Homeಮುಖಪುಟತೀವ್ರ ಮಾಲಿನ್ಯದ ದೆಹಲಿಯಲ್ಲಿ ಸುಪ್ರೀಂ ಕೋರ್ಟ್‌ ಆದೇಶ ಧಿಕ್ಕರಿಸಿ ಬಿಜೆಪಿ ಪಕ್ಷದ ಕಚೇರಿ ಕಾಮಗಾರಿ ಚಾಲ್ತಿಯಲ್ಲಿದೆ..

ತೀವ್ರ ಮಾಲಿನ್ಯದ ದೆಹಲಿಯಲ್ಲಿ ಸುಪ್ರೀಂ ಕೋರ್ಟ್‌ ಆದೇಶ ಧಿಕ್ಕರಿಸಿ ಬಿಜೆಪಿ ಪಕ್ಷದ ಕಚೇರಿ ಕಾಮಗಾರಿ ಚಾಲ್ತಿಯಲ್ಲಿದೆ..

- Advertisement -
- Advertisement -

ನವೆಂಬರ್ 4 ರಂದು ನ್ಯಾಯಮೂರ್ತಿ ಅರುಣ್ ಮಿಶ್ರಾ ನೇತೃತ್ವದ ಸುಪ್ರೀಂ ಕೋರ್ಟ್ ಪೀಠವು ಕೇಂದ್ರ ಸರ್ಕಾರ ಮತ್ತು ದೆಹಲಿ, ಹರಿಯಾಣ ಮತ್ತು ಪಂಜಾಬ್ ರಾಜ್ಯಗಳನ್ನು ಮಾಲಿನ್ಯವನ್ನು ನಿಯಂತ್ರಿಸುವ ಕ್ರಮಗಳನ್ನು ತೆಗೆದುಕೊಳ್ಳುವಲ್ಲಿ ವಿಫಲವಾಗಿದೆ ಎಂದು ತರಾಟೆಗೆ ತೆಗೆದುಕೊಂಡಿತ್ತು. ಅದಕ್ಕಾಗಿ ರಾಷ್ಟ್ರೀಯ ರಾಜಧಾನಿ ಪ್ರದೇಶದಲ್ಲಿ (ಎನ್‌ಸಿಆರ್) ನಿರ್ಮಾಣ ಅಥವಾ ಕಟ್ಟಡ ಧ್ವಂಸ ಚಟುವಟಿಕೆಗಳನ್ನು ನಿಷೇಧಿಸಲು ಸುಪ್ರೀಂ ಕೋರ್ಟ್ ಆದೇಶಿಸಿತ್ತು.

ಫೆಬ್ರವರಿ 2018 ರಲ್ಲಿ ದೀನ್ ದಯಾಳ್ ಉಪಾಧ್ಯಾಯ (ಡಿಡಿಯು) ಮಾರ್ಗದಲ್ಲಿ ತನ್ನ ಪ್ರಧಾನ ಕಚೇರಿಯನ್ನು ಉದ್ಘಾಟಿಸಿದ ಬಿಜೆಪಿ ಪಕ್ಷಕ್ಕೆ ಈ ವರ್ಷದ ಮಾರ್ಚ್‌ನಲ್ಲಿ ಕೇಂದ್ರ ಸರ್ಕಾರವು ಹೆಚ್ಚುವರಿ 2.18 ಎಕರೆಗಳನ್ನು ಮಂಜೂರು ಮಾಡಿತ್ತು.

ನವೆಂಬರ್ 15 ರಂದು ನ್ಯೂಸ್‌ಲಾಂಡ್ರಿ ಈ ಸ್ಥಳಕ್ಕೆ ಭೇಟಿ ನೀಡಿದಾಗ, ಡಜನ್‌ಗಟ್ಟಲೆ ಕಾರ್ಮಿಕರು ಕೆಲಸದಲ್ಲಿ ನಿರತರಾಗಿದ್ದಾರೆ. ಸ್ಥಳದ ಕಾವಲುಗಾರ ರಾಜು ಸಿಂಗ್ ಅವರು ನಿರ್ಮಾಣ ಕಾರ್ಯಗಳು ಪ್ರಗತಿಯಲ್ಲಿದೆ ಎಂದು ಹೇಳುತ್ತಾರೆ. “ಇದು ಎಲ್ & ಟಿ ಕೆಲಸ. ಅವರು ಅತಿಥಿಗೃಹವನ್ನು ನಿರ್ಮಿಸುತ್ತಿದ್ದಾರೆ, ಕೆಲಸವು ಸ್ವಲ್ಪ ಸಮಯದವರೆಗೆ ನಿಂತುಹೋಗಿತ್ತು, ಆದರೆ ಇದು ಕಳೆದ 2-3 ದಿನಗಳಿಂದ ಪುನರಾರಂಭವಾಯಿತು” ಎನ್ನುತ್ತಾರೆ.

ಬಿಜೆಪಿ ಕಚೇರಿಯ ಕಾಮಗಾರಿ ನಡೆಯುತ್ತಿರುವುದು

ಒಳಗಿನಿಂದ ಲಾಕ್ ಆಗಿರುವ ಮತ್ತೊಂದು ಗೇಟ್‌ನ ಕಾವಲುಗಾರ ಸುಮಿತ್ ಕೂಡ ನ್ಯೂಸ್‌ಲಾಂಡ್ರಿಗೆ ಈ ಸ್ಥಳದಲ್ಲಿ ಕೆಲಸ ನಡೆಯುತ್ತಿದೆ ಮತ್ತು ಅದನ್ನು ಎಲ್ ಅಂಡ್ ಟಿ ಕಾರ್ಯಗತಗೊಳಿಸುತ್ತಿದೆ ಎಂದು ಹೇಳಿದರು.

ಈ ಕುರಿತು ಸುಪ್ರೀಂ ಆದೇಶವಿದ್ದರೂ ಸಹ ನಿರ್ಮಾಣ ಕೆಲಸ ನಡೆಯುತ್ತಿರುವ ಬಗ್ಗೆ ಕೇಳಿದಾಗ, ಬಿಜೆಪಿ ವಕ್ತಾರ ಹರೀಶ್ ಖುರಾನಾ ಅವರು “ಕಾಂಗ್ರೆಸ್ ಪ್ರಧಾನ ಕಚೇರಿ ಕೆಲಸ ನಿಲ್ಲಿಸದಿರುವಾಗ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಕೆಲಸ ಏಕೆ ನಿಲ್ಲಬೇಕು ಎಂದು ಮರುಪ್ರಶ್ನಿಸಿದ್ದಾರೆ”. “ದೆಹಲಿಯಾದ್ಯಂತ ನಿರ್ಮಾಣ ನಡೆಯುತ್ತಿದ್ದರೆ, ನೀವು ಅದನ್ನು ನಿಲ್ಲಿಸಿ ಎಂದು ಹೇಳುತ್ತೀರಿ?: “ಕಟ್ಟಡವನ್ನು ಮುಚ್ಚಬೇಕು, ಇದರಿಂದ ಧೂಳಿನ ಕಣಗಳು ಗಾಳಿಗೆ ಹೋಗುವುದಿಲ್ಲ. ನಾವು ಅದನ್ನು ಖಚಿತಪಡಿಸಿಕೊಂಡೇ ಕೆಲಸ ಮಾಡುತ್ತಿದ್ದೇವೆ ಎಂದಿದ್ದಾರೆ.

ಆನಂತರ ಕೋಟ್ಲಾ ರಸ್ತೆಯಲ್ಲಿರುವ ಕಾಂಗ್ರೆಸ್ ಪ್ರಧಾನ ಕಚೇರಿಗೆ ನ್ಯೂಸ್‌ಲಾಂಡ್ರಿ ಭೇಟಿ ನೀಡಿದಾಗ, ನಿರ್ಮಾಣ ಸ್ಥಳದಲ್ಲಿ ಸಿಬ್ಬಂದಿಯೊಬ್ಬರು ಈ ಸ್ಥಳದಲ್ಲಿ ಕೆಲಸ ಪ್ರಗತಿಯಲ್ಲಿಲ್ಲ ಎಂದು ಹೇಳಿದರು. ಸೈಟ್‌ನಲ್ಲಿ ಕೆಲಸ ಮಾಡುವ ಕಾರ್ಮಿಕರೊಬ್ಬರು ನವೆಂಬರ್ 1 ರಿಂದ ಕೆಲಸವನ್ನು ಸ್ಥಗಿತಗೊಳಿಸಲಾಗಿದೆ ಎಂದು ಹೇಳಿದರು. “ಕಟ್ಟಡದ ಸುತ್ತ ಯಾವುದೇ ಕಾರ್ಮಿಕರು ಕೆಲಸ ಮಾಡುತ್ತಿಲ್ಲ” ಎಂದು ಅವರು ಹೇಳಿದರು.

ಈ ಸೈಟ್‌ನ ಎದುರಿನ ಕಟ್ಟಡದಲ್ಲಿ ಕುಳಿತುಕೊಳ್ಳುವ ಇನ್ನೊಬ್ಬ ಸಿಬ್ಬಂದಿ ಈ ಮಾಹಿತಿಯನ್ನು ದೃಢಪಡಿಸಿದ್ದಾರೆ. “ಕಟ್ಟಡದ ಹಿಂದೆ ವಾಸಿಸುವ ಕಾರ್ಮಿಕರು, ಈ ತಿಂಗಳ ಆರಂಭದಿಂದಲೂ ಕಾಣಿಸುತ್ತಿಲ್ಲ ಎಂದು ಅವರು ಹೇಳಿದ್ದಾರೆ.” ಆದರೆ ಕಾಂಕ್ರೀಟ್ ಇಟ್ಟಿಗೆಗಳು ಹೊರಗೆ ಬಿದ್ದಿದ್ದವು ಮತ್ತು ಮರಳು ಸಹ ಇತ್ತು. ಜೊತೆಗೆ ಕಾಮಗಾರಿಯ ದೂಳು ಹೊರಗೆ ಬಾರದಂತೆ ತಡೆಯಲು ಯಾವುದೇ ಕ್ರಮಗಳನ್ನು ಅವರು ಕೈಗೊಂಡಿಲ್ಲ. ಬಿಜೆಪಿ ಕಚೇರಿಯು ಇನ್ನು ಆರಂಭಿಕ ಹಂತದಲ್ಲಿದ್ದರೆ ಕಾಂಗ್ರೆಸ್ ಕಚೇರಿಯು ಅಂತಿಮ ಹಂತದಲ್ಲಿರುವಂತೆ ಕಾಣುತ್ತಿದೆ.

ಕಾಂಗ್ರೆಸ್ ಕಚೇರಿ

ದೆಹಲಿಯ ವಾಯುಮಾಲಿನ್ಯಕ್ಕೆ ಐದು ಪ್ರಮುಖ ಕಾರಣಗಳಲ್ಲಿ ನಿರ್ಮಾಣವು ಒಂದಾಗಿದೆ. ಈ ವರ್ಷದ ಏಪ್ರಿಲ್‌ನಿಂದ ದೆಹಲಿ ಮೂಲದ ಕೌನ್ಸಿಲ್ ಆನ್ ಎನರ್ಜಿ, ಎನ್ವಿರಾನ್ಮೆಂಟ್ ಮತ್ತು ವಾಟರ್ (ಸಿಇಇಡಬ್ಲ್ಯು) ನಡೆಸಿದ ವಿಶ್ಲೇಷಣೆಯ ಪ್ರಕಾರ, ನಿರ್ಮಾಣವು ರಾಜಧಾನಿಯಲ್ಲಿ ವಾಯುಮಾಲಿನ್ಯದ ಐದನೇ ಅತಿದೊಡ್ಡ ಮೂಲವಾಗಿದೆ ಮತ್ತು ಅದು ಮಾಲಿನ್ಯ ಶೇ.8 ರಷ್ಟು ಕಾರಣವಾಗಿದೆ ಎಂದು ತಿಳಿಸಿದೆ.

ಕೃಪೆ ನ್ಯೂಸ್‌ಲಾಂಡ್ರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...