Homeಮುಖಪುಟಫ್ಯಾಕ್ಟ್‌ಚೆಕ್: ರೈಲ್ವೇ ಫಲಕದಲ್ಲಿ ಸಂಸ್ಕೃತ ಭಾಷೆಯಿರುವ ಸಂಬಿತ್ ಪಾತ್ರ ಟ್ವೀಟ್- ವಾಸ್ತವವೇನು?

ಫ್ಯಾಕ್ಟ್‌ಚೆಕ್: ರೈಲ್ವೇ ಫಲಕದಲ್ಲಿ ಸಂಸ್ಕೃತ ಭಾಷೆಯಿರುವ ಸಂಬಿತ್ ಪಾತ್ರ ಟ್ವೀಟ್- ವಾಸ್ತವವೇನು?

ದೆಹಲಿಯ ಉತ್ತರ ರೈಲ್ವೆ ಅಧಿಕಾರಿಗಳು ಇದೀಗ ಡೆಹ್ರಾಡೂನ್ ನಿಲ್ದಾಣದಲ್ಲಿನ ಸೈನ್‌ಬೋರ್ಡ್‌ಗಳಲ್ಲಿ ಸಂಸ್ಕೃತದಲ್ಲಿ ಬರೆದಿಲ್ಲ. ಈ ಹೆಸರನ್ನು ಮೊದಲಿನಂತೆ ವಿವಿಧ ಬೋರ್ಡ್‌ಗಳಲ್ಲಿ ಇಂಗ್ಲಿಷ್, ಹಿಂದಿ ಮತ್ತು ಉರ್ದು ಭಾಷೆಗಳಲ್ಲಿ ಪ್ರದರ್ಶಿಸಲಾಗಿದೆ.

- Advertisement -
- Advertisement -

ಬಿಜೆಪಿ ರಾಷ್ಟ್ರೀಯ ವಕ್ತಾರ ಸಂಬಿತ್ ಪಾತ್ರ ಸೋಮವಾರ ಡೆಹ್ರಾಡೂನ್ ಹೆಸರನ್ನು ಹಿಂದಿ ಮತ್ತು ಇಂಗ್ಲಿಷ್ ಜೊತೆಗೆ ಉರ್ದು ಬದಲಿಗೆ ಸಂಸ್ಕೃತದಲ್ಲಿ ಬರೆದಿರುವ “ಡೆಹ್ರಾಡೂನಮ್” ಎಂದು ತೋರಿಸಿರುವ ಚಿತ್ರವನ್ನು ಟ್ವೀಟ್ ಮಾಡಿದ್ದಾರೆ.

ಈ ಕುರಿತು ಸ್ಪಷ್ಟೀಕರಣ ನೀಡಿರುವ ದೆಹಲಿಯ ಉತ್ತರ ರೈಲ್ವೆ ಅಧಿಕಾರಿಗಳು “ಇದೀಗ ಡೆಹ್ರಾಡೂನ್ ನಿಲ್ದಾಣದಲ್ಲಿನ ಸೈನ್‌ಬೋರ್ಡ್‌ಗಳಲ್ಲಿ ಸಂಸ್ಕೃತದಲ್ಲಿ ಬರೆದಿಲ್ಲ. ವಿವಿಧ ಬೋರ್ಡ್‌ಗಳಲ್ಲಿ ಇಂಗ್ಲಿಷ್, ಹಿಂದಿ ಮತ್ತು ಉರ್ದು ಭಾಷೆಗಳಲ್ಲಿ ಪ್ರದರ್ಶಿಸಲಾಗಿದೆ. ಸಂಸ್ಕೃತ ಇರುವ ಫೋಟೊ ಸಾಮಾಜಿಕ ಮಾಧ್ಯಮದಲ್ಲಿ ಸೃಷ್ಟಿಸಲಾದ “ಗೊಂದಲ” ಎಂದು ಹೇಳಿದ್ದಾರೆ.

ಸೋಮವಾರ ಬೆಳಿಗ್ಗೆ ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ವಿನಯ್ ಸಹಸ್ರಬುದ್ದೆ ಅವರು ‘ಈಗಲ್ ಐ’ ಹೆಸರಿನಲ್ಲಿರುವ ಎರಡು ಚಿತ್ರಗಳಿರುವ ಪೋಸ್ಟನ್ನು ಷೇರ್ ಮಾಡಿದಾಗ ಈ ವಿಷಯ ವೈರಲ್ ಅಯಿತು. ಅದರಲ್ಲಿ ಒಂದು ಚಿತ್ರವು ಡೆಹ್ರಾಡೂನ್‌ನ ಹಳೆಯ ನಿಲ್ದಾಣದ ಸಂಕೇತ ಫಲಕದಲ್ಲಿ ಹೆಸರನ್ನು ಹಿಂದಿ, ಇಂಗ್ಲಿಷ್ ಮತ್ತು ಉರ್ದು ಭಾಷೆಯಲ್ಲಿ ಬರೆಯಲಾಗಿದೆ. ಆದರೆ ಮತ್ತೊಂದು ಚಿತ್ರದಲ್ಲಿ ಉರ್ದು ಬದಲಿಗೆ ಸಂಸ್ಕೃತದಲ್ಲಿ ಬರೆಯಲಾಗಿದೆ ಎಂದು ತೋರಿಸಲಾಗಿದೆ.

ಸಹಸ್ರಬುದ್ಧೆ ಟ್ವೀಟ್‌ನಲ್ಲಿ, “@RailMinIndia ನ ಈ ಮಹತ್ವದ ಕ್ರಮವನ್ನು ನಮ್ಮೊಂದಿಗೆ ಹಂಚಿಕೊಂಡಿದ್ದಕ್ಕಾಗಿ ಧನ್ಯವಾದಗಳು” ಎಂದು ಬರೆದಿದ್ದಾರೆ.

ವಾಸ್ತವವೇನು?

ಕಳೆದ ವರ್ಷ ನಾಮಫಲಕಗಳಲ್ಲಿ ಉರ್ದು ಬದಲಿಗೆ ಸಂಸ್ಕೃತ ಬಳಸಲು ಅಧಿಕಾರಿಗಳು ಮುಂದಾಗಿದ್ದರು. ಆದರೆ ಕೆಲವು ಸ್ಥಳೀಯ ಸಂಸ್ಥೆಗಳು ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದವು. ನಂತರ ಈ ಯೋಜನೆ ಮುಂದುವರೆಯಲಿಲ್ಲ ಎಂದು ಮೂಲಗಳು ದಿ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿವೆ. ಆ ವರ್ಷ ಸಂಸ್ಕೃತದಲ್ಲಿ ಬರೆದಿದ್ದ ನಾಮಫಲಕವನ್ನು ಬಳಸದೇ ಬಿಸಾಡಲಾಗಿದ್ದು ಆ ಫೋಟೊ ಈಗ ಸಾಮಾಜಿಕ ಜಾಲತಾಣದಲ್ಲ ವೈರಲ್ ಆಗಿದೆ ಅಷ್ಟೇ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

“ಡೆಹ್ರಾಡೂನ್‌ ರೈಲ್ವೇ ಸ್ಟೇಷನ್ ನಲ್ಲಿ ನವೀಕರಣ ಕೆಲಸ ನಡೆಯುತ್ತಿದೆ. ಅಲ್ಲಿ ನಿರ್ಮಾಣ ಮಾಡುತ್ತಿರುವಾಗ ಕೆಲಸದವರಿಗೆ ಕೆಲವು ಹಳೆಯ ಸೈನ್‌ಬೋರ್ಡ್‌ಗಳು ದೊರೆತಿವೆ. ಅದರಲ್ಲಿ ಉರ್ದು ಬದಲಿಗೆ ಸಂಸ್ಕೃತದಲ್ಲಿ ಬರೆಯಲಾಗಿದ್ದ ಬೋರ್ಡ್ ಸಹ ಸಿಕ್ಕಿದೆ. ಆದರೆ ಅದು ಹಳೆಯದು. ಈಗ ಮೊದಲಿನಂತೆಯೇ ಇಂಗ್ಲಿಷ್, ಹಿಂದಿ ಮತ್ತು ಉರ್ದು ಭಾಷೆಯಲ್ಲಿ ಹೆಸರನ್ನು ಬರೆಯಲಾಗಿದೆ ”ಎಂದು ರೈಲ್ವೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ರೈಲ್ವೆ ವರ್ಕ್ಸ್ ಮ್ಯಾನ್ಯುವಲ್ ಪ್ರಕಾರ, ನಿಲ್ದಾಣದ ಹೆಸರುಗಳನ್ನು ಇಂಗ್ಲಿಷ್, ಹಿಂದಿ ಮತ್ತು ಸ್ಥಳೀಯ ಅಧಿಕೃತ ಭಾಷೆಯಲ್ಲಿ ಬರೆಯಬೇಕಾಗಿದೆ. ರೈಲ್ವೆ ಸಾಮಾನ್ಯವಾಗಿ ತನ್ನ ನಿಲ್ದಾಣದ ಹೆಸರುಗಳ ವ್ಯವಹಾರದಲ್ಲಿ ತಲೆಹಾಕುವುದಿಲ್ಲ. ಇದರ ಕುರಿತು ಸಂಬಂಧಪಟ್ಟ ರಾಜ್ಯಕ್ಕೆ ಅಧಿಕಾರವಿರುವುದು ಎಂದು ಅದು ಅಧಿಕೃತವಾಗಿ ಹೇಳಿದೆ.

ಹೆಸರನ್ನು/ಭಾಷೆಯನ್ನು ಬದಲಾಯಿಸಲು ಬಯಸಿದರೆ ರಾಜ್ಯಗಳು ಸಾಮಾನ್ಯವಾಗಿ ಗೃಹ ಸಚಿವಾಲಯಕ್ಕೆ ಕೋರಿಕೆಯನ್ನು ಕಳುಹಿಸುತ್ತವೆ.


ಇದನ್ನೂ ಓದಿ: ಸಂಸ್ಕೃತ ಭಾಷೆಯಿಂದ ಸಕ್ಕರೆ ಕಾಯಿಲೆ, ಕೊಬ್ಬು ನಿಯಂತ್ರಣ: ಸಂಸದ ಗಣೇಶ್ ಸಿಂಗ್ ಹೇಳಿಕೆಗೆ ವ್ಯಾಪಕ ಟೀಕೆ

ಲಾಕ್‌ಡೌನ್‌ ಉಲ್ಲಂಘಿಸಿದ ಗುಜರಾತ್ ಸಚಿವರ ಪುತ್ರನನ್ನು ಪ್ರಶ್ನಿಸಿದ್ದ ಮಹಿಳಾ ಕಾನ್ಸ್ಟೇಬಲ್‌ ರಾಜೀನಾಮೆ!

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...