Homeಮುಖಪುಟದೋಷಪೂರಿತ ರೈಲ್ವೆ ಸಿಗ್ನಲ್‌, ಕಳಪೆ ಹಳಿ ದುರಸ್ತಿ ಬಗ್ಗೆ 6 ತಿಂಗಳಲ್ಲಿ 2 ಸಲ ಎಚ್ಚರಿಸಲಾಗಿತ್ತು:...

ದೋಷಪೂರಿತ ರೈಲ್ವೆ ಸಿಗ್ನಲ್‌, ಕಳಪೆ ಹಳಿ ದುರಸ್ತಿ ಬಗ್ಗೆ 6 ತಿಂಗಳಲ್ಲಿ 2 ಸಲ ಎಚ್ಚರಿಸಲಾಗಿತ್ತು: ವರದಿ

- Advertisement -
- Advertisement -

ಶುಕ್ರವಾರ ರಾತ್ರಿ ಘಟಿಸಿದ ಅತ್ಯಂತ ಭೀಕರ ರೈಲು ದುರಂತದಲ್ಲಿ ಕನಿಷ್ಠ 288 ಪ್ರಯಾಣಿಕರು ಸಾವನ್ನಪ್ಪಿ, 900ಕ್ಕೂ ಹೆಚ್ಚು ಮಂದಿ ಗಾಯಗೊಂಡರು. ಇಂತಹ ಘೋರ ದುರಂತ ಘಟಿಸುವ ಸೂಚನೆಯನ್ನು ಕಳೆದ ಆರು ತಿಂಗಳಲ್ಲಿ ಎರಡು ಬಾರಿ ನೀಡಲಾಗಿತ್ತು ಎಂಬ ಅಂಶ ಈಗ ಬೆಳಕಿಗೆ ಬಂದಿದೆ.

ರೈಲು ಹಳಿ ತಪ್ಪಲು ಕಾರಣವಾಗುವ ಸಿಗ್ನಲಿಂಗ್ ವ್ಯವಸ್ಥೆಯಲ್ಲಿನ ದೋಷಗಳ ಬಗ್ಗೆ ಕಳೆದ ಆರು ತಿಂಗಳಲ್ಲಿ ಎರಡು ಬಾರಿ ರೈಲ್ವೆ ಅಧಿಕಾರಿಗಳಿಗೆ ಎಚ್ಚರಿಕೆ ನೀಡಲಾಗಿತ್ತು ಎಂಬ ಅಂಶ ಈಗ ಬಯಲಾಗಿದೆ.

ಭಾರತದ ಕಂಟ್ರೋಲರ್ ಮತ್ತು ಆಡಿಟರ್ ಜನರಲ್ (ಸಿಎಜಿ) ಕಳೆದ ಡಿಸೆಂಬರ್‌ನಲ್ಲಿ ವರದಿಯನ್ನು ಮಂಡಿಸಿದ್ದರು. ರೈಲುಗಳು ತಪ್ಪಾದ ಹಳಿಯಲ್ಲಿ ಚಲಿಸಲು ಕಾರಣವಾಗುವ 24 ಅಂಶಗಳನ್ನು ವರದಿಯಲ್ಲಿ ಉಲ್ಲೇಖಿಸಲಾಗಿದೆ. ಏಪ್ರಿಲ್ 2017ರಿಂದ ಮಾರ್ಚ್ 2021ರ ನಡುವೆ ಎಷ್ಟು ರೈಲುಗಳು ತಪ್ಪಾದ ಹಳಿಯಲ್ಲಿ ಚಲಿಸಿವೆ, ಅದಕ್ಕೆ ಕಾರಣಗಳೇನು ಎಂಬುದನ್ನು “ಭಾರತೀಯ ರೈಲ್ವೇಯಲ್ಲಿನ ಹಳಿತಪ್ಪುವಿಕೆಗಳು” ವರದಿ ಪಟ್ಟಿ ಮಾಡಿದೆ. ಹಳಿಗಳ ಅಸಮರ್ಪಕ ನಿರ್ವಹಣೆಯೇ ಅಪಘಾತಗಳಿಗೆ ಪ್ರಮುಖ ಕಾರಣ ಎಂದು ವರದಿ ಎಚ್ಚರಿಸಿದೆ.

ಫೆಬ್ರವರಿಯಲ್ಲಿ ನಡೆದ ಪ್ರತ್ಯೇಕ ಬೆಳವಣಿಗೆಯೊಂದಕ್ಕೆ ಸಂಬಂಧಿಸಿದಂತೆ ನೈಋತ್ಯ ರೈಲ್ವೆ ವಲಯದ ಪ್ರಧಾನ ಮುಖ್ಯ ಕಾರ್ಯ ನಿರ್ವಾಹಕ ವ್ಯವಸ್ಥಾಪಕರು ಸಿಗ್ನಲಿಂಗ್ ವ್ಯವಸ್ಥೆಯಲ್ಲಿನ ‘ಗಂಭೀರ ನ್ಯೂನತೆ’ಗಳ ಬಗ್ಗೆ ಅಧಿಕಾರಿಗಳಿಗೆ ಪತ್ರ ಬರೆದಿದ್ದರು ಎಂದು ‘ದಿ ಪ್ರಿಂಟ್’ ವರದಿ ಮಾಡಿದೆ.

ಫೆಬ್ರುವರಿಯಲ್ಲಿ ಭೀಕರ ರೈಲು ಅಪಘಾತ ಕೂದಲೆಳೆಯಲ್ಲಿ ತಪ್ಪಿ ಹೋಗಿತ್ತು. ಎರಡು ರೈಲುಗಳು ಮುಖಾಮುಖಿ ಡಿಕ್ಕಿ ಹೊಡೆಯುವ ಸನ್ನಿವೇಶವೇ ನಿರ್ಮಾಣವಾಗಿತ್ತು. “ಸಿಗ್ನಲಿಂಗ್ ವ್ಯವಸ್ಥೆಯಲ್ಲಿನ ದೋಷಗಳನ್ನು ಸರಿಪಡಿಸದಿದ್ದರೆ, ಇಂತಹ ಘಟನೆಗಳು ಮರು ಕಳಿಸಬಹುದು ಮತ್ತು ಗಂಭೀರ ಅಪಘಾತಗಳಿಗೆ ಕಾರಣವಾಗಬಹುದು” ಎಂದು ಅಧಿಕಾರಿ ಎಚ್ಚರಿಸಿದ್ದರು.

ಶುಕ್ರವಾರ ರಾತ್ರಿ 7 ಗಂಟೆ ಸುಮಾರಿಗೆ ಒಡಿಶಾದ ಬಾಲಸೋರ್‌ನಲ್ಲಿ ಈಗ ಅಪಘಾತ ಸಂಭವಿಸಿದ್ದು, ತಪ್ಪಾದ ಹಳಿಯಲ್ಲಿ ಬಂದ ಕೋರ ಮಂಡಲ್ ಎಕ್ಸ್‌ಪ್ರೆಸ್ ಗೂಡ್ಸ್‌ ರೈಲಿಗೆ ಡಿಕ್ಕಿ ಹೊಡೆದಿದೆ. ಯಶವಂತಪುರ-ಹೌರಾ ಎಕ್ಸ್‌ಪ್ರೆಸ್‌ ರೈಲು ಕೂಡ ಹಳಿ ತಪ್ಪಿ, ಕೋರಮಂಡಲ್ ಎಕ್ಸ್ ಪ್ರೆಸ್ ಮಾರ್ಗದಲ್ಲಿ ಬಂದು ಡಿಕ್ಕಿ ಹೊಡೆದಿವೆ. ಮೂರು ರೈಲುಗಳು ಅಪಘಾತದೊಳಗೆ ಸಿಲುಕಿವೆ.

ಸಿಗ್ನಲಿಂಗ್ ವ್ಯವಸ್ಥೆಯಲ್ಲಿನ ವೈಫಲ್ಯದಿಂದ ಅಪಘಾತ ಸಂಭವಿಸಿರಬಹುದು ಎಂದು ಆರಂಭಿಕ ತನಿಖೆಯಿಂದ ತಿಳಿದುಬಂದಿದೆ ಎಂದು ‘ದಿ ಹಿಂದೂ’ ವರದಿ ಮಾಡಿದೆ. ಮೇಲ್ಮುಖ ಮಾರ್ಗದಲ್ಲಿ ಪ್ರವೇಶಿಸುವಂತೆ ಕೋರಮಂಡಲ್ ಎಕ್ಸ್‌ಪ್ರೆಸ್‌ಗೆ ಆರಂಭದಲ್ಲಿ ಗ್ರೀನ್ ಸಿಗ್ನಲ್ ನೀಡಲಾಗಿತ್ತು. ಆದರೆ ನಂತರ ಸಿಗ್ನಲ್ ತೆಗೆಯಲಾಯಿತು. ಬಳಿಕ ಎಕ್ಸ್‌ಪ್ರೆಸ್‌ ಲೂಪ್ ಲೈನ್‌ಗೆ ಪ್ರವೇಶಿಸಿತು. ಅಲ್ಲಿ ನಿಂತಿದ್ದ ಗೂಡ್ಸ್‌ ರೈಲು ಗಾಡಿಗೆ ಡಿಕ್ಕಿ ಹೊಡೆಯಿತು ಎಂಬುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

ಸಿಗ್ನಲಿಂಗ್‌ನಲ್ಲಿನ ದೋಷಗಳ ಬಗ್ಗೆ ಪತ್ರ

ಯಶವಂತಪುರ-ಹಜರತ್ ನಿಜಾಮುದ್ದೀನ್ ಸಂಪರ್ಕ ಕ್ರಾಂತಿ ಎಕ್ಸ್‌ಪ್ರೆಸ್ ರೈಲು ಗಾಡಿಯು ಗೂಡ್ಸ್ ರೈಲಿಗೆ ಡಿಕ್ಕಿಯಾಗುವ ಅಪಾಯದಿಂದ ಕೂದಲೆಳೆಯಲ್ಲಿ ಪಾರಾದ ನಂತರ ನೈಋತ್ಯ ರೈಲ್ವೆ ವಲಯದ ಪ್ರಧಾನ ಮುಖ್ಯ ಕಾರ್ಯ ನಿರ್ವಾಹಕ ವ್ಯವಸ್ಥಾಪಕರು ಫೆಬ್ರವರಿ 9 ರಂದು ಉನ್ನತ  ಅಧಿಕಾರಿಗಳಿಗೆ ಪತ್ರ ಬರೆದಿದ್ದಾರೆ ಎಂದು ‘ದಿ ಪ್ರಿಂಟ್’ ವರದಿ ತಿಳಿಸಿದೆ.

“ಎಸ್‌ಎಂಎಸ್‌ (ಸಿಗ್ನಲ್ ನಿರ್ವಹಣಾ ವ್ಯವಸ್ಥೆ)ನಲ್ಲಿ ಗಂಭೀರ ದೋಷಗಳಿವೆ” ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಮೇಲಿನ ಘಟನೆಯಲ್ಲಿ ಏನಾಗಿತ್ತೆಂದರೆ, ಸಂಪರ್ಕ ಕ್ರಾಂತಿ ಎಕ್ಸ್‌ಪ್ರೆಸ್‌ಗೆ ಕರ್ನಾಟಕದ ಹೊಸದುರ್ಗ ರಸ್ತೆ ನಿಲ್ದಾಣದ ಬಳಿ ಡೌನ್‌ಲೈನ್‌ಗೆ ಪ್ರವೇಶಿಸುವಂತೆ ಸಿಗ್ನಲಿಂಗ್ ವ್ಯವಸ್ಥೆಯು ತಪ್ಪಾಗಿ ಅನುಮತಿ ನೀಡಿತ್ತು. ಗೂಡ್ಸ್ ರೈಲಿಗೆ ಮುಖಾಮುಖಿ ಡಿಕ್ಕಿಯಾಗುವ ಅಪಾಯವು ‘ಲೋಕೋ ಪೈಲಟ್‌ನ ಎಚ್ಚರಿಕೆ’ಯಿಂದಾಗಿ ತಪ್ಪಿತ್ತು. ಮಾರ್ಗವನ್ನು ಪ್ರವೇಶಿಸುವ ಮೊದಲೇ ಎಚ್ಚೆತ್ತುಕೊಂಡು ಅಪಾಯವನ್ನು ತಡೆದಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಹಳಿತಪ್ಪಿದ ಬಗ್ಗೆ ಸಿಎಜಿ ವರದಿ

ಏಪ್ರಿಲ್ 2017 ಮತ್ತು ಮಾರ್ಚ್ 2021ರ ನಡುವೆ ಹಳಿತಪ್ಪುವಿಕೆಯಿಂದ ಸಂಭವಿಸಿದ ಅಪಘಾತಗಳ 1,129 ವಿಚಾರಣೆಗಳನ್ನು ಸಿಎಜಿ (ಕಂಟ್ರೋಲರ್ ಮತ್ತು ಆಡಿಟರ್ ಜನರಲ್) ವರದಿ ಮಾಡಿದೆ.

ಸಿಎಜಿ ವರದಿಯು ಹಲವಾರು ಅಂಶಗಳತ್ತ ಬೊಟ್ಟು ಮಾಡಿದೆ. ರಾಷ್ಟ್ರೀಯ ರೈಲು ಸಂರಕ್ಷಣಾ ಕೋಶ್‌ನ ಆದ್ಯತಾ-1ರ ಕಾಮಗಾರಿ ವೆಚ್ಚದಲ್ಲಿ ಕಡಿತವಾಗಿರುವುದನ್ನು ವರದಿ ಉಲ್ಲೇಖಿಸಿದೆ. ಈ ವೆಚ್ಚವು 2017-18 ರಲ್ಲಿ 81.55% ಇತ್ತು. 2019-20ರಲ್ಲಿ 73.76%ಕ್ಕೆ ಇಳಿಕೆಯಾಗಿದೆ ಎಂದು ತಿಳಿಸಿದೆ.

ಇದನ್ನೂ ಓದಿರಿ: ಇತ್ತೀಚಿನ ವರ್ಷಗಳಲ್ಲಿ ಭಾರತ ಕಂಡ ಭೀಕರ ರೈಲು ದುರಂತಗಳಿವು

ರೈಲ್ವೇ ಸಚಿವಾಲಯವು 2017-18 ರಿಂದ ಐದು ವರ್ಷಗಳ ಅವಧಿಯಲ್ಲಿ ‘ರಾಷ್ಟ್ರೀಯ ರೈಲು ಸಂರಕ್ಷಾ ಕೋಶ್ – ರೈಲು ಸುರಕ್ಷತೆ’ಗಾಗಿ ಮೀಸಲು ನಿಧಿಗೆ 1 ಲಕ್ಷ ಕೋಟಿ ರೂ.ಗಳ ಹಂಚಿಕೆಯನ್ನು ಘೋಷಿಸಿತ್ತು.

ಟ್ರ್ಯಾಕ್ ನವೀಕರಣ ನಿಧಿಯು 2018-19ರಲ್ಲಿ 9,607.65 ಕೋಟಿ ರೂ. ಇತ್ತು. 2019-20ರಲ್ಲಿ 7,417 ಕೋಟಿ ರೂ.ಗಳಿಗೆ ಆ ನಿಧಿಯನ್ನು ಇಳಿಸಲಾಗಿದೆ ಎಂಬುದನ್ನು ಸಿಎಜಿ ವರದಿ ಉಲ್ಲೇಖಿಸಿದೆ. ನಿಗದಿಪಡಿಸಿದ ಹಣವೂ ಪೂರ್ಣ ಪ್ರಮಾಣದಲ್ಲಿ ಬಳಕೆಯಾಗಿಲ್ಲ ಎಂದೂ ಆಕ್ಷೇಪ ವ್ಯಕ್ತಪಡಿಸಿದೆ.

ಹಳಿ ತಪ್ಪಿದ ಘಟನೆಗಳ ಶೇ. 63ರಷ್ಟು ಪ್ರಕರಣಗಳಲ್ಲಿ, ತನಿಖಾ ವರದಿಗಳನ್ನು ನಿಗದಿತ ಸಮಯದೊಳಗೆ ಸಲ್ಲಿಸಲಾಗಿಲ್ಲ. ಶೇ.49ರಷ್ಟು ಪ್ರಕರಣಗಳಲ್ಲಿ ವರದಿಯನ್ನು ಸ್ವೀಕರಿಸುವಲ್ಲಿ ಅಧಿಕಾರಿಗಳಿಂದ ವಿಳಂಬವಾಗಿದೆ ಎಂಬುದನ್ನು ಸಿಎಜಿ ವರದಿ ಬಹಿರಂಗಪಡಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...