Homeಮುಖಪುಟತೀವ್ರ ಮಾಲಿನ್ಯದ ದೆಹಲಿಯಲ್ಲಿ ಸುಪ್ರೀಂ ಕೋರ್ಟ್‌ ಆದೇಶ ಧಿಕ್ಕರಿಸಿ ಬಿಜೆಪಿ ಪಕ್ಷದ ಕಚೇರಿ ಕಾಮಗಾರಿ ಚಾಲ್ತಿಯಲ್ಲಿದೆ..

ತೀವ್ರ ಮಾಲಿನ್ಯದ ದೆಹಲಿಯಲ್ಲಿ ಸುಪ್ರೀಂ ಕೋರ್ಟ್‌ ಆದೇಶ ಧಿಕ್ಕರಿಸಿ ಬಿಜೆಪಿ ಪಕ್ಷದ ಕಚೇರಿ ಕಾಮಗಾರಿ ಚಾಲ್ತಿಯಲ್ಲಿದೆ..

- Advertisement -
- Advertisement -

ನವೆಂಬರ್ 4 ರಂದು ನ್ಯಾಯಮೂರ್ತಿ ಅರುಣ್ ಮಿಶ್ರಾ ನೇತೃತ್ವದ ಸುಪ್ರೀಂ ಕೋರ್ಟ್ ಪೀಠವು ಕೇಂದ್ರ ಸರ್ಕಾರ ಮತ್ತು ದೆಹಲಿ, ಹರಿಯಾಣ ಮತ್ತು ಪಂಜಾಬ್ ರಾಜ್ಯಗಳನ್ನು ಮಾಲಿನ್ಯವನ್ನು ನಿಯಂತ್ರಿಸುವ ಕ್ರಮಗಳನ್ನು ತೆಗೆದುಕೊಳ್ಳುವಲ್ಲಿ ವಿಫಲವಾಗಿದೆ ಎಂದು ತರಾಟೆಗೆ ತೆಗೆದುಕೊಂಡಿತ್ತು. ಅದಕ್ಕಾಗಿ ರಾಷ್ಟ್ರೀಯ ರಾಜಧಾನಿ ಪ್ರದೇಶದಲ್ಲಿ (ಎನ್‌ಸಿಆರ್) ನಿರ್ಮಾಣ ಅಥವಾ ಕಟ್ಟಡ ಧ್ವಂಸ ಚಟುವಟಿಕೆಗಳನ್ನು ನಿಷೇಧಿಸಲು ಸುಪ್ರೀಂ ಕೋರ್ಟ್ ಆದೇಶಿಸಿತ್ತು.

ಫೆಬ್ರವರಿ 2018 ರಲ್ಲಿ ದೀನ್ ದಯಾಳ್ ಉಪಾಧ್ಯಾಯ (ಡಿಡಿಯು) ಮಾರ್ಗದಲ್ಲಿ ತನ್ನ ಪ್ರಧಾನ ಕಚೇರಿಯನ್ನು ಉದ್ಘಾಟಿಸಿದ ಬಿಜೆಪಿ ಪಕ್ಷಕ್ಕೆ ಈ ವರ್ಷದ ಮಾರ್ಚ್‌ನಲ್ಲಿ ಕೇಂದ್ರ ಸರ್ಕಾರವು ಹೆಚ್ಚುವರಿ 2.18 ಎಕರೆಗಳನ್ನು ಮಂಜೂರು ಮಾಡಿತ್ತು.

ನವೆಂಬರ್ 15 ರಂದು ನ್ಯೂಸ್‌ಲಾಂಡ್ರಿ ಈ ಸ್ಥಳಕ್ಕೆ ಭೇಟಿ ನೀಡಿದಾಗ, ಡಜನ್‌ಗಟ್ಟಲೆ ಕಾರ್ಮಿಕರು ಕೆಲಸದಲ್ಲಿ ನಿರತರಾಗಿದ್ದಾರೆ. ಸ್ಥಳದ ಕಾವಲುಗಾರ ರಾಜು ಸಿಂಗ್ ಅವರು ನಿರ್ಮಾಣ ಕಾರ್ಯಗಳು ಪ್ರಗತಿಯಲ್ಲಿದೆ ಎಂದು ಹೇಳುತ್ತಾರೆ. “ಇದು ಎಲ್ & ಟಿ ಕೆಲಸ. ಅವರು ಅತಿಥಿಗೃಹವನ್ನು ನಿರ್ಮಿಸುತ್ತಿದ್ದಾರೆ, ಕೆಲಸವು ಸ್ವಲ್ಪ ಸಮಯದವರೆಗೆ ನಿಂತುಹೋಗಿತ್ತು, ಆದರೆ ಇದು ಕಳೆದ 2-3 ದಿನಗಳಿಂದ ಪುನರಾರಂಭವಾಯಿತು” ಎನ್ನುತ್ತಾರೆ.

ಬಿಜೆಪಿ ಕಚೇರಿಯ ಕಾಮಗಾರಿ ನಡೆಯುತ್ತಿರುವುದು

ಒಳಗಿನಿಂದ ಲಾಕ್ ಆಗಿರುವ ಮತ್ತೊಂದು ಗೇಟ್‌ನ ಕಾವಲುಗಾರ ಸುಮಿತ್ ಕೂಡ ನ್ಯೂಸ್‌ಲಾಂಡ್ರಿಗೆ ಈ ಸ್ಥಳದಲ್ಲಿ ಕೆಲಸ ನಡೆಯುತ್ತಿದೆ ಮತ್ತು ಅದನ್ನು ಎಲ್ ಅಂಡ್ ಟಿ ಕಾರ್ಯಗತಗೊಳಿಸುತ್ತಿದೆ ಎಂದು ಹೇಳಿದರು.

ಈ ಕುರಿತು ಸುಪ್ರೀಂ ಆದೇಶವಿದ್ದರೂ ಸಹ ನಿರ್ಮಾಣ ಕೆಲಸ ನಡೆಯುತ್ತಿರುವ ಬಗ್ಗೆ ಕೇಳಿದಾಗ, ಬಿಜೆಪಿ ವಕ್ತಾರ ಹರೀಶ್ ಖುರಾನಾ ಅವರು “ಕಾಂಗ್ರೆಸ್ ಪ್ರಧಾನ ಕಚೇರಿ ಕೆಲಸ ನಿಲ್ಲಿಸದಿರುವಾಗ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಕೆಲಸ ಏಕೆ ನಿಲ್ಲಬೇಕು ಎಂದು ಮರುಪ್ರಶ್ನಿಸಿದ್ದಾರೆ”. “ದೆಹಲಿಯಾದ್ಯಂತ ನಿರ್ಮಾಣ ನಡೆಯುತ್ತಿದ್ದರೆ, ನೀವು ಅದನ್ನು ನಿಲ್ಲಿಸಿ ಎಂದು ಹೇಳುತ್ತೀರಿ?: “ಕಟ್ಟಡವನ್ನು ಮುಚ್ಚಬೇಕು, ಇದರಿಂದ ಧೂಳಿನ ಕಣಗಳು ಗಾಳಿಗೆ ಹೋಗುವುದಿಲ್ಲ. ನಾವು ಅದನ್ನು ಖಚಿತಪಡಿಸಿಕೊಂಡೇ ಕೆಲಸ ಮಾಡುತ್ತಿದ್ದೇವೆ ಎಂದಿದ್ದಾರೆ.

ಆನಂತರ ಕೋಟ್ಲಾ ರಸ್ತೆಯಲ್ಲಿರುವ ಕಾಂಗ್ರೆಸ್ ಪ್ರಧಾನ ಕಚೇರಿಗೆ ನ್ಯೂಸ್‌ಲಾಂಡ್ರಿ ಭೇಟಿ ನೀಡಿದಾಗ, ನಿರ್ಮಾಣ ಸ್ಥಳದಲ್ಲಿ ಸಿಬ್ಬಂದಿಯೊಬ್ಬರು ಈ ಸ್ಥಳದಲ್ಲಿ ಕೆಲಸ ಪ್ರಗತಿಯಲ್ಲಿಲ್ಲ ಎಂದು ಹೇಳಿದರು. ಸೈಟ್‌ನಲ್ಲಿ ಕೆಲಸ ಮಾಡುವ ಕಾರ್ಮಿಕರೊಬ್ಬರು ನವೆಂಬರ್ 1 ರಿಂದ ಕೆಲಸವನ್ನು ಸ್ಥಗಿತಗೊಳಿಸಲಾಗಿದೆ ಎಂದು ಹೇಳಿದರು. “ಕಟ್ಟಡದ ಸುತ್ತ ಯಾವುದೇ ಕಾರ್ಮಿಕರು ಕೆಲಸ ಮಾಡುತ್ತಿಲ್ಲ” ಎಂದು ಅವರು ಹೇಳಿದರು.

ಈ ಸೈಟ್‌ನ ಎದುರಿನ ಕಟ್ಟಡದಲ್ಲಿ ಕುಳಿತುಕೊಳ್ಳುವ ಇನ್ನೊಬ್ಬ ಸಿಬ್ಬಂದಿ ಈ ಮಾಹಿತಿಯನ್ನು ದೃಢಪಡಿಸಿದ್ದಾರೆ. “ಕಟ್ಟಡದ ಹಿಂದೆ ವಾಸಿಸುವ ಕಾರ್ಮಿಕರು, ಈ ತಿಂಗಳ ಆರಂಭದಿಂದಲೂ ಕಾಣಿಸುತ್ತಿಲ್ಲ ಎಂದು ಅವರು ಹೇಳಿದ್ದಾರೆ.” ಆದರೆ ಕಾಂಕ್ರೀಟ್ ಇಟ್ಟಿಗೆಗಳು ಹೊರಗೆ ಬಿದ್ದಿದ್ದವು ಮತ್ತು ಮರಳು ಸಹ ಇತ್ತು. ಜೊತೆಗೆ ಕಾಮಗಾರಿಯ ದೂಳು ಹೊರಗೆ ಬಾರದಂತೆ ತಡೆಯಲು ಯಾವುದೇ ಕ್ರಮಗಳನ್ನು ಅವರು ಕೈಗೊಂಡಿಲ್ಲ. ಬಿಜೆಪಿ ಕಚೇರಿಯು ಇನ್ನು ಆರಂಭಿಕ ಹಂತದಲ್ಲಿದ್ದರೆ ಕಾಂಗ್ರೆಸ್ ಕಚೇರಿಯು ಅಂತಿಮ ಹಂತದಲ್ಲಿರುವಂತೆ ಕಾಣುತ್ತಿದೆ.

ಕಾಂಗ್ರೆಸ್ ಕಚೇರಿ

ದೆಹಲಿಯ ವಾಯುಮಾಲಿನ್ಯಕ್ಕೆ ಐದು ಪ್ರಮುಖ ಕಾರಣಗಳಲ್ಲಿ ನಿರ್ಮಾಣವು ಒಂದಾಗಿದೆ. ಈ ವರ್ಷದ ಏಪ್ರಿಲ್‌ನಿಂದ ದೆಹಲಿ ಮೂಲದ ಕೌನ್ಸಿಲ್ ಆನ್ ಎನರ್ಜಿ, ಎನ್ವಿರಾನ್ಮೆಂಟ್ ಮತ್ತು ವಾಟರ್ (ಸಿಇಇಡಬ್ಲ್ಯು) ನಡೆಸಿದ ವಿಶ್ಲೇಷಣೆಯ ಪ್ರಕಾರ, ನಿರ್ಮಾಣವು ರಾಜಧಾನಿಯಲ್ಲಿ ವಾಯುಮಾಲಿನ್ಯದ ಐದನೇ ಅತಿದೊಡ್ಡ ಮೂಲವಾಗಿದೆ ಮತ್ತು ಅದು ಮಾಲಿನ್ಯ ಶೇ.8 ರಷ್ಟು ಕಾರಣವಾಗಿದೆ ಎಂದು ತಿಳಿಸಿದೆ.

ಕೃಪೆ ನ್ಯೂಸ್‌ಲಾಂಡ್ರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...