Homeಮುಖಪುಟಫ್ಯಾಕ್ಟ್‌ಚೆಕ್: ರೈಲ್ವೇ ಫಲಕದಲ್ಲಿ ಸಂಸ್ಕೃತ ಭಾಷೆಯಿರುವ ಸಂಬಿತ್ ಪಾತ್ರ ಟ್ವೀಟ್- ವಾಸ್ತವವೇನು?

ಫ್ಯಾಕ್ಟ್‌ಚೆಕ್: ರೈಲ್ವೇ ಫಲಕದಲ್ಲಿ ಸಂಸ್ಕೃತ ಭಾಷೆಯಿರುವ ಸಂಬಿತ್ ಪಾತ್ರ ಟ್ವೀಟ್- ವಾಸ್ತವವೇನು?

ದೆಹಲಿಯ ಉತ್ತರ ರೈಲ್ವೆ ಅಧಿಕಾರಿಗಳು ಇದೀಗ ಡೆಹ್ರಾಡೂನ್ ನಿಲ್ದಾಣದಲ್ಲಿನ ಸೈನ್‌ಬೋರ್ಡ್‌ಗಳಲ್ಲಿ ಸಂಸ್ಕೃತದಲ್ಲಿ ಬರೆದಿಲ್ಲ. ಈ ಹೆಸರನ್ನು ಮೊದಲಿನಂತೆ ವಿವಿಧ ಬೋರ್ಡ್‌ಗಳಲ್ಲಿ ಇಂಗ್ಲಿಷ್, ಹಿಂದಿ ಮತ್ತು ಉರ್ದು ಭಾಷೆಗಳಲ್ಲಿ ಪ್ರದರ್ಶಿಸಲಾಗಿದೆ.

- Advertisement -
- Advertisement -

ಬಿಜೆಪಿ ರಾಷ್ಟ್ರೀಯ ವಕ್ತಾರ ಸಂಬಿತ್ ಪಾತ್ರ ಸೋಮವಾರ ಡೆಹ್ರಾಡೂನ್ ಹೆಸರನ್ನು ಹಿಂದಿ ಮತ್ತು ಇಂಗ್ಲಿಷ್ ಜೊತೆಗೆ ಉರ್ದು ಬದಲಿಗೆ ಸಂಸ್ಕೃತದಲ್ಲಿ ಬರೆದಿರುವ “ಡೆಹ್ರಾಡೂನಮ್” ಎಂದು ತೋರಿಸಿರುವ ಚಿತ್ರವನ್ನು ಟ್ವೀಟ್ ಮಾಡಿದ್ದಾರೆ.

ಈ ಕುರಿತು ಸ್ಪಷ್ಟೀಕರಣ ನೀಡಿರುವ ದೆಹಲಿಯ ಉತ್ತರ ರೈಲ್ವೆ ಅಧಿಕಾರಿಗಳು “ಇದೀಗ ಡೆಹ್ರಾಡೂನ್ ನಿಲ್ದಾಣದಲ್ಲಿನ ಸೈನ್‌ಬೋರ್ಡ್‌ಗಳಲ್ಲಿ ಸಂಸ್ಕೃತದಲ್ಲಿ ಬರೆದಿಲ್ಲ. ವಿವಿಧ ಬೋರ್ಡ್‌ಗಳಲ್ಲಿ ಇಂಗ್ಲಿಷ್, ಹಿಂದಿ ಮತ್ತು ಉರ್ದು ಭಾಷೆಗಳಲ್ಲಿ ಪ್ರದರ್ಶಿಸಲಾಗಿದೆ. ಸಂಸ್ಕೃತ ಇರುವ ಫೋಟೊ ಸಾಮಾಜಿಕ ಮಾಧ್ಯಮದಲ್ಲಿ ಸೃಷ್ಟಿಸಲಾದ “ಗೊಂದಲ” ಎಂದು ಹೇಳಿದ್ದಾರೆ.

ಸೋಮವಾರ ಬೆಳಿಗ್ಗೆ ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ವಿನಯ್ ಸಹಸ್ರಬುದ್ದೆ ಅವರು ‘ಈಗಲ್ ಐ’ ಹೆಸರಿನಲ್ಲಿರುವ ಎರಡು ಚಿತ್ರಗಳಿರುವ ಪೋಸ್ಟನ್ನು ಷೇರ್ ಮಾಡಿದಾಗ ಈ ವಿಷಯ ವೈರಲ್ ಅಯಿತು. ಅದರಲ್ಲಿ ಒಂದು ಚಿತ್ರವು ಡೆಹ್ರಾಡೂನ್‌ನ ಹಳೆಯ ನಿಲ್ದಾಣದ ಸಂಕೇತ ಫಲಕದಲ್ಲಿ ಹೆಸರನ್ನು ಹಿಂದಿ, ಇಂಗ್ಲಿಷ್ ಮತ್ತು ಉರ್ದು ಭಾಷೆಯಲ್ಲಿ ಬರೆಯಲಾಗಿದೆ. ಆದರೆ ಮತ್ತೊಂದು ಚಿತ್ರದಲ್ಲಿ ಉರ್ದು ಬದಲಿಗೆ ಸಂಸ್ಕೃತದಲ್ಲಿ ಬರೆಯಲಾಗಿದೆ ಎಂದು ತೋರಿಸಲಾಗಿದೆ.

ಸಹಸ್ರಬುದ್ಧೆ ಟ್ವೀಟ್‌ನಲ್ಲಿ, “@RailMinIndia ನ ಈ ಮಹತ್ವದ ಕ್ರಮವನ್ನು ನಮ್ಮೊಂದಿಗೆ ಹಂಚಿಕೊಂಡಿದ್ದಕ್ಕಾಗಿ ಧನ್ಯವಾದಗಳು” ಎಂದು ಬರೆದಿದ್ದಾರೆ.

ವಾಸ್ತವವೇನು?

ಕಳೆದ ವರ್ಷ ನಾಮಫಲಕಗಳಲ್ಲಿ ಉರ್ದು ಬದಲಿಗೆ ಸಂಸ್ಕೃತ ಬಳಸಲು ಅಧಿಕಾರಿಗಳು ಮುಂದಾಗಿದ್ದರು. ಆದರೆ ಕೆಲವು ಸ್ಥಳೀಯ ಸಂಸ್ಥೆಗಳು ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದವು. ನಂತರ ಈ ಯೋಜನೆ ಮುಂದುವರೆಯಲಿಲ್ಲ ಎಂದು ಮೂಲಗಳು ದಿ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿವೆ. ಆ ವರ್ಷ ಸಂಸ್ಕೃತದಲ್ಲಿ ಬರೆದಿದ್ದ ನಾಮಫಲಕವನ್ನು ಬಳಸದೇ ಬಿಸಾಡಲಾಗಿದ್ದು ಆ ಫೋಟೊ ಈಗ ಸಾಮಾಜಿಕ ಜಾಲತಾಣದಲ್ಲ ವೈರಲ್ ಆಗಿದೆ ಅಷ್ಟೇ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

“ಡೆಹ್ರಾಡೂನ್‌ ರೈಲ್ವೇ ಸ್ಟೇಷನ್ ನಲ್ಲಿ ನವೀಕರಣ ಕೆಲಸ ನಡೆಯುತ್ತಿದೆ. ಅಲ್ಲಿ ನಿರ್ಮಾಣ ಮಾಡುತ್ತಿರುವಾಗ ಕೆಲಸದವರಿಗೆ ಕೆಲವು ಹಳೆಯ ಸೈನ್‌ಬೋರ್ಡ್‌ಗಳು ದೊರೆತಿವೆ. ಅದರಲ್ಲಿ ಉರ್ದು ಬದಲಿಗೆ ಸಂಸ್ಕೃತದಲ್ಲಿ ಬರೆಯಲಾಗಿದ್ದ ಬೋರ್ಡ್ ಸಹ ಸಿಕ್ಕಿದೆ. ಆದರೆ ಅದು ಹಳೆಯದು. ಈಗ ಮೊದಲಿನಂತೆಯೇ ಇಂಗ್ಲಿಷ್, ಹಿಂದಿ ಮತ್ತು ಉರ್ದು ಭಾಷೆಯಲ್ಲಿ ಹೆಸರನ್ನು ಬರೆಯಲಾಗಿದೆ ”ಎಂದು ರೈಲ್ವೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ರೈಲ್ವೆ ವರ್ಕ್ಸ್ ಮ್ಯಾನ್ಯುವಲ್ ಪ್ರಕಾರ, ನಿಲ್ದಾಣದ ಹೆಸರುಗಳನ್ನು ಇಂಗ್ಲಿಷ್, ಹಿಂದಿ ಮತ್ತು ಸ್ಥಳೀಯ ಅಧಿಕೃತ ಭಾಷೆಯಲ್ಲಿ ಬರೆಯಬೇಕಾಗಿದೆ. ರೈಲ್ವೆ ಸಾಮಾನ್ಯವಾಗಿ ತನ್ನ ನಿಲ್ದಾಣದ ಹೆಸರುಗಳ ವ್ಯವಹಾರದಲ್ಲಿ ತಲೆಹಾಕುವುದಿಲ್ಲ. ಇದರ ಕುರಿತು ಸಂಬಂಧಪಟ್ಟ ರಾಜ್ಯಕ್ಕೆ ಅಧಿಕಾರವಿರುವುದು ಎಂದು ಅದು ಅಧಿಕೃತವಾಗಿ ಹೇಳಿದೆ.

ಹೆಸರನ್ನು/ಭಾಷೆಯನ್ನು ಬದಲಾಯಿಸಲು ಬಯಸಿದರೆ ರಾಜ್ಯಗಳು ಸಾಮಾನ್ಯವಾಗಿ ಗೃಹ ಸಚಿವಾಲಯಕ್ಕೆ ಕೋರಿಕೆಯನ್ನು ಕಳುಹಿಸುತ್ತವೆ.


ಇದನ್ನೂ ಓದಿ: ಸಂಸ್ಕೃತ ಭಾಷೆಯಿಂದ ಸಕ್ಕರೆ ಕಾಯಿಲೆ, ಕೊಬ್ಬು ನಿಯಂತ್ರಣ: ಸಂಸದ ಗಣೇಶ್ ಸಿಂಗ್ ಹೇಳಿಕೆಗೆ ವ್ಯಾಪಕ ಟೀಕೆ

ಲಾಕ್‌ಡೌನ್‌ ಉಲ್ಲಂಘಿಸಿದ ಗುಜರಾತ್ ಸಚಿವರ ಪುತ್ರನನ್ನು ಪ್ರಶ್ನಿಸಿದ್ದ ಮಹಿಳಾ ಕಾನ್ಸ್ಟೇಬಲ್‌ ರಾಜೀನಾಮೆ!

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...