Homeಮುಖಪುಟ‘ಖಂಡಿತವಾಗಿಯೂ LDF’- ಕೇರಳ ಚುನಾವಣೆಗೆ ಎಡಪಕ್ಷಗಳ ಘೋಷವಾಕ್ಯ

‘ಖಂಡಿತವಾಗಿಯೂ LDF’- ಕೇರಳ ಚುನಾವಣೆಗೆ ಎಡಪಕ್ಷಗಳ ಘೋಷವಾಕ್ಯ

- Advertisement -
- Advertisement -

ಕೇರಳದಲ್ಲಿ ಮುಂದಿನ ಎಪ್ರಿಲ್ 6 ರಂದು ವಿಧಾನಸಭಾ ಚುನಾವಣೆ ನಡೆಯಲಿದ್ದು, ಅಲ್ಲಿನ ಆಡಳಿತರೂಢ ಎಡಪಕ್ಷಗಳ ಚುನಾವಣಾ ಅಭಿಯಾನದ ಘೋಷಣೆ “ಖಂಡಿತವಾಗಿಯೂ, ಎಲ್‌ಡಿಎಫ್‌” ಎಂಬುದಾಗಿದೆ. ಈ ಅಭಿಯಾನಕ್ಕೆ ಒಂದು ಸ್ಟಾರ್‌ ಪ್ರಚಾರಕರಿದ್ದರೆ ಅದು, “ಖಂಡಿತವಾಗಿಯೂ” ಪಿಣರಾಯಿ ವಿಜಯನ್ ಆಗಿದ್ದಾರೆ ಎನ್ನಲಾಗಿದೆ.

75 ರ ಹರೆಯದ ಪಿಣರಾಯಿ ವಿಜಯನ್ ಧರ್ಮಡಂನಲ್ಲಿ ಪ್ರಚಾರವನ್ನು ಈಗಾಗಲೇ ಪ್ರಾರಂಭಿಸಿದ್ದಾರೆ. ‘ದಿ ಕ್ಯಾಪ್ಟನ್’ ಎಂದು ಅವರನ್ನು ಉಲ್ಲೇಖಿಸಿ ಬೃಹತ್‌ ಗಾತ್ರದ ಕಟೌಟ್‌ಗಳನ್ನು ಅಲ್ಲಲ್ಲಿ ಹಾಕಲಾಗಿದೆ. ಎಡಪಕ್ಷಗಳ ಪರವಾಗಿರುವ ಘೋಷಣೆಗಳು, ಅಭಿವೃದ್ಧಿ ಯೋಜನೆಗಳು, ಕೊರೊನಾ ಕಾಲದಲ್ಲಿ ಜಾರಿಗೆ ತಂದಿರುವ ಪಿಂಚಣಿ, ಪಡಿತರ ಸೇರಿದಂತೆ ಇತರ ಕಲ್ಯಾಣ ಯೋಜನೆಗಳನ್ನು ಚುನಾವಣಾ ಅಭಿಯಾನಗಳಲ್ಲಿ ಬಳಸಲಾಗುತ್ತಿದೆ.

ಇದನ್ನೂ ಓದಿ: ಸಿಎಎ ಜಾರಿ ಮಾಡುವುದಿಲ್ಲ: ಅಮಿತ್ ಶಾಗೆ ಸ್ಪಷ್ಟ ಉತ್ತರ ನೀಡಿದ ಕೇರಳ ಮುಖ್ಯಮಂತ್ರಿ

ಪಿಣರಾಯಿ ವಿಜಯನ್‌ರ ಮುಖವು ಈ ಬಾರಿ ಕೇರಳದಲ್ಲಿ ಖಂಡಿತವಾಗಿಯೂ ಕೆಲಸ ಮಾಡಲಿದೆ ಎಂದು ಚುನಾವಣಾ ವಿಶ್ಲೇಷಕರ ಅಭಿಪ್ರಾಯವಾಗಿದೆ. 1939 ರಲ್ಲಿ ಕಮ್ಯುನಿಸ್ಟ್ ಪಕ್ಷವು ಕೇರಳದಲ್ಲಿ ಮೊದಲ ಸಭೆ ನಡೆಸಿದ ಪರಪ್ರಂ ಗ್ರಾಮ ಸೇರಿದಂತೆ ಧರ್ಮಡಂ ಕ್ಷೇತ್ರವು ಎಡಪಕ್ಷಗಳ ಭದ್ರ ಕೋಟೆಯಾಗಿದೆ. ಇಲ್ಲಿ ಪಿಣರಾಯಿ ವಿಜಯನ್ ಕಳೆದ ಬಾರಿ ಕಾಂಗ್ರೆಸ್ ಅಭ್ಯರ್ಥಿ ಮಂಬರಂ ದಿವಾಕರನ್‌ ವಿರುದ್ಧ 36,000 ಮತಗಳಿಂದ ಜಯ ಗಳಿಸಿದ್ದರು.

ಧರ್ಮಡಂನಲ್ಲಿ ಕಾಂಗ್ರೆಸ್ ನೇತೃತ್ವದ ಯುಡಿಎಫ್‌ನಿಂದ‌ ಸ್ಪರ್ಧಿಸುತ್ತಿರುವ ಅಭ್ಯರ್ಥಿಯ ಆಯ್ಕೆ ಇದುವರೆಗೂ ನಡೆದಿಲ್ಲ. ಆದ್ದರಿಂದ ಮುಖ್ಯಮಂತ್ರಿಯ ಕೆಲಸ ಇನ್ನೂ ಸುಲಭವಾದಂತಾಗಿದೆ. ಬಿಜೆಪಿಯಿಂದ ಸ್ಪರ್ಧಿಸುತ್ತಿರುವ ಸಿ.ಕೆ. ಪದ್ಮನಾಭನ್ ತನ್ನ ಪ್ರಚಾರ ಕಾರ್ಯವನ್ನು ಇನ್ನೂ ಪ್ರಾರಂಭಿಸಿಲ್ಲ.

ಜಿಲ್ಲೆಯ ಪೊಟ್ಟಂಪರಾ ಗ್ರಾಮದಲ್ಲಿರುವ ಕಾಂಗ್ರೆಸ್ ಕಚೇರಿಯು ಪಕ್ಷವು ಇಲ್ಲಿ ಎದುರಿಸುತ್ತಿರುವ ಬಿಕ್ಕಟ್ಟಿನ ಕಥೆಯನ್ನು ಹೇಳುತ್ತದೆ. ಕಟ್ಟಡ ಸುತ್ತ ಕಳೆ ಗಿಡಗಳು ಅತಿಕ್ರಮಿಸಿದ್ದು, ಇದನ್ನು ತಿಂಗಳುಗಳಿಂದ ಮುಚ್ಚಲಾಗಿದೆ.

ಇದನ್ನೂ ಓದಿ: ಕೇರಳ – ಈಗ ಚುನಾವಣೆ ನಡೆದರೂ ಕಮ್ಯುನಿಷ್ಟ್ ಸರ್ಕಾರ ಮತ್ತೆ ಅಧಿಕಾರಕ್ಕೆ!

ಬುಧವಾರ ತಮ್ಮ ಕಚೇರಿಯ ಹಿಂದಿರುವ ಮೈದಾನದಲ್ಲಿ ನಡೆದ ಸಭೆಗೆ ಪಿಣರಾಯಿ ವಿಜಯನ್ ಆಗಮಿಸಿದ್ದರು. ಅವರು ಆಗಮಿಸುತ್ತಿದ್ದಂತೆ ಅಲ್ಲಿರುವ ಕಾರ್ಯಕರ್ತರು ಅವರನ್ನು ಘೋಷಣೆಗಳ ಮೂಲಕ ಸ್ವಾಗತಿಸಿದ್ದಾರೆ. ತಕ್ಷಣ ವೇದಿಕೆಯಲ್ಲಿ ಭಾಷಣ ಮಾಡುತ್ತಿದ್ದ ಮುಖಂಡ ಮಾತು ನಿಲ್ಲಿಸಿ, ಮುಖ್ಯಮಂತ್ರಿಗೆ ವೇದಿಕೆಯನ್ನು ಬಿಟ್ಟು ಕೊಟ್ಟಿದ್ದಾರೆ. ನಂತರ ಪಿಣರಾಯಿ ಅಲ್ಲಿ ನರೆದಿರುವ ಜನರನ್ನು ಉದ್ದೇಶಿಸಿ ಅವರದೇ ವಿಶೇಷ ಶೈಲಿಯಲ್ಲಿ ಮಾತನಾಡಿದ್ದಾರೆ.

ಪಿಣರಾಯಿ ತಮ್ಮ ಸರ್ಕಾರದ ವಿರುದ್ಧ ಪ್ರತಿಪಕ್ಷಗಳು ಆರೋಪಿಸುತ್ತಿರುವ ಹಗರಣಗಳನ್ನು ಸಮರ್ಥಿಸುವ ಯಾವುದೆ ಮಾತುಗಳನ್ನು ಆಡದೆ, ಬಿಜೆಪಿ ಮತ್ತು ಯುಡಿಎಫ್ ಸುಳ್ಳು ಹೇಳುತ್ತಿದೆ ಎಂದು ಹೇಳುತ್ತಾ, “ಒಂದು ವಿಷಯ ನಿಶ್ಚಿತ, ನಿಮ್ಮ ನಂಬಿಕೆಗೆ ಧಕ್ಕೆ ತರುವಂತಹ ಯಾವುದನ್ನೂ ನಾವು ಮಾಡಿಲ್ಲ” ಎಂದು ಅವರು ಒತ್ತಿ ಹೇಳಿದ್ದಾರೆ.

ಕೇರಳದ ವಿಧಾನಸಭಾ ಚುನಾವಣೆಯನ್ನು ದೇಶಾದ್ಯಂತ ಅತ್ಯಂತ ಕುತೂಹಲದಿಂದ ವೀಕ್ಷಿಸಲಾಗುತ್ತಿದೆ. “ಜಾತ್ಯತೀತತೆಯನ್ನು ಚೂರುಚೂರು ಮಾಡಲು ಪ್ರಯತ್ನಿಸುತ್ತಿರುವ ಪಡೆಗಳು ತನ್ನ ಪ್ರಭಾವವನ್ನು ಹೆಚ್ಚಿಸಿಕೊಳ್ಳುತ್ತಿವೆ. ಆದರೆ ಎಡಪಕ್ಷಗಳು ಜಾತ್ಯತೀತತೆ ಬಗ್ಗೆ ರಾಜಿಯಾಗುವುದಿಲ್ಲ. ಕಾಂಗ್ರೆಸ್ ಮತ್ತು ಬಿಜೆಪಿ ಜಾಗತೀಕರಣದ ಪ್ರತಿಪಾದಕರು. ದೇಶದಲ್ಲಿನ ಎಡಪಕ್ಷಗಳ ಏಕೈಕ ದ್ವೀಪವಾಗಿದೆ ಕೇರಳ” ಎಂದು ಪಿಣರಾಯಿ ತಮ್ಮ ಭಾಷಣಗಳಲ್ಲಿ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ: ಕೇರಳ ಬಿಜೆಪಿ ರೈಲಿನಲ್ಲಿ ಮೆಟ್ರೋಮ್ಯಾನ್: ಪ್ಯಾಸೆಂಜರ್‌ಗಳಿಲ್ಲ, ರೆಡ್ ಸಿಗ್ನಲ್‌ಗಳೇ ಎಲ್ಲ!

ಪರಪ್ರಂನಲ್ಲಿ ಉಚಿತ ಪಡಿತರ ಪಡೆಯಲು ನಿಂತಿರುವ ಹಿರಿಯ ಮಹಿಳೆ ಯಶೋಧ, “ನಾನು ಮತ್ತೆ ಕೇರಳದಲ್ಲಿ ಪಿಣರಾಯಿ ವಿಜಯನ್ ಸರ್ಕಾರ ಅಧಿಕಾರಕ್ಕೆ ಬರಲಿ ಎಂದು ಬಯಸುತ್ತೇನೆ. ಈ ಉಚಿತ ಪಡಿತರ ಕಿಟ್ ನಮಗೆ ಒಂದು ತಿಂಗಳು ಸಾಕಾಗುತ್ತದೆ. ಪಿಣರಾಯಿ ವಿಜಯನ್ ಹೆಚ್ಚಿಸಿದ ವಿಧವಾ ಪಿಂಚಣಿ 1600 ರೂಪಾಯಿ ನನಗೆ ಸಿಗುತ್ತಿದೆ. ಕಳೆದ ತಿಂಗಳು ನಾನು ಉದ್ಯೋಗ ಖಾತ್ರಿ ಯೋಜನೆಯ ನೂರು ದಿನಗಳ ಕೆಲಸವನ್ನು ಪೂರೈಸಿದೆ” ಎನ್ನುತ್ತಾರೆ.

ಕ್ಷೇತ್ರದಲ್ಲಿ ಎಡಪಕ್ಷಗಳ ಅಭಿಯಾನದ ಮೇಲ್ವಿಚಾರಣೆ ನಡೆಸುತ್ತಿರುವ ಸಿಪಿಐ ಹಿರಿಯ ನಾಯಕ ಸಿ.ಎನ್. ಚಂದ್ರನ್, ಅಭ್ಯರ್ಥಿಯನ್ನು ಹುಡುಕುವಲ್ಲಿ ಕಾಂಗ್ರೆಸ್ ವಿಫಲವಾಗಿದೆ ಎಂದು ಹೇಳುತ್ತಾರೆ. “ಇದು ಪಿಣರಾಯಿ ವಿಜಯನ್ ವಿರುದ್ಧ ಹೋರಾಡಲು ಕಾಂಗ್ರೆಸ್‌ಗೆ ಸಾಧ್ಯವಿಲ್ಲ ಎಂದು ತೋರಿಸುತ್ತದೆ” ಎಂದು ಅವರು ಹೇಳುತ್ತಾರೆ. ಮಂಗಳವಾರ ಕಾಂಗ್ರೆಸ್ ಬಿಡುಗಡೆ ಮಾಡಿದ ಪಟ್ಟಿಯಲ್ಲಿ ಧರ್ಮಡಂನಲ್ಲಿ ಸ್ಪರ್ಧಿಸುತ್ತಿರುವ ಅಭ್ಯರ್ಥಿಯ ಹೆಸರು ಕಾಣಿಸಿಕೊಂಡಿಲ್ಲ.

ಕಾಂಗ್ರೆಸ್ಸಿನ ಹಿರಿಯ ಮುಖಂಡ ಎಂ.ಎಂ. ಹಸನ್ “ನಾವು ಧರ್ಮಡಂನಲ್ಲಿ ಅಭ್ಯರ್ಥಿಯನ್ನು ಹುಡುಕಲು ಪ್ರಯತ್ನಿಸುತ್ತಿದ್ದೇವೆ. ಕಾಂಗ್ರೆಸ್ ಖಂಡಿತವಾಗಿಯು ಸ್ಪರ್ಧಿಸಲಿದೆ” ಎಂದು ಹೇಳಿದ್ದಾರೆ.


ಇದನ್ನೂ ಓದಿ: ಕೇರಳ: ನಾನು ಬಿಜೆಪಿಯ ಕಾರ್ಯಕರ್ತನೂ ಅಲ್ಲ & ಸ್ಪರ್ಧಿಸುವುದಿಲ್ಲ- ಬಿಜೆಪಿ ಟಿಕೆಟ್ ಘೋಷಿಸಲಾಗಿದ್ದ ವ್ಯಕ್ತಿ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...