Homeಕರ್ನಾಟಕರಾಜಕೀಯ ಲಾಕ್‌ಡೌನ್‌ ಧಿಕ್ಕರಿಸಿ! ಕಾರ್ಮಿಕ ಮುಖಂಡ ಆರ್.ಮಾನಸಯ್ಯ ಕರೆ

ರಾಜಕೀಯ ಲಾಕ್‌ಡೌನ್‌ ಧಿಕ್ಕರಿಸಿ! ಕಾರ್ಮಿಕ ಮುಖಂಡ ಆರ್.ಮಾನಸಯ್ಯ ಕರೆ

ಲಾಕ್‌ಡೌನ್‌ನ ಪರಿಣಾಮಗಳು ಭಿನ್ನ ಆಯಾಮಗಳನ್ನು ಪಡೆದುಕೊಳ್ಳುತ್ತಿದ್ದಂತೆ ದೇಶದ ವಿವಿಧ ಕಡೆಗಳಿಂದ ಹಲವು ರೀತಿಯ ದನಿಗಳು ಮೇಲೇಳುತ್ತಿವೆ. ಟಿಯುಸಿಐ ಮುಖಂಡ ಆರ್.‌ಮಾನಸಯ್ಯನವರು ಬರೆದ ಅಂತಹ ಒಂದು ಬರಹ ಇಲ್ಲಿದೆ.

- Advertisement -
- Advertisement -

ಮೊಟ್ಟ ಮೊದಲನೆಯದಾಗಿ ನಾನು ದೈಹಿಕ ಅಂತರ ಕಾಯ್ದುಕೊಳ್ಳ ಬೇಕಾದ ಲಾಕ್‌ಡೌನ್‌ ಪರವಾಗಿದ್ದೇನೆ.ಆದರೆ ಪ್ರಜಾಪ್ರಭುತ್ವವನ್ನ ಹಂತ ಹಂತವಾಗಿ ಲಾಕ್ ಡೌನ್ ಮಾಡುವ, ಕೇಂದ್ರ ಸರಕಾರದ ನೀಚಾತಿನೀಚ ರಾಜಕೀಯ ದಬ್ಬಾಳಿಕೆ ವಿರುದ್ದ ಜನತೆ ಹಾಗೂ ರಾಜಕೀಯ ಪಕ್ಷಗಳು ಕೂಡಲೆ ಧ್ವನಿ ಎತ್ತಬೇಕೆಂದು ಮನವಿ ಮಾಡುತ್ತೇನೆ.

ಕೊರೊನಾ ಕಟ್ಟಿ ಹಾಕುಲು ಇದ್ದ ಆರಂಭದ ಎಲ್ಲ ಅವಕಾಶಗಳನ್ನು ಮೋದಿ ಸರಕಾರ ಬಳಸಿಕೊಳ್ಳಲಿಲ್ಲ. ಇದು ಸರಕಾರದ ಮೊದಲನೆಯ ದೇಶಘಾತುಕ ಕೆಲಸ.

ಎರಡನೆಯದಾಗಿ, ಈ ಭೇಮಾರಿಯನ್ನು ಎದುರಿಸಲು ವೈದ್ಯಕೀಯ ಹಾಗೂ ಆಡಳಿತಾತ್ಮಕ ಸಿದ್ದತೆಗಳು ಅತ್ಯಂತ ಕಳಪೆ ಹಾಗೂ ಯಾತಕ್ಕೂ ಸರಿ ಹೋಗದಂತವುಗಳು. ಇದು ಮೋದಿ ಸರಕಾರದ ಎರಡನೆಯ ದೇಶಘಾತುಕ ಕೆಲಸ.

ಮೂರನೆಯದ್ದಾಗಿ, ಜನತಾ ಕಫ್ಯು೯ ಹಾಗೂ 21 ದಿನಗಳ ಕಾಲ ಲಾಕ್‌ಡೌನ್‌ ಘೋಷಣೆಗಿಂತ ಪೂವ೯ದಲ್ಲಿ ವಿವಿಧ ರಾಜ್ಯ ಸರಕಾರಗಳ ಜತೆ, ಸವ೯ಪಕ್ಷಗಳ ಜತೆ, ರೈತ ಕಾಮಿ೯ಕ ಹಾಗೂ ತಜ್ಞರೊಂದಿಗೆ ಸಮಾಲೋಚನೆ ನಡೆಸಲಿಲ್ಲ. ದೀಘ೯ಕಾಲದ ಲಾಕ್‌ಡೌನ್‌ ಎದುರಿಸಲು ಜನರ ಬಳಿ ಏನೇನಿದೆ -ಏನೇನಿರಬೇಕು ಹಾಗೂ ರಾಷ್ಟ್ರೀಯ ತುರ್ತು ಸೇವೆಗಳನ್ನು ಕೊಡ ಮಾಡಲು ಸರಕಾರದ ಬಳಿ  ಯಾವ ಸಿದ್ದತೆಗಳಿರಲಿಲ್ಲ. ಇದು ಸಂಘ ಪರಿವಾರ್‌ ಸರಕಾರದ ಮೂರನೆಯ ಅತೀ ದೊಡ್ಡ ದೇಶ ಘಾತುಕ ಕೆಲಸ.

ಇದಕ್ಕಿಂತ ಮಿಗಿಲಾದ ದ್ರೋಹ ಎಂದರೆ ಇಡೀ ಪರಿಸ್ಥಿಯನ್ನು  ದುರುಪಯೋಗಪಡಿಸಿಕೊಂಡು ವಿರೋಧಮುಕ್ತ ಸವಾ೯ಧಿಕಾರವನ್ನು ಚಲಾಯಿಸಿ, ತನ್ನ ಹಿಂದೂ ರಾಷ್ಟ್ರ ರಾಜಕಾರಣವನ್ನು ದೇಶಾದ್ಯಂತ ಕೊರೊನಾಗಿಂತ ಹೈ ಸ್ಪೀಡನಲ್ಲಿ ಹರಡುತ್ತಿರುವುದು. ಕಳೆದ ಒಂದುವರೆ ತಿಂಗಳಿಂದ 99% ಚಾನಲಗಳು ಹಾಗೂ 75% ಪತ್ರಿಕೆಗಳು ಹಾಗೂ 520000ಕ್ಕೂ ಹೆಚ್ಚು ಸಾಮಾಜಿಕ ಜಾಲತಾಣದ ನಕಲಿ ಖಾತೆಗಳ ಮೂಲಕ ವಿರೋಧ ಪಕ್ಷಗಳು,ಪ್ರಜಾಪ್ರಭುತ್ವವಾದಿಗಳು, ಅಂಬೇಡ್ಕರ್ವಾದಿಗಳು, ಮುಸ್ಲೀಮರು, ಕಮ್ಯೂನಿಸ್ಟ್ ರಾಷ್ಟ್ರಗಳನ್ನು ಗುರಿಯಾಗಿಸಿಕೊಂಡು ಅತೀ ದೊಡ್ಡ ದುಷ್ಪ್ರಚಾರ ಮಾಡುತ್ತಿರುವುದು.

ಈ ಪೈಕಿ ಅತ್ಯಂತ ಹೇಸಿಗೆ ಹಾಗೂ ನಿಲ೯ಜ್ಯದ ಕೆಲಸ ಎಂದರೆ, ಚಪ್ಪಾಳೆ-ಗಂಟೆ ಬಾರಿಸಲು, ಲೈಟ್ ಆಫ್ ಮಾಡಿ ದೀಪ ಹಚ್ಚಲು ಹಾಗೂ ಬಿಡಿಗಾಸಿನ ಬೆಲೆ ಇಲ್ಲದ ಸಪ್ತ ಸೂತ್ರ ಪ್ರಕಟಿಸಲು ದೇಶದ ಪ್ರಧಾನಿಯು ಸಂಪೂಣ೯ ಸೀಮಿತವಾಗಿ ಹೋಗಿದ್ದು!

ಯಾವ ತಯಾರಿ ಹಾಗೂ ಬಿಡಿಗಾಸಿನ ಸಹಾಯ ನೀಡದೆ ಮತ್ತೆ ಲಾಕ್‌ಡೌನ್‌ ವಿಸ್ತರಣೆ ಮಾಡಿದ್ದು ಅತ್ಯಂತ ರಾಜಕೀಯ ದ್ರೋಹವಾಗಿದೆ.

ಮೋದಿ ಸರಕಾರದ ದುರಾಡಳಿತದಿಂದ ಮೊದಲೆ ಮೂಲೆಗುಂಪಾಗಿದ್ದ ದೇಶದ ಆಥಿ೯ಕತೆ, ಸಂಸದೀಯ ಪ್ರಜಾಪ್ರಭುತ್ವ ಹಾಗೂ ವಿಶಾಲ ಜನವಗ೯ಗಳ ಜೀವನವು ಇನ್ನಷ್ಟು ದರಿದ್ರ ಹಾಗೂ ದಾರುಣ ಹಂತ ತಲುಪಲು ತಾನು ಕಾರಣವಲ್ಲ ಎಂದು ಸಮಥಿ೯ಸಿಕೊಳ್ಳಲು ಎಲ್ಲ ಬಗೆಯ ತಯಾರಿ ನಡೆದಿದೆ.

ಒಟ್ಟಾರೆ, ಕೊರೊನಾ ಹೆಸರಲ್ಲಿ ಅತೀ ದೊಡ್ಡ ರಾಜಕೀಯ ದಿಗ್ಭಂದನ ನಮ್ಮ ದೇಶದಲ್ಲಿ ಬಿಗಿಗೊಳ್ಳುತ್ತಿದೆ. ದೇಶದ ನಾಲ್ಲು ಮೂಲೆಗಳು ಪೊಲೀಸ್ ರಾಜ್ಯವಾಗಿ ಹೋಗಿವೆ.ಪ್ರತಿಪಕ್ಷ -ಪ್ರತಿರೋಧ-ಪ್ರತಿಕ್ರಿಯೆ -ಪ್ರತಿಭಟನೆ-ಪ್ರಶ್ನಿಸುವಿಕೆ-ಜಾತ್ಯತೀತತೆ-ಸಮಾನತೆ-ಸ್ವಾತಂತ್ರ್ಯ -ನ್ಯಾಯಾಪೇಕ್ಷೆ ಎಲ್ಲವೂ ಲಾಕ್ ಡೌನ್ ಆಗಿವೆ!
ಭೇಮಾರಿ ಹೆಸರಲ್ಲಿ ಮನುವಾದ ಹಾಗೂ ಕಾಪೊ೯ರೇಟ್ ಸವಾ೯ಧಿಕಾರ ಹದ್ದುಬಸ್ತು ಮೀರಿ ಹರಡುತ್ತದೆ.
ಈ ದೇಶ ಹಿಂದೆದೂ ಕಂಡರಿಯದ ರೀತಿಯಲ್ಲಿ ಮೋಸಕ್ಕೊಳಗಾಗಿದೆ !
ಕೂಡಲೆ ಇದರ ವಿರುದ್ದ ಮುಂಬೈ ಗುಳೆ ಕಾಮಿ೯ಕರಂತೆ  ಮೈಸೂರು ಸಂತ್ರಸ್ತರಂತೆ ಬೀದಿಗಿಳಿಯದಿದ್ದರೆ ಸಂವಿಧಾನ ಹಾಗೂ ಪ್ರಜಾಪ್ರಭುತ್ವದ ಅಂತಿಮ ಯಾತ್ರೆಗೂ ನಮಗೆ ದಿಗ್ಬಂಧನ ಬೀಳಲಿದೆ !
ಆನಂದ ತೆಲತುಂಬ್ಡೆಯ ಬಂಧನವಾಯಿತು! ಬಾಬಾಸಾಹೇಬ್ ಅಂಬೇಡ್ಕರ್ ಅವರ ಜನ್ಮದಿನದಂದೆ ಅವರ ಮುಂಬೈ ನಿವಾಸ ರಾಜಗ್ರುಹದ ಮೇಲೆ ನಿನ್ನೆ ನೀಲಿ ಬಾವುಟ ಇಳಿಸಿ  ಕಪ್ಪು ಬಾವುಟ ಹಾರಾಡಿತು!
ಇವೆಲ್ಲ ಭಾರತದ ಜನಪರ ರಾಜಕೀಯದ ಪ್ರಳಯದ ಸಂಕೇತಗಳು.
ಬನ್ನಿ! ದೈಹಿಕ ಅಂತರ ಕಾಯ್ದುಕೊಂಡೆ ಬೀದಿಗಿಳಿಯೋಣ! ಬಿಜೆಪಿ ಸವಾ೯ಧಿಕಾರದ ವಿರುದ್ದ ನಮಗಾಗಿ ನಾವು ಹೋರಾಡೋಣ!


ಇದನ್ನು ಓದಿ: ಪ್ರೊ. ಆನಂದ್ ತೇಲ್ತುಂಬ್ಡೆ ನರೇಂದ್ರ ಮೋದಿ ಸರ್ಕಾರಕ್ಕೆ ಏಕೆ ಅಪಾಯಕಾರಿಯಾದರು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...