Homeಕರ್ನಾಟಕರಾಜಕೀಯ ಲಾಕ್‌ಡೌನ್‌ ಧಿಕ್ಕರಿಸಿ! ಕಾರ್ಮಿಕ ಮುಖಂಡ ಆರ್.ಮಾನಸಯ್ಯ ಕರೆ

ರಾಜಕೀಯ ಲಾಕ್‌ಡೌನ್‌ ಧಿಕ್ಕರಿಸಿ! ಕಾರ್ಮಿಕ ಮುಖಂಡ ಆರ್.ಮಾನಸಯ್ಯ ಕರೆ

ಲಾಕ್‌ಡೌನ್‌ನ ಪರಿಣಾಮಗಳು ಭಿನ್ನ ಆಯಾಮಗಳನ್ನು ಪಡೆದುಕೊಳ್ಳುತ್ತಿದ್ದಂತೆ ದೇಶದ ವಿವಿಧ ಕಡೆಗಳಿಂದ ಹಲವು ರೀತಿಯ ದನಿಗಳು ಮೇಲೇಳುತ್ತಿವೆ. ಟಿಯುಸಿಐ ಮುಖಂಡ ಆರ್.‌ಮಾನಸಯ್ಯನವರು ಬರೆದ ಅಂತಹ ಒಂದು ಬರಹ ಇಲ್ಲಿದೆ.

- Advertisement -
- Advertisement -

ಮೊಟ್ಟ ಮೊದಲನೆಯದಾಗಿ ನಾನು ದೈಹಿಕ ಅಂತರ ಕಾಯ್ದುಕೊಳ್ಳ ಬೇಕಾದ ಲಾಕ್‌ಡೌನ್‌ ಪರವಾಗಿದ್ದೇನೆ.ಆದರೆ ಪ್ರಜಾಪ್ರಭುತ್ವವನ್ನ ಹಂತ ಹಂತವಾಗಿ ಲಾಕ್ ಡೌನ್ ಮಾಡುವ, ಕೇಂದ್ರ ಸರಕಾರದ ನೀಚಾತಿನೀಚ ರಾಜಕೀಯ ದಬ್ಬಾಳಿಕೆ ವಿರುದ್ದ ಜನತೆ ಹಾಗೂ ರಾಜಕೀಯ ಪಕ್ಷಗಳು ಕೂಡಲೆ ಧ್ವನಿ ಎತ್ತಬೇಕೆಂದು ಮನವಿ ಮಾಡುತ್ತೇನೆ.

ಕೊರೊನಾ ಕಟ್ಟಿ ಹಾಕುಲು ಇದ್ದ ಆರಂಭದ ಎಲ್ಲ ಅವಕಾಶಗಳನ್ನು ಮೋದಿ ಸರಕಾರ ಬಳಸಿಕೊಳ್ಳಲಿಲ್ಲ. ಇದು ಸರಕಾರದ ಮೊದಲನೆಯ ದೇಶಘಾತುಕ ಕೆಲಸ.

ಎರಡನೆಯದಾಗಿ, ಈ ಭೇಮಾರಿಯನ್ನು ಎದುರಿಸಲು ವೈದ್ಯಕೀಯ ಹಾಗೂ ಆಡಳಿತಾತ್ಮಕ ಸಿದ್ದತೆಗಳು ಅತ್ಯಂತ ಕಳಪೆ ಹಾಗೂ ಯಾತಕ್ಕೂ ಸರಿ ಹೋಗದಂತವುಗಳು. ಇದು ಮೋದಿ ಸರಕಾರದ ಎರಡನೆಯ ದೇಶಘಾತುಕ ಕೆಲಸ.

ಮೂರನೆಯದ್ದಾಗಿ, ಜನತಾ ಕಫ್ಯು೯ ಹಾಗೂ 21 ದಿನಗಳ ಕಾಲ ಲಾಕ್‌ಡೌನ್‌ ಘೋಷಣೆಗಿಂತ ಪೂವ೯ದಲ್ಲಿ ವಿವಿಧ ರಾಜ್ಯ ಸರಕಾರಗಳ ಜತೆ, ಸವ೯ಪಕ್ಷಗಳ ಜತೆ, ರೈತ ಕಾಮಿ೯ಕ ಹಾಗೂ ತಜ್ಞರೊಂದಿಗೆ ಸಮಾಲೋಚನೆ ನಡೆಸಲಿಲ್ಲ. ದೀಘ೯ಕಾಲದ ಲಾಕ್‌ಡೌನ್‌ ಎದುರಿಸಲು ಜನರ ಬಳಿ ಏನೇನಿದೆ -ಏನೇನಿರಬೇಕು ಹಾಗೂ ರಾಷ್ಟ್ರೀಯ ತುರ್ತು ಸೇವೆಗಳನ್ನು ಕೊಡ ಮಾಡಲು ಸರಕಾರದ ಬಳಿ  ಯಾವ ಸಿದ್ದತೆಗಳಿರಲಿಲ್ಲ. ಇದು ಸಂಘ ಪರಿವಾರ್‌ ಸರಕಾರದ ಮೂರನೆಯ ಅತೀ ದೊಡ್ಡ ದೇಶ ಘಾತುಕ ಕೆಲಸ.

ಇದಕ್ಕಿಂತ ಮಿಗಿಲಾದ ದ್ರೋಹ ಎಂದರೆ ಇಡೀ ಪರಿಸ್ಥಿಯನ್ನು  ದುರುಪಯೋಗಪಡಿಸಿಕೊಂಡು ವಿರೋಧಮುಕ್ತ ಸವಾ೯ಧಿಕಾರವನ್ನು ಚಲಾಯಿಸಿ, ತನ್ನ ಹಿಂದೂ ರಾಷ್ಟ್ರ ರಾಜಕಾರಣವನ್ನು ದೇಶಾದ್ಯಂತ ಕೊರೊನಾಗಿಂತ ಹೈ ಸ್ಪೀಡನಲ್ಲಿ ಹರಡುತ್ತಿರುವುದು. ಕಳೆದ ಒಂದುವರೆ ತಿಂಗಳಿಂದ 99% ಚಾನಲಗಳು ಹಾಗೂ 75% ಪತ್ರಿಕೆಗಳು ಹಾಗೂ 520000ಕ್ಕೂ ಹೆಚ್ಚು ಸಾಮಾಜಿಕ ಜಾಲತಾಣದ ನಕಲಿ ಖಾತೆಗಳ ಮೂಲಕ ವಿರೋಧ ಪಕ್ಷಗಳು,ಪ್ರಜಾಪ್ರಭುತ್ವವಾದಿಗಳು, ಅಂಬೇಡ್ಕರ್ವಾದಿಗಳು, ಮುಸ್ಲೀಮರು, ಕಮ್ಯೂನಿಸ್ಟ್ ರಾಷ್ಟ್ರಗಳನ್ನು ಗುರಿಯಾಗಿಸಿಕೊಂಡು ಅತೀ ದೊಡ್ಡ ದುಷ್ಪ್ರಚಾರ ಮಾಡುತ್ತಿರುವುದು.

ಈ ಪೈಕಿ ಅತ್ಯಂತ ಹೇಸಿಗೆ ಹಾಗೂ ನಿಲ೯ಜ್ಯದ ಕೆಲಸ ಎಂದರೆ, ಚಪ್ಪಾಳೆ-ಗಂಟೆ ಬಾರಿಸಲು, ಲೈಟ್ ಆಫ್ ಮಾಡಿ ದೀಪ ಹಚ್ಚಲು ಹಾಗೂ ಬಿಡಿಗಾಸಿನ ಬೆಲೆ ಇಲ್ಲದ ಸಪ್ತ ಸೂತ್ರ ಪ್ರಕಟಿಸಲು ದೇಶದ ಪ್ರಧಾನಿಯು ಸಂಪೂಣ೯ ಸೀಮಿತವಾಗಿ ಹೋಗಿದ್ದು!

ಯಾವ ತಯಾರಿ ಹಾಗೂ ಬಿಡಿಗಾಸಿನ ಸಹಾಯ ನೀಡದೆ ಮತ್ತೆ ಲಾಕ್‌ಡೌನ್‌ ವಿಸ್ತರಣೆ ಮಾಡಿದ್ದು ಅತ್ಯಂತ ರಾಜಕೀಯ ದ್ರೋಹವಾಗಿದೆ.

ಮೋದಿ ಸರಕಾರದ ದುರಾಡಳಿತದಿಂದ ಮೊದಲೆ ಮೂಲೆಗುಂಪಾಗಿದ್ದ ದೇಶದ ಆಥಿ೯ಕತೆ, ಸಂಸದೀಯ ಪ್ರಜಾಪ್ರಭುತ್ವ ಹಾಗೂ ವಿಶಾಲ ಜನವಗ೯ಗಳ ಜೀವನವು ಇನ್ನಷ್ಟು ದರಿದ್ರ ಹಾಗೂ ದಾರುಣ ಹಂತ ತಲುಪಲು ತಾನು ಕಾರಣವಲ್ಲ ಎಂದು ಸಮಥಿ೯ಸಿಕೊಳ್ಳಲು ಎಲ್ಲ ಬಗೆಯ ತಯಾರಿ ನಡೆದಿದೆ.

ಒಟ್ಟಾರೆ, ಕೊರೊನಾ ಹೆಸರಲ್ಲಿ ಅತೀ ದೊಡ್ಡ ರಾಜಕೀಯ ದಿಗ್ಭಂದನ ನಮ್ಮ ದೇಶದಲ್ಲಿ ಬಿಗಿಗೊಳ್ಳುತ್ತಿದೆ. ದೇಶದ ನಾಲ್ಲು ಮೂಲೆಗಳು ಪೊಲೀಸ್ ರಾಜ್ಯವಾಗಿ ಹೋಗಿವೆ.ಪ್ರತಿಪಕ್ಷ -ಪ್ರತಿರೋಧ-ಪ್ರತಿಕ್ರಿಯೆ -ಪ್ರತಿಭಟನೆ-ಪ್ರಶ್ನಿಸುವಿಕೆ-ಜಾತ್ಯತೀತತೆ-ಸಮಾನತೆ-ಸ್ವಾತಂತ್ರ್ಯ -ನ್ಯಾಯಾಪೇಕ್ಷೆ ಎಲ್ಲವೂ ಲಾಕ್ ಡೌನ್ ಆಗಿವೆ!
ಭೇಮಾರಿ ಹೆಸರಲ್ಲಿ ಮನುವಾದ ಹಾಗೂ ಕಾಪೊ೯ರೇಟ್ ಸವಾ೯ಧಿಕಾರ ಹದ್ದುಬಸ್ತು ಮೀರಿ ಹರಡುತ್ತದೆ.
ಈ ದೇಶ ಹಿಂದೆದೂ ಕಂಡರಿಯದ ರೀತಿಯಲ್ಲಿ ಮೋಸಕ್ಕೊಳಗಾಗಿದೆ !
ಕೂಡಲೆ ಇದರ ವಿರುದ್ದ ಮುಂಬೈ ಗುಳೆ ಕಾಮಿ೯ಕರಂತೆ  ಮೈಸೂರು ಸಂತ್ರಸ್ತರಂತೆ ಬೀದಿಗಿಳಿಯದಿದ್ದರೆ ಸಂವಿಧಾನ ಹಾಗೂ ಪ್ರಜಾಪ್ರಭುತ್ವದ ಅಂತಿಮ ಯಾತ್ರೆಗೂ ನಮಗೆ ದಿಗ್ಬಂಧನ ಬೀಳಲಿದೆ !
ಆನಂದ ತೆಲತುಂಬ್ಡೆಯ ಬಂಧನವಾಯಿತು! ಬಾಬಾಸಾಹೇಬ್ ಅಂಬೇಡ್ಕರ್ ಅವರ ಜನ್ಮದಿನದಂದೆ ಅವರ ಮುಂಬೈ ನಿವಾಸ ರಾಜಗ್ರುಹದ ಮೇಲೆ ನಿನ್ನೆ ನೀಲಿ ಬಾವುಟ ಇಳಿಸಿ  ಕಪ್ಪು ಬಾವುಟ ಹಾರಾಡಿತು!
ಇವೆಲ್ಲ ಭಾರತದ ಜನಪರ ರಾಜಕೀಯದ ಪ್ರಳಯದ ಸಂಕೇತಗಳು.
ಬನ್ನಿ! ದೈಹಿಕ ಅಂತರ ಕಾಯ್ದುಕೊಂಡೆ ಬೀದಿಗಿಳಿಯೋಣ! ಬಿಜೆಪಿ ಸವಾ೯ಧಿಕಾರದ ವಿರುದ್ದ ನಮಗಾಗಿ ನಾವು ಹೋರಾಡೋಣ!


ಇದನ್ನು ಓದಿ: ಪ್ರೊ. ಆನಂದ್ ತೇಲ್ತುಂಬ್ಡೆ ನರೇಂದ್ರ ಮೋದಿ ಸರ್ಕಾರಕ್ಕೆ ಏಕೆ ಅಪಾಯಕಾರಿಯಾದರು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...