Homeಮುಖಪುಟಫ್ಯಾಕ್ಟ್‌ಚೆಕ್: ರೈಲ್ವೇ ಫಲಕದಲ್ಲಿ ಸಂಸ್ಕೃತ ಭಾಷೆಯಿರುವ ಸಂಬಿತ್ ಪಾತ್ರ ಟ್ವೀಟ್- ವಾಸ್ತವವೇನು?

ಫ್ಯಾಕ್ಟ್‌ಚೆಕ್: ರೈಲ್ವೇ ಫಲಕದಲ್ಲಿ ಸಂಸ್ಕೃತ ಭಾಷೆಯಿರುವ ಸಂಬಿತ್ ಪಾತ್ರ ಟ್ವೀಟ್- ವಾಸ್ತವವೇನು?

ದೆಹಲಿಯ ಉತ್ತರ ರೈಲ್ವೆ ಅಧಿಕಾರಿಗಳು ಇದೀಗ ಡೆಹ್ರಾಡೂನ್ ನಿಲ್ದಾಣದಲ್ಲಿನ ಸೈನ್‌ಬೋರ್ಡ್‌ಗಳಲ್ಲಿ ಸಂಸ್ಕೃತದಲ್ಲಿ ಬರೆದಿಲ್ಲ. ಈ ಹೆಸರನ್ನು ಮೊದಲಿನಂತೆ ವಿವಿಧ ಬೋರ್ಡ್‌ಗಳಲ್ಲಿ ಇಂಗ್ಲಿಷ್, ಹಿಂದಿ ಮತ್ತು ಉರ್ದು ಭಾಷೆಗಳಲ್ಲಿ ಪ್ರದರ್ಶಿಸಲಾಗಿದೆ.

- Advertisement -
- Advertisement -

ಬಿಜೆಪಿ ರಾಷ್ಟ್ರೀಯ ವಕ್ತಾರ ಸಂಬಿತ್ ಪಾತ್ರ ಸೋಮವಾರ ಡೆಹ್ರಾಡೂನ್ ಹೆಸರನ್ನು ಹಿಂದಿ ಮತ್ತು ಇಂಗ್ಲಿಷ್ ಜೊತೆಗೆ ಉರ್ದು ಬದಲಿಗೆ ಸಂಸ್ಕೃತದಲ್ಲಿ ಬರೆದಿರುವ “ಡೆಹ್ರಾಡೂನಮ್” ಎಂದು ತೋರಿಸಿರುವ ಚಿತ್ರವನ್ನು ಟ್ವೀಟ್ ಮಾಡಿದ್ದಾರೆ.

ಈ ಕುರಿತು ಸ್ಪಷ್ಟೀಕರಣ ನೀಡಿರುವ ದೆಹಲಿಯ ಉತ್ತರ ರೈಲ್ವೆ ಅಧಿಕಾರಿಗಳು “ಇದೀಗ ಡೆಹ್ರಾಡೂನ್ ನಿಲ್ದಾಣದಲ್ಲಿನ ಸೈನ್‌ಬೋರ್ಡ್‌ಗಳಲ್ಲಿ ಸಂಸ್ಕೃತದಲ್ಲಿ ಬರೆದಿಲ್ಲ. ವಿವಿಧ ಬೋರ್ಡ್‌ಗಳಲ್ಲಿ ಇಂಗ್ಲಿಷ್, ಹಿಂದಿ ಮತ್ತು ಉರ್ದು ಭಾಷೆಗಳಲ್ಲಿ ಪ್ರದರ್ಶಿಸಲಾಗಿದೆ. ಸಂಸ್ಕೃತ ಇರುವ ಫೋಟೊ ಸಾಮಾಜಿಕ ಮಾಧ್ಯಮದಲ್ಲಿ ಸೃಷ್ಟಿಸಲಾದ “ಗೊಂದಲ” ಎಂದು ಹೇಳಿದ್ದಾರೆ.

ಸೋಮವಾರ ಬೆಳಿಗ್ಗೆ ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ವಿನಯ್ ಸಹಸ್ರಬುದ್ದೆ ಅವರು ‘ಈಗಲ್ ಐ’ ಹೆಸರಿನಲ್ಲಿರುವ ಎರಡು ಚಿತ್ರಗಳಿರುವ ಪೋಸ್ಟನ್ನು ಷೇರ್ ಮಾಡಿದಾಗ ಈ ವಿಷಯ ವೈರಲ್ ಅಯಿತು. ಅದರಲ್ಲಿ ಒಂದು ಚಿತ್ರವು ಡೆಹ್ರಾಡೂನ್‌ನ ಹಳೆಯ ನಿಲ್ದಾಣದ ಸಂಕೇತ ಫಲಕದಲ್ಲಿ ಹೆಸರನ್ನು ಹಿಂದಿ, ಇಂಗ್ಲಿಷ್ ಮತ್ತು ಉರ್ದು ಭಾಷೆಯಲ್ಲಿ ಬರೆಯಲಾಗಿದೆ. ಆದರೆ ಮತ್ತೊಂದು ಚಿತ್ರದಲ್ಲಿ ಉರ್ದು ಬದಲಿಗೆ ಸಂಸ್ಕೃತದಲ್ಲಿ ಬರೆಯಲಾಗಿದೆ ಎಂದು ತೋರಿಸಲಾಗಿದೆ.

ಸಹಸ್ರಬುದ್ಧೆ ಟ್ವೀಟ್‌ನಲ್ಲಿ, “@RailMinIndia ನ ಈ ಮಹತ್ವದ ಕ್ರಮವನ್ನು ನಮ್ಮೊಂದಿಗೆ ಹಂಚಿಕೊಂಡಿದ್ದಕ್ಕಾಗಿ ಧನ್ಯವಾದಗಳು” ಎಂದು ಬರೆದಿದ್ದಾರೆ.

ವಾಸ್ತವವೇನು?

ಕಳೆದ ವರ್ಷ ನಾಮಫಲಕಗಳಲ್ಲಿ ಉರ್ದು ಬದಲಿಗೆ ಸಂಸ್ಕೃತ ಬಳಸಲು ಅಧಿಕಾರಿಗಳು ಮುಂದಾಗಿದ್ದರು. ಆದರೆ ಕೆಲವು ಸ್ಥಳೀಯ ಸಂಸ್ಥೆಗಳು ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದವು. ನಂತರ ಈ ಯೋಜನೆ ಮುಂದುವರೆಯಲಿಲ್ಲ ಎಂದು ಮೂಲಗಳು ದಿ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿವೆ. ಆ ವರ್ಷ ಸಂಸ್ಕೃತದಲ್ಲಿ ಬರೆದಿದ್ದ ನಾಮಫಲಕವನ್ನು ಬಳಸದೇ ಬಿಸಾಡಲಾಗಿದ್ದು ಆ ಫೋಟೊ ಈಗ ಸಾಮಾಜಿಕ ಜಾಲತಾಣದಲ್ಲ ವೈರಲ್ ಆಗಿದೆ ಅಷ್ಟೇ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

“ಡೆಹ್ರಾಡೂನ್‌ ರೈಲ್ವೇ ಸ್ಟೇಷನ್ ನಲ್ಲಿ ನವೀಕರಣ ಕೆಲಸ ನಡೆಯುತ್ತಿದೆ. ಅಲ್ಲಿ ನಿರ್ಮಾಣ ಮಾಡುತ್ತಿರುವಾಗ ಕೆಲಸದವರಿಗೆ ಕೆಲವು ಹಳೆಯ ಸೈನ್‌ಬೋರ್ಡ್‌ಗಳು ದೊರೆತಿವೆ. ಅದರಲ್ಲಿ ಉರ್ದು ಬದಲಿಗೆ ಸಂಸ್ಕೃತದಲ್ಲಿ ಬರೆಯಲಾಗಿದ್ದ ಬೋರ್ಡ್ ಸಹ ಸಿಕ್ಕಿದೆ. ಆದರೆ ಅದು ಹಳೆಯದು. ಈಗ ಮೊದಲಿನಂತೆಯೇ ಇಂಗ್ಲಿಷ್, ಹಿಂದಿ ಮತ್ತು ಉರ್ದು ಭಾಷೆಯಲ್ಲಿ ಹೆಸರನ್ನು ಬರೆಯಲಾಗಿದೆ ”ಎಂದು ರೈಲ್ವೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ರೈಲ್ವೆ ವರ್ಕ್ಸ್ ಮ್ಯಾನ್ಯುವಲ್ ಪ್ರಕಾರ, ನಿಲ್ದಾಣದ ಹೆಸರುಗಳನ್ನು ಇಂಗ್ಲಿಷ್, ಹಿಂದಿ ಮತ್ತು ಸ್ಥಳೀಯ ಅಧಿಕೃತ ಭಾಷೆಯಲ್ಲಿ ಬರೆಯಬೇಕಾಗಿದೆ. ರೈಲ್ವೆ ಸಾಮಾನ್ಯವಾಗಿ ತನ್ನ ನಿಲ್ದಾಣದ ಹೆಸರುಗಳ ವ್ಯವಹಾರದಲ್ಲಿ ತಲೆಹಾಕುವುದಿಲ್ಲ. ಇದರ ಕುರಿತು ಸಂಬಂಧಪಟ್ಟ ರಾಜ್ಯಕ್ಕೆ ಅಧಿಕಾರವಿರುವುದು ಎಂದು ಅದು ಅಧಿಕೃತವಾಗಿ ಹೇಳಿದೆ.

ಹೆಸರನ್ನು/ಭಾಷೆಯನ್ನು ಬದಲಾಯಿಸಲು ಬಯಸಿದರೆ ರಾಜ್ಯಗಳು ಸಾಮಾನ್ಯವಾಗಿ ಗೃಹ ಸಚಿವಾಲಯಕ್ಕೆ ಕೋರಿಕೆಯನ್ನು ಕಳುಹಿಸುತ್ತವೆ.


ಇದನ್ನೂ ಓದಿ: ಸಂಸ್ಕೃತ ಭಾಷೆಯಿಂದ ಸಕ್ಕರೆ ಕಾಯಿಲೆ, ಕೊಬ್ಬು ನಿಯಂತ್ರಣ: ಸಂಸದ ಗಣೇಶ್ ಸಿಂಗ್ ಹೇಳಿಕೆಗೆ ವ್ಯಾಪಕ ಟೀಕೆ

ಲಾಕ್‌ಡೌನ್‌ ಉಲ್ಲಂಘಿಸಿದ ಗುಜರಾತ್ ಸಚಿವರ ಪುತ್ರನನ್ನು ಪ್ರಶ್ನಿಸಿದ್ದ ಮಹಿಳಾ ಕಾನ್ಸ್ಟೇಬಲ್‌ ರಾಜೀನಾಮೆ!

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...