Homeಕರ್ನಾಟಕಭೂಸುಧಾರಣಾ ಕಾಯ್ದೆ ತಿದ್ದುಪಡಿಯಿಂದ ಕೃಷಿ ನಾಶ: ಮಾಜಿ ಪ್ರಧಾನಿ ದೇವೇಗೌಡ ಆತಂಕ

ಭೂಸುಧಾರಣಾ ಕಾಯ್ದೆ ತಿದ್ದುಪಡಿಯಿಂದ ಕೃಷಿ ನಾಶ: ಮಾಜಿ ಪ್ರಧಾನಿ ದೇವೇಗೌಡ ಆತಂಕ

ರೈತ ವಿರೋಧಿ ಕಾನೂನುಗಳ ವಿರುದ್ದ ತುಮಕೂರಿನಲ್ಲಿ ಪ್ರತಿಭಟನೆ

- Advertisement -
- Advertisement -

ಭೂಸುಧಾರಣ ಕಾಯ್ದೆ ತಿದ್ದುಪಡಿಯಿಂದ ಬಂಡವಾಳಗಾರರು ನೂರಾರು ಎಕರೆ ಖರೀದಿಸಲು ಅವಕಾಶ ಕಲ್ಪಿಸಿದ್ದು ಇದರಿಂದ ರೈತಾಪಿ ವರ್ಗ ತೀವ್ರ ಸಂಕಷ್ಟ ಎದುರಿಸಲಿದೆ ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಆತಂಕ ವ್ಯಕ್ತಪಡಿಸಿದರು.

ತುಮಕೂರಿನಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಜಾತ್ಯತೀತ ಜನತಾ ದಳ ವತಿಯಿಂದ ಎಪಿಎಂಸಿ ಕಾಯ್ದೆ ತಿದ್ದುಪಡಿ, ಭೂಸುಧಾರಣ ಕಾಯ್ದೆ ತಿದ್ದುಪಡಿ ವಿರೋಧಿಸಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಅವರು ಮಾತನಾಡಿ ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರದ ಕ್ರಮವನ್ನು ಖಂಡಿಸಿದರು.

ಇದನ್ನೂ ಓದಿ: ದೇವೆಗೌಡರ ಕುಟುಂಬದ ಕುರಿತು ಸುಳ್ಳು ಸುದ್ದಿ ಪ್ರಕಟ: ವಿಶ್ವೇಶ್ವರ್ ಭಟ್ ಮೇಲೆ ಎಫ್‍ಐಆರ್ ದಾಖಲು

ಭೂಸುಧಾರಣ ಕಾಯ್ದೆಯು ಕಾರ್ಪೋರೇಟ್ ಕುಳಗಳು ರೈತರಿಂದ ಭೂಮಿ ಖರೀದಿಸಲು ಅವಕಾಶ ನೀಡುತ್ತದೆ. ಅವರು ಭೂಮಿ ಖರೀದಿಸುತ್ತಾರೆಯೇ ವಿನಃ ಉಳುಮೆ ಮಾಡುವುದಿಲ್ಲ. ಪರಿಣಾಮ ಕೃಷಿ ಸತ್ತು ಹೋಗುತ್ತದೆ. ಕೃಷಿಕರು ಗುಲಾಮಗಿರಿಗೆ ತಳ್ಳಲ್ಪಡುತ್ತಾರೆ ಎಂದು ಹೇಳಿದರು.

ರಾಜ್ಯ ಸರ್ಕಾರ ರೈತ ವಿರೋಧಿ ಚಟುವಟಿಕೆಗಳಿಗೆ ಹಾದಿ ಮಾಡಿಕೊಡುತ್ತಿದೆ. ಎಪಿಎಂಸಿ ಕಾಯ್ದೆ ತಿದ್ದುಪಡಿ ಮಾಡಿದೆ. ಇದೂ ಕೂಡ ಸಾಕಷ್ಟು ಸಮಸ್ಯೆಯನ್ನು ತಂದೊಡ್ಡಲಿದೆ. ಸಣ್ಣ ಮತ್ತು ಮಧ್ಯಮ ವರ್ತಕರು, ರೈತರು ಬಾಧಿತರಾಗುತ್ತಾರೆ. ರೈತರು ತಮ್ಮ ಬೆಳೆಗಳನ್ನು ನೇರ ಮಾರುಕಟ್ಟೆಗೆ ತೆಗೆದುಕೊಂಡು ಹೋಗಲು ಆಗುವುದಿಲ್ಲ. ದೊಡ್ಡದೊಡ್ಡ ಬಂಡವಾಳಗಾರರು ರೈತರಿಂದ ಕಡಿಮೆ ಬೆಲೆಗೆ ಖರೀದಿಸಿ ಲಾಭ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಿದೆ ಎಂದರು.

ಇದನ್ನೂ ಒದಿ: ದೇವೇಗೌಡ ಕುಟುಂಬದವರು ಅಧಿಕಾರ ಸ್ಥಾನದಿಂದ ಹಿಂದೆ ಸರಿದರೆ ಮಾತ್ರ ಜೆಡಿಎಸ್‌ ಉಳಿವು ಸಾಧ್ಯ: ವೈ.ಎಸ್‌.ವಿ ದತ್ತ

ಕೇಂದ್ರ ಸರ್ಕಾರ ಕಾರ್ಮಿಕ ಕಾಯ್ದೆಗೆ ತಿದ್ದುಪಡಿ ಮಾಡಿದೆ. ರಾಜ್ಯ ಸರ್ಕಾರಗಳು ಇದನ್ನು ಯಥಾವತ್ತಾಗಿ ಜಾರಿಗೆ ತರಲು ಹೊರಟಿವೆ. ತಿದ್ದುಪಡಿ ಕಾಯ್ದೆಯಿಂದ ಕಾರ್ಮಿಕರಿಗೆ ಭದ್ರತೆ ಇಲ್ಲದಂತಾಗುತ್ತದೆ. ಇದು ಮಾಲಿಕರಿಗೆ ಹೆಚ್ಚು ಲಾಭ ಮಾಡಿಕೊಡುತ್ತದೆ. ಬಂಡವಾಳಗಾರರ ಪರವಾಗಿ ಸರ್ಕಾರಗಳು ಕೆಲಸ ಮಾಡುತ್ತಿವೆ ಎಂದು ದೂರಿದರು.

ಪ್ರತಿಭಟನೆಯಲ್ಲಿ ಶಾಸಕರಾದ ಎಸ್.ಆರ್.ಶ್ರೀನಿವಾಸ್, ವೀರಭದ್ರಯ್ಯ, ಗೌರಿಶಂಕರ್, ಬೆಮೆಲ್ ಕಾಂತರಾಜು, ಮಾಜಿ ಶಾಸಕರಾದ ಕೆ.ಎಂ. ತಿಮ್ಮರಾಯಪ್ಪ, ಎಂ.ಟಿ.ಕೃಷ್ಣಪ್ಪ, ಸುಧಾಕರ್ ಲಾಲ್, ಡಿ.ನಾಗರಾಜಯ್ಯ, ಎಂ.ಟಿ.ಕೃಷ್ಣಪ್ಪ, ಮುಖಂಡರಾದ ಟಿ.ಆರ್. ನಾಗರಾಜು, ಬೆಳ್ಳಿಲೋಕೇಶ್ ಮೊದಲಾದವರು ಉಪಸ್ಥಿತರಿದ್ದರು.

ಇದಕ್ಕೂ ಮುನ್ನ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ದೇವೇಗೌಡ, ಶಿರಾ ಶಾಸಕ ಸತ್ಯನಾರಾಯಣ ನಿಧನದಿಂದ ಪಕ್ಷಕ್ಕೆ ನಷ್ಟವಾಗಿದೆ. ಸರಳ ವ್ಯಕ್ತಿಯನ್ನು ಕಳೆದುಕೊಂಡಂತಾಗಿದೆ ಎಂದು ಹೇಳಿದರು.


ಓದಿ: ನಿಮ್ಮ ನಿಮ್ಮ ತೆವಲುಗಳಿಗೆ ದೇಶ ಹಾಳು ಮಾಡಬೇಡಿ: ಟಿವಿ ಮಾಧ್ಯಮಗಳ ವಿರುದ್ಧ ಕುಮಾರಸ್ವಾಮಿ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...