Homeಮುಖಪುಟದೋಷಪೂರಿತ ರೈಲ್ವೆ ಸಿಗ್ನಲ್‌, ಕಳಪೆ ಹಳಿ ದುರಸ್ತಿ ಬಗ್ಗೆ 6 ತಿಂಗಳಲ್ಲಿ 2 ಸಲ ಎಚ್ಚರಿಸಲಾಗಿತ್ತು:...

ದೋಷಪೂರಿತ ರೈಲ್ವೆ ಸಿಗ್ನಲ್‌, ಕಳಪೆ ಹಳಿ ದುರಸ್ತಿ ಬಗ್ಗೆ 6 ತಿಂಗಳಲ್ಲಿ 2 ಸಲ ಎಚ್ಚರಿಸಲಾಗಿತ್ತು: ವರದಿ

- Advertisement -
- Advertisement -

ಶುಕ್ರವಾರ ರಾತ್ರಿ ಘಟಿಸಿದ ಅತ್ಯಂತ ಭೀಕರ ರೈಲು ದುರಂತದಲ್ಲಿ ಕನಿಷ್ಠ 288 ಪ್ರಯಾಣಿಕರು ಸಾವನ್ನಪ್ಪಿ, 900ಕ್ಕೂ ಹೆಚ್ಚು ಮಂದಿ ಗಾಯಗೊಂಡರು. ಇಂತಹ ಘೋರ ದುರಂತ ಘಟಿಸುವ ಸೂಚನೆಯನ್ನು ಕಳೆದ ಆರು ತಿಂಗಳಲ್ಲಿ ಎರಡು ಬಾರಿ ನೀಡಲಾಗಿತ್ತು ಎಂಬ ಅಂಶ ಈಗ ಬೆಳಕಿಗೆ ಬಂದಿದೆ.

ರೈಲು ಹಳಿ ತಪ್ಪಲು ಕಾರಣವಾಗುವ ಸಿಗ್ನಲಿಂಗ್ ವ್ಯವಸ್ಥೆಯಲ್ಲಿನ ದೋಷಗಳ ಬಗ್ಗೆ ಕಳೆದ ಆರು ತಿಂಗಳಲ್ಲಿ ಎರಡು ಬಾರಿ ರೈಲ್ವೆ ಅಧಿಕಾರಿಗಳಿಗೆ ಎಚ್ಚರಿಕೆ ನೀಡಲಾಗಿತ್ತು ಎಂಬ ಅಂಶ ಈಗ ಬಯಲಾಗಿದೆ.

ಭಾರತದ ಕಂಟ್ರೋಲರ್ ಮತ್ತು ಆಡಿಟರ್ ಜನರಲ್ (ಸಿಎಜಿ) ಕಳೆದ ಡಿಸೆಂಬರ್‌ನಲ್ಲಿ ವರದಿಯನ್ನು ಮಂಡಿಸಿದ್ದರು. ರೈಲುಗಳು ತಪ್ಪಾದ ಹಳಿಯಲ್ಲಿ ಚಲಿಸಲು ಕಾರಣವಾಗುವ 24 ಅಂಶಗಳನ್ನು ವರದಿಯಲ್ಲಿ ಉಲ್ಲೇಖಿಸಲಾಗಿದೆ. ಏಪ್ರಿಲ್ 2017ರಿಂದ ಮಾರ್ಚ್ 2021ರ ನಡುವೆ ಎಷ್ಟು ರೈಲುಗಳು ತಪ್ಪಾದ ಹಳಿಯಲ್ಲಿ ಚಲಿಸಿವೆ, ಅದಕ್ಕೆ ಕಾರಣಗಳೇನು ಎಂಬುದನ್ನು “ಭಾರತೀಯ ರೈಲ್ವೇಯಲ್ಲಿನ ಹಳಿತಪ್ಪುವಿಕೆಗಳು” ವರದಿ ಪಟ್ಟಿ ಮಾಡಿದೆ. ಹಳಿಗಳ ಅಸಮರ್ಪಕ ನಿರ್ವಹಣೆಯೇ ಅಪಘಾತಗಳಿಗೆ ಪ್ರಮುಖ ಕಾರಣ ಎಂದು ವರದಿ ಎಚ್ಚರಿಸಿದೆ.

ಫೆಬ್ರವರಿಯಲ್ಲಿ ನಡೆದ ಪ್ರತ್ಯೇಕ ಬೆಳವಣಿಗೆಯೊಂದಕ್ಕೆ ಸಂಬಂಧಿಸಿದಂತೆ ನೈಋತ್ಯ ರೈಲ್ವೆ ವಲಯದ ಪ್ರಧಾನ ಮುಖ್ಯ ಕಾರ್ಯ ನಿರ್ವಾಹಕ ವ್ಯವಸ್ಥಾಪಕರು ಸಿಗ್ನಲಿಂಗ್ ವ್ಯವಸ್ಥೆಯಲ್ಲಿನ ‘ಗಂಭೀರ ನ್ಯೂನತೆ’ಗಳ ಬಗ್ಗೆ ಅಧಿಕಾರಿಗಳಿಗೆ ಪತ್ರ ಬರೆದಿದ್ದರು ಎಂದು ‘ದಿ ಪ್ರಿಂಟ್’ ವರದಿ ಮಾಡಿದೆ.

ಫೆಬ್ರುವರಿಯಲ್ಲಿ ಭೀಕರ ರೈಲು ಅಪಘಾತ ಕೂದಲೆಳೆಯಲ್ಲಿ ತಪ್ಪಿ ಹೋಗಿತ್ತು. ಎರಡು ರೈಲುಗಳು ಮುಖಾಮುಖಿ ಡಿಕ್ಕಿ ಹೊಡೆಯುವ ಸನ್ನಿವೇಶವೇ ನಿರ್ಮಾಣವಾಗಿತ್ತು. “ಸಿಗ್ನಲಿಂಗ್ ವ್ಯವಸ್ಥೆಯಲ್ಲಿನ ದೋಷಗಳನ್ನು ಸರಿಪಡಿಸದಿದ್ದರೆ, ಇಂತಹ ಘಟನೆಗಳು ಮರು ಕಳಿಸಬಹುದು ಮತ್ತು ಗಂಭೀರ ಅಪಘಾತಗಳಿಗೆ ಕಾರಣವಾಗಬಹುದು” ಎಂದು ಅಧಿಕಾರಿ ಎಚ್ಚರಿಸಿದ್ದರು.

ಶುಕ್ರವಾರ ರಾತ್ರಿ 7 ಗಂಟೆ ಸುಮಾರಿಗೆ ಒಡಿಶಾದ ಬಾಲಸೋರ್‌ನಲ್ಲಿ ಈಗ ಅಪಘಾತ ಸಂಭವಿಸಿದ್ದು, ತಪ್ಪಾದ ಹಳಿಯಲ್ಲಿ ಬಂದ ಕೋರ ಮಂಡಲ್ ಎಕ್ಸ್‌ಪ್ರೆಸ್ ಗೂಡ್ಸ್‌ ರೈಲಿಗೆ ಡಿಕ್ಕಿ ಹೊಡೆದಿದೆ. ಯಶವಂತಪುರ-ಹೌರಾ ಎಕ್ಸ್‌ಪ್ರೆಸ್‌ ರೈಲು ಕೂಡ ಹಳಿ ತಪ್ಪಿ, ಕೋರಮಂಡಲ್ ಎಕ್ಸ್ ಪ್ರೆಸ್ ಮಾರ್ಗದಲ್ಲಿ ಬಂದು ಡಿಕ್ಕಿ ಹೊಡೆದಿವೆ. ಮೂರು ರೈಲುಗಳು ಅಪಘಾತದೊಳಗೆ ಸಿಲುಕಿವೆ.

ಸಿಗ್ನಲಿಂಗ್ ವ್ಯವಸ್ಥೆಯಲ್ಲಿನ ವೈಫಲ್ಯದಿಂದ ಅಪಘಾತ ಸಂಭವಿಸಿರಬಹುದು ಎಂದು ಆರಂಭಿಕ ತನಿಖೆಯಿಂದ ತಿಳಿದುಬಂದಿದೆ ಎಂದು ‘ದಿ ಹಿಂದೂ’ ವರದಿ ಮಾಡಿದೆ. ಮೇಲ್ಮುಖ ಮಾರ್ಗದಲ್ಲಿ ಪ್ರವೇಶಿಸುವಂತೆ ಕೋರಮಂಡಲ್ ಎಕ್ಸ್‌ಪ್ರೆಸ್‌ಗೆ ಆರಂಭದಲ್ಲಿ ಗ್ರೀನ್ ಸಿಗ್ನಲ್ ನೀಡಲಾಗಿತ್ತು. ಆದರೆ ನಂತರ ಸಿಗ್ನಲ್ ತೆಗೆಯಲಾಯಿತು. ಬಳಿಕ ಎಕ್ಸ್‌ಪ್ರೆಸ್‌ ಲೂಪ್ ಲೈನ್‌ಗೆ ಪ್ರವೇಶಿಸಿತು. ಅಲ್ಲಿ ನಿಂತಿದ್ದ ಗೂಡ್ಸ್‌ ರೈಲು ಗಾಡಿಗೆ ಡಿಕ್ಕಿ ಹೊಡೆಯಿತು ಎಂಬುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

ಸಿಗ್ನಲಿಂಗ್‌ನಲ್ಲಿನ ದೋಷಗಳ ಬಗ್ಗೆ ಪತ್ರ

ಯಶವಂತಪುರ-ಹಜರತ್ ನಿಜಾಮುದ್ದೀನ್ ಸಂಪರ್ಕ ಕ್ರಾಂತಿ ಎಕ್ಸ್‌ಪ್ರೆಸ್ ರೈಲು ಗಾಡಿಯು ಗೂಡ್ಸ್ ರೈಲಿಗೆ ಡಿಕ್ಕಿಯಾಗುವ ಅಪಾಯದಿಂದ ಕೂದಲೆಳೆಯಲ್ಲಿ ಪಾರಾದ ನಂತರ ನೈಋತ್ಯ ರೈಲ್ವೆ ವಲಯದ ಪ್ರಧಾನ ಮುಖ್ಯ ಕಾರ್ಯ ನಿರ್ವಾಹಕ ವ್ಯವಸ್ಥಾಪಕರು ಫೆಬ್ರವರಿ 9 ರಂದು ಉನ್ನತ  ಅಧಿಕಾರಿಗಳಿಗೆ ಪತ್ರ ಬರೆದಿದ್ದಾರೆ ಎಂದು ‘ದಿ ಪ್ರಿಂಟ್’ ವರದಿ ತಿಳಿಸಿದೆ.

“ಎಸ್‌ಎಂಎಸ್‌ (ಸಿಗ್ನಲ್ ನಿರ್ವಹಣಾ ವ್ಯವಸ್ಥೆ)ನಲ್ಲಿ ಗಂಭೀರ ದೋಷಗಳಿವೆ” ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಮೇಲಿನ ಘಟನೆಯಲ್ಲಿ ಏನಾಗಿತ್ತೆಂದರೆ, ಸಂಪರ್ಕ ಕ್ರಾಂತಿ ಎಕ್ಸ್‌ಪ್ರೆಸ್‌ಗೆ ಕರ್ನಾಟಕದ ಹೊಸದುರ್ಗ ರಸ್ತೆ ನಿಲ್ದಾಣದ ಬಳಿ ಡೌನ್‌ಲೈನ್‌ಗೆ ಪ್ರವೇಶಿಸುವಂತೆ ಸಿಗ್ನಲಿಂಗ್ ವ್ಯವಸ್ಥೆಯು ತಪ್ಪಾಗಿ ಅನುಮತಿ ನೀಡಿತ್ತು. ಗೂಡ್ಸ್ ರೈಲಿಗೆ ಮುಖಾಮುಖಿ ಡಿಕ್ಕಿಯಾಗುವ ಅಪಾಯವು ‘ಲೋಕೋ ಪೈಲಟ್‌ನ ಎಚ್ಚರಿಕೆ’ಯಿಂದಾಗಿ ತಪ್ಪಿತ್ತು. ಮಾರ್ಗವನ್ನು ಪ್ರವೇಶಿಸುವ ಮೊದಲೇ ಎಚ್ಚೆತ್ತುಕೊಂಡು ಅಪಾಯವನ್ನು ತಡೆದಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಹಳಿತಪ್ಪಿದ ಬಗ್ಗೆ ಸಿಎಜಿ ವರದಿ

ಏಪ್ರಿಲ್ 2017 ಮತ್ತು ಮಾರ್ಚ್ 2021ರ ನಡುವೆ ಹಳಿತಪ್ಪುವಿಕೆಯಿಂದ ಸಂಭವಿಸಿದ ಅಪಘಾತಗಳ 1,129 ವಿಚಾರಣೆಗಳನ್ನು ಸಿಎಜಿ (ಕಂಟ್ರೋಲರ್ ಮತ್ತು ಆಡಿಟರ್ ಜನರಲ್) ವರದಿ ಮಾಡಿದೆ.

ಸಿಎಜಿ ವರದಿಯು ಹಲವಾರು ಅಂಶಗಳತ್ತ ಬೊಟ್ಟು ಮಾಡಿದೆ. ರಾಷ್ಟ್ರೀಯ ರೈಲು ಸಂರಕ್ಷಣಾ ಕೋಶ್‌ನ ಆದ್ಯತಾ-1ರ ಕಾಮಗಾರಿ ವೆಚ್ಚದಲ್ಲಿ ಕಡಿತವಾಗಿರುವುದನ್ನು ವರದಿ ಉಲ್ಲೇಖಿಸಿದೆ. ಈ ವೆಚ್ಚವು 2017-18 ರಲ್ಲಿ 81.55% ಇತ್ತು. 2019-20ರಲ್ಲಿ 73.76%ಕ್ಕೆ ಇಳಿಕೆಯಾಗಿದೆ ಎಂದು ತಿಳಿಸಿದೆ.

ಇದನ್ನೂ ಓದಿರಿ: ಇತ್ತೀಚಿನ ವರ್ಷಗಳಲ್ಲಿ ಭಾರತ ಕಂಡ ಭೀಕರ ರೈಲು ದುರಂತಗಳಿವು

ರೈಲ್ವೇ ಸಚಿವಾಲಯವು 2017-18 ರಿಂದ ಐದು ವರ್ಷಗಳ ಅವಧಿಯಲ್ಲಿ ‘ರಾಷ್ಟ್ರೀಯ ರೈಲು ಸಂರಕ್ಷಾ ಕೋಶ್ – ರೈಲು ಸುರಕ್ಷತೆ’ಗಾಗಿ ಮೀಸಲು ನಿಧಿಗೆ 1 ಲಕ್ಷ ಕೋಟಿ ರೂ.ಗಳ ಹಂಚಿಕೆಯನ್ನು ಘೋಷಿಸಿತ್ತು.

ಟ್ರ್ಯಾಕ್ ನವೀಕರಣ ನಿಧಿಯು 2018-19ರಲ್ಲಿ 9,607.65 ಕೋಟಿ ರೂ. ಇತ್ತು. 2019-20ರಲ್ಲಿ 7,417 ಕೋಟಿ ರೂ.ಗಳಿಗೆ ಆ ನಿಧಿಯನ್ನು ಇಳಿಸಲಾಗಿದೆ ಎಂಬುದನ್ನು ಸಿಎಜಿ ವರದಿ ಉಲ್ಲೇಖಿಸಿದೆ. ನಿಗದಿಪಡಿಸಿದ ಹಣವೂ ಪೂರ್ಣ ಪ್ರಮಾಣದಲ್ಲಿ ಬಳಕೆಯಾಗಿಲ್ಲ ಎಂದೂ ಆಕ್ಷೇಪ ವ್ಯಕ್ತಪಡಿಸಿದೆ.

ಹಳಿ ತಪ್ಪಿದ ಘಟನೆಗಳ ಶೇ. 63ರಷ್ಟು ಪ್ರಕರಣಗಳಲ್ಲಿ, ತನಿಖಾ ವರದಿಗಳನ್ನು ನಿಗದಿತ ಸಮಯದೊಳಗೆ ಸಲ್ಲಿಸಲಾಗಿಲ್ಲ. ಶೇ.49ರಷ್ಟು ಪ್ರಕರಣಗಳಲ್ಲಿ ವರದಿಯನ್ನು ಸ್ವೀಕರಿಸುವಲ್ಲಿ ಅಧಿಕಾರಿಗಳಿಂದ ವಿಳಂಬವಾಗಿದೆ ಎಂಬುದನ್ನು ಸಿಎಜಿ ವರದಿ ಬಹಿರಂಗಪಡಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...