Homeಮುಖಪುಟ‘ಖಂಡಿತವಾಗಿಯೂ LDF’- ಕೇರಳ ಚುನಾವಣೆಗೆ ಎಡಪಕ್ಷಗಳ ಘೋಷವಾಕ್ಯ

‘ಖಂಡಿತವಾಗಿಯೂ LDF’- ಕೇರಳ ಚುನಾವಣೆಗೆ ಎಡಪಕ್ಷಗಳ ಘೋಷವಾಕ್ಯ

- Advertisement -
- Advertisement -

ಕೇರಳದಲ್ಲಿ ಮುಂದಿನ ಎಪ್ರಿಲ್ 6 ರಂದು ವಿಧಾನಸಭಾ ಚುನಾವಣೆ ನಡೆಯಲಿದ್ದು, ಅಲ್ಲಿನ ಆಡಳಿತರೂಢ ಎಡಪಕ್ಷಗಳ ಚುನಾವಣಾ ಅಭಿಯಾನದ ಘೋಷಣೆ “ಖಂಡಿತವಾಗಿಯೂ, ಎಲ್‌ಡಿಎಫ್‌” ಎಂಬುದಾಗಿದೆ. ಈ ಅಭಿಯಾನಕ್ಕೆ ಒಂದು ಸ್ಟಾರ್‌ ಪ್ರಚಾರಕರಿದ್ದರೆ ಅದು, “ಖಂಡಿತವಾಗಿಯೂ” ಪಿಣರಾಯಿ ವಿಜಯನ್ ಆಗಿದ್ದಾರೆ ಎನ್ನಲಾಗಿದೆ.

75 ರ ಹರೆಯದ ಪಿಣರಾಯಿ ವಿಜಯನ್ ಧರ್ಮಡಂನಲ್ಲಿ ಪ್ರಚಾರವನ್ನು ಈಗಾಗಲೇ ಪ್ರಾರಂಭಿಸಿದ್ದಾರೆ. ‘ದಿ ಕ್ಯಾಪ್ಟನ್’ ಎಂದು ಅವರನ್ನು ಉಲ್ಲೇಖಿಸಿ ಬೃಹತ್‌ ಗಾತ್ರದ ಕಟೌಟ್‌ಗಳನ್ನು ಅಲ್ಲಲ್ಲಿ ಹಾಕಲಾಗಿದೆ. ಎಡಪಕ್ಷಗಳ ಪರವಾಗಿರುವ ಘೋಷಣೆಗಳು, ಅಭಿವೃದ್ಧಿ ಯೋಜನೆಗಳು, ಕೊರೊನಾ ಕಾಲದಲ್ಲಿ ಜಾರಿಗೆ ತಂದಿರುವ ಪಿಂಚಣಿ, ಪಡಿತರ ಸೇರಿದಂತೆ ಇತರ ಕಲ್ಯಾಣ ಯೋಜನೆಗಳನ್ನು ಚುನಾವಣಾ ಅಭಿಯಾನಗಳಲ್ಲಿ ಬಳಸಲಾಗುತ್ತಿದೆ.

ಇದನ್ನೂ ಓದಿ: ಸಿಎಎ ಜಾರಿ ಮಾಡುವುದಿಲ್ಲ: ಅಮಿತ್ ಶಾಗೆ ಸ್ಪಷ್ಟ ಉತ್ತರ ನೀಡಿದ ಕೇರಳ ಮುಖ್ಯಮಂತ್ರಿ

ಪಿಣರಾಯಿ ವಿಜಯನ್‌ರ ಮುಖವು ಈ ಬಾರಿ ಕೇರಳದಲ್ಲಿ ಖಂಡಿತವಾಗಿಯೂ ಕೆಲಸ ಮಾಡಲಿದೆ ಎಂದು ಚುನಾವಣಾ ವಿಶ್ಲೇಷಕರ ಅಭಿಪ್ರಾಯವಾಗಿದೆ. 1939 ರಲ್ಲಿ ಕಮ್ಯುನಿಸ್ಟ್ ಪಕ್ಷವು ಕೇರಳದಲ್ಲಿ ಮೊದಲ ಸಭೆ ನಡೆಸಿದ ಪರಪ್ರಂ ಗ್ರಾಮ ಸೇರಿದಂತೆ ಧರ್ಮಡಂ ಕ್ಷೇತ್ರವು ಎಡಪಕ್ಷಗಳ ಭದ್ರ ಕೋಟೆಯಾಗಿದೆ. ಇಲ್ಲಿ ಪಿಣರಾಯಿ ವಿಜಯನ್ ಕಳೆದ ಬಾರಿ ಕಾಂಗ್ರೆಸ್ ಅಭ್ಯರ್ಥಿ ಮಂಬರಂ ದಿವಾಕರನ್‌ ವಿರುದ್ಧ 36,000 ಮತಗಳಿಂದ ಜಯ ಗಳಿಸಿದ್ದರು.

ಧರ್ಮಡಂನಲ್ಲಿ ಕಾಂಗ್ರೆಸ್ ನೇತೃತ್ವದ ಯುಡಿಎಫ್‌ನಿಂದ‌ ಸ್ಪರ್ಧಿಸುತ್ತಿರುವ ಅಭ್ಯರ್ಥಿಯ ಆಯ್ಕೆ ಇದುವರೆಗೂ ನಡೆದಿಲ್ಲ. ಆದ್ದರಿಂದ ಮುಖ್ಯಮಂತ್ರಿಯ ಕೆಲಸ ಇನ್ನೂ ಸುಲಭವಾದಂತಾಗಿದೆ. ಬಿಜೆಪಿಯಿಂದ ಸ್ಪರ್ಧಿಸುತ್ತಿರುವ ಸಿ.ಕೆ. ಪದ್ಮನಾಭನ್ ತನ್ನ ಪ್ರಚಾರ ಕಾರ್ಯವನ್ನು ಇನ್ನೂ ಪ್ರಾರಂಭಿಸಿಲ್ಲ.

ಜಿಲ್ಲೆಯ ಪೊಟ್ಟಂಪರಾ ಗ್ರಾಮದಲ್ಲಿರುವ ಕಾಂಗ್ರೆಸ್ ಕಚೇರಿಯು ಪಕ್ಷವು ಇಲ್ಲಿ ಎದುರಿಸುತ್ತಿರುವ ಬಿಕ್ಕಟ್ಟಿನ ಕಥೆಯನ್ನು ಹೇಳುತ್ತದೆ. ಕಟ್ಟಡ ಸುತ್ತ ಕಳೆ ಗಿಡಗಳು ಅತಿಕ್ರಮಿಸಿದ್ದು, ಇದನ್ನು ತಿಂಗಳುಗಳಿಂದ ಮುಚ್ಚಲಾಗಿದೆ.

ಇದನ್ನೂ ಓದಿ: ಕೇರಳ – ಈಗ ಚುನಾವಣೆ ನಡೆದರೂ ಕಮ್ಯುನಿಷ್ಟ್ ಸರ್ಕಾರ ಮತ್ತೆ ಅಧಿಕಾರಕ್ಕೆ!

ಬುಧವಾರ ತಮ್ಮ ಕಚೇರಿಯ ಹಿಂದಿರುವ ಮೈದಾನದಲ್ಲಿ ನಡೆದ ಸಭೆಗೆ ಪಿಣರಾಯಿ ವಿಜಯನ್ ಆಗಮಿಸಿದ್ದರು. ಅವರು ಆಗಮಿಸುತ್ತಿದ್ದಂತೆ ಅಲ್ಲಿರುವ ಕಾರ್ಯಕರ್ತರು ಅವರನ್ನು ಘೋಷಣೆಗಳ ಮೂಲಕ ಸ್ವಾಗತಿಸಿದ್ದಾರೆ. ತಕ್ಷಣ ವೇದಿಕೆಯಲ್ಲಿ ಭಾಷಣ ಮಾಡುತ್ತಿದ್ದ ಮುಖಂಡ ಮಾತು ನಿಲ್ಲಿಸಿ, ಮುಖ್ಯಮಂತ್ರಿಗೆ ವೇದಿಕೆಯನ್ನು ಬಿಟ್ಟು ಕೊಟ್ಟಿದ್ದಾರೆ. ನಂತರ ಪಿಣರಾಯಿ ಅಲ್ಲಿ ನರೆದಿರುವ ಜನರನ್ನು ಉದ್ದೇಶಿಸಿ ಅವರದೇ ವಿಶೇಷ ಶೈಲಿಯಲ್ಲಿ ಮಾತನಾಡಿದ್ದಾರೆ.

ಪಿಣರಾಯಿ ತಮ್ಮ ಸರ್ಕಾರದ ವಿರುದ್ಧ ಪ್ರತಿಪಕ್ಷಗಳು ಆರೋಪಿಸುತ್ತಿರುವ ಹಗರಣಗಳನ್ನು ಸಮರ್ಥಿಸುವ ಯಾವುದೆ ಮಾತುಗಳನ್ನು ಆಡದೆ, ಬಿಜೆಪಿ ಮತ್ತು ಯುಡಿಎಫ್ ಸುಳ್ಳು ಹೇಳುತ್ತಿದೆ ಎಂದು ಹೇಳುತ್ತಾ, “ಒಂದು ವಿಷಯ ನಿಶ್ಚಿತ, ನಿಮ್ಮ ನಂಬಿಕೆಗೆ ಧಕ್ಕೆ ತರುವಂತಹ ಯಾವುದನ್ನೂ ನಾವು ಮಾಡಿಲ್ಲ” ಎಂದು ಅವರು ಒತ್ತಿ ಹೇಳಿದ್ದಾರೆ.

ಕೇರಳದ ವಿಧಾನಸಭಾ ಚುನಾವಣೆಯನ್ನು ದೇಶಾದ್ಯಂತ ಅತ್ಯಂತ ಕುತೂಹಲದಿಂದ ವೀಕ್ಷಿಸಲಾಗುತ್ತಿದೆ. “ಜಾತ್ಯತೀತತೆಯನ್ನು ಚೂರುಚೂರು ಮಾಡಲು ಪ್ರಯತ್ನಿಸುತ್ತಿರುವ ಪಡೆಗಳು ತನ್ನ ಪ್ರಭಾವವನ್ನು ಹೆಚ್ಚಿಸಿಕೊಳ್ಳುತ್ತಿವೆ. ಆದರೆ ಎಡಪಕ್ಷಗಳು ಜಾತ್ಯತೀತತೆ ಬಗ್ಗೆ ರಾಜಿಯಾಗುವುದಿಲ್ಲ. ಕಾಂಗ್ರೆಸ್ ಮತ್ತು ಬಿಜೆಪಿ ಜಾಗತೀಕರಣದ ಪ್ರತಿಪಾದಕರು. ದೇಶದಲ್ಲಿನ ಎಡಪಕ್ಷಗಳ ಏಕೈಕ ದ್ವೀಪವಾಗಿದೆ ಕೇರಳ” ಎಂದು ಪಿಣರಾಯಿ ತಮ್ಮ ಭಾಷಣಗಳಲ್ಲಿ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ: ಕೇರಳ ಬಿಜೆಪಿ ರೈಲಿನಲ್ಲಿ ಮೆಟ್ರೋಮ್ಯಾನ್: ಪ್ಯಾಸೆಂಜರ್‌ಗಳಿಲ್ಲ, ರೆಡ್ ಸಿಗ್ನಲ್‌ಗಳೇ ಎಲ್ಲ!

ಪರಪ್ರಂನಲ್ಲಿ ಉಚಿತ ಪಡಿತರ ಪಡೆಯಲು ನಿಂತಿರುವ ಹಿರಿಯ ಮಹಿಳೆ ಯಶೋಧ, “ನಾನು ಮತ್ತೆ ಕೇರಳದಲ್ಲಿ ಪಿಣರಾಯಿ ವಿಜಯನ್ ಸರ್ಕಾರ ಅಧಿಕಾರಕ್ಕೆ ಬರಲಿ ಎಂದು ಬಯಸುತ್ತೇನೆ. ಈ ಉಚಿತ ಪಡಿತರ ಕಿಟ್ ನಮಗೆ ಒಂದು ತಿಂಗಳು ಸಾಕಾಗುತ್ತದೆ. ಪಿಣರಾಯಿ ವಿಜಯನ್ ಹೆಚ್ಚಿಸಿದ ವಿಧವಾ ಪಿಂಚಣಿ 1600 ರೂಪಾಯಿ ನನಗೆ ಸಿಗುತ್ತಿದೆ. ಕಳೆದ ತಿಂಗಳು ನಾನು ಉದ್ಯೋಗ ಖಾತ್ರಿ ಯೋಜನೆಯ ನೂರು ದಿನಗಳ ಕೆಲಸವನ್ನು ಪೂರೈಸಿದೆ” ಎನ್ನುತ್ತಾರೆ.

ಕ್ಷೇತ್ರದಲ್ಲಿ ಎಡಪಕ್ಷಗಳ ಅಭಿಯಾನದ ಮೇಲ್ವಿಚಾರಣೆ ನಡೆಸುತ್ತಿರುವ ಸಿಪಿಐ ಹಿರಿಯ ನಾಯಕ ಸಿ.ಎನ್. ಚಂದ್ರನ್, ಅಭ್ಯರ್ಥಿಯನ್ನು ಹುಡುಕುವಲ್ಲಿ ಕಾಂಗ್ರೆಸ್ ವಿಫಲವಾಗಿದೆ ಎಂದು ಹೇಳುತ್ತಾರೆ. “ಇದು ಪಿಣರಾಯಿ ವಿಜಯನ್ ವಿರುದ್ಧ ಹೋರಾಡಲು ಕಾಂಗ್ರೆಸ್‌ಗೆ ಸಾಧ್ಯವಿಲ್ಲ ಎಂದು ತೋರಿಸುತ್ತದೆ” ಎಂದು ಅವರು ಹೇಳುತ್ತಾರೆ. ಮಂಗಳವಾರ ಕಾಂಗ್ರೆಸ್ ಬಿಡುಗಡೆ ಮಾಡಿದ ಪಟ್ಟಿಯಲ್ಲಿ ಧರ್ಮಡಂನಲ್ಲಿ ಸ್ಪರ್ಧಿಸುತ್ತಿರುವ ಅಭ್ಯರ್ಥಿಯ ಹೆಸರು ಕಾಣಿಸಿಕೊಂಡಿಲ್ಲ.

ಕಾಂಗ್ರೆಸ್ಸಿನ ಹಿರಿಯ ಮುಖಂಡ ಎಂ.ಎಂ. ಹಸನ್ “ನಾವು ಧರ್ಮಡಂನಲ್ಲಿ ಅಭ್ಯರ್ಥಿಯನ್ನು ಹುಡುಕಲು ಪ್ರಯತ್ನಿಸುತ್ತಿದ್ದೇವೆ. ಕಾಂಗ್ರೆಸ್ ಖಂಡಿತವಾಗಿಯು ಸ್ಪರ್ಧಿಸಲಿದೆ” ಎಂದು ಹೇಳಿದ್ದಾರೆ.


ಇದನ್ನೂ ಓದಿ: ಕೇರಳ: ನಾನು ಬಿಜೆಪಿಯ ಕಾರ್ಯಕರ್ತನೂ ಅಲ್ಲ & ಸ್ಪರ್ಧಿಸುವುದಿಲ್ಲ- ಬಿಜೆಪಿ ಟಿಕೆಟ್ ಘೋಷಿಸಲಾಗಿದ್ದ ವ್ಯಕ್ತಿ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...