Homeಮುಖಪುಟದೋಷಪೂರಿತ ರೈಲ್ವೆ ಸಿಗ್ನಲ್‌, ಕಳಪೆ ಹಳಿ ದುರಸ್ತಿ ಬಗ್ಗೆ 6 ತಿಂಗಳಲ್ಲಿ 2 ಸಲ ಎಚ್ಚರಿಸಲಾಗಿತ್ತು:...

ದೋಷಪೂರಿತ ರೈಲ್ವೆ ಸಿಗ್ನಲ್‌, ಕಳಪೆ ಹಳಿ ದುರಸ್ತಿ ಬಗ್ಗೆ 6 ತಿಂಗಳಲ್ಲಿ 2 ಸಲ ಎಚ್ಚರಿಸಲಾಗಿತ್ತು: ವರದಿ

- Advertisement -
- Advertisement -

ಶುಕ್ರವಾರ ರಾತ್ರಿ ಘಟಿಸಿದ ಅತ್ಯಂತ ಭೀಕರ ರೈಲು ದುರಂತದಲ್ಲಿ ಕನಿಷ್ಠ 288 ಪ್ರಯಾಣಿಕರು ಸಾವನ್ನಪ್ಪಿ, 900ಕ್ಕೂ ಹೆಚ್ಚು ಮಂದಿ ಗಾಯಗೊಂಡರು. ಇಂತಹ ಘೋರ ದುರಂತ ಘಟಿಸುವ ಸೂಚನೆಯನ್ನು ಕಳೆದ ಆರು ತಿಂಗಳಲ್ಲಿ ಎರಡು ಬಾರಿ ನೀಡಲಾಗಿತ್ತು ಎಂಬ ಅಂಶ ಈಗ ಬೆಳಕಿಗೆ ಬಂದಿದೆ.

ರೈಲು ಹಳಿ ತಪ್ಪಲು ಕಾರಣವಾಗುವ ಸಿಗ್ನಲಿಂಗ್ ವ್ಯವಸ್ಥೆಯಲ್ಲಿನ ದೋಷಗಳ ಬಗ್ಗೆ ಕಳೆದ ಆರು ತಿಂಗಳಲ್ಲಿ ಎರಡು ಬಾರಿ ರೈಲ್ವೆ ಅಧಿಕಾರಿಗಳಿಗೆ ಎಚ್ಚರಿಕೆ ನೀಡಲಾಗಿತ್ತು ಎಂಬ ಅಂಶ ಈಗ ಬಯಲಾಗಿದೆ.

ಭಾರತದ ಕಂಟ್ರೋಲರ್ ಮತ್ತು ಆಡಿಟರ್ ಜನರಲ್ (ಸಿಎಜಿ) ಕಳೆದ ಡಿಸೆಂಬರ್‌ನಲ್ಲಿ ವರದಿಯನ್ನು ಮಂಡಿಸಿದ್ದರು. ರೈಲುಗಳು ತಪ್ಪಾದ ಹಳಿಯಲ್ಲಿ ಚಲಿಸಲು ಕಾರಣವಾಗುವ 24 ಅಂಶಗಳನ್ನು ವರದಿಯಲ್ಲಿ ಉಲ್ಲೇಖಿಸಲಾಗಿದೆ. ಏಪ್ರಿಲ್ 2017ರಿಂದ ಮಾರ್ಚ್ 2021ರ ನಡುವೆ ಎಷ್ಟು ರೈಲುಗಳು ತಪ್ಪಾದ ಹಳಿಯಲ್ಲಿ ಚಲಿಸಿವೆ, ಅದಕ್ಕೆ ಕಾರಣಗಳೇನು ಎಂಬುದನ್ನು “ಭಾರತೀಯ ರೈಲ್ವೇಯಲ್ಲಿನ ಹಳಿತಪ್ಪುವಿಕೆಗಳು” ವರದಿ ಪಟ್ಟಿ ಮಾಡಿದೆ. ಹಳಿಗಳ ಅಸಮರ್ಪಕ ನಿರ್ವಹಣೆಯೇ ಅಪಘಾತಗಳಿಗೆ ಪ್ರಮುಖ ಕಾರಣ ಎಂದು ವರದಿ ಎಚ್ಚರಿಸಿದೆ.

ಫೆಬ್ರವರಿಯಲ್ಲಿ ನಡೆದ ಪ್ರತ್ಯೇಕ ಬೆಳವಣಿಗೆಯೊಂದಕ್ಕೆ ಸಂಬಂಧಿಸಿದಂತೆ ನೈಋತ್ಯ ರೈಲ್ವೆ ವಲಯದ ಪ್ರಧಾನ ಮುಖ್ಯ ಕಾರ್ಯ ನಿರ್ವಾಹಕ ವ್ಯವಸ್ಥಾಪಕರು ಸಿಗ್ನಲಿಂಗ್ ವ್ಯವಸ್ಥೆಯಲ್ಲಿನ ‘ಗಂಭೀರ ನ್ಯೂನತೆ’ಗಳ ಬಗ್ಗೆ ಅಧಿಕಾರಿಗಳಿಗೆ ಪತ್ರ ಬರೆದಿದ್ದರು ಎಂದು ‘ದಿ ಪ್ರಿಂಟ್’ ವರದಿ ಮಾಡಿದೆ.

ಫೆಬ್ರುವರಿಯಲ್ಲಿ ಭೀಕರ ರೈಲು ಅಪಘಾತ ಕೂದಲೆಳೆಯಲ್ಲಿ ತಪ್ಪಿ ಹೋಗಿತ್ತು. ಎರಡು ರೈಲುಗಳು ಮುಖಾಮುಖಿ ಡಿಕ್ಕಿ ಹೊಡೆಯುವ ಸನ್ನಿವೇಶವೇ ನಿರ್ಮಾಣವಾಗಿತ್ತು. “ಸಿಗ್ನಲಿಂಗ್ ವ್ಯವಸ್ಥೆಯಲ್ಲಿನ ದೋಷಗಳನ್ನು ಸರಿಪಡಿಸದಿದ್ದರೆ, ಇಂತಹ ಘಟನೆಗಳು ಮರು ಕಳಿಸಬಹುದು ಮತ್ತು ಗಂಭೀರ ಅಪಘಾತಗಳಿಗೆ ಕಾರಣವಾಗಬಹುದು” ಎಂದು ಅಧಿಕಾರಿ ಎಚ್ಚರಿಸಿದ್ದರು.

ಶುಕ್ರವಾರ ರಾತ್ರಿ 7 ಗಂಟೆ ಸುಮಾರಿಗೆ ಒಡಿಶಾದ ಬಾಲಸೋರ್‌ನಲ್ಲಿ ಈಗ ಅಪಘಾತ ಸಂಭವಿಸಿದ್ದು, ತಪ್ಪಾದ ಹಳಿಯಲ್ಲಿ ಬಂದ ಕೋರ ಮಂಡಲ್ ಎಕ್ಸ್‌ಪ್ರೆಸ್ ಗೂಡ್ಸ್‌ ರೈಲಿಗೆ ಡಿಕ್ಕಿ ಹೊಡೆದಿದೆ. ಯಶವಂತಪುರ-ಹೌರಾ ಎಕ್ಸ್‌ಪ್ರೆಸ್‌ ರೈಲು ಕೂಡ ಹಳಿ ತಪ್ಪಿ, ಕೋರಮಂಡಲ್ ಎಕ್ಸ್ ಪ್ರೆಸ್ ಮಾರ್ಗದಲ್ಲಿ ಬಂದು ಡಿಕ್ಕಿ ಹೊಡೆದಿವೆ. ಮೂರು ರೈಲುಗಳು ಅಪಘಾತದೊಳಗೆ ಸಿಲುಕಿವೆ.

ಸಿಗ್ನಲಿಂಗ್ ವ್ಯವಸ್ಥೆಯಲ್ಲಿನ ವೈಫಲ್ಯದಿಂದ ಅಪಘಾತ ಸಂಭವಿಸಿರಬಹುದು ಎಂದು ಆರಂಭಿಕ ತನಿಖೆಯಿಂದ ತಿಳಿದುಬಂದಿದೆ ಎಂದು ‘ದಿ ಹಿಂದೂ’ ವರದಿ ಮಾಡಿದೆ. ಮೇಲ್ಮುಖ ಮಾರ್ಗದಲ್ಲಿ ಪ್ರವೇಶಿಸುವಂತೆ ಕೋರಮಂಡಲ್ ಎಕ್ಸ್‌ಪ್ರೆಸ್‌ಗೆ ಆರಂಭದಲ್ಲಿ ಗ್ರೀನ್ ಸಿಗ್ನಲ್ ನೀಡಲಾಗಿತ್ತು. ಆದರೆ ನಂತರ ಸಿಗ್ನಲ್ ತೆಗೆಯಲಾಯಿತು. ಬಳಿಕ ಎಕ್ಸ್‌ಪ್ರೆಸ್‌ ಲೂಪ್ ಲೈನ್‌ಗೆ ಪ್ರವೇಶಿಸಿತು. ಅಲ್ಲಿ ನಿಂತಿದ್ದ ಗೂಡ್ಸ್‌ ರೈಲು ಗಾಡಿಗೆ ಡಿಕ್ಕಿ ಹೊಡೆಯಿತು ಎಂಬುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

ಸಿಗ್ನಲಿಂಗ್‌ನಲ್ಲಿನ ದೋಷಗಳ ಬಗ್ಗೆ ಪತ್ರ

ಯಶವಂತಪುರ-ಹಜರತ್ ನಿಜಾಮುದ್ದೀನ್ ಸಂಪರ್ಕ ಕ್ರಾಂತಿ ಎಕ್ಸ್‌ಪ್ರೆಸ್ ರೈಲು ಗಾಡಿಯು ಗೂಡ್ಸ್ ರೈಲಿಗೆ ಡಿಕ್ಕಿಯಾಗುವ ಅಪಾಯದಿಂದ ಕೂದಲೆಳೆಯಲ್ಲಿ ಪಾರಾದ ನಂತರ ನೈಋತ್ಯ ರೈಲ್ವೆ ವಲಯದ ಪ್ರಧಾನ ಮುಖ್ಯ ಕಾರ್ಯ ನಿರ್ವಾಹಕ ವ್ಯವಸ್ಥಾಪಕರು ಫೆಬ್ರವರಿ 9 ರಂದು ಉನ್ನತ  ಅಧಿಕಾರಿಗಳಿಗೆ ಪತ್ರ ಬರೆದಿದ್ದಾರೆ ಎಂದು ‘ದಿ ಪ್ರಿಂಟ್’ ವರದಿ ತಿಳಿಸಿದೆ.

“ಎಸ್‌ಎಂಎಸ್‌ (ಸಿಗ್ನಲ್ ನಿರ್ವಹಣಾ ವ್ಯವಸ್ಥೆ)ನಲ್ಲಿ ಗಂಭೀರ ದೋಷಗಳಿವೆ” ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಮೇಲಿನ ಘಟನೆಯಲ್ಲಿ ಏನಾಗಿತ್ತೆಂದರೆ, ಸಂಪರ್ಕ ಕ್ರಾಂತಿ ಎಕ್ಸ್‌ಪ್ರೆಸ್‌ಗೆ ಕರ್ನಾಟಕದ ಹೊಸದುರ್ಗ ರಸ್ತೆ ನಿಲ್ದಾಣದ ಬಳಿ ಡೌನ್‌ಲೈನ್‌ಗೆ ಪ್ರವೇಶಿಸುವಂತೆ ಸಿಗ್ನಲಿಂಗ್ ವ್ಯವಸ್ಥೆಯು ತಪ್ಪಾಗಿ ಅನುಮತಿ ನೀಡಿತ್ತು. ಗೂಡ್ಸ್ ರೈಲಿಗೆ ಮುಖಾಮುಖಿ ಡಿಕ್ಕಿಯಾಗುವ ಅಪಾಯವು ‘ಲೋಕೋ ಪೈಲಟ್‌ನ ಎಚ್ಚರಿಕೆ’ಯಿಂದಾಗಿ ತಪ್ಪಿತ್ತು. ಮಾರ್ಗವನ್ನು ಪ್ರವೇಶಿಸುವ ಮೊದಲೇ ಎಚ್ಚೆತ್ತುಕೊಂಡು ಅಪಾಯವನ್ನು ತಡೆದಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಹಳಿತಪ್ಪಿದ ಬಗ್ಗೆ ಸಿಎಜಿ ವರದಿ

ಏಪ್ರಿಲ್ 2017 ಮತ್ತು ಮಾರ್ಚ್ 2021ರ ನಡುವೆ ಹಳಿತಪ್ಪುವಿಕೆಯಿಂದ ಸಂಭವಿಸಿದ ಅಪಘಾತಗಳ 1,129 ವಿಚಾರಣೆಗಳನ್ನು ಸಿಎಜಿ (ಕಂಟ್ರೋಲರ್ ಮತ್ತು ಆಡಿಟರ್ ಜನರಲ್) ವರದಿ ಮಾಡಿದೆ.

ಸಿಎಜಿ ವರದಿಯು ಹಲವಾರು ಅಂಶಗಳತ್ತ ಬೊಟ್ಟು ಮಾಡಿದೆ. ರಾಷ್ಟ್ರೀಯ ರೈಲು ಸಂರಕ್ಷಣಾ ಕೋಶ್‌ನ ಆದ್ಯತಾ-1ರ ಕಾಮಗಾರಿ ವೆಚ್ಚದಲ್ಲಿ ಕಡಿತವಾಗಿರುವುದನ್ನು ವರದಿ ಉಲ್ಲೇಖಿಸಿದೆ. ಈ ವೆಚ್ಚವು 2017-18 ರಲ್ಲಿ 81.55% ಇತ್ತು. 2019-20ರಲ್ಲಿ 73.76%ಕ್ಕೆ ಇಳಿಕೆಯಾಗಿದೆ ಎಂದು ತಿಳಿಸಿದೆ.

ಇದನ್ನೂ ಓದಿರಿ: ಇತ್ತೀಚಿನ ವರ್ಷಗಳಲ್ಲಿ ಭಾರತ ಕಂಡ ಭೀಕರ ರೈಲು ದುರಂತಗಳಿವು

ರೈಲ್ವೇ ಸಚಿವಾಲಯವು 2017-18 ರಿಂದ ಐದು ವರ್ಷಗಳ ಅವಧಿಯಲ್ಲಿ ‘ರಾಷ್ಟ್ರೀಯ ರೈಲು ಸಂರಕ್ಷಾ ಕೋಶ್ – ರೈಲು ಸುರಕ್ಷತೆ’ಗಾಗಿ ಮೀಸಲು ನಿಧಿಗೆ 1 ಲಕ್ಷ ಕೋಟಿ ರೂ.ಗಳ ಹಂಚಿಕೆಯನ್ನು ಘೋಷಿಸಿತ್ತು.

ಟ್ರ್ಯಾಕ್ ನವೀಕರಣ ನಿಧಿಯು 2018-19ರಲ್ಲಿ 9,607.65 ಕೋಟಿ ರೂ. ಇತ್ತು. 2019-20ರಲ್ಲಿ 7,417 ಕೋಟಿ ರೂ.ಗಳಿಗೆ ಆ ನಿಧಿಯನ್ನು ಇಳಿಸಲಾಗಿದೆ ಎಂಬುದನ್ನು ಸಿಎಜಿ ವರದಿ ಉಲ್ಲೇಖಿಸಿದೆ. ನಿಗದಿಪಡಿಸಿದ ಹಣವೂ ಪೂರ್ಣ ಪ್ರಮಾಣದಲ್ಲಿ ಬಳಕೆಯಾಗಿಲ್ಲ ಎಂದೂ ಆಕ್ಷೇಪ ವ್ಯಕ್ತಪಡಿಸಿದೆ.

ಹಳಿ ತಪ್ಪಿದ ಘಟನೆಗಳ ಶೇ. 63ರಷ್ಟು ಪ್ರಕರಣಗಳಲ್ಲಿ, ತನಿಖಾ ವರದಿಗಳನ್ನು ನಿಗದಿತ ಸಮಯದೊಳಗೆ ಸಲ್ಲಿಸಲಾಗಿಲ್ಲ. ಶೇ.49ರಷ್ಟು ಪ್ರಕರಣಗಳಲ್ಲಿ ವರದಿಯನ್ನು ಸ್ವೀಕರಿಸುವಲ್ಲಿ ಅಧಿಕಾರಿಗಳಿಂದ ವಿಳಂಬವಾಗಿದೆ ಎಂಬುದನ್ನು ಸಿಎಜಿ ವರದಿ ಬಹಿರಂಗಪಡಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...