Homeಮುಖಪುಟಫ್ಯಾಕ್ಟ್‌ಚೆಕ್: ರೈಲ್ವೇ ಫಲಕದಲ್ಲಿ ಸಂಸ್ಕೃತ ಭಾಷೆಯಿರುವ ಸಂಬಿತ್ ಪಾತ್ರ ಟ್ವೀಟ್- ವಾಸ್ತವವೇನು?

ಫ್ಯಾಕ್ಟ್‌ಚೆಕ್: ರೈಲ್ವೇ ಫಲಕದಲ್ಲಿ ಸಂಸ್ಕೃತ ಭಾಷೆಯಿರುವ ಸಂಬಿತ್ ಪಾತ್ರ ಟ್ವೀಟ್- ವಾಸ್ತವವೇನು?

ದೆಹಲಿಯ ಉತ್ತರ ರೈಲ್ವೆ ಅಧಿಕಾರಿಗಳು ಇದೀಗ ಡೆಹ್ರಾಡೂನ್ ನಿಲ್ದಾಣದಲ್ಲಿನ ಸೈನ್‌ಬೋರ್ಡ್‌ಗಳಲ್ಲಿ ಸಂಸ್ಕೃತದಲ್ಲಿ ಬರೆದಿಲ್ಲ. ಈ ಹೆಸರನ್ನು ಮೊದಲಿನಂತೆ ವಿವಿಧ ಬೋರ್ಡ್‌ಗಳಲ್ಲಿ ಇಂಗ್ಲಿಷ್, ಹಿಂದಿ ಮತ್ತು ಉರ್ದು ಭಾಷೆಗಳಲ್ಲಿ ಪ್ರದರ್ಶಿಸಲಾಗಿದೆ.

- Advertisement -
- Advertisement -

ಬಿಜೆಪಿ ರಾಷ್ಟ್ರೀಯ ವಕ್ತಾರ ಸಂಬಿತ್ ಪಾತ್ರ ಸೋಮವಾರ ಡೆಹ್ರಾಡೂನ್ ಹೆಸರನ್ನು ಹಿಂದಿ ಮತ್ತು ಇಂಗ್ಲಿಷ್ ಜೊತೆಗೆ ಉರ್ದು ಬದಲಿಗೆ ಸಂಸ್ಕೃತದಲ್ಲಿ ಬರೆದಿರುವ “ಡೆಹ್ರಾಡೂನಮ್” ಎಂದು ತೋರಿಸಿರುವ ಚಿತ್ರವನ್ನು ಟ್ವೀಟ್ ಮಾಡಿದ್ದಾರೆ.

ಈ ಕುರಿತು ಸ್ಪಷ್ಟೀಕರಣ ನೀಡಿರುವ ದೆಹಲಿಯ ಉತ್ತರ ರೈಲ್ವೆ ಅಧಿಕಾರಿಗಳು “ಇದೀಗ ಡೆಹ್ರಾಡೂನ್ ನಿಲ್ದಾಣದಲ್ಲಿನ ಸೈನ್‌ಬೋರ್ಡ್‌ಗಳಲ್ಲಿ ಸಂಸ್ಕೃತದಲ್ಲಿ ಬರೆದಿಲ್ಲ. ವಿವಿಧ ಬೋರ್ಡ್‌ಗಳಲ್ಲಿ ಇಂಗ್ಲಿಷ್, ಹಿಂದಿ ಮತ್ತು ಉರ್ದು ಭಾಷೆಗಳಲ್ಲಿ ಪ್ರದರ್ಶಿಸಲಾಗಿದೆ. ಸಂಸ್ಕೃತ ಇರುವ ಫೋಟೊ ಸಾಮಾಜಿಕ ಮಾಧ್ಯಮದಲ್ಲಿ ಸೃಷ್ಟಿಸಲಾದ “ಗೊಂದಲ” ಎಂದು ಹೇಳಿದ್ದಾರೆ.

ಸೋಮವಾರ ಬೆಳಿಗ್ಗೆ ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ವಿನಯ್ ಸಹಸ್ರಬುದ್ದೆ ಅವರು ‘ಈಗಲ್ ಐ’ ಹೆಸರಿನಲ್ಲಿರುವ ಎರಡು ಚಿತ್ರಗಳಿರುವ ಪೋಸ್ಟನ್ನು ಷೇರ್ ಮಾಡಿದಾಗ ಈ ವಿಷಯ ವೈರಲ್ ಅಯಿತು. ಅದರಲ್ಲಿ ಒಂದು ಚಿತ್ರವು ಡೆಹ್ರಾಡೂನ್‌ನ ಹಳೆಯ ನಿಲ್ದಾಣದ ಸಂಕೇತ ಫಲಕದಲ್ಲಿ ಹೆಸರನ್ನು ಹಿಂದಿ, ಇಂಗ್ಲಿಷ್ ಮತ್ತು ಉರ್ದು ಭಾಷೆಯಲ್ಲಿ ಬರೆಯಲಾಗಿದೆ. ಆದರೆ ಮತ್ತೊಂದು ಚಿತ್ರದಲ್ಲಿ ಉರ್ದು ಬದಲಿಗೆ ಸಂಸ್ಕೃತದಲ್ಲಿ ಬರೆಯಲಾಗಿದೆ ಎಂದು ತೋರಿಸಲಾಗಿದೆ.

ಸಹಸ್ರಬುದ್ಧೆ ಟ್ವೀಟ್‌ನಲ್ಲಿ, “@RailMinIndia ನ ಈ ಮಹತ್ವದ ಕ್ರಮವನ್ನು ನಮ್ಮೊಂದಿಗೆ ಹಂಚಿಕೊಂಡಿದ್ದಕ್ಕಾಗಿ ಧನ್ಯವಾದಗಳು” ಎಂದು ಬರೆದಿದ್ದಾರೆ.

ವಾಸ್ತವವೇನು?

ಕಳೆದ ವರ್ಷ ನಾಮಫಲಕಗಳಲ್ಲಿ ಉರ್ದು ಬದಲಿಗೆ ಸಂಸ್ಕೃತ ಬಳಸಲು ಅಧಿಕಾರಿಗಳು ಮುಂದಾಗಿದ್ದರು. ಆದರೆ ಕೆಲವು ಸ್ಥಳೀಯ ಸಂಸ್ಥೆಗಳು ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದವು. ನಂತರ ಈ ಯೋಜನೆ ಮುಂದುವರೆಯಲಿಲ್ಲ ಎಂದು ಮೂಲಗಳು ದಿ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿವೆ. ಆ ವರ್ಷ ಸಂಸ್ಕೃತದಲ್ಲಿ ಬರೆದಿದ್ದ ನಾಮಫಲಕವನ್ನು ಬಳಸದೇ ಬಿಸಾಡಲಾಗಿದ್ದು ಆ ಫೋಟೊ ಈಗ ಸಾಮಾಜಿಕ ಜಾಲತಾಣದಲ್ಲ ವೈರಲ್ ಆಗಿದೆ ಅಷ್ಟೇ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

“ಡೆಹ್ರಾಡೂನ್‌ ರೈಲ್ವೇ ಸ್ಟೇಷನ್ ನಲ್ಲಿ ನವೀಕರಣ ಕೆಲಸ ನಡೆಯುತ್ತಿದೆ. ಅಲ್ಲಿ ನಿರ್ಮಾಣ ಮಾಡುತ್ತಿರುವಾಗ ಕೆಲಸದವರಿಗೆ ಕೆಲವು ಹಳೆಯ ಸೈನ್‌ಬೋರ್ಡ್‌ಗಳು ದೊರೆತಿವೆ. ಅದರಲ್ಲಿ ಉರ್ದು ಬದಲಿಗೆ ಸಂಸ್ಕೃತದಲ್ಲಿ ಬರೆಯಲಾಗಿದ್ದ ಬೋರ್ಡ್ ಸಹ ಸಿಕ್ಕಿದೆ. ಆದರೆ ಅದು ಹಳೆಯದು. ಈಗ ಮೊದಲಿನಂತೆಯೇ ಇಂಗ್ಲಿಷ್, ಹಿಂದಿ ಮತ್ತು ಉರ್ದು ಭಾಷೆಯಲ್ಲಿ ಹೆಸರನ್ನು ಬರೆಯಲಾಗಿದೆ ”ಎಂದು ರೈಲ್ವೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ರೈಲ್ವೆ ವರ್ಕ್ಸ್ ಮ್ಯಾನ್ಯುವಲ್ ಪ್ರಕಾರ, ನಿಲ್ದಾಣದ ಹೆಸರುಗಳನ್ನು ಇಂಗ್ಲಿಷ್, ಹಿಂದಿ ಮತ್ತು ಸ್ಥಳೀಯ ಅಧಿಕೃತ ಭಾಷೆಯಲ್ಲಿ ಬರೆಯಬೇಕಾಗಿದೆ. ರೈಲ್ವೆ ಸಾಮಾನ್ಯವಾಗಿ ತನ್ನ ನಿಲ್ದಾಣದ ಹೆಸರುಗಳ ವ್ಯವಹಾರದಲ್ಲಿ ತಲೆಹಾಕುವುದಿಲ್ಲ. ಇದರ ಕುರಿತು ಸಂಬಂಧಪಟ್ಟ ರಾಜ್ಯಕ್ಕೆ ಅಧಿಕಾರವಿರುವುದು ಎಂದು ಅದು ಅಧಿಕೃತವಾಗಿ ಹೇಳಿದೆ.

ಹೆಸರನ್ನು/ಭಾಷೆಯನ್ನು ಬದಲಾಯಿಸಲು ಬಯಸಿದರೆ ರಾಜ್ಯಗಳು ಸಾಮಾನ್ಯವಾಗಿ ಗೃಹ ಸಚಿವಾಲಯಕ್ಕೆ ಕೋರಿಕೆಯನ್ನು ಕಳುಹಿಸುತ್ತವೆ.


ಇದನ್ನೂ ಓದಿ: ಸಂಸ್ಕೃತ ಭಾಷೆಯಿಂದ ಸಕ್ಕರೆ ಕಾಯಿಲೆ, ಕೊಬ್ಬು ನಿಯಂತ್ರಣ: ಸಂಸದ ಗಣೇಶ್ ಸಿಂಗ್ ಹೇಳಿಕೆಗೆ ವ್ಯಾಪಕ ಟೀಕೆ

ಲಾಕ್‌ಡೌನ್‌ ಉಲ್ಲಂಘಿಸಿದ ಗುಜರಾತ್ ಸಚಿವರ ಪುತ್ರನನ್ನು ಪ್ರಶ್ನಿಸಿದ್ದ ಮಹಿಳಾ ಕಾನ್ಸ್ಟೇಬಲ್‌ ರಾಜೀನಾಮೆ!

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...