Homeಮುಖಪುಟಡೆಹ್ರಾಡೂನ್‌: ಕ್ರಿಶ್ಚಿಯನ್ ಪ್ರಾರ್ಥನಾ ಸಭೆ ನಡೆಯುತ್ತಿದ್ದ ಮನೆ ಮೇಲೆ ಹಿಂದುತ್ವವಾದಿಗಳ ಗುಂಪಿನಿಂದ ದಾಳಿ

ಡೆಹ್ರಾಡೂನ್‌: ಕ್ರಿಶ್ಚಿಯನ್ ಪ್ರಾರ್ಥನಾ ಸಭೆ ನಡೆಯುತ್ತಿದ್ದ ಮನೆ ಮೇಲೆ ಹಿಂದುತ್ವವಾದಿಗಳ ಗುಂಪಿನಿಂದ ದಾಳಿ

- Advertisement -
- Advertisement -

ಡೆಹ್ರಾಡೂನ್‌ನಲ್ಲಿ ಕ್ರಿಶ್ಚಿಯನ್ ಪ್ರಾರ್ಥನಾ ಸಭೆ ನಡೆಯುತ್ತಿದ್ದ ಮನೆಯೊಂದಕ್ಕೆ ಹಿಂದುತ್ವವಾದಿಗಳ ಗುಂಪೊಂದು ನುಗ್ಗಿ, ಅಲ್ಲಿದ್ದವರ ಮೇಲೆ ಹಲ್ಲೆ ನಡೆಸಿ ಮೆನೆ ಧ್ವಂಸ ಮಾಡಿರುವ ವಿಡಿಯೋಗಳು ಜಾಲತಾಣದಲ್ಲಿ ವೂರಲ್ ಆಗಿದ್ದು, ಜುಲೈ 14 ರಂದು ಪಾದ್ರಿ ರಾಜೇಶ್ ಭೂಮಿ ಅವರ ನಿವಾಸದಲ್ಲಿ ಭಾನುವಾರ ಬೆಳಗಿನ ಪ್ರಾರ್ಥನಾ ಅವಧಿಯಲ್ಲಿ ದಾಳಿ ನಡೆದಿದೆ.

ವರದಿಗಳ ಪ್ರಕಾರ, ದಾಳಿಕೋರರು, ದೇವೇಂದ್ರ ದೋಭಾಲ್ ಮತ್ತು ಹಿಂದುತ್ವ ಸಂಘಟನೆಗಳೊಂದಿಗೆ ಸಂಬಂಧ ಹೊಂದಿರುವ ಇತರರು ಬಲವಂತವಾಗಿ ಮನೆಗೆ ಪ್ರವೇಶಿಸಿದ್ದಾರೆ. ಅಲ್ಲಿದ್ದವರು ಬಲವಂತದ ಮತಾಂತರದಲ್ಲಿ ತೊಡಗಿದ್ದಾರೆ ಎಂದು ಆರೋಪಿಸಿ, ಪ್ರಾರ್ಥನಾ ಕೊಠಡಿ ಮತ್ತು ಮಲಗುವ ಕೋಣೆಯನ್ನು ಧ್ವಂಸಗೊಳಿಸಲು ಮುಂದಾಗಿದ್ದಾರೆ. ಅವರು ಕ್ರಿಶ್ಚಿಯನ್ ಧರ್ಮದ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ಸಹ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಸಭೆಯಲ್ಲಿದ್ದ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಸಂತ್ರಸ್ತರ ಮೇಲೆ ಹಲ್ಲೆ ನಡೆಸಲಾಗಿದ್ದು, ಕನಿಷ್ಠ ಏಳು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಈ ಘಟನೆಯು ಬೆದರಿಕೆ ಮತ್ತು ಹಿಂಸಾಚಾರಕ್ಕೆ ಒಳಗಾದ ಚಿಕ್ಕ ಮಕ್ಕಳು ಸೇರಿದಂತೆ ಕುಟುಂಬಗಳನ್ನು ಆಘಾತಕ್ಕೀಡು ಮಾಡಿದೆ.

“ಅವರು ಮಕ್ಕಳೊಂದಿಗೂ ಅನುಚಿತವಾಗಿ ವರ್ತಿಸಿದರು. ಅವರು ತಮ್ಮ ತಲೆಯ ಮೇಲೆ ಹೊಡೆದರು ಮತ್ತು ನೀವು ಈ ಪ್ರಾರ್ಥನೆಯಲ್ಲಿ ಏಕೆ ಭಾಗವಹಿಸುತ್ತೀರಿ ಎಂದು ಕೇಳಿದರು. ಭವಿಷ್ಯದಲ್ಲಿ ಭಾನುವಾರದ ಪ್ರಾರ್ಥನೆಯಲ್ಲಿ ಎಂದಿಗೂ ಪಾಲ್ಗೊಳ್ಳಬೇಡಿ ಎಂದು ಅವರು ಅವರಿಗೆ ಹೇಳಿದರು” ಎಂದು ಹರಿದ್ವಾರದಲ್ಲಿ ಉಪಾಹಾರ ಗೃಹವನ್ನು ಹೊಂದಿರುವ ಪಾದ್ರಿ ರಾಜೇಶ್ ಭೂಮಿ ಹೇಳಿದರು.

ನೆಹರು ಕಾಲೋನಿ ಪೊಲೀಸ್ ಠಾಣೆಯಲ್ಲಿ 11 ಆರೋಪಿಗಳ ವಿರುದ್ಧ ಸ್ವಯಂ ಪ್ರೇರಿತವಾಗಿ ನೋವುಂಟು ಮಾಡುವುದು, ಗಲಭೆ, ಆಸ್ತಿ ನಾಶ, ಅತಿಕ್ರಮಣ ಮತ್ತು ಧಾರ್ಮಿಕ ಭಾವನೆಗಳ ಉದ್ದೇಶಪೂರ್ವಕ ಆಕ್ರೋಶ ಸೇರಿದಂತೆ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಘಟನೆಯ ತೀವ್ರತೆಯ ಹೊರತಾಗಿಯೂ, ಇದುವರೆಗೆ ಯಾರನ್ನೂ ಬಂಧಿಸಲಾಗಿಲ್ಲ ಎನ್ನಲಾಗಿದೆ.

ನೆಹರು ಕಾಲೋನಿ ಪೊಲೀಸ್ ಠಾಣೆಯ ತನಿಖಾಧಿಕಾರಿ ಸತ್ಬೀರ್ ಸಿಂಗ್ ಮಾತನಾಡಿ, “ಮನೆಯಲ್ಲಿ ಯಾವುದೇ ಧಾರ್ಮಿಕ ಮತಾಂತರ ನಡೆಯುತ್ತಿಲ್ಲ. ಹಿಂದುತ್ವ ಸಂಘಟನೆಗಳ ಜನರು ಕುಟುಂಬ ಸದಸ್ಯರೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ ಮತ್ತು ಅವರ ಮನೆಯನ್ನು ಧ್ವಂಸ ಮಾಡಿದ್ದಾರೆ” ಎಂದು ಹೇಳಿದ್ದಾರೆ.

ಪುರುಷರ ಗುಂಪೊಂದು ಕೋಣೆಯೊಂದರಲ್ಲಿ ವೇದಿಕೆ ಮತ್ತು ಸಂಗೀತ ಉಪಕರಣಗಳನ್ನು ಧ್ವಂಸಗೊಳಿಸುವುದನ್ನು ಮತ್ತು ಹಲ್ಲೆಯಲ್ಲಿ ತೊಡಗಿರುವುದನ್ನು ವೀಡಿಯೊದಲ್ಲಿ ಕಾಣಬಹುದಾಗಿದೆ.

ಈ ಘಟನೆಯು ಆಕ್ರೋಶವನ್ನು ಹುಟ್ಟುಹಾಕಿದ್ದು, ಧಾರ್ಮಿಕ ಅಸಹಿಷ್ಣುತೆ ಮತ್ತು ಪ್ರದೇಶದ ಅಲ್ಪಸಂಖ್ಯಾತ ಸಮುದಾಯಗಳ ಸುರಕ್ಷತೆಯ ಬಗ್ಗೆ ಕಳವಳವನ್ನು ಹುಟ್ಟುಹಾಕಿದೆ. ತನಿಖೆ ನಡೆಯುತ್ತಿದ್ದು, ಶೀಘ್ರವೇ ದೋಷಾರೋಪ ಪಟ್ಟಿ ಸಲ್ಲಿಸಲಾಗುವುದು ಎಂದು ಪೊಲೀಸರು ಭರವಸೆ ನೀಡಿದ್ದಾರೆ. ಈ ಘಟನೆಯನ್ನು ವರದಿ ಮಾಡದಿರುವುದಕ್ಕೆ ನೆಟ್ಟಿಗರು ಮಾಧ್ಯಮದವರನ್ನು ಪ್ರಶ್ನಿಸಿದ್ದಾರೆ.

“ಡೆಹ್ರಾಡೂನ್‌ನಲ್ಲಿ ಕ್ರಿಶ್ಚಿಯನ್ ಪ್ರಾರ್ಥನಾ ಸಭೆಯ ಮೇಲೆ ಹಿಂದುತ್ವದ ಗುಂಪು ದಾಳಿ ಮಾಡಿದೆ. ಹಿಂದುತ್ವವಾದಿಗಳ ಗುಂಪೊಂದು ಮನೆಗೆ ನುಗ್ಗಿ ಮಹಿಳೆಯರೂ ಸೇರಿದಂತೆ ಒಳಗಿದ್ದವರ ಮೇಲೆ ಹಲ್ಲೆ ನಡೆಸಿ, ಬಲವಂತವಾಗಿ ಮನೆಯೊಳಗೆ ನುಗ್ಗಿ ಕ್ರೈಸ್ತ ಶಿಲುಬೆ, ಪ್ರಾರ್ಥನಾ ಕೊಠಡಿ ಮತ್ತು ಬೆಡ್ ರೂಂ ಧ್ವಂಸ ಮಾಡಿ, ಕ್ರೈಸ್ತ ಧರ್ಮದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿ ಎಲ್ಲರನ್ನೂ ಬಲವಂತದ ಆರೋಪ ಮಾಡಿದರು” ಎಂದು ಆಲ್ಟ್‌ ನ್ಯೂಸ್ ಸಂಸ್ಥಾಪಕ ಮಹಮದ್ ಝುಬೇರ್ ಎಕ್ಸ್‌ನಲ್ಲಿ ವಿಡಯೊ ಜೊತೆಗೆ ಪೋಸ್ಟ್‌ ಮಾಡಿದ್ದಾರೆ.

ಇದನ್ನೂ ಓದಿ; ಆಂಧ್ರಪ್ರದೇಶ: ಜಗನ್ ಪಕ್ಷದ ಕಾರ್ಯಕರ್ತನನ್ನು ನಡುರಸ್ತೆಯಲ್ಲಿ ಭೀಕರವಾಗಿ ಹತ್ಯೆಗೈದ ದುಷ್ಕರ್ಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...