ಯಂತೆ ಕಾಣಲು ಪ್ರಾರಂಭಿಸಿದರೆ, ಟಿಎಂಸಿಯನ್ನು ತಿರಸ್ಕರಿಸಲು ಮತ್ತು ಬಿಜೆಪಿಗೆ ಮತ ಚಲಾಯಿಸಲು ಬಯಸುವ ಮತದಾರರು ಎರಡು ಬಾರಿ ಯೋಚಿಸಬಹುದು” ಎಂದು ಹಿರಿಯ ಬಿಜೆಪಿ ನಾಯಕರೊಬ್ಬರು ಹೇಳಿದ್ದಾರೆ. ಮುಂಬರುವ ಚುನಾವಣೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು 200 ಸ್ಥಾನಗಳ ಗುರಿಯನ್ನು ರಾಜ್ಯ ಬಿಜೆಪಿಗೆ ನಿಗದಿಪಡಿಸಿದ್ದನ್ನು ಇಲ್ಲಿ ಗಮನಿಸಬೇಕು.

ದೆಹಲಿಯಲ್ಲಿ ಇತ್ತೀಚೆಗೆ ನಡೆದ ಪಕ್ಷದ ಸಭೆಗಳಲ್ಲಿ, ಬಿಜೆಪಿಗೆ ಯಾರು ಸೇರಬಹುದು ಎಂಬ ಬಗ್ಗೆ ಸಾಕಷ್ಟು ಚರ್ಚೆ ನಡೆದಿದೆ. ಗುರುವಾರ ಪೂರ್ವ ಬುರ್ದ್ವಾನ್‌ನ ಕಾಂಕ್ಸಾ, ಆಸ್ಗ್ರಾಮ್, ಮಂಗಲ್‌ಕೋಟ್, ಕಟ್ವಾ ಮತ್ತು ಇತರ ಸ್ಥಳಗಳಿಂದ ಹಲವಾರು ಬಿಜೆಪಿ ಕಾರ್ಯಕರ್ತರು ಪಕ್ಷದ ಬುರ್ದ್ವಾನ್ ಪಟ್ಟಣ ಕಚೇರಿಯ ಮುಂದೆ ಜಮಾಯಿಸಿ ಜಿಲ್ಲಾ ಮುಖ್ಯಸ್ಥ ಸಂದೀಪ್ ನಂದಿ ವಿರುದ್ಧ ಘೋಷಣೆಗಳನ್ನು ಕೂಗಲು ಪ್ರಾರಂಭಿಸಿದರು ಮತ್ತು ಸಂದೀಪ್ ನಂದಿಯವರನ್ನು ತಕ್ಷಣ ತೆಗೆದುಹಾಕುವಂತೆ ಒತ್ತಾಯಿಸಿದರು. ಆಗ ಬುರ್ದ್ವಾನ್‌ನಲ್ಲಿ ಗೊಂದಲ ಉಂಟಾಯಿತು.

ಮೂಲಗಳ ಪ್ರಕಾರ, ಕಚೇರಿಯೊಳಗಿದ್ದ ನಂದಿಗೆ ನಿಷ್ಠರಾಗಿರುವ ಬಣವು ಕಚೇರಿಯ ಮಾಳಿಗೆ ಹತ್ತಿ ಪ್ರತಿಭಟಿಸುತ್ತಿದ್ದ ಭಿನ್ನಮತೀಯರ ಮೇಲೆ ಕಲ್ಲುಗಳನ್ನು ಎಸೆದರು. ಭಿನ್ನಮತೀಯ ಗುಂಪು ಕೂಡ ಕಚೇರಿಯ ಮೇಲೆ ಕಲ್ಲು ತೂರಾಟ ನಡೆಸಿ, ಕಚೇರಿಯ ಕಿಟಕಿಗಳನ್ನು ಒಡೆದಿದೆ. ಕೆಲವು ಬಿಜೆಪಿ ಕಾರ್ಯಕರ್ತರು ವಾಹನಗಳಿಗೆ ಬೆಂಕಿ ಹಚ್ಚಿದರು.

ಪಕ್ಷವನ್ನು ಕಟ್ಟಲು ತಾವು ರಕ್ತ ಮತ್ತು ಬೆವರು ನೀಡಿದ್ದೇವೆ ಎಂದು ಭಿನ್ನಮತೀಯರ ಗುಂಪು ಹೇಳಿಕೊಂಡಿದೆ. ಆದರೆ ತೃಣಮೂಲದಿಂದ ಬಂದ ಪಕ್ಷಾಂತರಿಗಳನ್ನು ಪ್ರೋತ್ಸಾಹಿಸುತ್ತಿರುವ ಜಿಲ್ಲಾಧ್ಯಕ್ಷ ನಂದಿ ತಮ್ಮನ್ನು ಬದಿಗೊತ್ತಿದ್ದಾರೆ ಎಂದು ಭಿನ್ನಮತೀಯರ ಗುಂಪು (ಮೂಲ ಬಿಜೆಪಿಗರ ಗುಂಪು) ಆರೋಪಿಸಿದೆ.

ಎರಡು ವಾರಗಳ ಹಿಂದೆ ಬಿಜೆಪಿ ಮುಖ್ಯಸ್ಥ ಜೆ.ಪಿ.ನಡ್ಡಾ ಬುರ್ದ್ವಾನ್‌ಗೆ ಭೇಟಿ ನೀಡಿ ಬೃಹತ್ ರೋಡ್ ಶೋ ನಡೆಸಿದ್ದರು. ಅವರು ಕಳೆದ ತಿಂಗಳು ಬುರ್ದ್ವಾನ್ ಕಚೇರಿಯನ್ನು ಉದ್ಘಾಟಿಸಿದ್ದರು. ಇದು ಬಣಗಳ ಘರ್ಷಣೆ ಎಂಬುದನ್ನು ಬಿಜೆಪಿ ನಿರಾಕರಿಸಿದೆ.

“ಜೆ.ಪಿ.ನಡ್ಡಾ ಅವರ ಬೃಹತ್ ರ‍್ಯಾಲಿಯನ್ನು ನೀವು ನೋಡಿದ್ದೀರಿ. ತೃಣಮೂಲವು ಈಗ ಭಯಭೀತವಾಗಿದೆ, ಆದ್ದರಿಂದ ಅವರು ಈ ತೊಂದರೆಯನ್ನು ಸೃಷ್ಟಿಸಲು ಸಂಚು ಮಾಡಿದ್ದಾರೆ. ಸ್ಥಳೀಯ ಮುಖಂಡರು ಇದನ್ನು ಯೋಜಿಸಿದ್ದಾರೆ, ಈ ಕಾರ್ಯಾಚರಣೆಯನ್ನು ನಡೆಸಲು ಜನರನ್ನು ನೇಮಿಸಿಕೊಂಡಿದ್ದಾರೆ. ಮಮತಾ ಬ್ಯಾನರ್ಜಿ ಮತ್ತು ‘ಪಿಕೆ’ ತಂಡ ಇದನ್ನು ಮಾಡಿದ್ದಾರೆ. ಆಡಳಿತವು ತನಿಖೆ ನಡೆಸಿ ತಪ್ಪಿಸ್ಥರನ್ನು ಬಂಧಿಸಬೇಕೆಂದು ನಾವು ಬಯಸುತ್ತೇವೆ”ಎಂದು ಬಿಜೆಪಿ ಮುಖಂಡ ರಾಜು ಬ್ಯಾನರ್ಜಿ ಹೇಳಿದ್ದಾರೆ. ತೃಣಮೂಲ ಸಚಿವ ಮತ್ತು ಬುರ್ದ್ವಾನ್ ಜಿಲ್ಲಾ ನಾಯಕ ಸ್ವಪನ್ ದೇಬ್ನಾಥ್ ಇದನ್ನು ನಿರಾಕರಿಸಿದ್ದಾರೆ.

ಇದನ್ನೂ ಓದಿ: ಪ.ಬಂಗಾಳದಲ್ಲಿ ಬಿಜೆಪಿ ಕಾರ್ಯಕರ್ತರು ಪೊಲೀಸರ ನಡುವೆ ಘರ್ಷಣೆ: ಒಬ್ಬ ಕಾರ್ಯಕರ್ತನ ಸಾವು – ಬಿಜೆಪಿ ಆರೋಪ

ಅಸಾನ್‌ಸೋಲ್‌ನಲ್ಲಿ ಬಿಜೆಪಿ ಪಕ್ಷದ ಕಾರ್ಯಕರ್ತರ ನಡುವೆ ಜಟಾಪಟಿ ನಡೆದಿತ್ತು ಎಂದು ಬಾಬುಲ್ ಸುಪ್ರಿಯೋ ಒಪ್ಪಿಕೊಂಡಿದ್ದಾರೆ. “ಯಾವುದೇ ಕುಟುಂಬದಲ್ಲಿ, ಸಮಸ್ಯೆಗಳಿರುತ್ತವೆ, ಕೋಪವಿರುತ್ತದೆ, ಭಿನ್ನಾಭಿಪ್ರಾವಿದ್ದೇ ಇರುತ್ತದೆ. ನಮ್ಮ ಕಾರ್ಯಕರ್ತರು ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಅರವಿಂದ್ ಮೆನನ್ ಮತ್ತು ನನ್ನನ್ನು ಒಟ್ಟಿಗೆ ಭೇಟಿಯಾದರು. ಇಂತಹ ಸಭೆ ಆಗಾಗ್ಗೆ ಆಗುವುದಿಲ್ಲ. ಆದ್ದರಿಂದ 10 ರಿಂದ 30 ಜನರು ಒಂದೇ ಸಮಯದಲ್ಲಿ ಮಾತನಾಡಲು ಪ್ರಾರಂಭಿಸಿದಾಗ, ಸ್ವಾಭಾವಿಕವಾಗಿ ಗೊಂದಲ ಏರ್ಪಡುತ್ತದೆ’ ಎಂದ ಕೇಂದ್ರ ಸಚಿವ ಬಾಬುಲ್ ಹೇಳಿದ್ದಾರೆ.

ಆದರೆ ಮೂಲಗಳು ಹೇಳುವಂತೆ, ಇಲ್ಲಿಯೂ ತೃಣಮೂಲದಿಂದ ಬಂದವರೊಂದಿಗೆ ಸಂಘರ್ಷದಲ್ಲಿದ್ದ ಹಳೆಯ ಬಿಜೆಪಿ ಕಾರ್ಯಕರ್ತರು ಮತದಾನ ತಂತ್ರ ಮಾತುಕತೆಗಾಗಿ ಕಚೇರಿಗೆ ಬಂದಿದ್ದರು. ಆದರೆ ಹೊಸದಾಗಿ ನೇಮಕಗೊಂಡ ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಅರಿಜಿತ್ ರಾಯ್ ಅವರ ಬಗ್ಗೆ ವಿವಾದ ಭುಗಿಲೆದ್ದಿತು. ಅವರು ಭಾರತೀಯ ಜನತಾ ಯುವ ಮೋರ್ಚಾ ಜಿಲ್ಲಾ ಸಮಿತಿಯಿಂದ ಹಳೆಯ ಬಿಜೆಪಿ ಕಾರ್ಯಕರ್ತರನ್ನು ಹೊರಹಾಕಿದ್ದರು ಎಂದು ಆರೋಪಿಸಲಾಗಿದೆ.

ಬಿಜೆಪಿಯಲ್ಲಿ ಬಣಗಳ ಕಾದಾಟದ ಮೊದಲ ಘಟನೆಗಳೇನೂ ಇವಲ್ಲ. ಜನವರಿ 8 ರಂದು ನಂದಿಗ್ರಾಮದಲ್ಲಿ ಕೂಡ ಇಂಥದ್ದು ನಡೆದಿತ್ತು. ಟಿಎಂಸಿಯಿಂದ ಬಿಜೆಪಿಗೆ ಪಕ್ಷಾಂತರಗೊಂಡ ಸುವೆಂಡು ಅಧಿಕಾರಿ ಮತ್ತು ಬಿಜೆಪಿ ಉನ್ನತ ನಾಯಕರಾದ ದಿಲೀಪ್ ಘೋಷ್, ಕೈಲಾಶ್ ವಿಜಯವರ್ಗಿಯಾ ಅವರು ಭಾಗವಹಿಸಿದ ರ‍್ಯಾಲಿಯಲ್ಲಿ, ಮೂಲ ಬಿಜೆಪಿ ಕಾರ್ಯಕರ್ತರಲ್ಲಿ ಒಂದು ಭಾಗವು ಕಲ್ಲು ತೂರಾಟ ನಡೆಸಿತ್ತು. ಅಲ್ಲಿ ತೃಣಮೂಲ ಕಾರ್ಯಕರ್ತರು ವಿದ್ಯುಕ್ತವಾಗಿ ಬಿಜೆಪಿಗೆ ಸೇರಲು ಕಾಯುತ್ತಿದ್ದರು. “ನಮ್ಮನ್ನು (ಬಿಜೆಪಿ ಕಾರ್ಯಕರ್ತರನ್ನು) ಹಿಂಸಿಸಿದ ತೃಣಮೂಲದ ಜನರು ಈಗ ನಮ್ಮ ಪಕ್ಷಕ್ಕೆ ಸೇರಲು ಹೊರಟಿದ್ದಾರೆ. ಅದನ್ನು ಸಹಿಸಲು ನಾವು ಸಿದ್ಧರಿಲ್ಲ” ಎಂದು ಹಳೆಯ ಬಿಜೆಪಿ ಕಾರ್ಯಕರ್ತರೊಬ್ಬರು ಹೇಳಿದ್ದರು.


ಇದನ್ನೂ ಓದಿ: ಗೋಲಿ ಮಾರೋ ಸಾಲೋಂಕೋ’ ಘೋಷಣೆ – ಬಿಜೆಪಿ ಮುಖಂಡ ಸೇರಿ 3 ಕಾರ್ಯಕರ್ತರ ಬಂಧನಪ.ಬಂಗಾಳ: 'ಗೋಲಿ ಮಾರೋ ಸಾ***ಕೋ' ಘೋಷಣೆ ಕೂಗಿದ 3 ಬಿಜೆಪಿ ಕಾರ್ಯಕರ್ತರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...