Homeಮುಖಪುಟತೀವ್ರ ಮಾಲಿನ್ಯದ ದೆಹಲಿಯಲ್ಲಿ ಸುಪ್ರೀಂ ಕೋರ್ಟ್‌ ಆದೇಶ ಧಿಕ್ಕರಿಸಿ ಬಿಜೆಪಿ ಪಕ್ಷದ ಕಚೇರಿ ಕಾಮಗಾರಿ ಚಾಲ್ತಿಯಲ್ಲಿದೆ..

ತೀವ್ರ ಮಾಲಿನ್ಯದ ದೆಹಲಿಯಲ್ಲಿ ಸುಪ್ರೀಂ ಕೋರ್ಟ್‌ ಆದೇಶ ಧಿಕ್ಕರಿಸಿ ಬಿಜೆಪಿ ಪಕ್ಷದ ಕಚೇರಿ ಕಾಮಗಾರಿ ಚಾಲ್ತಿಯಲ್ಲಿದೆ..

- Advertisement -
- Advertisement -

ನವೆಂಬರ್ 4 ರಂದು ನ್ಯಾಯಮೂರ್ತಿ ಅರುಣ್ ಮಿಶ್ರಾ ನೇತೃತ್ವದ ಸುಪ್ರೀಂ ಕೋರ್ಟ್ ಪೀಠವು ಕೇಂದ್ರ ಸರ್ಕಾರ ಮತ್ತು ದೆಹಲಿ, ಹರಿಯಾಣ ಮತ್ತು ಪಂಜಾಬ್ ರಾಜ್ಯಗಳನ್ನು ಮಾಲಿನ್ಯವನ್ನು ನಿಯಂತ್ರಿಸುವ ಕ್ರಮಗಳನ್ನು ತೆಗೆದುಕೊಳ್ಳುವಲ್ಲಿ ವಿಫಲವಾಗಿದೆ ಎಂದು ತರಾಟೆಗೆ ತೆಗೆದುಕೊಂಡಿತ್ತು. ಅದಕ್ಕಾಗಿ ರಾಷ್ಟ್ರೀಯ ರಾಜಧಾನಿ ಪ್ರದೇಶದಲ್ಲಿ (ಎನ್‌ಸಿಆರ್) ನಿರ್ಮಾಣ ಅಥವಾ ಕಟ್ಟಡ ಧ್ವಂಸ ಚಟುವಟಿಕೆಗಳನ್ನು ನಿಷೇಧಿಸಲು ಸುಪ್ರೀಂ ಕೋರ್ಟ್ ಆದೇಶಿಸಿತ್ತು.

ಫೆಬ್ರವರಿ 2018 ರಲ್ಲಿ ದೀನ್ ದಯಾಳ್ ಉಪಾಧ್ಯಾಯ (ಡಿಡಿಯು) ಮಾರ್ಗದಲ್ಲಿ ತನ್ನ ಪ್ರಧಾನ ಕಚೇರಿಯನ್ನು ಉದ್ಘಾಟಿಸಿದ ಬಿಜೆಪಿ ಪಕ್ಷಕ್ಕೆ ಈ ವರ್ಷದ ಮಾರ್ಚ್‌ನಲ್ಲಿ ಕೇಂದ್ರ ಸರ್ಕಾರವು ಹೆಚ್ಚುವರಿ 2.18 ಎಕರೆಗಳನ್ನು ಮಂಜೂರು ಮಾಡಿತ್ತು.

ನವೆಂಬರ್ 15 ರಂದು ನ್ಯೂಸ್‌ಲಾಂಡ್ರಿ ಈ ಸ್ಥಳಕ್ಕೆ ಭೇಟಿ ನೀಡಿದಾಗ, ಡಜನ್‌ಗಟ್ಟಲೆ ಕಾರ್ಮಿಕರು ಕೆಲಸದಲ್ಲಿ ನಿರತರಾಗಿದ್ದಾರೆ. ಸ್ಥಳದ ಕಾವಲುಗಾರ ರಾಜು ಸಿಂಗ್ ಅವರು ನಿರ್ಮಾಣ ಕಾರ್ಯಗಳು ಪ್ರಗತಿಯಲ್ಲಿದೆ ಎಂದು ಹೇಳುತ್ತಾರೆ. “ಇದು ಎಲ್ & ಟಿ ಕೆಲಸ. ಅವರು ಅತಿಥಿಗೃಹವನ್ನು ನಿರ್ಮಿಸುತ್ತಿದ್ದಾರೆ, ಕೆಲಸವು ಸ್ವಲ್ಪ ಸಮಯದವರೆಗೆ ನಿಂತುಹೋಗಿತ್ತು, ಆದರೆ ಇದು ಕಳೆದ 2-3 ದಿನಗಳಿಂದ ಪುನರಾರಂಭವಾಯಿತು” ಎನ್ನುತ್ತಾರೆ.

ಬಿಜೆಪಿ ಕಚೇರಿಯ ಕಾಮಗಾರಿ ನಡೆಯುತ್ತಿರುವುದು

ಒಳಗಿನಿಂದ ಲಾಕ್ ಆಗಿರುವ ಮತ್ತೊಂದು ಗೇಟ್‌ನ ಕಾವಲುಗಾರ ಸುಮಿತ್ ಕೂಡ ನ್ಯೂಸ್‌ಲಾಂಡ್ರಿಗೆ ಈ ಸ್ಥಳದಲ್ಲಿ ಕೆಲಸ ನಡೆಯುತ್ತಿದೆ ಮತ್ತು ಅದನ್ನು ಎಲ್ ಅಂಡ್ ಟಿ ಕಾರ್ಯಗತಗೊಳಿಸುತ್ತಿದೆ ಎಂದು ಹೇಳಿದರು.

ಈ ಕುರಿತು ಸುಪ್ರೀಂ ಆದೇಶವಿದ್ದರೂ ಸಹ ನಿರ್ಮಾಣ ಕೆಲಸ ನಡೆಯುತ್ತಿರುವ ಬಗ್ಗೆ ಕೇಳಿದಾಗ, ಬಿಜೆಪಿ ವಕ್ತಾರ ಹರೀಶ್ ಖುರಾನಾ ಅವರು “ಕಾಂಗ್ರೆಸ್ ಪ್ರಧಾನ ಕಚೇರಿ ಕೆಲಸ ನಿಲ್ಲಿಸದಿರುವಾಗ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಕೆಲಸ ಏಕೆ ನಿಲ್ಲಬೇಕು ಎಂದು ಮರುಪ್ರಶ್ನಿಸಿದ್ದಾರೆ”. “ದೆಹಲಿಯಾದ್ಯಂತ ನಿರ್ಮಾಣ ನಡೆಯುತ್ತಿದ್ದರೆ, ನೀವು ಅದನ್ನು ನಿಲ್ಲಿಸಿ ಎಂದು ಹೇಳುತ್ತೀರಿ?: “ಕಟ್ಟಡವನ್ನು ಮುಚ್ಚಬೇಕು, ಇದರಿಂದ ಧೂಳಿನ ಕಣಗಳು ಗಾಳಿಗೆ ಹೋಗುವುದಿಲ್ಲ. ನಾವು ಅದನ್ನು ಖಚಿತಪಡಿಸಿಕೊಂಡೇ ಕೆಲಸ ಮಾಡುತ್ತಿದ್ದೇವೆ ಎಂದಿದ್ದಾರೆ.

ಆನಂತರ ಕೋಟ್ಲಾ ರಸ್ತೆಯಲ್ಲಿರುವ ಕಾಂಗ್ರೆಸ್ ಪ್ರಧಾನ ಕಚೇರಿಗೆ ನ್ಯೂಸ್‌ಲಾಂಡ್ರಿ ಭೇಟಿ ನೀಡಿದಾಗ, ನಿರ್ಮಾಣ ಸ್ಥಳದಲ್ಲಿ ಸಿಬ್ಬಂದಿಯೊಬ್ಬರು ಈ ಸ್ಥಳದಲ್ಲಿ ಕೆಲಸ ಪ್ರಗತಿಯಲ್ಲಿಲ್ಲ ಎಂದು ಹೇಳಿದರು. ಸೈಟ್‌ನಲ್ಲಿ ಕೆಲಸ ಮಾಡುವ ಕಾರ್ಮಿಕರೊಬ್ಬರು ನವೆಂಬರ್ 1 ರಿಂದ ಕೆಲಸವನ್ನು ಸ್ಥಗಿತಗೊಳಿಸಲಾಗಿದೆ ಎಂದು ಹೇಳಿದರು. “ಕಟ್ಟಡದ ಸುತ್ತ ಯಾವುದೇ ಕಾರ್ಮಿಕರು ಕೆಲಸ ಮಾಡುತ್ತಿಲ್ಲ” ಎಂದು ಅವರು ಹೇಳಿದರು.

ಈ ಸೈಟ್‌ನ ಎದುರಿನ ಕಟ್ಟಡದಲ್ಲಿ ಕುಳಿತುಕೊಳ್ಳುವ ಇನ್ನೊಬ್ಬ ಸಿಬ್ಬಂದಿ ಈ ಮಾಹಿತಿಯನ್ನು ದೃಢಪಡಿಸಿದ್ದಾರೆ. “ಕಟ್ಟಡದ ಹಿಂದೆ ವಾಸಿಸುವ ಕಾರ್ಮಿಕರು, ಈ ತಿಂಗಳ ಆರಂಭದಿಂದಲೂ ಕಾಣಿಸುತ್ತಿಲ್ಲ ಎಂದು ಅವರು ಹೇಳಿದ್ದಾರೆ.” ಆದರೆ ಕಾಂಕ್ರೀಟ್ ಇಟ್ಟಿಗೆಗಳು ಹೊರಗೆ ಬಿದ್ದಿದ್ದವು ಮತ್ತು ಮರಳು ಸಹ ಇತ್ತು. ಜೊತೆಗೆ ಕಾಮಗಾರಿಯ ದೂಳು ಹೊರಗೆ ಬಾರದಂತೆ ತಡೆಯಲು ಯಾವುದೇ ಕ್ರಮಗಳನ್ನು ಅವರು ಕೈಗೊಂಡಿಲ್ಲ. ಬಿಜೆಪಿ ಕಚೇರಿಯು ಇನ್ನು ಆರಂಭಿಕ ಹಂತದಲ್ಲಿದ್ದರೆ ಕಾಂಗ್ರೆಸ್ ಕಚೇರಿಯು ಅಂತಿಮ ಹಂತದಲ್ಲಿರುವಂತೆ ಕಾಣುತ್ತಿದೆ.

ಕಾಂಗ್ರೆಸ್ ಕಚೇರಿ

ದೆಹಲಿಯ ವಾಯುಮಾಲಿನ್ಯಕ್ಕೆ ಐದು ಪ್ರಮುಖ ಕಾರಣಗಳಲ್ಲಿ ನಿರ್ಮಾಣವು ಒಂದಾಗಿದೆ. ಈ ವರ್ಷದ ಏಪ್ರಿಲ್‌ನಿಂದ ದೆಹಲಿ ಮೂಲದ ಕೌನ್ಸಿಲ್ ಆನ್ ಎನರ್ಜಿ, ಎನ್ವಿರಾನ್ಮೆಂಟ್ ಮತ್ತು ವಾಟರ್ (ಸಿಇಇಡಬ್ಲ್ಯು) ನಡೆಸಿದ ವಿಶ್ಲೇಷಣೆಯ ಪ್ರಕಾರ, ನಿರ್ಮಾಣವು ರಾಜಧಾನಿಯಲ್ಲಿ ವಾಯುಮಾಲಿನ್ಯದ ಐದನೇ ಅತಿದೊಡ್ಡ ಮೂಲವಾಗಿದೆ ಮತ್ತು ಅದು ಮಾಲಿನ್ಯ ಶೇ.8 ರಷ್ಟು ಕಾರಣವಾಗಿದೆ ಎಂದು ತಿಳಿಸಿದೆ.

ಕೃಪೆ ನ್ಯೂಸ್‌ಲಾಂಡ್ರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...

ಅಕ್ರಮ ಕಲ್ಲು ಗಣಿಗಾರಿಕೆ ಆರೋಪ: ಸಚಿವ ರುದ್ರಪ್ಪ ಲಮಾಣಿಗೆ 3 ಕೋಟಿ ರೂ. ದಂಡ

ಕಲ್ಲು ಗಣಿಗಾರಿಕೆ ನಡೆಸುವ ವೇಳೆ ಸಾಲು ಸಾಲು ನಿಯಮಗಳನ್ನು ಉಲ್ಲಂಘಿಸಲಾಗಿದೆ ಎಂಬ ಗಂಭೀರ ಆರೋಪಕ್ಕೆ ಸಂಬಂಧಿಸಿದಂತೆ ಜವಳಿ ಮತ್ತು ಸಕ್ಕರೆ ಖಾತೆ ಸಚಿವ ಶ್ರೀ ರುದ್ರಪ್ಪ ಮಾನಪ್ಪ ಲಮಾಣಿ ಅವರಿಗೆ ಗಣಿ ಮತ್ತು...

ಪಶ್ಚಿಮ ಬಂಗಾಳ SIR: 38 ಲಕ್ಷ ಮೇಲ್ಮನವಿಗಳಲ್ಲಿ ವಿಲೇವಾರಿಯಾಗಿದ್ದು ಕೇವಲ 1 ಲಕ್ಷ

ಪಶ್ಚಿಮ ಬಂಗಾಳದಲ್ಲಿ ನಡೆದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (SIR) ಸಂಬಂಧಿಸಿದಂತೆ ಸಲ್ಲಿಕೆಯಾಗಿರುವ ಬೃಹತ್ ಪ್ರಮಾಣದ ಮೇಲ್ಮನವಿಗಳ ಪೈಕಿ ವಿಲೇವಾರಿಯಾದ ಅರ್ಜಿಗಳ ಸಂಖ್ಯೆ ತೀರಾ ಕನಿಷ್ಠ ಮಟ್ಟದಲ್ಲಿದೆ ಎಂಬ ಆಘಾತಕಾರಿ ಮಾಹಿತಿ...

ಕರ್ನಾಟಕ ಎಸ್‌ಐಆರ್: ತಡವಾಗಿ ತಲುಪಿದ ನೋಟಿಸ್‌ಗಳಿಂದ ವಿಚಾರಣಾ ಕೇಂದ್ರಗಳಲ್ಲಿ ಜನದಟ್ಟಣೆ; ಮತದಾರರಲ್ಲಿ ಗೊಂದಲ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ನೋಟಿಸ್‌ಗಳನ್ನು ಮತದಾರರಿಗೆ ತಲುಪಿಸುವಲ್ಲಿ ಉಂಟಾಗುತ್ತಿರುವ ವಿಳಂಬವು ಹಲವು ಕಡೆ ವಿಚಾರಣಾ ಕೇಂದ್ರಗಳಲ್ಲಿ ಜನದಟ್ಟಣೆ ಮತ್ತು ಗೊಂದಲಕ್ಕೆ ಕಾರಣವಾಗುತ್ತಿದೆ. ‘ನೋ-ಮ್ಯಾಪಿಂಗ್’...

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...