Homeಮುಖಪುಟಡೆಹ್ರಾಡೂನ್‌ನಲ್ಲಿ ಮೇಘಸ್ಪೋಟ: ಕನಿಷ್ಠ 10 ಮಂದಿ ಸಾವು, ಹಲವರು ನಾಪತ್ತೆ; ವರದಿ

ಡೆಹ್ರಾಡೂನ್‌ನಲ್ಲಿ ಮೇಘಸ್ಪೋಟ: ಕನಿಷ್ಠ 10 ಮಂದಿ ಸಾವು, ಹಲವರು ನಾಪತ್ತೆ; ವರದಿ

- Advertisement -
- Advertisement -

ಉತ್ತರಾಖಂಡದ ಡೆಹ್ರಾಡೂನ್‌ನಲ್ಲಿ ಮಂಗಳವಾರ (ಸೆ.16) ಮುಂಜಾನೆ ಸಂಭವಿಸಿದ, ಧಾರಾಕಾರ ಮಳೆ ಮತ್ತು ವ್ಯಾಪಕ ನಾಶನಷ್ಟಕ್ಕೆ ಕಾರಣವಾದ ಮೇಘಸ್ಫೋಟದಲ್ಲಿ ಕನಿಷ್ಠ ಹತ್ತು ಜನರು ಸಾವನ್ನಪ್ಪಿದ್ದಾರೆ ಮತ್ತು ಸುಮಾರು 8 ಜನರು ಕಾಣೆಯಾಗಿದ್ದಾರೆ ಎಂದು ವರದಿಯಾಗಿದೆ.

ಸಹಸ್ರಧಾರ ಕೇಂದ್ರಿತ ಮೇಘಸ್ಪೋಟದಿಂದ ಹಠಾತ್ ಪ್ರವಾಹ ಉಂಟಾಗಿ ಹೋಟೆಲ್‌, ಅಂಗಡಿ ಮತ್ತು ಮನೆಗಳು ಕೊಚ್ಚಿ ಹೋಗಿವೆ. ಜಿಲ್ಲೆಯಾದ್ಯಂತ ವಾಣಿಜ್ಯ ಸಂಸ್ಥೆಗಳು ಮತ್ತು ಪ್ರಮುಖ ಮೂಲಸೌಕರ್ಯಗಳಿಗೆ ತೀವ್ರ ಹಾನಿಯಾಗಿದೆ. ಅನೇಕ ಜನರು ಪ್ರವಾಹದಲ್ಲಿ ಕೊಚ್ಚಿ ಹೋಗಿರಬಹುದು ಎಂದು ಶಂಕಿಸಲಾಗಿದೆ.

ಡೆಹ್ರಾಡೂನ್‌ನ ಮಾಲ್ ದೇವ್ತಾ ಮತ್ತು ಮಸ್ಸೂರಿಯಲ್ಲಿ ಹೆಚ್ಚಿನ ಹಾನಿ ಸಂಭವಿಸಿದೆ ಎಂದು ಸರ್ಕಾರದ ವಿಪತ್ತು ನಿರ್ವಹಣಾ ವಿಭಾಗದ ಕಾರ್ಯದರ್ಶಿ ವಿನೋದ್ ಕುಮಾರ್ ಸುಮನ್ ತಿಳಿಸಿದ್ದಾರೆ.

ಹಾನಿಗೊಳಗಾದ ಪ್ರದೇಶಗಳಲ್ಲಿ ವಿವಿಧ ತಂಡಗಳು ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿವೆ. ಸುಮಾರು 300ರಿಂದ 400 ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ ಎಂದು ಸುಮನ್ ಹೇಳಿದ್ದಾರೆ.

ತಪಕೇಶ್ವರದ ಭಗತ್ ಸಿಂಗ್ ಕಾಲೋನಿಯ ಶಿಖರ್ ಜಲಪಾತದ ಬಳಿ ನಾಲ್ವರು ಕೊಚ್ಚಿ ಹೋಗಿದ್ದಾರೆ. ಮಸ್ಸೂರಿಯ ಝರಿಪಾನಿ ಟೋಲ್ ಪ್ಲಾಝಾದಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಇಬ್ಬರು ಕಾರ್ಮಿಕರು ಸಮಾಧಿಯಾಗಿದ್ದರು. ಈ ಪೈಕಿ ಒಬ್ಬರು ಸಾವನ್ನಪ್ಪಿದ್ದಾರೆ, ಇನ್ನೊಬ್ಬರು ಗಾಯಗೊಂಡಿದ್ದಾರೆ. ಕಾರ್ಲಿ ಗಾಡ್ ಪ್ರದೇಶದಲ್ಲಿ ಇಬ್ಬರು ಕಾಣೆಯಾಗಿದ್ದಾರೆ ಎಂದು ವರದಿಯಾಗಿದೆ.

ದೋಯಿವಾಲಾದಲ್ಲಿ ಹಲವಾರು ಮನೆಗಳು ಜಲಾವೃತಗೊಂಡಿದ್ದು, ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್‌) ತಂಡಗಳು ಚಂದ್ರಭಾಗ ನದಿಯಲ್ಲಿ ಸಿಲುಕಿದ್ದ ಮೂವರನ್ನು ರಕ್ಷಿಸಿವೆ.

ತೆಹ್ರಿಯಲ್ಲಿ ನೀರು ನಿಂತಿದ್ದರಿಂದ ಗೀತಾ ಭವನದಲ್ಲಿ ಜನರು ಸಿಲುಕಿಕೊಂಡಿದ್ದರು. ಅವರನ್ನು ರಕ್ಷಿಸಲಾಗಿದೆ. ನೈನಿತಾಲ್‌ನಲ್ಲಿ ಭಾರೀ ಮಳೆಯಿಂದ ಭೂಕುಸಿತ ಉಂಟಾಗಿ ರಸ್ತೆ ಸಂಪರ್ಕ ಕಡಿತಗೊಂಡಿದೆ ಎಂದು ಸುಮನ್‌ ಹೇಳಿದ್ದಾರೆ.

ಮಝರಾ ಎಂಬ ಗ್ರಾಮದಲ್ಲಿ ಭೂಕುಸಿತದಿಂದ ಕೊಚ್ಚಿಕೊಂಡು ಬಂದ ಅಪಾರ ಪ್ರಮಾಣದ ಮಣ್ಣು ಮನೆಗಳನ್ನು ಮುಳುಗಿಸಿತ್ತು. ಜನರು ಪ್ರಾಣ ಉಳಿಸಿಕೊಳ್ಳಲು ರಸ್ತೆಗೆ ಬಂದು ರಾತ್ರಿ ಕಳೆದಿದ್ದಾರೆ. ಕೆಲವರು ಕಾಣೆಯಾಗಿದ್ದಾರೆ ಎಂದು ವರದಿಯಾಗಿದೆ.

ರಕ್ಷಣೆ ಮತ್ತು ಪರಿಹಾರ ಕಾರ್ಯಾಚರಣೆಗಾಗಿ ಎಸ್‌ಡಿಆರ್‌ಎಫ್‌ ಮತ್ತು ಎನ್‌ಡಿಆರ್‌ಎಫ್‌ ತಂಡಗಳನ್ನು ರಾತ್ರಿಯಿಡೀ ಸಜ್ಜುಗೊಳಿಸಲಾಗಿದೆ. ದುರಂತ ಪ್ರದೇಶಗಳಿಂದ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ. ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಗಾಗಿ ಮಣ್ಣು ಅಗೆಯುವ ಯಂತ್ರಗಳು ಸೇರಿದಂತೆ ಭಾರೀ ಯಂತ್ರೋಪಕರಣಗಳನ್ನು ತರಲಾಗಿದೆ. ಕಾಣೆಯಾದ ವ್ಯಕ್ತಿಗಳ ಹುಡುಕಾಟ ಯುದ್ಧೋಪಾದಿಯಲ್ಲಿ ಮುಂದುವರೆದಿದೆ ಎಂದು ವರದಿಗಳು ವಿವರಿಸಿವೆ.

2008ರ ಮಾಲೆಗಾಂವ್ ಸ್ಫೋಟ ಪ್ರಕರಣ: ಖುಲಾಸೆ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಲು ‘ಎಲ್ಲರಿಗೂ ಮುಕ್ತ ಅವಕಾಶವಿಲ್ಲ’: ಬಾಂಬೆ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...