Homeಕರ್ನಾಟಕರಾಜಕೀಯ ಲಾಕ್‌ಡೌನ್‌ ಧಿಕ್ಕರಿಸಿ! ಕಾರ್ಮಿಕ ಮುಖಂಡ ಆರ್.ಮಾನಸಯ್ಯ ಕರೆ

ರಾಜಕೀಯ ಲಾಕ್‌ಡೌನ್‌ ಧಿಕ್ಕರಿಸಿ! ಕಾರ್ಮಿಕ ಮುಖಂಡ ಆರ್.ಮಾನಸಯ್ಯ ಕರೆ

ಲಾಕ್‌ಡೌನ್‌ನ ಪರಿಣಾಮಗಳು ಭಿನ್ನ ಆಯಾಮಗಳನ್ನು ಪಡೆದುಕೊಳ್ಳುತ್ತಿದ್ದಂತೆ ದೇಶದ ವಿವಿಧ ಕಡೆಗಳಿಂದ ಹಲವು ರೀತಿಯ ದನಿಗಳು ಮೇಲೇಳುತ್ತಿವೆ. ಟಿಯುಸಿಐ ಮುಖಂಡ ಆರ್.‌ಮಾನಸಯ್ಯನವರು ಬರೆದ ಅಂತಹ ಒಂದು ಬರಹ ಇಲ್ಲಿದೆ.

- Advertisement -
- Advertisement -

ಮೊಟ್ಟ ಮೊದಲನೆಯದಾಗಿ ನಾನು ದೈಹಿಕ ಅಂತರ ಕಾಯ್ದುಕೊಳ್ಳ ಬೇಕಾದ ಲಾಕ್‌ಡೌನ್‌ ಪರವಾಗಿದ್ದೇನೆ.ಆದರೆ ಪ್ರಜಾಪ್ರಭುತ್ವವನ್ನ ಹಂತ ಹಂತವಾಗಿ ಲಾಕ್ ಡೌನ್ ಮಾಡುವ, ಕೇಂದ್ರ ಸರಕಾರದ ನೀಚಾತಿನೀಚ ರಾಜಕೀಯ ದಬ್ಬಾಳಿಕೆ ವಿರುದ್ದ ಜನತೆ ಹಾಗೂ ರಾಜಕೀಯ ಪಕ್ಷಗಳು ಕೂಡಲೆ ಧ್ವನಿ ಎತ್ತಬೇಕೆಂದು ಮನವಿ ಮಾಡುತ್ತೇನೆ.

ಕೊರೊನಾ ಕಟ್ಟಿ ಹಾಕುಲು ಇದ್ದ ಆರಂಭದ ಎಲ್ಲ ಅವಕಾಶಗಳನ್ನು ಮೋದಿ ಸರಕಾರ ಬಳಸಿಕೊಳ್ಳಲಿಲ್ಲ. ಇದು ಸರಕಾರದ ಮೊದಲನೆಯ ದೇಶಘಾತುಕ ಕೆಲಸ.

ಎರಡನೆಯದಾಗಿ, ಈ ಭೇಮಾರಿಯನ್ನು ಎದುರಿಸಲು ವೈದ್ಯಕೀಯ ಹಾಗೂ ಆಡಳಿತಾತ್ಮಕ ಸಿದ್ದತೆಗಳು ಅತ್ಯಂತ ಕಳಪೆ ಹಾಗೂ ಯಾತಕ್ಕೂ ಸರಿ ಹೋಗದಂತವುಗಳು. ಇದು ಮೋದಿ ಸರಕಾರದ ಎರಡನೆಯ ದೇಶಘಾತುಕ ಕೆಲಸ.

ಮೂರನೆಯದ್ದಾಗಿ, ಜನತಾ ಕಫ್ಯು೯ ಹಾಗೂ 21 ದಿನಗಳ ಕಾಲ ಲಾಕ್‌ಡೌನ್‌ ಘೋಷಣೆಗಿಂತ ಪೂವ೯ದಲ್ಲಿ ವಿವಿಧ ರಾಜ್ಯ ಸರಕಾರಗಳ ಜತೆ, ಸವ೯ಪಕ್ಷಗಳ ಜತೆ, ರೈತ ಕಾಮಿ೯ಕ ಹಾಗೂ ತಜ್ಞರೊಂದಿಗೆ ಸಮಾಲೋಚನೆ ನಡೆಸಲಿಲ್ಲ. ದೀಘ೯ಕಾಲದ ಲಾಕ್‌ಡೌನ್‌ ಎದುರಿಸಲು ಜನರ ಬಳಿ ಏನೇನಿದೆ -ಏನೇನಿರಬೇಕು ಹಾಗೂ ರಾಷ್ಟ್ರೀಯ ತುರ್ತು ಸೇವೆಗಳನ್ನು ಕೊಡ ಮಾಡಲು ಸರಕಾರದ ಬಳಿ  ಯಾವ ಸಿದ್ದತೆಗಳಿರಲಿಲ್ಲ. ಇದು ಸಂಘ ಪರಿವಾರ್‌ ಸರಕಾರದ ಮೂರನೆಯ ಅತೀ ದೊಡ್ಡ ದೇಶ ಘಾತುಕ ಕೆಲಸ.

ಇದಕ್ಕಿಂತ ಮಿಗಿಲಾದ ದ್ರೋಹ ಎಂದರೆ ಇಡೀ ಪರಿಸ್ಥಿಯನ್ನು  ದುರುಪಯೋಗಪಡಿಸಿಕೊಂಡು ವಿರೋಧಮುಕ್ತ ಸವಾ೯ಧಿಕಾರವನ್ನು ಚಲಾಯಿಸಿ, ತನ್ನ ಹಿಂದೂ ರಾಷ್ಟ್ರ ರಾಜಕಾರಣವನ್ನು ದೇಶಾದ್ಯಂತ ಕೊರೊನಾಗಿಂತ ಹೈ ಸ್ಪೀಡನಲ್ಲಿ ಹರಡುತ್ತಿರುವುದು. ಕಳೆದ ಒಂದುವರೆ ತಿಂಗಳಿಂದ 99% ಚಾನಲಗಳು ಹಾಗೂ 75% ಪತ್ರಿಕೆಗಳು ಹಾಗೂ 520000ಕ್ಕೂ ಹೆಚ್ಚು ಸಾಮಾಜಿಕ ಜಾಲತಾಣದ ನಕಲಿ ಖಾತೆಗಳ ಮೂಲಕ ವಿರೋಧ ಪಕ್ಷಗಳು,ಪ್ರಜಾಪ್ರಭುತ್ವವಾದಿಗಳು, ಅಂಬೇಡ್ಕರ್ವಾದಿಗಳು, ಮುಸ್ಲೀಮರು, ಕಮ್ಯೂನಿಸ್ಟ್ ರಾಷ್ಟ್ರಗಳನ್ನು ಗುರಿಯಾಗಿಸಿಕೊಂಡು ಅತೀ ದೊಡ್ಡ ದುಷ್ಪ್ರಚಾರ ಮಾಡುತ್ತಿರುವುದು.

ಈ ಪೈಕಿ ಅತ್ಯಂತ ಹೇಸಿಗೆ ಹಾಗೂ ನಿಲ೯ಜ್ಯದ ಕೆಲಸ ಎಂದರೆ, ಚಪ್ಪಾಳೆ-ಗಂಟೆ ಬಾರಿಸಲು, ಲೈಟ್ ಆಫ್ ಮಾಡಿ ದೀಪ ಹಚ್ಚಲು ಹಾಗೂ ಬಿಡಿಗಾಸಿನ ಬೆಲೆ ಇಲ್ಲದ ಸಪ್ತ ಸೂತ್ರ ಪ್ರಕಟಿಸಲು ದೇಶದ ಪ್ರಧಾನಿಯು ಸಂಪೂಣ೯ ಸೀಮಿತವಾಗಿ ಹೋಗಿದ್ದು!

ಯಾವ ತಯಾರಿ ಹಾಗೂ ಬಿಡಿಗಾಸಿನ ಸಹಾಯ ನೀಡದೆ ಮತ್ತೆ ಲಾಕ್‌ಡೌನ್‌ ವಿಸ್ತರಣೆ ಮಾಡಿದ್ದು ಅತ್ಯಂತ ರಾಜಕೀಯ ದ್ರೋಹವಾಗಿದೆ.

ಮೋದಿ ಸರಕಾರದ ದುರಾಡಳಿತದಿಂದ ಮೊದಲೆ ಮೂಲೆಗುಂಪಾಗಿದ್ದ ದೇಶದ ಆಥಿ೯ಕತೆ, ಸಂಸದೀಯ ಪ್ರಜಾಪ್ರಭುತ್ವ ಹಾಗೂ ವಿಶಾಲ ಜನವಗ೯ಗಳ ಜೀವನವು ಇನ್ನಷ್ಟು ದರಿದ್ರ ಹಾಗೂ ದಾರುಣ ಹಂತ ತಲುಪಲು ತಾನು ಕಾರಣವಲ್ಲ ಎಂದು ಸಮಥಿ೯ಸಿಕೊಳ್ಳಲು ಎಲ್ಲ ಬಗೆಯ ತಯಾರಿ ನಡೆದಿದೆ.

ಒಟ್ಟಾರೆ, ಕೊರೊನಾ ಹೆಸರಲ್ಲಿ ಅತೀ ದೊಡ್ಡ ರಾಜಕೀಯ ದಿಗ್ಭಂದನ ನಮ್ಮ ದೇಶದಲ್ಲಿ ಬಿಗಿಗೊಳ್ಳುತ್ತಿದೆ. ದೇಶದ ನಾಲ್ಲು ಮೂಲೆಗಳು ಪೊಲೀಸ್ ರಾಜ್ಯವಾಗಿ ಹೋಗಿವೆ.ಪ್ರತಿಪಕ್ಷ -ಪ್ರತಿರೋಧ-ಪ್ರತಿಕ್ರಿಯೆ -ಪ್ರತಿಭಟನೆ-ಪ್ರಶ್ನಿಸುವಿಕೆ-ಜಾತ್ಯತೀತತೆ-ಸಮಾನತೆ-ಸ್ವಾತಂತ್ರ್ಯ -ನ್ಯಾಯಾಪೇಕ್ಷೆ ಎಲ್ಲವೂ ಲಾಕ್ ಡೌನ್ ಆಗಿವೆ!
ಭೇಮಾರಿ ಹೆಸರಲ್ಲಿ ಮನುವಾದ ಹಾಗೂ ಕಾಪೊ೯ರೇಟ್ ಸವಾ೯ಧಿಕಾರ ಹದ್ದುಬಸ್ತು ಮೀರಿ ಹರಡುತ್ತದೆ.
ಈ ದೇಶ ಹಿಂದೆದೂ ಕಂಡರಿಯದ ರೀತಿಯಲ್ಲಿ ಮೋಸಕ್ಕೊಳಗಾಗಿದೆ !
ಕೂಡಲೆ ಇದರ ವಿರುದ್ದ ಮುಂಬೈ ಗುಳೆ ಕಾಮಿ೯ಕರಂತೆ  ಮೈಸೂರು ಸಂತ್ರಸ್ತರಂತೆ ಬೀದಿಗಿಳಿಯದಿದ್ದರೆ ಸಂವಿಧಾನ ಹಾಗೂ ಪ್ರಜಾಪ್ರಭುತ್ವದ ಅಂತಿಮ ಯಾತ್ರೆಗೂ ನಮಗೆ ದಿಗ್ಬಂಧನ ಬೀಳಲಿದೆ !
ಆನಂದ ತೆಲತುಂಬ್ಡೆಯ ಬಂಧನವಾಯಿತು! ಬಾಬಾಸಾಹೇಬ್ ಅಂಬೇಡ್ಕರ್ ಅವರ ಜನ್ಮದಿನದಂದೆ ಅವರ ಮುಂಬೈ ನಿವಾಸ ರಾಜಗ್ರುಹದ ಮೇಲೆ ನಿನ್ನೆ ನೀಲಿ ಬಾವುಟ ಇಳಿಸಿ  ಕಪ್ಪು ಬಾವುಟ ಹಾರಾಡಿತು!
ಇವೆಲ್ಲ ಭಾರತದ ಜನಪರ ರಾಜಕೀಯದ ಪ್ರಳಯದ ಸಂಕೇತಗಳು.
ಬನ್ನಿ! ದೈಹಿಕ ಅಂತರ ಕಾಯ್ದುಕೊಂಡೆ ಬೀದಿಗಿಳಿಯೋಣ! ಬಿಜೆಪಿ ಸವಾ೯ಧಿಕಾರದ ವಿರುದ್ದ ನಮಗಾಗಿ ನಾವು ಹೋರಾಡೋಣ!


ಇದನ್ನು ಓದಿ: ಪ್ರೊ. ಆನಂದ್ ತೇಲ್ತುಂಬ್ಡೆ ನರೇಂದ್ರ ಮೋದಿ ಸರ್ಕಾರಕ್ಕೆ ಏಕೆ ಅಪಾಯಕಾರಿಯಾದರು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...