Homeಮುಖಪುಟತೀವ್ರ ಮಾಲಿನ್ಯದ ದೆಹಲಿಯಲ್ಲಿ ಸುಪ್ರೀಂ ಕೋರ್ಟ್‌ ಆದೇಶ ಧಿಕ್ಕರಿಸಿ ಬಿಜೆಪಿ ಪಕ್ಷದ ಕಚೇರಿ ಕಾಮಗಾರಿ ಚಾಲ್ತಿಯಲ್ಲಿದೆ..

ತೀವ್ರ ಮಾಲಿನ್ಯದ ದೆಹಲಿಯಲ್ಲಿ ಸುಪ್ರೀಂ ಕೋರ್ಟ್‌ ಆದೇಶ ಧಿಕ್ಕರಿಸಿ ಬಿಜೆಪಿ ಪಕ್ಷದ ಕಚೇರಿ ಕಾಮಗಾರಿ ಚಾಲ್ತಿಯಲ್ಲಿದೆ..

- Advertisement -
- Advertisement -

ನವೆಂಬರ್ 4 ರಂದು ನ್ಯಾಯಮೂರ್ತಿ ಅರುಣ್ ಮಿಶ್ರಾ ನೇತೃತ್ವದ ಸುಪ್ರೀಂ ಕೋರ್ಟ್ ಪೀಠವು ಕೇಂದ್ರ ಸರ್ಕಾರ ಮತ್ತು ದೆಹಲಿ, ಹರಿಯಾಣ ಮತ್ತು ಪಂಜಾಬ್ ರಾಜ್ಯಗಳನ್ನು ಮಾಲಿನ್ಯವನ್ನು ನಿಯಂತ್ರಿಸುವ ಕ್ರಮಗಳನ್ನು ತೆಗೆದುಕೊಳ್ಳುವಲ್ಲಿ ವಿಫಲವಾಗಿದೆ ಎಂದು ತರಾಟೆಗೆ ತೆಗೆದುಕೊಂಡಿತ್ತು. ಅದಕ್ಕಾಗಿ ರಾಷ್ಟ್ರೀಯ ರಾಜಧಾನಿ ಪ್ರದೇಶದಲ್ಲಿ (ಎನ್‌ಸಿಆರ್) ನಿರ್ಮಾಣ ಅಥವಾ ಕಟ್ಟಡ ಧ್ವಂಸ ಚಟುವಟಿಕೆಗಳನ್ನು ನಿಷೇಧಿಸಲು ಸುಪ್ರೀಂ ಕೋರ್ಟ್ ಆದೇಶಿಸಿತ್ತು.

ಫೆಬ್ರವರಿ 2018 ರಲ್ಲಿ ದೀನ್ ದಯಾಳ್ ಉಪಾಧ್ಯಾಯ (ಡಿಡಿಯು) ಮಾರ್ಗದಲ್ಲಿ ತನ್ನ ಪ್ರಧಾನ ಕಚೇರಿಯನ್ನು ಉದ್ಘಾಟಿಸಿದ ಬಿಜೆಪಿ ಪಕ್ಷಕ್ಕೆ ಈ ವರ್ಷದ ಮಾರ್ಚ್‌ನಲ್ಲಿ ಕೇಂದ್ರ ಸರ್ಕಾರವು ಹೆಚ್ಚುವರಿ 2.18 ಎಕರೆಗಳನ್ನು ಮಂಜೂರು ಮಾಡಿತ್ತು.

ನವೆಂಬರ್ 15 ರಂದು ನ್ಯೂಸ್‌ಲಾಂಡ್ರಿ ಈ ಸ್ಥಳಕ್ಕೆ ಭೇಟಿ ನೀಡಿದಾಗ, ಡಜನ್‌ಗಟ್ಟಲೆ ಕಾರ್ಮಿಕರು ಕೆಲಸದಲ್ಲಿ ನಿರತರಾಗಿದ್ದಾರೆ. ಸ್ಥಳದ ಕಾವಲುಗಾರ ರಾಜು ಸಿಂಗ್ ಅವರು ನಿರ್ಮಾಣ ಕಾರ್ಯಗಳು ಪ್ರಗತಿಯಲ್ಲಿದೆ ಎಂದು ಹೇಳುತ್ತಾರೆ. “ಇದು ಎಲ್ & ಟಿ ಕೆಲಸ. ಅವರು ಅತಿಥಿಗೃಹವನ್ನು ನಿರ್ಮಿಸುತ್ತಿದ್ದಾರೆ, ಕೆಲಸವು ಸ್ವಲ್ಪ ಸಮಯದವರೆಗೆ ನಿಂತುಹೋಗಿತ್ತು, ಆದರೆ ಇದು ಕಳೆದ 2-3 ದಿನಗಳಿಂದ ಪುನರಾರಂಭವಾಯಿತು” ಎನ್ನುತ್ತಾರೆ.

ಬಿಜೆಪಿ ಕಚೇರಿಯ ಕಾಮಗಾರಿ ನಡೆಯುತ್ತಿರುವುದು

ಒಳಗಿನಿಂದ ಲಾಕ್ ಆಗಿರುವ ಮತ್ತೊಂದು ಗೇಟ್‌ನ ಕಾವಲುಗಾರ ಸುಮಿತ್ ಕೂಡ ನ್ಯೂಸ್‌ಲಾಂಡ್ರಿಗೆ ಈ ಸ್ಥಳದಲ್ಲಿ ಕೆಲಸ ನಡೆಯುತ್ತಿದೆ ಮತ್ತು ಅದನ್ನು ಎಲ್ ಅಂಡ್ ಟಿ ಕಾರ್ಯಗತಗೊಳಿಸುತ್ತಿದೆ ಎಂದು ಹೇಳಿದರು.

ಈ ಕುರಿತು ಸುಪ್ರೀಂ ಆದೇಶವಿದ್ದರೂ ಸಹ ನಿರ್ಮಾಣ ಕೆಲಸ ನಡೆಯುತ್ತಿರುವ ಬಗ್ಗೆ ಕೇಳಿದಾಗ, ಬಿಜೆಪಿ ವಕ್ತಾರ ಹರೀಶ್ ಖುರಾನಾ ಅವರು “ಕಾಂಗ್ರೆಸ್ ಪ್ರಧಾನ ಕಚೇರಿ ಕೆಲಸ ನಿಲ್ಲಿಸದಿರುವಾಗ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಕೆಲಸ ಏಕೆ ನಿಲ್ಲಬೇಕು ಎಂದು ಮರುಪ್ರಶ್ನಿಸಿದ್ದಾರೆ”. “ದೆಹಲಿಯಾದ್ಯಂತ ನಿರ್ಮಾಣ ನಡೆಯುತ್ತಿದ್ದರೆ, ನೀವು ಅದನ್ನು ನಿಲ್ಲಿಸಿ ಎಂದು ಹೇಳುತ್ತೀರಿ?: “ಕಟ್ಟಡವನ್ನು ಮುಚ್ಚಬೇಕು, ಇದರಿಂದ ಧೂಳಿನ ಕಣಗಳು ಗಾಳಿಗೆ ಹೋಗುವುದಿಲ್ಲ. ನಾವು ಅದನ್ನು ಖಚಿತಪಡಿಸಿಕೊಂಡೇ ಕೆಲಸ ಮಾಡುತ್ತಿದ್ದೇವೆ ಎಂದಿದ್ದಾರೆ.

ಆನಂತರ ಕೋಟ್ಲಾ ರಸ್ತೆಯಲ್ಲಿರುವ ಕಾಂಗ್ರೆಸ್ ಪ್ರಧಾನ ಕಚೇರಿಗೆ ನ್ಯೂಸ್‌ಲಾಂಡ್ರಿ ಭೇಟಿ ನೀಡಿದಾಗ, ನಿರ್ಮಾಣ ಸ್ಥಳದಲ್ಲಿ ಸಿಬ್ಬಂದಿಯೊಬ್ಬರು ಈ ಸ್ಥಳದಲ್ಲಿ ಕೆಲಸ ಪ್ರಗತಿಯಲ್ಲಿಲ್ಲ ಎಂದು ಹೇಳಿದರು. ಸೈಟ್‌ನಲ್ಲಿ ಕೆಲಸ ಮಾಡುವ ಕಾರ್ಮಿಕರೊಬ್ಬರು ನವೆಂಬರ್ 1 ರಿಂದ ಕೆಲಸವನ್ನು ಸ್ಥಗಿತಗೊಳಿಸಲಾಗಿದೆ ಎಂದು ಹೇಳಿದರು. “ಕಟ್ಟಡದ ಸುತ್ತ ಯಾವುದೇ ಕಾರ್ಮಿಕರು ಕೆಲಸ ಮಾಡುತ್ತಿಲ್ಲ” ಎಂದು ಅವರು ಹೇಳಿದರು.

ಈ ಸೈಟ್‌ನ ಎದುರಿನ ಕಟ್ಟಡದಲ್ಲಿ ಕುಳಿತುಕೊಳ್ಳುವ ಇನ್ನೊಬ್ಬ ಸಿಬ್ಬಂದಿ ಈ ಮಾಹಿತಿಯನ್ನು ದೃಢಪಡಿಸಿದ್ದಾರೆ. “ಕಟ್ಟಡದ ಹಿಂದೆ ವಾಸಿಸುವ ಕಾರ್ಮಿಕರು, ಈ ತಿಂಗಳ ಆರಂಭದಿಂದಲೂ ಕಾಣಿಸುತ್ತಿಲ್ಲ ಎಂದು ಅವರು ಹೇಳಿದ್ದಾರೆ.” ಆದರೆ ಕಾಂಕ್ರೀಟ್ ಇಟ್ಟಿಗೆಗಳು ಹೊರಗೆ ಬಿದ್ದಿದ್ದವು ಮತ್ತು ಮರಳು ಸಹ ಇತ್ತು. ಜೊತೆಗೆ ಕಾಮಗಾರಿಯ ದೂಳು ಹೊರಗೆ ಬಾರದಂತೆ ತಡೆಯಲು ಯಾವುದೇ ಕ್ರಮಗಳನ್ನು ಅವರು ಕೈಗೊಂಡಿಲ್ಲ. ಬಿಜೆಪಿ ಕಚೇರಿಯು ಇನ್ನು ಆರಂಭಿಕ ಹಂತದಲ್ಲಿದ್ದರೆ ಕಾಂಗ್ರೆಸ್ ಕಚೇರಿಯು ಅಂತಿಮ ಹಂತದಲ್ಲಿರುವಂತೆ ಕಾಣುತ್ತಿದೆ.

ಕಾಂಗ್ರೆಸ್ ಕಚೇರಿ

ದೆಹಲಿಯ ವಾಯುಮಾಲಿನ್ಯಕ್ಕೆ ಐದು ಪ್ರಮುಖ ಕಾರಣಗಳಲ್ಲಿ ನಿರ್ಮಾಣವು ಒಂದಾಗಿದೆ. ಈ ವರ್ಷದ ಏಪ್ರಿಲ್‌ನಿಂದ ದೆಹಲಿ ಮೂಲದ ಕೌನ್ಸಿಲ್ ಆನ್ ಎನರ್ಜಿ, ಎನ್ವಿರಾನ್ಮೆಂಟ್ ಮತ್ತು ವಾಟರ್ (ಸಿಇಇಡಬ್ಲ್ಯು) ನಡೆಸಿದ ವಿಶ್ಲೇಷಣೆಯ ಪ್ರಕಾರ, ನಿರ್ಮಾಣವು ರಾಜಧಾನಿಯಲ್ಲಿ ವಾಯುಮಾಲಿನ್ಯದ ಐದನೇ ಅತಿದೊಡ್ಡ ಮೂಲವಾಗಿದೆ ಮತ್ತು ಅದು ಮಾಲಿನ್ಯ ಶೇ.8 ರಷ್ಟು ಕಾರಣವಾಗಿದೆ ಎಂದು ತಿಳಿಸಿದೆ.

ಕೃಪೆ ನ್ಯೂಸ್‌ಲಾಂಡ್ರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮನೆಕೆಲಸದಾಕೆ ಮೇಲಿನ ದೌರ್ಜನ್ಯ ಆರೋಪ ಪ್ರಕರಣ : ಜೆಡಿಎಸ್ ಶಾಸಕ ಹೆಚ್​​​.ಡಿ. ರೇವಣ್ಣಗೆ ಸುಪ್ರೀಂ ಕೋರ್ಟ್​ ನೋಟಿಸ್​

ಮಹಿಳೆಯ ಘನತೆಗೆ ಧಕ್ಕೆ ಹಾಗೂ ಲೈಂಗಿಕ ಕಿರುಕುಳ ಆರೋಪಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್‌ ನೀಡಿದ್ದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ಮೇಲ್ಮನವಿಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್‌ ಸೋಮವಾರ (ಜು.13) ಜೆಡಿಎಸ್‌...

ದಲಿತ ಯುವಕರಿಗೆ ವಿದ್ಯುತ್ ಶಾಕ್‌ ಶಿಕ್ಷೆ: ಕಳ್ಳತನ ಆರೋಪದ ಮೇಲೆ ಇಬ್ಬರಿಗೆ ಚಿತ್ರಹಿಂಸೆ

ದಲಿತ ಯುವಕರ ಮೇಲೆ ಮಧ್ಯಪ್ರದೇಶದಲ್ಲಿ ನಡೆದಿರುವ ಅಮಾನವೀಯ ಕೃತ್ಯವೊಂದರ ವಿಡಿಯೋ ಇದೀಗ ನಾಗರಿಕ ಸಮಾಜವನ್ನೇ ಆಘಾತಕ್ಕೀಡು ಮಾಡಿದೆ. ನೀರಿನ ಪಂಪ್ ಮೋಟಾರ್ ಕದ್ದಿದ್ದಾರೆ ಎಂಬ ಶಂಕೆಯ ಮೇಲೆ ಇಬ್ಬರು ದಲಿತ ಯುವಕರನ್ನು ಕಂಬಕ್ಕೆ...

ರಾಮಮಂದಿರ ಹಗರಣ: ಕೇಂದ್ರ ಸರ್ಕಾರ, ಟ್ರಸ್ಟ್, ಉತ್ತರ ಪ್ರದೇಶ ಸರ್ಕಾರಕ್ಕೆ ‘ಸುಪ್ರೀಂ’ ನೋಟಿಸ್ 

ನವದೆಹಲಿ: ವಿಶ್ವಪ್ರಸಿದ್ಧ ಅಯೋಧ್ಯೆಯ ಶ್ರೀ ರಾಮಮಂದಿರಕ್ಕೆ ಸಾರ್ವಜನಿಕ ಭಕ್ತಾದಿಗಳಿಂದ ಹರಿದುಬಂದಿರುವ ಕೋಟ್ಯಂತರ ರೂಪಾಯಿ ದೇಣಿಗೆ ನಿಧಿಯ ಕಳ್ಳತನ, ದುರುಪಯೋಗ ಮತ್ತು ಆಡಳಿತಾತ್ಮಕ ಅಕ್ರಮಗಳ ಆರೋಪ ಇದೀಗ ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದೆ. ಈ...

ಜಮ್ಮು-ಕಾಶ್ಮೀರ: ಪ್ರತ್ಯೇಕತಾವಾದಿಗಳು, ಉಗ್ರಗಾಮಿಗಳನ್ನು ವೈಭವೀಕರಿಸಿದ ಆರೋಪ: ಮೂವರು ಪ್ರಕಾಶಕರ ಬಂಧನ

ಜಮ್ಮು/ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿ ಹಾಗೂ ಭಯೋತ್ಪಾದಕ ನಾಯಕರನ್ನು ವೈಭವೀಕರಿಸುವ ಪುಸ್ತಕಗಳನ್ನು ಪ್ರಕಟಿಸಿ, ವಿತರಿಸಿದ ಗಂಭೀರ ಆರೋಪದ ಮೇಲೆ ಪ್ರತಿ-ಗುಪ್ತಚರ ವಿಭಾಗದ (ಸಿಐಜೆಕೆ) ಪೊಲೀಸರು ಭಾನುವಾರ ಇಬ್ಬರು ಪ್ರಮುಖ ಪ್ರಕಾಶನ ಸಂಸ್ಥೆಗಳಿಗೆ...

ಕರ್ನಾಟಕ ಎಸ್‍ಐಆರ್: ಮತದಾರರ ಸೌಲಭ್ಯ ಕೇಂದ್ರಗಳ ಕೊರತೆ, ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ ಅಡ್ಡಿ: ವರದಿ

ಬೆಂಗಳೂರು: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಆರಂಭವಾಗಿ ಸುಮಾರು ಎರಡು ವಾರಗಳು ಕಳೆಯುತ್ತಾ ಬಂದಿದ್ದರೂ, ಚುನಾವಣಾ ಆಯೋಗವು ಸಾರ್ವಜನಿಕರ ಅನುಕೂಲಕ್ಕಾಗಿ ರಾಜ್ಯಾದ್ಯಂತ ಅಗತ್ಯವಿರುವಷ್ಟು ಮತದಾರರ ಸೌಲಭ್ಯ ಕೇಂದ್ರಗಳನ್ನು...

27 ಮಂದಿಯನ್ನು ‘ವಿದೇಶಿಯರು’ ಎಂದಿದ್ದ ಅಸ್ಸಾಂ ನ್ಯಾಯಮಂಡಳಿಗಳ ಆದೇಶ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಒಬ್ಬ ವ್ಯಕ್ತಿಯ ಪೌರತ್ವ ಮತ್ತು ವಿದೇಶಿಯರ ಸ್ಥಾನಮಾನವನ್ನು ನಿರ್ಧರಿಸುವಾಗ ಕೇವಲ ಯಾಂತ್ರಿಕವಾಗಿ ತೀರ್ಪು ನೀಡಲಾಗದು, ಬದಲಿಗೆ ಅತ್ಯಂತ ನ್ಯಾಯಯುತ, ಕಾನೂನುಬದ್ಧ ಹಾಗೂ ಸಮಂಜಸವಾದ ಪ್ರಕ್ರಿಯೆಯನ್ನು ಕಡ್ಡಾಯವಾಗಿ ಪಾಲಿಸಲೇಬೇಕು ಎಂದು ಸುಪ್ರೀಂ ಕೋರ್ಟ್ ಸೋಮವಾರ...

ಶಿಕ್ಷಕ ‘ಖಾನ್ ಸರ್‌’ಗೆ ಪಟ್ನಾ ಕೋರ್ಟ್‌ನಲ್ಲಿ ಜಯ: ಕೋಚಿಂಗ್ ಸೆಂಟರ್ ದಾಳಿ ಪ್ರಕರಣದಲ್ಲಿ ಮುಂಗಡ ಜಾಮೀನು ಮಂಜೂರು

ಬಿಹಾರದ ಖ್ಯಾತ ಶಿಕ್ಷಕ ಫೈಸಲ್ ಖಾನ್ (ಜನಪ್ರಿಯವಾಗಿ ಖಾನ್ ಸರ್ ಎಂದು ಕರೆಯಲ್ಪಡುವ) ಅವರಿಗೆ ಪಟ್ನಾ ನ್ಯಾಯಾಲಯವು ಸೋಮವಾರ ಮುಂಗಡ ಜಾಮೀನು ಮಂಜೂರು ಮಾಡಿದೆ. ಈ ತಿಂಗಳ ಆರಂಭದಲ್ಲಿ ಅವರ ಕೋಚಿಂಗ್ ಇನ್ಸ್ಟಿಟ್ಯೂಟ್...

ಗುಜರಾತ್‌| ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಚಾಲಕನನ್ನು ಬೆದರಿಸಿದ ನಕಲಿ ಗೋರಕ್ಷಕರು

ಗುಜರಾತ್‌ನ ವಲ್ಸಾದ್ ಜಿಲ್ಲೆಯಲ್ಲಿ ಸ್ವಘೋಷಿತ ಗೋರಕ್ಷಕರ ಗುಂಪೊಂದು ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಅನ್ನು ಸುಮಾರು 100 ಕಿಲೋಮೀಟರ್‌ಗಳವರೆಗೆ ಬೆನ್ನಟ್ಟಿ, ವಾಹನವನ್ನು ತಡೆದು ಗುಂಪು ಮುಸ್ಲಿಂ ಚಾಲಕನನ್ನು ನಿಂದಿಸಿ ಬೆದರಿಸಿದ್ದಾರೆ. 'ಕ್ಲಾರಿಯನ್ ಇಂಡಿಯಾ' ವರದಿ ಪ್ರಕಾರ,...

ವಿಜಯ್ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಜಯ: ತಮಿಳುನಾಡು ಗೋಹತ್ಯೆ ನಿಷೇಧದ ಹೈಕೋರ್ಟ್ ಆದೇಶಕ್ಕೆ ತಡೆ

ತಮಿಳುನಾಡಿನಲ್ಲಿ ಹಸು ಮತ್ತು ಕರುಗಳ ಹತ್ಯೆಯನ್ನು ರಾಜ್ಯಾದ್ಯಂತ ಸಂಪೂರ್ಣವಾಗಿ ನಿಷೇಧಿಸಿ ಮದ್ರಾಸ್ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದೆ. ಮುಖ್ಯಮಂತ್ರಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK)...

SIR | ಸೆಕ್ಸ್ ವರ್ಕರ್ಸ್, ಅವರ ಮಕ್ಕಳ ಬಳಿ ದಾಖಲೆಗಳಿಲ್ಲ : ಮಹಾರಾಷ್ಟ್ರ ಸಿಇಒಗೆ ಪತ್ರ ಬರೆದ ರಾಷ್ಟ್ರೀಯ ಸಂಸ್ಥೆ

ದಾಖಲಾತಿ ಮತ್ತು ಪರಿಶೀಲನೆ ಅಗತ್ಯತೆಗಳ ಕಾರಣದಿಂದಾಗಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಿಂದ ಲೈಂಗಿಕ ಕಾರ್ಯಕರ್ತೆಯರು ಮತ್ತು ಅವರ ಮಕ್ಕಳನ್ನು ಹೊರಗಿಡದಂತೆ ನೋಡಿಕೊಳ್ಳಲು ವಿಶೇಷ ಕ್ರಮಗಳನ್ನು ಕೈಗೊಳ್ಳಬೇಕೆಂದು...