Homeಕರ್ನಾಟಕರಾಜಕೀಯ ಲಾಕ್‌ಡೌನ್‌ ಧಿಕ್ಕರಿಸಿ! ಕಾರ್ಮಿಕ ಮುಖಂಡ ಆರ್.ಮಾನಸಯ್ಯ ಕರೆ

ರಾಜಕೀಯ ಲಾಕ್‌ಡೌನ್‌ ಧಿಕ್ಕರಿಸಿ! ಕಾರ್ಮಿಕ ಮುಖಂಡ ಆರ್.ಮಾನಸಯ್ಯ ಕರೆ

ಲಾಕ್‌ಡೌನ್‌ನ ಪರಿಣಾಮಗಳು ಭಿನ್ನ ಆಯಾಮಗಳನ್ನು ಪಡೆದುಕೊಳ್ಳುತ್ತಿದ್ದಂತೆ ದೇಶದ ವಿವಿಧ ಕಡೆಗಳಿಂದ ಹಲವು ರೀತಿಯ ದನಿಗಳು ಮೇಲೇಳುತ್ತಿವೆ. ಟಿಯುಸಿಐ ಮುಖಂಡ ಆರ್.‌ಮಾನಸಯ್ಯನವರು ಬರೆದ ಅಂತಹ ಒಂದು ಬರಹ ಇಲ್ಲಿದೆ.

- Advertisement -
- Advertisement -

ಮೊಟ್ಟ ಮೊದಲನೆಯದಾಗಿ ನಾನು ದೈಹಿಕ ಅಂತರ ಕಾಯ್ದುಕೊಳ್ಳ ಬೇಕಾದ ಲಾಕ್‌ಡೌನ್‌ ಪರವಾಗಿದ್ದೇನೆ.ಆದರೆ ಪ್ರಜಾಪ್ರಭುತ್ವವನ್ನ ಹಂತ ಹಂತವಾಗಿ ಲಾಕ್ ಡೌನ್ ಮಾಡುವ, ಕೇಂದ್ರ ಸರಕಾರದ ನೀಚಾತಿನೀಚ ರಾಜಕೀಯ ದಬ್ಬಾಳಿಕೆ ವಿರುದ್ದ ಜನತೆ ಹಾಗೂ ರಾಜಕೀಯ ಪಕ್ಷಗಳು ಕೂಡಲೆ ಧ್ವನಿ ಎತ್ತಬೇಕೆಂದು ಮನವಿ ಮಾಡುತ್ತೇನೆ.

ಕೊರೊನಾ ಕಟ್ಟಿ ಹಾಕುಲು ಇದ್ದ ಆರಂಭದ ಎಲ್ಲ ಅವಕಾಶಗಳನ್ನು ಮೋದಿ ಸರಕಾರ ಬಳಸಿಕೊಳ್ಳಲಿಲ್ಲ. ಇದು ಸರಕಾರದ ಮೊದಲನೆಯ ದೇಶಘಾತುಕ ಕೆಲಸ.

ಎರಡನೆಯದಾಗಿ, ಈ ಭೇಮಾರಿಯನ್ನು ಎದುರಿಸಲು ವೈದ್ಯಕೀಯ ಹಾಗೂ ಆಡಳಿತಾತ್ಮಕ ಸಿದ್ದತೆಗಳು ಅತ್ಯಂತ ಕಳಪೆ ಹಾಗೂ ಯಾತಕ್ಕೂ ಸರಿ ಹೋಗದಂತವುಗಳು. ಇದು ಮೋದಿ ಸರಕಾರದ ಎರಡನೆಯ ದೇಶಘಾತುಕ ಕೆಲಸ.

ಮೂರನೆಯದ್ದಾಗಿ, ಜನತಾ ಕಫ್ಯು೯ ಹಾಗೂ 21 ದಿನಗಳ ಕಾಲ ಲಾಕ್‌ಡೌನ್‌ ಘೋಷಣೆಗಿಂತ ಪೂವ೯ದಲ್ಲಿ ವಿವಿಧ ರಾಜ್ಯ ಸರಕಾರಗಳ ಜತೆ, ಸವ೯ಪಕ್ಷಗಳ ಜತೆ, ರೈತ ಕಾಮಿ೯ಕ ಹಾಗೂ ತಜ್ಞರೊಂದಿಗೆ ಸಮಾಲೋಚನೆ ನಡೆಸಲಿಲ್ಲ. ದೀಘ೯ಕಾಲದ ಲಾಕ್‌ಡೌನ್‌ ಎದುರಿಸಲು ಜನರ ಬಳಿ ಏನೇನಿದೆ -ಏನೇನಿರಬೇಕು ಹಾಗೂ ರಾಷ್ಟ್ರೀಯ ತುರ್ತು ಸೇವೆಗಳನ್ನು ಕೊಡ ಮಾಡಲು ಸರಕಾರದ ಬಳಿ  ಯಾವ ಸಿದ್ದತೆಗಳಿರಲಿಲ್ಲ. ಇದು ಸಂಘ ಪರಿವಾರ್‌ ಸರಕಾರದ ಮೂರನೆಯ ಅತೀ ದೊಡ್ಡ ದೇಶ ಘಾತುಕ ಕೆಲಸ.

ಇದಕ್ಕಿಂತ ಮಿಗಿಲಾದ ದ್ರೋಹ ಎಂದರೆ ಇಡೀ ಪರಿಸ್ಥಿಯನ್ನು  ದುರುಪಯೋಗಪಡಿಸಿಕೊಂಡು ವಿರೋಧಮುಕ್ತ ಸವಾ೯ಧಿಕಾರವನ್ನು ಚಲಾಯಿಸಿ, ತನ್ನ ಹಿಂದೂ ರಾಷ್ಟ್ರ ರಾಜಕಾರಣವನ್ನು ದೇಶಾದ್ಯಂತ ಕೊರೊನಾಗಿಂತ ಹೈ ಸ್ಪೀಡನಲ್ಲಿ ಹರಡುತ್ತಿರುವುದು. ಕಳೆದ ಒಂದುವರೆ ತಿಂಗಳಿಂದ 99% ಚಾನಲಗಳು ಹಾಗೂ 75% ಪತ್ರಿಕೆಗಳು ಹಾಗೂ 520000ಕ್ಕೂ ಹೆಚ್ಚು ಸಾಮಾಜಿಕ ಜಾಲತಾಣದ ನಕಲಿ ಖಾತೆಗಳ ಮೂಲಕ ವಿರೋಧ ಪಕ್ಷಗಳು,ಪ್ರಜಾಪ್ರಭುತ್ವವಾದಿಗಳು, ಅಂಬೇಡ್ಕರ್ವಾದಿಗಳು, ಮುಸ್ಲೀಮರು, ಕಮ್ಯೂನಿಸ್ಟ್ ರಾಷ್ಟ್ರಗಳನ್ನು ಗುರಿಯಾಗಿಸಿಕೊಂಡು ಅತೀ ದೊಡ್ಡ ದುಷ್ಪ್ರಚಾರ ಮಾಡುತ್ತಿರುವುದು.

ಈ ಪೈಕಿ ಅತ್ಯಂತ ಹೇಸಿಗೆ ಹಾಗೂ ನಿಲ೯ಜ್ಯದ ಕೆಲಸ ಎಂದರೆ, ಚಪ್ಪಾಳೆ-ಗಂಟೆ ಬಾರಿಸಲು, ಲೈಟ್ ಆಫ್ ಮಾಡಿ ದೀಪ ಹಚ್ಚಲು ಹಾಗೂ ಬಿಡಿಗಾಸಿನ ಬೆಲೆ ಇಲ್ಲದ ಸಪ್ತ ಸೂತ್ರ ಪ್ರಕಟಿಸಲು ದೇಶದ ಪ್ರಧಾನಿಯು ಸಂಪೂಣ೯ ಸೀಮಿತವಾಗಿ ಹೋಗಿದ್ದು!

ಯಾವ ತಯಾರಿ ಹಾಗೂ ಬಿಡಿಗಾಸಿನ ಸಹಾಯ ನೀಡದೆ ಮತ್ತೆ ಲಾಕ್‌ಡೌನ್‌ ವಿಸ್ತರಣೆ ಮಾಡಿದ್ದು ಅತ್ಯಂತ ರಾಜಕೀಯ ದ್ರೋಹವಾಗಿದೆ.

ಮೋದಿ ಸರಕಾರದ ದುರಾಡಳಿತದಿಂದ ಮೊದಲೆ ಮೂಲೆಗುಂಪಾಗಿದ್ದ ದೇಶದ ಆಥಿ೯ಕತೆ, ಸಂಸದೀಯ ಪ್ರಜಾಪ್ರಭುತ್ವ ಹಾಗೂ ವಿಶಾಲ ಜನವಗ೯ಗಳ ಜೀವನವು ಇನ್ನಷ್ಟು ದರಿದ್ರ ಹಾಗೂ ದಾರುಣ ಹಂತ ತಲುಪಲು ತಾನು ಕಾರಣವಲ್ಲ ಎಂದು ಸಮಥಿ೯ಸಿಕೊಳ್ಳಲು ಎಲ್ಲ ಬಗೆಯ ತಯಾರಿ ನಡೆದಿದೆ.

ಒಟ್ಟಾರೆ, ಕೊರೊನಾ ಹೆಸರಲ್ಲಿ ಅತೀ ದೊಡ್ಡ ರಾಜಕೀಯ ದಿಗ್ಭಂದನ ನಮ್ಮ ದೇಶದಲ್ಲಿ ಬಿಗಿಗೊಳ್ಳುತ್ತಿದೆ. ದೇಶದ ನಾಲ್ಲು ಮೂಲೆಗಳು ಪೊಲೀಸ್ ರಾಜ್ಯವಾಗಿ ಹೋಗಿವೆ.ಪ್ರತಿಪಕ್ಷ -ಪ್ರತಿರೋಧ-ಪ್ರತಿಕ್ರಿಯೆ -ಪ್ರತಿಭಟನೆ-ಪ್ರಶ್ನಿಸುವಿಕೆ-ಜಾತ್ಯತೀತತೆ-ಸಮಾನತೆ-ಸ್ವಾತಂತ್ರ್ಯ -ನ್ಯಾಯಾಪೇಕ್ಷೆ ಎಲ್ಲವೂ ಲಾಕ್ ಡೌನ್ ಆಗಿವೆ!
ಭೇಮಾರಿ ಹೆಸರಲ್ಲಿ ಮನುವಾದ ಹಾಗೂ ಕಾಪೊ೯ರೇಟ್ ಸವಾ೯ಧಿಕಾರ ಹದ್ದುಬಸ್ತು ಮೀರಿ ಹರಡುತ್ತದೆ.
ಈ ದೇಶ ಹಿಂದೆದೂ ಕಂಡರಿಯದ ರೀತಿಯಲ್ಲಿ ಮೋಸಕ್ಕೊಳಗಾಗಿದೆ !
ಕೂಡಲೆ ಇದರ ವಿರುದ್ದ ಮುಂಬೈ ಗುಳೆ ಕಾಮಿ೯ಕರಂತೆ  ಮೈಸೂರು ಸಂತ್ರಸ್ತರಂತೆ ಬೀದಿಗಿಳಿಯದಿದ್ದರೆ ಸಂವಿಧಾನ ಹಾಗೂ ಪ್ರಜಾಪ್ರಭುತ್ವದ ಅಂತಿಮ ಯಾತ್ರೆಗೂ ನಮಗೆ ದಿಗ್ಬಂಧನ ಬೀಳಲಿದೆ !
ಆನಂದ ತೆಲತುಂಬ್ಡೆಯ ಬಂಧನವಾಯಿತು! ಬಾಬಾಸಾಹೇಬ್ ಅಂಬೇಡ್ಕರ್ ಅವರ ಜನ್ಮದಿನದಂದೆ ಅವರ ಮುಂಬೈ ನಿವಾಸ ರಾಜಗ್ರುಹದ ಮೇಲೆ ನಿನ್ನೆ ನೀಲಿ ಬಾವುಟ ಇಳಿಸಿ  ಕಪ್ಪು ಬಾವುಟ ಹಾರಾಡಿತು!
ಇವೆಲ್ಲ ಭಾರತದ ಜನಪರ ರಾಜಕೀಯದ ಪ್ರಳಯದ ಸಂಕೇತಗಳು.
ಬನ್ನಿ! ದೈಹಿಕ ಅಂತರ ಕಾಯ್ದುಕೊಂಡೆ ಬೀದಿಗಿಳಿಯೋಣ! ಬಿಜೆಪಿ ಸವಾ೯ಧಿಕಾರದ ವಿರುದ್ದ ನಮಗಾಗಿ ನಾವು ಹೋರಾಡೋಣ!


ಇದನ್ನು ಓದಿ: ಪ್ರೊ. ಆನಂದ್ ತೇಲ್ತುಂಬ್ಡೆ ನರೇಂದ್ರ ಮೋದಿ ಸರ್ಕಾರಕ್ಕೆ ಏಕೆ ಅಪಾಯಕಾರಿಯಾದರು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...