Homeಮುಖಪುಟದೋಷಪೂರಿತ ರೈಲ್ವೆ ಸಿಗ್ನಲ್‌, ಕಳಪೆ ಹಳಿ ದುರಸ್ತಿ ಬಗ್ಗೆ 6 ತಿಂಗಳಲ್ಲಿ 2 ಸಲ ಎಚ್ಚರಿಸಲಾಗಿತ್ತು:...

ದೋಷಪೂರಿತ ರೈಲ್ವೆ ಸಿಗ್ನಲ್‌, ಕಳಪೆ ಹಳಿ ದುರಸ್ತಿ ಬಗ್ಗೆ 6 ತಿಂಗಳಲ್ಲಿ 2 ಸಲ ಎಚ್ಚರಿಸಲಾಗಿತ್ತು: ವರದಿ

- Advertisement -
- Advertisement -

ಶುಕ್ರವಾರ ರಾತ್ರಿ ಘಟಿಸಿದ ಅತ್ಯಂತ ಭೀಕರ ರೈಲು ದುರಂತದಲ್ಲಿ ಕನಿಷ್ಠ 288 ಪ್ರಯಾಣಿಕರು ಸಾವನ್ನಪ್ಪಿ, 900ಕ್ಕೂ ಹೆಚ್ಚು ಮಂದಿ ಗಾಯಗೊಂಡರು. ಇಂತಹ ಘೋರ ದುರಂತ ಘಟಿಸುವ ಸೂಚನೆಯನ್ನು ಕಳೆದ ಆರು ತಿಂಗಳಲ್ಲಿ ಎರಡು ಬಾರಿ ನೀಡಲಾಗಿತ್ತು ಎಂಬ ಅಂಶ ಈಗ ಬೆಳಕಿಗೆ ಬಂದಿದೆ.

ರೈಲು ಹಳಿ ತಪ್ಪಲು ಕಾರಣವಾಗುವ ಸಿಗ್ನಲಿಂಗ್ ವ್ಯವಸ್ಥೆಯಲ್ಲಿನ ದೋಷಗಳ ಬಗ್ಗೆ ಕಳೆದ ಆರು ತಿಂಗಳಲ್ಲಿ ಎರಡು ಬಾರಿ ರೈಲ್ವೆ ಅಧಿಕಾರಿಗಳಿಗೆ ಎಚ್ಚರಿಕೆ ನೀಡಲಾಗಿತ್ತು ಎಂಬ ಅಂಶ ಈಗ ಬಯಲಾಗಿದೆ.

ಭಾರತದ ಕಂಟ್ರೋಲರ್ ಮತ್ತು ಆಡಿಟರ್ ಜನರಲ್ (ಸಿಎಜಿ) ಕಳೆದ ಡಿಸೆಂಬರ್‌ನಲ್ಲಿ ವರದಿಯನ್ನು ಮಂಡಿಸಿದ್ದರು. ರೈಲುಗಳು ತಪ್ಪಾದ ಹಳಿಯಲ್ಲಿ ಚಲಿಸಲು ಕಾರಣವಾಗುವ 24 ಅಂಶಗಳನ್ನು ವರದಿಯಲ್ಲಿ ಉಲ್ಲೇಖಿಸಲಾಗಿದೆ. ಏಪ್ರಿಲ್ 2017ರಿಂದ ಮಾರ್ಚ್ 2021ರ ನಡುವೆ ಎಷ್ಟು ರೈಲುಗಳು ತಪ್ಪಾದ ಹಳಿಯಲ್ಲಿ ಚಲಿಸಿವೆ, ಅದಕ್ಕೆ ಕಾರಣಗಳೇನು ಎಂಬುದನ್ನು “ಭಾರತೀಯ ರೈಲ್ವೇಯಲ್ಲಿನ ಹಳಿತಪ್ಪುವಿಕೆಗಳು” ವರದಿ ಪಟ್ಟಿ ಮಾಡಿದೆ. ಹಳಿಗಳ ಅಸಮರ್ಪಕ ನಿರ್ವಹಣೆಯೇ ಅಪಘಾತಗಳಿಗೆ ಪ್ರಮುಖ ಕಾರಣ ಎಂದು ವರದಿ ಎಚ್ಚರಿಸಿದೆ.

ಫೆಬ್ರವರಿಯಲ್ಲಿ ನಡೆದ ಪ್ರತ್ಯೇಕ ಬೆಳವಣಿಗೆಯೊಂದಕ್ಕೆ ಸಂಬಂಧಿಸಿದಂತೆ ನೈಋತ್ಯ ರೈಲ್ವೆ ವಲಯದ ಪ್ರಧಾನ ಮುಖ್ಯ ಕಾರ್ಯ ನಿರ್ವಾಹಕ ವ್ಯವಸ್ಥಾಪಕರು ಸಿಗ್ನಲಿಂಗ್ ವ್ಯವಸ್ಥೆಯಲ್ಲಿನ ‘ಗಂಭೀರ ನ್ಯೂನತೆ’ಗಳ ಬಗ್ಗೆ ಅಧಿಕಾರಿಗಳಿಗೆ ಪತ್ರ ಬರೆದಿದ್ದರು ಎಂದು ‘ದಿ ಪ್ರಿಂಟ್’ ವರದಿ ಮಾಡಿದೆ.

ಫೆಬ್ರುವರಿಯಲ್ಲಿ ಭೀಕರ ರೈಲು ಅಪಘಾತ ಕೂದಲೆಳೆಯಲ್ಲಿ ತಪ್ಪಿ ಹೋಗಿತ್ತು. ಎರಡು ರೈಲುಗಳು ಮುಖಾಮುಖಿ ಡಿಕ್ಕಿ ಹೊಡೆಯುವ ಸನ್ನಿವೇಶವೇ ನಿರ್ಮಾಣವಾಗಿತ್ತು. “ಸಿಗ್ನಲಿಂಗ್ ವ್ಯವಸ್ಥೆಯಲ್ಲಿನ ದೋಷಗಳನ್ನು ಸರಿಪಡಿಸದಿದ್ದರೆ, ಇಂತಹ ಘಟನೆಗಳು ಮರು ಕಳಿಸಬಹುದು ಮತ್ತು ಗಂಭೀರ ಅಪಘಾತಗಳಿಗೆ ಕಾರಣವಾಗಬಹುದು” ಎಂದು ಅಧಿಕಾರಿ ಎಚ್ಚರಿಸಿದ್ದರು.

ಶುಕ್ರವಾರ ರಾತ್ರಿ 7 ಗಂಟೆ ಸುಮಾರಿಗೆ ಒಡಿಶಾದ ಬಾಲಸೋರ್‌ನಲ್ಲಿ ಈಗ ಅಪಘಾತ ಸಂಭವಿಸಿದ್ದು, ತಪ್ಪಾದ ಹಳಿಯಲ್ಲಿ ಬಂದ ಕೋರ ಮಂಡಲ್ ಎಕ್ಸ್‌ಪ್ರೆಸ್ ಗೂಡ್ಸ್‌ ರೈಲಿಗೆ ಡಿಕ್ಕಿ ಹೊಡೆದಿದೆ. ಯಶವಂತಪುರ-ಹೌರಾ ಎಕ್ಸ್‌ಪ್ರೆಸ್‌ ರೈಲು ಕೂಡ ಹಳಿ ತಪ್ಪಿ, ಕೋರಮಂಡಲ್ ಎಕ್ಸ್ ಪ್ರೆಸ್ ಮಾರ್ಗದಲ್ಲಿ ಬಂದು ಡಿಕ್ಕಿ ಹೊಡೆದಿವೆ. ಮೂರು ರೈಲುಗಳು ಅಪಘಾತದೊಳಗೆ ಸಿಲುಕಿವೆ.

ಸಿಗ್ನಲಿಂಗ್ ವ್ಯವಸ್ಥೆಯಲ್ಲಿನ ವೈಫಲ್ಯದಿಂದ ಅಪಘಾತ ಸಂಭವಿಸಿರಬಹುದು ಎಂದು ಆರಂಭಿಕ ತನಿಖೆಯಿಂದ ತಿಳಿದುಬಂದಿದೆ ಎಂದು ‘ದಿ ಹಿಂದೂ’ ವರದಿ ಮಾಡಿದೆ. ಮೇಲ್ಮುಖ ಮಾರ್ಗದಲ್ಲಿ ಪ್ರವೇಶಿಸುವಂತೆ ಕೋರಮಂಡಲ್ ಎಕ್ಸ್‌ಪ್ರೆಸ್‌ಗೆ ಆರಂಭದಲ್ಲಿ ಗ್ರೀನ್ ಸಿಗ್ನಲ್ ನೀಡಲಾಗಿತ್ತು. ಆದರೆ ನಂತರ ಸಿಗ್ನಲ್ ತೆಗೆಯಲಾಯಿತು. ಬಳಿಕ ಎಕ್ಸ್‌ಪ್ರೆಸ್‌ ಲೂಪ್ ಲೈನ್‌ಗೆ ಪ್ರವೇಶಿಸಿತು. ಅಲ್ಲಿ ನಿಂತಿದ್ದ ಗೂಡ್ಸ್‌ ರೈಲು ಗಾಡಿಗೆ ಡಿಕ್ಕಿ ಹೊಡೆಯಿತು ಎಂಬುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

ಸಿಗ್ನಲಿಂಗ್‌ನಲ್ಲಿನ ದೋಷಗಳ ಬಗ್ಗೆ ಪತ್ರ

ಯಶವಂತಪುರ-ಹಜರತ್ ನಿಜಾಮುದ್ದೀನ್ ಸಂಪರ್ಕ ಕ್ರಾಂತಿ ಎಕ್ಸ್‌ಪ್ರೆಸ್ ರೈಲು ಗಾಡಿಯು ಗೂಡ್ಸ್ ರೈಲಿಗೆ ಡಿಕ್ಕಿಯಾಗುವ ಅಪಾಯದಿಂದ ಕೂದಲೆಳೆಯಲ್ಲಿ ಪಾರಾದ ನಂತರ ನೈಋತ್ಯ ರೈಲ್ವೆ ವಲಯದ ಪ್ರಧಾನ ಮುಖ್ಯ ಕಾರ್ಯ ನಿರ್ವಾಹಕ ವ್ಯವಸ್ಥಾಪಕರು ಫೆಬ್ರವರಿ 9 ರಂದು ಉನ್ನತ  ಅಧಿಕಾರಿಗಳಿಗೆ ಪತ್ರ ಬರೆದಿದ್ದಾರೆ ಎಂದು ‘ದಿ ಪ್ರಿಂಟ್’ ವರದಿ ತಿಳಿಸಿದೆ.

“ಎಸ್‌ಎಂಎಸ್‌ (ಸಿಗ್ನಲ್ ನಿರ್ವಹಣಾ ವ್ಯವಸ್ಥೆ)ನಲ್ಲಿ ಗಂಭೀರ ದೋಷಗಳಿವೆ” ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಮೇಲಿನ ಘಟನೆಯಲ್ಲಿ ಏನಾಗಿತ್ತೆಂದರೆ, ಸಂಪರ್ಕ ಕ್ರಾಂತಿ ಎಕ್ಸ್‌ಪ್ರೆಸ್‌ಗೆ ಕರ್ನಾಟಕದ ಹೊಸದುರ್ಗ ರಸ್ತೆ ನಿಲ್ದಾಣದ ಬಳಿ ಡೌನ್‌ಲೈನ್‌ಗೆ ಪ್ರವೇಶಿಸುವಂತೆ ಸಿಗ್ನಲಿಂಗ್ ವ್ಯವಸ್ಥೆಯು ತಪ್ಪಾಗಿ ಅನುಮತಿ ನೀಡಿತ್ತು. ಗೂಡ್ಸ್ ರೈಲಿಗೆ ಮುಖಾಮುಖಿ ಡಿಕ್ಕಿಯಾಗುವ ಅಪಾಯವು ‘ಲೋಕೋ ಪೈಲಟ್‌ನ ಎಚ್ಚರಿಕೆ’ಯಿಂದಾಗಿ ತಪ್ಪಿತ್ತು. ಮಾರ್ಗವನ್ನು ಪ್ರವೇಶಿಸುವ ಮೊದಲೇ ಎಚ್ಚೆತ್ತುಕೊಂಡು ಅಪಾಯವನ್ನು ತಡೆದಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಹಳಿತಪ್ಪಿದ ಬಗ್ಗೆ ಸಿಎಜಿ ವರದಿ

ಏಪ್ರಿಲ್ 2017 ಮತ್ತು ಮಾರ್ಚ್ 2021ರ ನಡುವೆ ಹಳಿತಪ್ಪುವಿಕೆಯಿಂದ ಸಂಭವಿಸಿದ ಅಪಘಾತಗಳ 1,129 ವಿಚಾರಣೆಗಳನ್ನು ಸಿಎಜಿ (ಕಂಟ್ರೋಲರ್ ಮತ್ತು ಆಡಿಟರ್ ಜನರಲ್) ವರದಿ ಮಾಡಿದೆ.

ಸಿಎಜಿ ವರದಿಯು ಹಲವಾರು ಅಂಶಗಳತ್ತ ಬೊಟ್ಟು ಮಾಡಿದೆ. ರಾಷ್ಟ್ರೀಯ ರೈಲು ಸಂರಕ್ಷಣಾ ಕೋಶ್‌ನ ಆದ್ಯತಾ-1ರ ಕಾಮಗಾರಿ ವೆಚ್ಚದಲ್ಲಿ ಕಡಿತವಾಗಿರುವುದನ್ನು ವರದಿ ಉಲ್ಲೇಖಿಸಿದೆ. ಈ ವೆಚ್ಚವು 2017-18 ರಲ್ಲಿ 81.55% ಇತ್ತು. 2019-20ರಲ್ಲಿ 73.76%ಕ್ಕೆ ಇಳಿಕೆಯಾಗಿದೆ ಎಂದು ತಿಳಿಸಿದೆ.

ಇದನ್ನೂ ಓದಿರಿ: ಇತ್ತೀಚಿನ ವರ್ಷಗಳಲ್ಲಿ ಭಾರತ ಕಂಡ ಭೀಕರ ರೈಲು ದುರಂತಗಳಿವು

ರೈಲ್ವೇ ಸಚಿವಾಲಯವು 2017-18 ರಿಂದ ಐದು ವರ್ಷಗಳ ಅವಧಿಯಲ್ಲಿ ‘ರಾಷ್ಟ್ರೀಯ ರೈಲು ಸಂರಕ್ಷಾ ಕೋಶ್ – ರೈಲು ಸುರಕ್ಷತೆ’ಗಾಗಿ ಮೀಸಲು ನಿಧಿಗೆ 1 ಲಕ್ಷ ಕೋಟಿ ರೂ.ಗಳ ಹಂಚಿಕೆಯನ್ನು ಘೋಷಿಸಿತ್ತು.

ಟ್ರ್ಯಾಕ್ ನವೀಕರಣ ನಿಧಿಯು 2018-19ರಲ್ಲಿ 9,607.65 ಕೋಟಿ ರೂ. ಇತ್ತು. 2019-20ರಲ್ಲಿ 7,417 ಕೋಟಿ ರೂ.ಗಳಿಗೆ ಆ ನಿಧಿಯನ್ನು ಇಳಿಸಲಾಗಿದೆ ಎಂಬುದನ್ನು ಸಿಎಜಿ ವರದಿ ಉಲ್ಲೇಖಿಸಿದೆ. ನಿಗದಿಪಡಿಸಿದ ಹಣವೂ ಪೂರ್ಣ ಪ್ರಮಾಣದಲ್ಲಿ ಬಳಕೆಯಾಗಿಲ್ಲ ಎಂದೂ ಆಕ್ಷೇಪ ವ್ಯಕ್ತಪಡಿಸಿದೆ.

ಹಳಿ ತಪ್ಪಿದ ಘಟನೆಗಳ ಶೇ. 63ರಷ್ಟು ಪ್ರಕರಣಗಳಲ್ಲಿ, ತನಿಖಾ ವರದಿಗಳನ್ನು ನಿಗದಿತ ಸಮಯದೊಳಗೆ ಸಲ್ಲಿಸಲಾಗಿಲ್ಲ. ಶೇ.49ರಷ್ಟು ಪ್ರಕರಣಗಳಲ್ಲಿ ವರದಿಯನ್ನು ಸ್ವೀಕರಿಸುವಲ್ಲಿ ಅಧಿಕಾರಿಗಳಿಂದ ವಿಳಂಬವಾಗಿದೆ ಎಂಬುದನ್ನು ಸಿಎಜಿ ವರದಿ ಬಹಿರಂಗಪಡಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...