Homeಮುಖಪುಟಪಕ್ಷಾಂತರದ ‘ಮಹಿಮೆ’: ಬಂಗಾಳದ ಬಿಜೆಪಿ ಕಚೇರಿಗಳಲ್ಲಿ ಹೊಡೆದಾಟ, ಬೀದಿ ರಂಪಾಟ, ವಾಹನಗಳಿಗೆ ಬೆಂಕಿ!

ಪಕ್ಷಾಂತರದ ‘ಮಹಿಮೆ’: ಬಂಗಾಳದ ಬಿಜೆಪಿ ಕಚೇರಿಗಳಲ್ಲಿ ಹೊಡೆದಾಟ, ಬೀದಿ ರಂಪಾಟ, ವಾಹನಗಳಿಗೆ ಬೆಂಕಿ!

ಟಿಎಂಸಿಯಿಂದ ಬಿಜೆಪಿಗೆ ಸೇರ್ಪಡೆಗೊಂಡವರು ಮತ್ತು ಅಲ್ಲಿನ ಮೂಲ ಬಿಜೆಪಿಗರ ನಡುವೆ ಕಿತ್ತಾಟ ನಡೆಯುತ್ತಿದ್ದು, ಸದ್ಯ ಎರಡು ಬಿಜೆಪಿ ಕಚೇರಿಗಳಲ್ಲಿ ಇದು ತಾರಕಕ್ಕೆ ಮುಟ್ಟಿದ ಘಟನೆ ಗುರುವಾರ ನಡೆದಿದೆ.

- Advertisement -
- Advertisement -

ಪಶ್ಚಿಮ ಬಂಗಾಳದ ಅಸಾನ್‌ಸೋಲ್‌ನಲ್ಲಿ ಬಿಜೆಪಿ ಪಕ್ಷದ ಕಚೇರಿಯಲ್ಲಿ ಬಾಗಿಲು ಮುಚ್ಚಿ ನಡೆಸಿದ ವಿಶೇಷ ಸಭೆಯಲ್ಲಿ ಟಿಎಂಸಿಯಿಂದ ಬಂದವರು ಮತ್ತು ಮೂಲ ಬಿಜೆಪಿಗರ ನಡುವೆ ಹೊಡೆದಾಟ ಸಂಭವಿಸಿದೆ. ಕೇಂದ್ರ ಸಚಿವ ಬಾಬುಲ್ ಸುಪ್ರಿಯೋ ಮತ್ತು ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಅತುಲ್ ಮೆನನ್ ಸಮ್ಮುಖದಲ್ಲೇ ಈ ಬಡಿದಾಟ ನಡೆದಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಬುರ್ದ್ವಾನ್ ಪಟ್ಟಣದಲ್ಲಿ ಬಿಜೆಪಿ ಕಚೇರಿ ಹೊರಗೆ ಬೀದಿಯಲ್ಲಿಯೇ ಕಾರ್ಯಕರ್ತರ ನಡುವೆ ಬಡಿದಾಟ ನಡೆದಿದ್ದು, ಪಾರ್ಟಿ ಕಚೇರಿಯ ಮೇಲೆ ಕಲ್ಲು ತೂರಲಾಗಿದೆ ಮತ್ತು ಕಚೇರಿ ಹೊರಗೆ ನಿಲ್ಲಿಸಿದ್ದ ಬೈಕ್ ಮತ್ತು ಇತರ ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ. ಮಧ್ಯಪ್ರವೇಶಿಸಿದ ಪೊಲೀಸರ ಜೊತೆಯೂ ಘರ್ಷಣೆ ನಡೆದಿದೆ.

ಮೂರು ತಿಂಗಳಲ್ಲಿ ರಾಜ್ಯದಲ್ಲಿ ವಿಧಾನಸಭಾ ಚುನಾವಣೆಗಳು ಇರುವ ಕಾರಣ, ಆಂತರಿಕ ದ್ವೇಷವು ಪಕ್ಷದ ಉನ್ನತ ನಾಯಕರಿಗೆ ಕಳವಳ ಮೂಡಿಸಿದೆ. ಇದು ಪಕ್ಷದ ಶಿಸ್ತನ್ನು ಹಾಳು ಮಾಡುವುದಷ್ಟೇ ಅಲ್ಲ, “ಬಿಜೆಪಿಯ ಟಿಎಂಸಿಕರಣ”ದ ಪ್ರಕ್ರಿಯೆಯಿಂದ ನಷ್ಟವೂ ಸಂಭವಿಸಬಹುದು ಎಂದು ಬಿಜೆಪಿ ನಾಯಕರು ಆತಂಕಕ್ಕೆ ಒಳಗಾಗಿದ್ದಾರೆ ಎನ್ನಲಾಗಿದೆ.

“ಬಿಜೆಪಿ ಟಿಎಂಸಿ ಜನರಿಂದ ತುಂಬಿ ಹೋದರೆ, ನಮ್ಮ ಬಿಜೆಪಿ ಟಿಎಂಸಿ ‘ಟೀಮ್ ಬಿ’ಯಂತೆ ಕಾಣಲು ಪ್ರಾರಂಭಿಸಿದರೆ, ಟಿಎಂಸಿಯನ್ನು ತಿರಸ್ಕರಿಸಲು ಮತ್ತು ಬಿಜೆಪಿಗೆ ಮತ ಚಲಾಯಿಸಲು ಬಯಸುವ ಮತದಾರರು ಎರಡು ಬಾರಿ ಯೋಚಿಸಬಹುದು” ಎಂದು ಹಿರಿಯ ಬಿಜೆಪಿ ನಾಯಕರೊಬ್ಬರು ಹೇಳಿದ್ದಾರೆ. ಮುಂಬರುವ ಚುನಾವಣೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು 200 ಸ್ಥಾನಗಳ ಗುರಿಯನ್ನು ರಾಜ್ಯ ಬಿಜೆಪಿಗೆ ನಿಗದಿಪಡಿಸಿದ್ದನ್ನು ಇಲ್ಲಿ ಗಮನಿಸಬೇಕು.

ದೆಹಲಿಯಲ್ಲಿ ಇತ್ತೀಚೆಗೆ ನಡೆದ ಪಕ್ಷದ ಸಭೆಗಳಲ್ಲಿ, ಬಿಜೆಪಿಗೆ ಯಾರು ಸೇರಬಹುದು ಎಂಬ ಬಗ್ಗೆ ಸಾಕಷ್ಟು ಚರ್ಚೆ ನಡೆದಿದೆ. ಗುರುವಾರ ಪೂರ್ವ ಬುರ್ದ್ವಾನ್‌ನ ಕಾಂಕ್ಸಾ, ಆಸ್ಗ್ರಾಮ್, ಮಂಗಲ್‌ಕೋಟ್, ಕಟ್ವಾ ಮತ್ತು ಇತರ ಸ್ಥಳಗಳಿಂದ ಹಲವಾರು ಬಿಜೆಪಿ ಕಾರ್ಯಕರ್ತರು ಪಕ್ಷದ ಬುರ್ದ್ವಾನ್ ಪಟ್ಟಣ ಕಚೇರಿಯ ಮುಂದೆ ಜಮಾಯಿಸಿ ಜಿಲ್ಲಾ ಮುಖ್ಯಸ್ಥ ಸಂದೀಪ್ ನಂದಿ ವಿರುದ್ಧ ಘೋಷಣೆಗಳನ್ನು ಕೂಗಲು ಪ್ರಾರಂಭಿಸಿದರು ಮತ್ತು ಸಂದೀಪ್ ನಂದಿಯವರನ್ನು ತಕ್ಷಣ ತೆಗೆದುಹಾಕುವಂತೆ ಒತ್ತಾಯಿಸಿದರು. ಆಗ ಬುರ್ದ್ವಾನ್‌ನಲ್ಲಿ ಗೊಂದಲ ಉಂಟಾಯಿತು.

ಮೂಲಗಳ ಪ್ರಕಾರ, ಕಚೇರಿಯೊಳಗಿದ್ದ ನಂದಿಗೆ ನಿಷ್ಠರಾಗಿರುವ ಬಣವು ಕಚೇರಿಯ ಮಾಳಿಗೆ ಹತ್ತಿ ಪ್ರತಿಭಟಿಸುತ್ತಿದ್ದ ಭಿನ್ನಮತೀಯರ ಮೇಲೆ ಕಲ್ಲುಗಳನ್ನು ಎಸೆದರು. ಭಿನ್ನಮತೀಯ ಗುಂಪು ಕೂಡ ಕಚೇರಿಯ ಮೇಲೆ ಕಲ್ಲು ತೂರಾಟ ನಡೆಸಿ, ಕಚೇರಿಯ ಕಿಟಕಿಗಳನ್ನು ಒಡೆದಿದೆ. ಕೆಲವು ಬಿಜೆಪಿ ಕಾರ್ಯಕರ್ತರು ವಾಹನಗಳಿಗೆ ಬೆಂಕಿ ಹಚ್ಚಿದರು.

ಪಕ್ಷವನ್ನು ಕಟ್ಟಲು ತಾವು ರಕ್ತ ಮತ್ತು ಬೆವರು ನೀಡಿದ್ದೇವೆ ಎಂದು ಭಿನ್ನಮತೀಯರ ಗುಂಪು ಹೇಳಿಕೊಂಡಿದೆ. ಆದರೆ ತೃಣಮೂಲದಿಂದ ಬಂದ ಪಕ್ಷಾಂತರಿಗಳನ್ನು ಪ್ರೋತ್ಸಾಹಿಸುತ್ತಿರುವ ಜಿಲ್ಲಾಧ್ಯಕ್ಷ ನಂದಿ ತಮ್ಮನ್ನು ಬದಿಗೊತ್ತಿದ್ದಾರೆ ಎಂದು ಭಿನ್ನಮತೀಯರ ಗುಂಪು (ಮೂಲ ಬಿಜೆಪಿಗರ ಗುಂಪು) ಆರೋಪಿಸಿದೆ.

ಎರಡು ವಾರಗಳ ಹಿಂದೆ ಬಿಜೆಪಿ ಮುಖ್ಯಸ್ಥ ಜೆ.ಪಿ.ನಡ್ಡಾ ಬುರ್ದ್ವಾನ್‌ಗೆ ಭೇಟಿ ನೀಡಿ ಬೃಹತ್ ರೋಡ್ ಶೋ ನಡೆಸಿದ್ದರು. ಅವರು ಕಳೆದ ತಿಂಗಳು ಬುರ್ದ್ವಾನ್ ಕಚೇರಿಯನ್ನು ಉದ್ಘಾಟಿಸಿದ್ದರು. ಇದು ಬಣಗಳ ಘರ್ಷಣೆ ಎಂಬುದನ್ನು ಬಿಜೆಪಿ ನಿರಾಕರಿಸಿದೆ.

“ಜೆ.ಪಿ.ನಡ್ಡಾ ಅವರ ಬೃಹತ್ ರ‍್ಯಾಲಿಯನ್ನು ನೀವು ನೋಡಿದ್ದೀರಿ. ತೃಣಮೂಲವು ಈಗ ಭಯಭೀತವಾಗಿದೆ, ಆದ್ದರಿಂದ ಅವರು ಈ ತೊಂದರೆಯನ್ನು ಸೃಷ್ಟಿಸಲು ಸಂಚು ಮಾಡಿದ್ದಾರೆ. ಸ್ಥಳೀಯ ಮುಖಂಡರು ಇದನ್ನು ಯೋಜಿಸಿದ್ದಾರೆ, ಈ ಕಾರ್ಯಾಚರಣೆಯನ್ನು ನಡೆಸಲು ಜನರನ್ನು ನೇಮಿಸಿಕೊಂಡಿದ್ದಾರೆ. ಮಮತಾ ಬ್ಯಾನರ್ಜಿ ಮತ್ತು ‘ಪಿಕೆ’ ತಂಡ ಇದನ್ನು ಮಾಡಿದ್ದಾರೆ. ಆಡಳಿತವು ತನಿಖೆ ನಡೆಸಿ ತಪ್ಪಿಸ್ಥರನ್ನು ಬಂಧಿಸಬೇಕೆಂದು ನಾವು ಬಯಸುತ್ತೇವೆ”ಎಂದು ಬಿಜೆಪಿ ಮುಖಂಡ ರಾಜು ಬ್ಯಾನರ್ಜಿ ಹೇಳಿದ್ದಾರೆ. ತೃಣಮೂಲ ಸಚಿವ ಮತ್ತು ಬುರ್ದ್ವಾನ್ ಜಿಲ್ಲಾ ನಾಯಕ ಸ್ವಪನ್ ದೇಬ್ನಾಥ್ ಇದನ್ನು ನಿರಾಕರಿಸಿದ್ದಾರೆ.

ಇದನ್ನೂ ಓದಿ: ಪ.ಬಂಗಾಳದಲ್ಲಿ ಬಿಜೆಪಿ ಕಾರ್ಯಕರ್ತರು ಪೊಲೀಸರ ನಡುವೆ ಘರ್ಷಣೆ: ಒಬ್ಬ ಕಾರ್ಯಕರ್ತನ ಸಾವು – ಬಿಜೆಪಿ ಆರೋಪ

ಅಸಾನ್‌ಸೋಲ್‌ನಲ್ಲಿ ಬಿಜೆಪಿ ಪಕ್ಷದ ಕಾರ್ಯಕರ್ತರ ನಡುವೆ ಜಟಾಪಟಿ ನಡೆದಿತ್ತು ಎಂದು ಬಾಬುಲ್ ಸುಪ್ರಿಯೋ ಒಪ್ಪಿಕೊಂಡಿದ್ದಾರೆ. “ಯಾವುದೇ ಕುಟುಂಬದಲ್ಲಿ, ಸಮಸ್ಯೆಗಳಿರುತ್ತವೆ, ಕೋಪವಿರುತ್ತದೆ, ಭಿನ್ನಾಭಿಪ್ರಾವಿದ್ದೇ ಇರುತ್ತದೆ. ನಮ್ಮ ಕಾರ್ಯಕರ್ತರು ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಅರವಿಂದ್ ಮೆನನ್ ಮತ್ತು ನನ್ನನ್ನು ಒಟ್ಟಿಗೆ ಭೇಟಿಯಾದರು. ಇಂತಹ ಸಭೆ ಆಗಾಗ್ಗೆ ಆಗುವುದಿಲ್ಲ. ಆದ್ದರಿಂದ 10 ರಿಂದ 30 ಜನರು ಒಂದೇ ಸಮಯದಲ್ಲಿ ಮಾತನಾಡಲು ಪ್ರಾರಂಭಿಸಿದಾಗ, ಸ್ವಾಭಾವಿಕವಾಗಿ ಗೊಂದಲ ಏರ್ಪಡುತ್ತದೆ’ ಎಂದ ಕೇಂದ್ರ ಸಚಿವ ಬಾಬುಲ್ ಹೇಳಿದ್ದಾರೆ.

ಆದರೆ ಮೂಲಗಳು ಹೇಳುವಂತೆ, ಇಲ್ಲಿಯೂ ತೃಣಮೂಲದಿಂದ ಬಂದವರೊಂದಿಗೆ ಸಂಘರ್ಷದಲ್ಲಿದ್ದ ಹಳೆಯ ಬಿಜೆಪಿ ಕಾರ್ಯಕರ್ತರು ಮತದಾನ ತಂತ್ರ ಮಾತುಕತೆಗಾಗಿ ಕಚೇರಿಗೆ ಬಂದಿದ್ದರು. ಆದರೆ ಹೊಸದಾಗಿ ನೇಮಕಗೊಂಡ ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಅರಿಜಿತ್ ರಾಯ್ ಅವರ ಬಗ್ಗೆ ವಿವಾದ ಭುಗಿಲೆದ್ದಿತು. ಅವರು ಭಾರತೀಯ ಜನತಾ ಯುವ ಮೋರ್ಚಾ ಜಿಲ್ಲಾ ಸಮಿತಿಯಿಂದ ಹಳೆಯ ಬಿಜೆಪಿ ಕಾರ್ಯಕರ್ತರನ್ನು ಹೊರಹಾಕಿದ್ದರು ಎಂದು ಆರೋಪಿಸಲಾಗಿದೆ.

ಬಿಜೆಪಿಯಲ್ಲಿ ಬಣಗಳ ಕಾದಾಟದ ಮೊದಲ ಘಟನೆಗಳೇನೂ ಇವಲ್ಲ. ಜನವರಿ 8 ರಂದು ನಂದಿಗ್ರಾಮದಲ್ಲಿ ಕೂಡ ಇಂಥದ್ದು ನಡೆದಿತ್ತು. ಟಿಎಂಸಿಯಿಂದ ಬಿಜೆಪಿಗೆ ಪಕ್ಷಾಂತರಗೊಂಡ ಸುವೆಂಡು ಅಧಿಕಾರಿ ಮತ್ತು ಬಿಜೆಪಿ ಉನ್ನತ ನಾಯಕರಾದ ದಿಲೀಪ್ ಘೋಷ್, ಕೈಲಾಶ್ ವಿಜಯವರ್ಗಿಯಾ ಅವರು ಭಾಗವಹಿಸಿದ ರ‍್ಯಾಲಿಯಲ್ಲಿ, ಮೂಲ ಬಿಜೆಪಿ ಕಾರ್ಯಕರ್ತರಲ್ಲಿ ಒಂದು ಭಾಗವು ಕಲ್ಲು ತೂರಾಟ ನಡೆಸಿತ್ತು. ಅಲ್ಲಿ ತೃಣಮೂಲ ಕಾರ್ಯಕರ್ತರು ವಿದ್ಯುಕ್ತವಾಗಿ ಬಿಜೆಪಿಗೆ ಸೇರಲು ಕಾಯುತ್ತಿದ್ದರು. “ನಮ್ಮನ್ನು (ಬಿಜೆಪಿ ಕಾರ್ಯಕರ್ತರನ್ನು) ಹಿಂಸಿಸಿದ ತೃಣಮೂಲದ ಜನರು ಈಗ ನಮ್ಮ ಪಕ್ಷಕ್ಕೆ ಸೇರಲು ಹೊರಟಿದ್ದಾರೆ. ಅದನ್ನು ಸಹಿಸಲು ನಾವು ಸಿದ್ಧರಿಲ್ಲ” ಎಂದು ಹಳೆಯ ಬಿಜೆಪಿ ಕಾರ್ಯಕರ್ತರೊಬ್ಬರು ಹೇಳಿದ್ದರು.


ಇದನ್ನೂ ಓದಿ: ಗೋಲಿ ಮಾರೋ ಸಾಲೋಂಕೋ’ ಘೋಷಣೆ – ಬಿಜೆಪಿ ಮುಖಂಡ ಸೇರಿ 3 ಕಾರ್ಯಕರ್ತರ ಬಂಧನಪ.ಬಂಗಾಳ: 'ಗೋಲಿ ಮಾರೋ ಸಾ***ಕೋ' ಘೋಷಣೆ ಕೂಗಿದ 3 ಬಿಜೆಪಿ ಕಾರ್ಯಕರ್ತರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...