Homeಮುಖಪುಟದೋಷಪೂರಿತ ರೈಲ್ವೆ ಸಿಗ್ನಲ್‌, ಕಳಪೆ ಹಳಿ ದುರಸ್ತಿ ಬಗ್ಗೆ 6 ತಿಂಗಳಲ್ಲಿ 2 ಸಲ ಎಚ್ಚರಿಸಲಾಗಿತ್ತು:...

ದೋಷಪೂರಿತ ರೈಲ್ವೆ ಸಿಗ್ನಲ್‌, ಕಳಪೆ ಹಳಿ ದುರಸ್ತಿ ಬಗ್ಗೆ 6 ತಿಂಗಳಲ್ಲಿ 2 ಸಲ ಎಚ್ಚರಿಸಲಾಗಿತ್ತು: ವರದಿ

- Advertisement -
- Advertisement -

ಶುಕ್ರವಾರ ರಾತ್ರಿ ಘಟಿಸಿದ ಅತ್ಯಂತ ಭೀಕರ ರೈಲು ದುರಂತದಲ್ಲಿ ಕನಿಷ್ಠ 288 ಪ್ರಯಾಣಿಕರು ಸಾವನ್ನಪ್ಪಿ, 900ಕ್ಕೂ ಹೆಚ್ಚು ಮಂದಿ ಗಾಯಗೊಂಡರು. ಇಂತಹ ಘೋರ ದುರಂತ ಘಟಿಸುವ ಸೂಚನೆಯನ್ನು ಕಳೆದ ಆರು ತಿಂಗಳಲ್ಲಿ ಎರಡು ಬಾರಿ ನೀಡಲಾಗಿತ್ತು ಎಂಬ ಅಂಶ ಈಗ ಬೆಳಕಿಗೆ ಬಂದಿದೆ.

ರೈಲು ಹಳಿ ತಪ್ಪಲು ಕಾರಣವಾಗುವ ಸಿಗ್ನಲಿಂಗ್ ವ್ಯವಸ್ಥೆಯಲ್ಲಿನ ದೋಷಗಳ ಬಗ್ಗೆ ಕಳೆದ ಆರು ತಿಂಗಳಲ್ಲಿ ಎರಡು ಬಾರಿ ರೈಲ್ವೆ ಅಧಿಕಾರಿಗಳಿಗೆ ಎಚ್ಚರಿಕೆ ನೀಡಲಾಗಿತ್ತು ಎಂಬ ಅಂಶ ಈಗ ಬಯಲಾಗಿದೆ.

ಭಾರತದ ಕಂಟ್ರೋಲರ್ ಮತ್ತು ಆಡಿಟರ್ ಜನರಲ್ (ಸಿಎಜಿ) ಕಳೆದ ಡಿಸೆಂಬರ್‌ನಲ್ಲಿ ವರದಿಯನ್ನು ಮಂಡಿಸಿದ್ದರು. ರೈಲುಗಳು ತಪ್ಪಾದ ಹಳಿಯಲ್ಲಿ ಚಲಿಸಲು ಕಾರಣವಾಗುವ 24 ಅಂಶಗಳನ್ನು ವರದಿಯಲ್ಲಿ ಉಲ್ಲೇಖಿಸಲಾಗಿದೆ. ಏಪ್ರಿಲ್ 2017ರಿಂದ ಮಾರ್ಚ್ 2021ರ ನಡುವೆ ಎಷ್ಟು ರೈಲುಗಳು ತಪ್ಪಾದ ಹಳಿಯಲ್ಲಿ ಚಲಿಸಿವೆ, ಅದಕ್ಕೆ ಕಾರಣಗಳೇನು ಎಂಬುದನ್ನು “ಭಾರತೀಯ ರೈಲ್ವೇಯಲ್ಲಿನ ಹಳಿತಪ್ಪುವಿಕೆಗಳು” ವರದಿ ಪಟ್ಟಿ ಮಾಡಿದೆ. ಹಳಿಗಳ ಅಸಮರ್ಪಕ ನಿರ್ವಹಣೆಯೇ ಅಪಘಾತಗಳಿಗೆ ಪ್ರಮುಖ ಕಾರಣ ಎಂದು ವರದಿ ಎಚ್ಚರಿಸಿದೆ.

ಫೆಬ್ರವರಿಯಲ್ಲಿ ನಡೆದ ಪ್ರತ್ಯೇಕ ಬೆಳವಣಿಗೆಯೊಂದಕ್ಕೆ ಸಂಬಂಧಿಸಿದಂತೆ ನೈಋತ್ಯ ರೈಲ್ವೆ ವಲಯದ ಪ್ರಧಾನ ಮುಖ್ಯ ಕಾರ್ಯ ನಿರ್ವಾಹಕ ವ್ಯವಸ್ಥಾಪಕರು ಸಿಗ್ನಲಿಂಗ್ ವ್ಯವಸ್ಥೆಯಲ್ಲಿನ ‘ಗಂಭೀರ ನ್ಯೂನತೆ’ಗಳ ಬಗ್ಗೆ ಅಧಿಕಾರಿಗಳಿಗೆ ಪತ್ರ ಬರೆದಿದ್ದರು ಎಂದು ‘ದಿ ಪ್ರಿಂಟ್’ ವರದಿ ಮಾಡಿದೆ.

ಫೆಬ್ರುವರಿಯಲ್ಲಿ ಭೀಕರ ರೈಲು ಅಪಘಾತ ಕೂದಲೆಳೆಯಲ್ಲಿ ತಪ್ಪಿ ಹೋಗಿತ್ತು. ಎರಡು ರೈಲುಗಳು ಮುಖಾಮುಖಿ ಡಿಕ್ಕಿ ಹೊಡೆಯುವ ಸನ್ನಿವೇಶವೇ ನಿರ್ಮಾಣವಾಗಿತ್ತು. “ಸಿಗ್ನಲಿಂಗ್ ವ್ಯವಸ್ಥೆಯಲ್ಲಿನ ದೋಷಗಳನ್ನು ಸರಿಪಡಿಸದಿದ್ದರೆ, ಇಂತಹ ಘಟನೆಗಳು ಮರು ಕಳಿಸಬಹುದು ಮತ್ತು ಗಂಭೀರ ಅಪಘಾತಗಳಿಗೆ ಕಾರಣವಾಗಬಹುದು” ಎಂದು ಅಧಿಕಾರಿ ಎಚ್ಚರಿಸಿದ್ದರು.

ಶುಕ್ರವಾರ ರಾತ್ರಿ 7 ಗಂಟೆ ಸುಮಾರಿಗೆ ಒಡಿಶಾದ ಬಾಲಸೋರ್‌ನಲ್ಲಿ ಈಗ ಅಪಘಾತ ಸಂಭವಿಸಿದ್ದು, ತಪ್ಪಾದ ಹಳಿಯಲ್ಲಿ ಬಂದ ಕೋರ ಮಂಡಲ್ ಎಕ್ಸ್‌ಪ್ರೆಸ್ ಗೂಡ್ಸ್‌ ರೈಲಿಗೆ ಡಿಕ್ಕಿ ಹೊಡೆದಿದೆ. ಯಶವಂತಪುರ-ಹೌರಾ ಎಕ್ಸ್‌ಪ್ರೆಸ್‌ ರೈಲು ಕೂಡ ಹಳಿ ತಪ್ಪಿ, ಕೋರಮಂಡಲ್ ಎಕ್ಸ್ ಪ್ರೆಸ್ ಮಾರ್ಗದಲ್ಲಿ ಬಂದು ಡಿಕ್ಕಿ ಹೊಡೆದಿವೆ. ಮೂರು ರೈಲುಗಳು ಅಪಘಾತದೊಳಗೆ ಸಿಲುಕಿವೆ.

ಸಿಗ್ನಲಿಂಗ್ ವ್ಯವಸ್ಥೆಯಲ್ಲಿನ ವೈಫಲ್ಯದಿಂದ ಅಪಘಾತ ಸಂಭವಿಸಿರಬಹುದು ಎಂದು ಆರಂಭಿಕ ತನಿಖೆಯಿಂದ ತಿಳಿದುಬಂದಿದೆ ಎಂದು ‘ದಿ ಹಿಂದೂ’ ವರದಿ ಮಾಡಿದೆ. ಮೇಲ್ಮುಖ ಮಾರ್ಗದಲ್ಲಿ ಪ್ರವೇಶಿಸುವಂತೆ ಕೋರಮಂಡಲ್ ಎಕ್ಸ್‌ಪ್ರೆಸ್‌ಗೆ ಆರಂಭದಲ್ಲಿ ಗ್ರೀನ್ ಸಿಗ್ನಲ್ ನೀಡಲಾಗಿತ್ತು. ಆದರೆ ನಂತರ ಸಿಗ್ನಲ್ ತೆಗೆಯಲಾಯಿತು. ಬಳಿಕ ಎಕ್ಸ್‌ಪ್ರೆಸ್‌ ಲೂಪ್ ಲೈನ್‌ಗೆ ಪ್ರವೇಶಿಸಿತು. ಅಲ್ಲಿ ನಿಂತಿದ್ದ ಗೂಡ್ಸ್‌ ರೈಲು ಗಾಡಿಗೆ ಡಿಕ್ಕಿ ಹೊಡೆಯಿತು ಎಂಬುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

ಸಿಗ್ನಲಿಂಗ್‌ನಲ್ಲಿನ ದೋಷಗಳ ಬಗ್ಗೆ ಪತ್ರ

ಯಶವಂತಪುರ-ಹಜರತ್ ನಿಜಾಮುದ್ದೀನ್ ಸಂಪರ್ಕ ಕ್ರಾಂತಿ ಎಕ್ಸ್‌ಪ್ರೆಸ್ ರೈಲು ಗಾಡಿಯು ಗೂಡ್ಸ್ ರೈಲಿಗೆ ಡಿಕ್ಕಿಯಾಗುವ ಅಪಾಯದಿಂದ ಕೂದಲೆಳೆಯಲ್ಲಿ ಪಾರಾದ ನಂತರ ನೈಋತ್ಯ ರೈಲ್ವೆ ವಲಯದ ಪ್ರಧಾನ ಮುಖ್ಯ ಕಾರ್ಯ ನಿರ್ವಾಹಕ ವ್ಯವಸ್ಥಾಪಕರು ಫೆಬ್ರವರಿ 9 ರಂದು ಉನ್ನತ  ಅಧಿಕಾರಿಗಳಿಗೆ ಪತ್ರ ಬರೆದಿದ್ದಾರೆ ಎಂದು ‘ದಿ ಪ್ರಿಂಟ್’ ವರದಿ ತಿಳಿಸಿದೆ.

“ಎಸ್‌ಎಂಎಸ್‌ (ಸಿಗ್ನಲ್ ನಿರ್ವಹಣಾ ವ್ಯವಸ್ಥೆ)ನಲ್ಲಿ ಗಂಭೀರ ದೋಷಗಳಿವೆ” ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಮೇಲಿನ ಘಟನೆಯಲ್ಲಿ ಏನಾಗಿತ್ತೆಂದರೆ, ಸಂಪರ್ಕ ಕ್ರಾಂತಿ ಎಕ್ಸ್‌ಪ್ರೆಸ್‌ಗೆ ಕರ್ನಾಟಕದ ಹೊಸದುರ್ಗ ರಸ್ತೆ ನಿಲ್ದಾಣದ ಬಳಿ ಡೌನ್‌ಲೈನ್‌ಗೆ ಪ್ರವೇಶಿಸುವಂತೆ ಸಿಗ್ನಲಿಂಗ್ ವ್ಯವಸ್ಥೆಯು ತಪ್ಪಾಗಿ ಅನುಮತಿ ನೀಡಿತ್ತು. ಗೂಡ್ಸ್ ರೈಲಿಗೆ ಮುಖಾಮುಖಿ ಡಿಕ್ಕಿಯಾಗುವ ಅಪಾಯವು ‘ಲೋಕೋ ಪೈಲಟ್‌ನ ಎಚ್ಚರಿಕೆ’ಯಿಂದಾಗಿ ತಪ್ಪಿತ್ತು. ಮಾರ್ಗವನ್ನು ಪ್ರವೇಶಿಸುವ ಮೊದಲೇ ಎಚ್ಚೆತ್ತುಕೊಂಡು ಅಪಾಯವನ್ನು ತಡೆದಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಹಳಿತಪ್ಪಿದ ಬಗ್ಗೆ ಸಿಎಜಿ ವರದಿ

ಏಪ್ರಿಲ್ 2017 ಮತ್ತು ಮಾರ್ಚ್ 2021ರ ನಡುವೆ ಹಳಿತಪ್ಪುವಿಕೆಯಿಂದ ಸಂಭವಿಸಿದ ಅಪಘಾತಗಳ 1,129 ವಿಚಾರಣೆಗಳನ್ನು ಸಿಎಜಿ (ಕಂಟ್ರೋಲರ್ ಮತ್ತು ಆಡಿಟರ್ ಜನರಲ್) ವರದಿ ಮಾಡಿದೆ.

ಸಿಎಜಿ ವರದಿಯು ಹಲವಾರು ಅಂಶಗಳತ್ತ ಬೊಟ್ಟು ಮಾಡಿದೆ. ರಾಷ್ಟ್ರೀಯ ರೈಲು ಸಂರಕ್ಷಣಾ ಕೋಶ್‌ನ ಆದ್ಯತಾ-1ರ ಕಾಮಗಾರಿ ವೆಚ್ಚದಲ್ಲಿ ಕಡಿತವಾಗಿರುವುದನ್ನು ವರದಿ ಉಲ್ಲೇಖಿಸಿದೆ. ಈ ವೆಚ್ಚವು 2017-18 ರಲ್ಲಿ 81.55% ಇತ್ತು. 2019-20ರಲ್ಲಿ 73.76%ಕ್ಕೆ ಇಳಿಕೆಯಾಗಿದೆ ಎಂದು ತಿಳಿಸಿದೆ.

ಇದನ್ನೂ ಓದಿರಿ: ಇತ್ತೀಚಿನ ವರ್ಷಗಳಲ್ಲಿ ಭಾರತ ಕಂಡ ಭೀಕರ ರೈಲು ದುರಂತಗಳಿವು

ರೈಲ್ವೇ ಸಚಿವಾಲಯವು 2017-18 ರಿಂದ ಐದು ವರ್ಷಗಳ ಅವಧಿಯಲ್ಲಿ ‘ರಾಷ್ಟ್ರೀಯ ರೈಲು ಸಂರಕ್ಷಾ ಕೋಶ್ – ರೈಲು ಸುರಕ್ಷತೆ’ಗಾಗಿ ಮೀಸಲು ನಿಧಿಗೆ 1 ಲಕ್ಷ ಕೋಟಿ ರೂ.ಗಳ ಹಂಚಿಕೆಯನ್ನು ಘೋಷಿಸಿತ್ತು.

ಟ್ರ್ಯಾಕ್ ನವೀಕರಣ ನಿಧಿಯು 2018-19ರಲ್ಲಿ 9,607.65 ಕೋಟಿ ರೂ. ಇತ್ತು. 2019-20ರಲ್ಲಿ 7,417 ಕೋಟಿ ರೂ.ಗಳಿಗೆ ಆ ನಿಧಿಯನ್ನು ಇಳಿಸಲಾಗಿದೆ ಎಂಬುದನ್ನು ಸಿಎಜಿ ವರದಿ ಉಲ್ಲೇಖಿಸಿದೆ. ನಿಗದಿಪಡಿಸಿದ ಹಣವೂ ಪೂರ್ಣ ಪ್ರಮಾಣದಲ್ಲಿ ಬಳಕೆಯಾಗಿಲ್ಲ ಎಂದೂ ಆಕ್ಷೇಪ ವ್ಯಕ್ತಪಡಿಸಿದೆ.

ಹಳಿ ತಪ್ಪಿದ ಘಟನೆಗಳ ಶೇ. 63ರಷ್ಟು ಪ್ರಕರಣಗಳಲ್ಲಿ, ತನಿಖಾ ವರದಿಗಳನ್ನು ನಿಗದಿತ ಸಮಯದೊಳಗೆ ಸಲ್ಲಿಸಲಾಗಿಲ್ಲ. ಶೇ.49ರಷ್ಟು ಪ್ರಕರಣಗಳಲ್ಲಿ ವರದಿಯನ್ನು ಸ್ವೀಕರಿಸುವಲ್ಲಿ ಅಧಿಕಾರಿಗಳಿಂದ ವಿಳಂಬವಾಗಿದೆ ಎಂಬುದನ್ನು ಸಿಎಜಿ ವರದಿ ಬಹಿರಂಗಪಡಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...