Homeಮುಖಪುಟ‘ಖಂಡಿತವಾಗಿಯೂ LDF’- ಕೇರಳ ಚುನಾವಣೆಗೆ ಎಡಪಕ್ಷಗಳ ಘೋಷವಾಕ್ಯ

‘ಖಂಡಿತವಾಗಿಯೂ LDF’- ಕೇರಳ ಚುನಾವಣೆಗೆ ಎಡಪಕ್ಷಗಳ ಘೋಷವಾಕ್ಯ

- Advertisement -
- Advertisement -

ಕೇರಳದಲ್ಲಿ ಮುಂದಿನ ಎಪ್ರಿಲ್ 6 ರಂದು ವಿಧಾನಸಭಾ ಚುನಾವಣೆ ನಡೆಯಲಿದ್ದು, ಅಲ್ಲಿನ ಆಡಳಿತರೂಢ ಎಡಪಕ್ಷಗಳ ಚುನಾವಣಾ ಅಭಿಯಾನದ ಘೋಷಣೆ “ಖಂಡಿತವಾಗಿಯೂ, ಎಲ್‌ಡಿಎಫ್‌” ಎಂಬುದಾಗಿದೆ. ಈ ಅಭಿಯಾನಕ್ಕೆ ಒಂದು ಸ್ಟಾರ್‌ ಪ್ರಚಾರಕರಿದ್ದರೆ ಅದು, “ಖಂಡಿತವಾಗಿಯೂ” ಪಿಣರಾಯಿ ವಿಜಯನ್ ಆಗಿದ್ದಾರೆ ಎನ್ನಲಾಗಿದೆ.

75 ರ ಹರೆಯದ ಪಿಣರಾಯಿ ವಿಜಯನ್ ಧರ್ಮಡಂನಲ್ಲಿ ಪ್ರಚಾರವನ್ನು ಈಗಾಗಲೇ ಪ್ರಾರಂಭಿಸಿದ್ದಾರೆ. ‘ದಿ ಕ್ಯಾಪ್ಟನ್’ ಎಂದು ಅವರನ್ನು ಉಲ್ಲೇಖಿಸಿ ಬೃಹತ್‌ ಗಾತ್ರದ ಕಟೌಟ್‌ಗಳನ್ನು ಅಲ್ಲಲ್ಲಿ ಹಾಕಲಾಗಿದೆ. ಎಡಪಕ್ಷಗಳ ಪರವಾಗಿರುವ ಘೋಷಣೆಗಳು, ಅಭಿವೃದ್ಧಿ ಯೋಜನೆಗಳು, ಕೊರೊನಾ ಕಾಲದಲ್ಲಿ ಜಾರಿಗೆ ತಂದಿರುವ ಪಿಂಚಣಿ, ಪಡಿತರ ಸೇರಿದಂತೆ ಇತರ ಕಲ್ಯಾಣ ಯೋಜನೆಗಳನ್ನು ಚುನಾವಣಾ ಅಭಿಯಾನಗಳಲ್ಲಿ ಬಳಸಲಾಗುತ್ತಿದೆ.

ಇದನ್ನೂ ಓದಿ: ಸಿಎಎ ಜಾರಿ ಮಾಡುವುದಿಲ್ಲ: ಅಮಿತ್ ಶಾಗೆ ಸ್ಪಷ್ಟ ಉತ್ತರ ನೀಡಿದ ಕೇರಳ ಮುಖ್ಯಮಂತ್ರಿ

ಪಿಣರಾಯಿ ವಿಜಯನ್‌ರ ಮುಖವು ಈ ಬಾರಿ ಕೇರಳದಲ್ಲಿ ಖಂಡಿತವಾಗಿಯೂ ಕೆಲಸ ಮಾಡಲಿದೆ ಎಂದು ಚುನಾವಣಾ ವಿಶ್ಲೇಷಕರ ಅಭಿಪ್ರಾಯವಾಗಿದೆ. 1939 ರಲ್ಲಿ ಕಮ್ಯುನಿಸ್ಟ್ ಪಕ್ಷವು ಕೇರಳದಲ್ಲಿ ಮೊದಲ ಸಭೆ ನಡೆಸಿದ ಪರಪ್ರಂ ಗ್ರಾಮ ಸೇರಿದಂತೆ ಧರ್ಮಡಂ ಕ್ಷೇತ್ರವು ಎಡಪಕ್ಷಗಳ ಭದ್ರ ಕೋಟೆಯಾಗಿದೆ. ಇಲ್ಲಿ ಪಿಣರಾಯಿ ವಿಜಯನ್ ಕಳೆದ ಬಾರಿ ಕಾಂಗ್ರೆಸ್ ಅಭ್ಯರ್ಥಿ ಮಂಬರಂ ದಿವಾಕರನ್‌ ವಿರುದ್ಧ 36,000 ಮತಗಳಿಂದ ಜಯ ಗಳಿಸಿದ್ದರು.

ಧರ್ಮಡಂನಲ್ಲಿ ಕಾಂಗ್ರೆಸ್ ನೇತೃತ್ವದ ಯುಡಿಎಫ್‌ನಿಂದ‌ ಸ್ಪರ್ಧಿಸುತ್ತಿರುವ ಅಭ್ಯರ್ಥಿಯ ಆಯ್ಕೆ ಇದುವರೆಗೂ ನಡೆದಿಲ್ಲ. ಆದ್ದರಿಂದ ಮುಖ್ಯಮಂತ್ರಿಯ ಕೆಲಸ ಇನ್ನೂ ಸುಲಭವಾದಂತಾಗಿದೆ. ಬಿಜೆಪಿಯಿಂದ ಸ್ಪರ್ಧಿಸುತ್ತಿರುವ ಸಿ.ಕೆ. ಪದ್ಮನಾಭನ್ ತನ್ನ ಪ್ರಚಾರ ಕಾರ್ಯವನ್ನು ಇನ್ನೂ ಪ್ರಾರಂಭಿಸಿಲ್ಲ.

ಜಿಲ್ಲೆಯ ಪೊಟ್ಟಂಪರಾ ಗ್ರಾಮದಲ್ಲಿರುವ ಕಾಂಗ್ರೆಸ್ ಕಚೇರಿಯು ಪಕ್ಷವು ಇಲ್ಲಿ ಎದುರಿಸುತ್ತಿರುವ ಬಿಕ್ಕಟ್ಟಿನ ಕಥೆಯನ್ನು ಹೇಳುತ್ತದೆ. ಕಟ್ಟಡ ಸುತ್ತ ಕಳೆ ಗಿಡಗಳು ಅತಿಕ್ರಮಿಸಿದ್ದು, ಇದನ್ನು ತಿಂಗಳುಗಳಿಂದ ಮುಚ್ಚಲಾಗಿದೆ.

ಇದನ್ನೂ ಓದಿ: ಕೇರಳ – ಈಗ ಚುನಾವಣೆ ನಡೆದರೂ ಕಮ್ಯುನಿಷ್ಟ್ ಸರ್ಕಾರ ಮತ್ತೆ ಅಧಿಕಾರಕ್ಕೆ!

ಬುಧವಾರ ತಮ್ಮ ಕಚೇರಿಯ ಹಿಂದಿರುವ ಮೈದಾನದಲ್ಲಿ ನಡೆದ ಸಭೆಗೆ ಪಿಣರಾಯಿ ವಿಜಯನ್ ಆಗಮಿಸಿದ್ದರು. ಅವರು ಆಗಮಿಸುತ್ತಿದ್ದಂತೆ ಅಲ್ಲಿರುವ ಕಾರ್ಯಕರ್ತರು ಅವರನ್ನು ಘೋಷಣೆಗಳ ಮೂಲಕ ಸ್ವಾಗತಿಸಿದ್ದಾರೆ. ತಕ್ಷಣ ವೇದಿಕೆಯಲ್ಲಿ ಭಾಷಣ ಮಾಡುತ್ತಿದ್ದ ಮುಖಂಡ ಮಾತು ನಿಲ್ಲಿಸಿ, ಮುಖ್ಯಮಂತ್ರಿಗೆ ವೇದಿಕೆಯನ್ನು ಬಿಟ್ಟು ಕೊಟ್ಟಿದ್ದಾರೆ. ನಂತರ ಪಿಣರಾಯಿ ಅಲ್ಲಿ ನರೆದಿರುವ ಜನರನ್ನು ಉದ್ದೇಶಿಸಿ ಅವರದೇ ವಿಶೇಷ ಶೈಲಿಯಲ್ಲಿ ಮಾತನಾಡಿದ್ದಾರೆ.

ಪಿಣರಾಯಿ ತಮ್ಮ ಸರ್ಕಾರದ ವಿರುದ್ಧ ಪ್ರತಿಪಕ್ಷಗಳು ಆರೋಪಿಸುತ್ತಿರುವ ಹಗರಣಗಳನ್ನು ಸಮರ್ಥಿಸುವ ಯಾವುದೆ ಮಾತುಗಳನ್ನು ಆಡದೆ, ಬಿಜೆಪಿ ಮತ್ತು ಯುಡಿಎಫ್ ಸುಳ್ಳು ಹೇಳುತ್ತಿದೆ ಎಂದು ಹೇಳುತ್ತಾ, “ಒಂದು ವಿಷಯ ನಿಶ್ಚಿತ, ನಿಮ್ಮ ನಂಬಿಕೆಗೆ ಧಕ್ಕೆ ತರುವಂತಹ ಯಾವುದನ್ನೂ ನಾವು ಮಾಡಿಲ್ಲ” ಎಂದು ಅವರು ಒತ್ತಿ ಹೇಳಿದ್ದಾರೆ.

ಕೇರಳದ ವಿಧಾನಸಭಾ ಚುನಾವಣೆಯನ್ನು ದೇಶಾದ್ಯಂತ ಅತ್ಯಂತ ಕುತೂಹಲದಿಂದ ವೀಕ್ಷಿಸಲಾಗುತ್ತಿದೆ. “ಜಾತ್ಯತೀತತೆಯನ್ನು ಚೂರುಚೂರು ಮಾಡಲು ಪ್ರಯತ್ನಿಸುತ್ತಿರುವ ಪಡೆಗಳು ತನ್ನ ಪ್ರಭಾವವನ್ನು ಹೆಚ್ಚಿಸಿಕೊಳ್ಳುತ್ತಿವೆ. ಆದರೆ ಎಡಪಕ್ಷಗಳು ಜಾತ್ಯತೀತತೆ ಬಗ್ಗೆ ರಾಜಿಯಾಗುವುದಿಲ್ಲ. ಕಾಂಗ್ರೆಸ್ ಮತ್ತು ಬಿಜೆಪಿ ಜಾಗತೀಕರಣದ ಪ್ರತಿಪಾದಕರು. ದೇಶದಲ್ಲಿನ ಎಡಪಕ್ಷಗಳ ಏಕೈಕ ದ್ವೀಪವಾಗಿದೆ ಕೇರಳ” ಎಂದು ಪಿಣರಾಯಿ ತಮ್ಮ ಭಾಷಣಗಳಲ್ಲಿ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ: ಕೇರಳ ಬಿಜೆಪಿ ರೈಲಿನಲ್ಲಿ ಮೆಟ್ರೋಮ್ಯಾನ್: ಪ್ಯಾಸೆಂಜರ್‌ಗಳಿಲ್ಲ, ರೆಡ್ ಸಿಗ್ನಲ್‌ಗಳೇ ಎಲ್ಲ!

ಪರಪ್ರಂನಲ್ಲಿ ಉಚಿತ ಪಡಿತರ ಪಡೆಯಲು ನಿಂತಿರುವ ಹಿರಿಯ ಮಹಿಳೆ ಯಶೋಧ, “ನಾನು ಮತ್ತೆ ಕೇರಳದಲ್ಲಿ ಪಿಣರಾಯಿ ವಿಜಯನ್ ಸರ್ಕಾರ ಅಧಿಕಾರಕ್ಕೆ ಬರಲಿ ಎಂದು ಬಯಸುತ್ತೇನೆ. ಈ ಉಚಿತ ಪಡಿತರ ಕಿಟ್ ನಮಗೆ ಒಂದು ತಿಂಗಳು ಸಾಕಾಗುತ್ತದೆ. ಪಿಣರಾಯಿ ವಿಜಯನ್ ಹೆಚ್ಚಿಸಿದ ವಿಧವಾ ಪಿಂಚಣಿ 1600 ರೂಪಾಯಿ ನನಗೆ ಸಿಗುತ್ತಿದೆ. ಕಳೆದ ತಿಂಗಳು ನಾನು ಉದ್ಯೋಗ ಖಾತ್ರಿ ಯೋಜನೆಯ ನೂರು ದಿನಗಳ ಕೆಲಸವನ್ನು ಪೂರೈಸಿದೆ” ಎನ್ನುತ್ತಾರೆ.

ಕ್ಷೇತ್ರದಲ್ಲಿ ಎಡಪಕ್ಷಗಳ ಅಭಿಯಾನದ ಮೇಲ್ವಿಚಾರಣೆ ನಡೆಸುತ್ತಿರುವ ಸಿಪಿಐ ಹಿರಿಯ ನಾಯಕ ಸಿ.ಎನ್. ಚಂದ್ರನ್, ಅಭ್ಯರ್ಥಿಯನ್ನು ಹುಡುಕುವಲ್ಲಿ ಕಾಂಗ್ರೆಸ್ ವಿಫಲವಾಗಿದೆ ಎಂದು ಹೇಳುತ್ತಾರೆ. “ಇದು ಪಿಣರಾಯಿ ವಿಜಯನ್ ವಿರುದ್ಧ ಹೋರಾಡಲು ಕಾಂಗ್ರೆಸ್‌ಗೆ ಸಾಧ್ಯವಿಲ್ಲ ಎಂದು ತೋರಿಸುತ್ತದೆ” ಎಂದು ಅವರು ಹೇಳುತ್ತಾರೆ. ಮಂಗಳವಾರ ಕಾಂಗ್ರೆಸ್ ಬಿಡುಗಡೆ ಮಾಡಿದ ಪಟ್ಟಿಯಲ್ಲಿ ಧರ್ಮಡಂನಲ್ಲಿ ಸ್ಪರ್ಧಿಸುತ್ತಿರುವ ಅಭ್ಯರ್ಥಿಯ ಹೆಸರು ಕಾಣಿಸಿಕೊಂಡಿಲ್ಲ.

ಕಾಂಗ್ರೆಸ್ಸಿನ ಹಿರಿಯ ಮುಖಂಡ ಎಂ.ಎಂ. ಹಸನ್ “ನಾವು ಧರ್ಮಡಂನಲ್ಲಿ ಅಭ್ಯರ್ಥಿಯನ್ನು ಹುಡುಕಲು ಪ್ರಯತ್ನಿಸುತ್ತಿದ್ದೇವೆ. ಕಾಂಗ್ರೆಸ್ ಖಂಡಿತವಾಗಿಯು ಸ್ಪರ್ಧಿಸಲಿದೆ” ಎಂದು ಹೇಳಿದ್ದಾರೆ.


ಇದನ್ನೂ ಓದಿ: ಕೇರಳ: ನಾನು ಬಿಜೆಪಿಯ ಕಾರ್ಯಕರ್ತನೂ ಅಲ್ಲ & ಸ್ಪರ್ಧಿಸುವುದಿಲ್ಲ- ಬಿಜೆಪಿ ಟಿಕೆಟ್ ಘೋಷಿಸಲಾಗಿದ್ದ ವ್ಯಕ್ತಿ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...