Homeಕರ್ನಾಟಕರಾಜಕೀಯ ಲಾಕ್‌ಡೌನ್‌ ಧಿಕ್ಕರಿಸಿ! ಕಾರ್ಮಿಕ ಮುಖಂಡ ಆರ್.ಮಾನಸಯ್ಯ ಕರೆ

ರಾಜಕೀಯ ಲಾಕ್‌ಡೌನ್‌ ಧಿಕ್ಕರಿಸಿ! ಕಾರ್ಮಿಕ ಮುಖಂಡ ಆರ್.ಮಾನಸಯ್ಯ ಕರೆ

ಲಾಕ್‌ಡೌನ್‌ನ ಪರಿಣಾಮಗಳು ಭಿನ್ನ ಆಯಾಮಗಳನ್ನು ಪಡೆದುಕೊಳ್ಳುತ್ತಿದ್ದಂತೆ ದೇಶದ ವಿವಿಧ ಕಡೆಗಳಿಂದ ಹಲವು ರೀತಿಯ ದನಿಗಳು ಮೇಲೇಳುತ್ತಿವೆ. ಟಿಯುಸಿಐ ಮುಖಂಡ ಆರ್.‌ಮಾನಸಯ್ಯನವರು ಬರೆದ ಅಂತಹ ಒಂದು ಬರಹ ಇಲ್ಲಿದೆ.

- Advertisement -
- Advertisement -

ಮೊಟ್ಟ ಮೊದಲನೆಯದಾಗಿ ನಾನು ದೈಹಿಕ ಅಂತರ ಕಾಯ್ದುಕೊಳ್ಳ ಬೇಕಾದ ಲಾಕ್‌ಡೌನ್‌ ಪರವಾಗಿದ್ದೇನೆ.ಆದರೆ ಪ್ರಜಾಪ್ರಭುತ್ವವನ್ನ ಹಂತ ಹಂತವಾಗಿ ಲಾಕ್ ಡೌನ್ ಮಾಡುವ, ಕೇಂದ್ರ ಸರಕಾರದ ನೀಚಾತಿನೀಚ ರಾಜಕೀಯ ದಬ್ಬಾಳಿಕೆ ವಿರುದ್ದ ಜನತೆ ಹಾಗೂ ರಾಜಕೀಯ ಪಕ್ಷಗಳು ಕೂಡಲೆ ಧ್ವನಿ ಎತ್ತಬೇಕೆಂದು ಮನವಿ ಮಾಡುತ್ತೇನೆ.

ಕೊರೊನಾ ಕಟ್ಟಿ ಹಾಕುಲು ಇದ್ದ ಆರಂಭದ ಎಲ್ಲ ಅವಕಾಶಗಳನ್ನು ಮೋದಿ ಸರಕಾರ ಬಳಸಿಕೊಳ್ಳಲಿಲ್ಲ. ಇದು ಸರಕಾರದ ಮೊದಲನೆಯ ದೇಶಘಾತುಕ ಕೆಲಸ.

ಎರಡನೆಯದಾಗಿ, ಈ ಭೇಮಾರಿಯನ್ನು ಎದುರಿಸಲು ವೈದ್ಯಕೀಯ ಹಾಗೂ ಆಡಳಿತಾತ್ಮಕ ಸಿದ್ದತೆಗಳು ಅತ್ಯಂತ ಕಳಪೆ ಹಾಗೂ ಯಾತಕ್ಕೂ ಸರಿ ಹೋಗದಂತವುಗಳು. ಇದು ಮೋದಿ ಸರಕಾರದ ಎರಡನೆಯ ದೇಶಘಾತುಕ ಕೆಲಸ.

ಮೂರನೆಯದ್ದಾಗಿ, ಜನತಾ ಕಫ್ಯು೯ ಹಾಗೂ 21 ದಿನಗಳ ಕಾಲ ಲಾಕ್‌ಡೌನ್‌ ಘೋಷಣೆಗಿಂತ ಪೂವ೯ದಲ್ಲಿ ವಿವಿಧ ರಾಜ್ಯ ಸರಕಾರಗಳ ಜತೆ, ಸವ೯ಪಕ್ಷಗಳ ಜತೆ, ರೈತ ಕಾಮಿ೯ಕ ಹಾಗೂ ತಜ್ಞರೊಂದಿಗೆ ಸಮಾಲೋಚನೆ ನಡೆಸಲಿಲ್ಲ. ದೀಘ೯ಕಾಲದ ಲಾಕ್‌ಡೌನ್‌ ಎದುರಿಸಲು ಜನರ ಬಳಿ ಏನೇನಿದೆ -ಏನೇನಿರಬೇಕು ಹಾಗೂ ರಾಷ್ಟ್ರೀಯ ತುರ್ತು ಸೇವೆಗಳನ್ನು ಕೊಡ ಮಾಡಲು ಸರಕಾರದ ಬಳಿ  ಯಾವ ಸಿದ್ದತೆಗಳಿರಲಿಲ್ಲ. ಇದು ಸಂಘ ಪರಿವಾರ್‌ ಸರಕಾರದ ಮೂರನೆಯ ಅತೀ ದೊಡ್ಡ ದೇಶ ಘಾತುಕ ಕೆಲಸ.

ಇದಕ್ಕಿಂತ ಮಿಗಿಲಾದ ದ್ರೋಹ ಎಂದರೆ ಇಡೀ ಪರಿಸ್ಥಿಯನ್ನು  ದುರುಪಯೋಗಪಡಿಸಿಕೊಂಡು ವಿರೋಧಮುಕ್ತ ಸವಾ೯ಧಿಕಾರವನ್ನು ಚಲಾಯಿಸಿ, ತನ್ನ ಹಿಂದೂ ರಾಷ್ಟ್ರ ರಾಜಕಾರಣವನ್ನು ದೇಶಾದ್ಯಂತ ಕೊರೊನಾಗಿಂತ ಹೈ ಸ್ಪೀಡನಲ್ಲಿ ಹರಡುತ್ತಿರುವುದು. ಕಳೆದ ಒಂದುವರೆ ತಿಂಗಳಿಂದ 99% ಚಾನಲಗಳು ಹಾಗೂ 75% ಪತ್ರಿಕೆಗಳು ಹಾಗೂ 520000ಕ್ಕೂ ಹೆಚ್ಚು ಸಾಮಾಜಿಕ ಜಾಲತಾಣದ ನಕಲಿ ಖಾತೆಗಳ ಮೂಲಕ ವಿರೋಧ ಪಕ್ಷಗಳು,ಪ್ರಜಾಪ್ರಭುತ್ವವಾದಿಗಳು, ಅಂಬೇಡ್ಕರ್ವಾದಿಗಳು, ಮುಸ್ಲೀಮರು, ಕಮ್ಯೂನಿಸ್ಟ್ ರಾಷ್ಟ್ರಗಳನ್ನು ಗುರಿಯಾಗಿಸಿಕೊಂಡು ಅತೀ ದೊಡ್ಡ ದುಷ್ಪ್ರಚಾರ ಮಾಡುತ್ತಿರುವುದು.

ಈ ಪೈಕಿ ಅತ್ಯಂತ ಹೇಸಿಗೆ ಹಾಗೂ ನಿಲ೯ಜ್ಯದ ಕೆಲಸ ಎಂದರೆ, ಚಪ್ಪಾಳೆ-ಗಂಟೆ ಬಾರಿಸಲು, ಲೈಟ್ ಆಫ್ ಮಾಡಿ ದೀಪ ಹಚ್ಚಲು ಹಾಗೂ ಬಿಡಿಗಾಸಿನ ಬೆಲೆ ಇಲ್ಲದ ಸಪ್ತ ಸೂತ್ರ ಪ್ರಕಟಿಸಲು ದೇಶದ ಪ್ರಧಾನಿಯು ಸಂಪೂಣ೯ ಸೀಮಿತವಾಗಿ ಹೋಗಿದ್ದು!

ಯಾವ ತಯಾರಿ ಹಾಗೂ ಬಿಡಿಗಾಸಿನ ಸಹಾಯ ನೀಡದೆ ಮತ್ತೆ ಲಾಕ್‌ಡೌನ್‌ ವಿಸ್ತರಣೆ ಮಾಡಿದ್ದು ಅತ್ಯಂತ ರಾಜಕೀಯ ದ್ರೋಹವಾಗಿದೆ.

ಮೋದಿ ಸರಕಾರದ ದುರಾಡಳಿತದಿಂದ ಮೊದಲೆ ಮೂಲೆಗುಂಪಾಗಿದ್ದ ದೇಶದ ಆಥಿ೯ಕತೆ, ಸಂಸದೀಯ ಪ್ರಜಾಪ್ರಭುತ್ವ ಹಾಗೂ ವಿಶಾಲ ಜನವಗ೯ಗಳ ಜೀವನವು ಇನ್ನಷ್ಟು ದರಿದ್ರ ಹಾಗೂ ದಾರುಣ ಹಂತ ತಲುಪಲು ತಾನು ಕಾರಣವಲ್ಲ ಎಂದು ಸಮಥಿ೯ಸಿಕೊಳ್ಳಲು ಎಲ್ಲ ಬಗೆಯ ತಯಾರಿ ನಡೆದಿದೆ.

ಒಟ್ಟಾರೆ, ಕೊರೊನಾ ಹೆಸರಲ್ಲಿ ಅತೀ ದೊಡ್ಡ ರಾಜಕೀಯ ದಿಗ್ಭಂದನ ನಮ್ಮ ದೇಶದಲ್ಲಿ ಬಿಗಿಗೊಳ್ಳುತ್ತಿದೆ. ದೇಶದ ನಾಲ್ಲು ಮೂಲೆಗಳು ಪೊಲೀಸ್ ರಾಜ್ಯವಾಗಿ ಹೋಗಿವೆ.ಪ್ರತಿಪಕ್ಷ -ಪ್ರತಿರೋಧ-ಪ್ರತಿಕ್ರಿಯೆ -ಪ್ರತಿಭಟನೆ-ಪ್ರಶ್ನಿಸುವಿಕೆ-ಜಾತ್ಯತೀತತೆ-ಸಮಾನತೆ-ಸ್ವಾತಂತ್ರ್ಯ -ನ್ಯಾಯಾಪೇಕ್ಷೆ ಎಲ್ಲವೂ ಲಾಕ್ ಡೌನ್ ಆಗಿವೆ!
ಭೇಮಾರಿ ಹೆಸರಲ್ಲಿ ಮನುವಾದ ಹಾಗೂ ಕಾಪೊ೯ರೇಟ್ ಸವಾ೯ಧಿಕಾರ ಹದ್ದುಬಸ್ತು ಮೀರಿ ಹರಡುತ್ತದೆ.
ಈ ದೇಶ ಹಿಂದೆದೂ ಕಂಡರಿಯದ ರೀತಿಯಲ್ಲಿ ಮೋಸಕ್ಕೊಳಗಾಗಿದೆ !
ಕೂಡಲೆ ಇದರ ವಿರುದ್ದ ಮುಂಬೈ ಗುಳೆ ಕಾಮಿ೯ಕರಂತೆ  ಮೈಸೂರು ಸಂತ್ರಸ್ತರಂತೆ ಬೀದಿಗಿಳಿಯದಿದ್ದರೆ ಸಂವಿಧಾನ ಹಾಗೂ ಪ್ರಜಾಪ್ರಭುತ್ವದ ಅಂತಿಮ ಯಾತ್ರೆಗೂ ನಮಗೆ ದಿಗ್ಬಂಧನ ಬೀಳಲಿದೆ !
ಆನಂದ ತೆಲತುಂಬ್ಡೆಯ ಬಂಧನವಾಯಿತು! ಬಾಬಾಸಾಹೇಬ್ ಅಂಬೇಡ್ಕರ್ ಅವರ ಜನ್ಮದಿನದಂದೆ ಅವರ ಮುಂಬೈ ನಿವಾಸ ರಾಜಗ್ರುಹದ ಮೇಲೆ ನಿನ್ನೆ ನೀಲಿ ಬಾವುಟ ಇಳಿಸಿ  ಕಪ್ಪು ಬಾವುಟ ಹಾರಾಡಿತು!
ಇವೆಲ್ಲ ಭಾರತದ ಜನಪರ ರಾಜಕೀಯದ ಪ್ರಳಯದ ಸಂಕೇತಗಳು.
ಬನ್ನಿ! ದೈಹಿಕ ಅಂತರ ಕಾಯ್ದುಕೊಂಡೆ ಬೀದಿಗಿಳಿಯೋಣ! ಬಿಜೆಪಿ ಸವಾ೯ಧಿಕಾರದ ವಿರುದ್ದ ನಮಗಾಗಿ ನಾವು ಹೋರಾಡೋಣ!


ಇದನ್ನು ಓದಿ: ಪ್ರೊ. ಆನಂದ್ ತೇಲ್ತುಂಬ್ಡೆ ನರೇಂದ್ರ ಮೋದಿ ಸರ್ಕಾರಕ್ಕೆ ಏಕೆ ಅಪಾಯಕಾರಿಯಾದರು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...