Homeಮುಖಪುಟಜಾಮೀನು ಆದೇಶಗಳ ಸಂವಹನ ವಿಳಂಬ ಗಂಭೀರವಾದ ದೋಷವಾಗಿದೆ: ನ್ಯಾ. ಚಂದ್ರಚೂಡ್‌

ಜಾಮೀನು ಆದೇಶಗಳ ಸಂವಹನ ವಿಳಂಬ ಗಂಭೀರವಾದ ದೋಷವಾಗಿದೆ: ನ್ಯಾ. ಚಂದ್ರಚೂಡ್‌

ಆರ್ಯನ್‌ ಖಾನ್‌ಗೆ ಬಾಂಬೆ ಹೈಕೋರ್ಟ್‌ ಜಾಮೀನು ನೀಡಿದ ಮೇಲೂ ಆ ಆದೇಶ ಜೈಲು ಅಧಿಕಾರಿಯನ್ನು ತಲುಪಲು ವಿಳಂಬವಾದ ಕಾರಣಕ್ಕೆ ಎರಡು ದಿನಗಳ ಕಾಲ ಜೈಲಿನಲ್ಲಿರಬೇಕಾಗಿತ್ತು.

- Advertisement -
- Advertisement -

ಜಾಮೀನು ಆದೇಶಗಳನ್ನು ಜೈಲು ಅಧಿಕಾರಿಗಳಿಗೆ ತಿಳಿಸುವಲ್ಲಿ ಆಗುವ ವಿಳಂಬವು ‘ಅತ್ಯಂತ ಗಂಭೀರವಾದ ದೋಷ’ವಾಗಿದ್ದು, ಇದು ಪ್ರತಿಯೊಬ್ಬ ವಿಚಾರಣಾಧೀನ ಕೈದಿಯ ‘ಮಾನವ ಸ್ವಾತಂತ್ಯ್ರ’ವನ್ನು ಕಸಿದುಕೊಳ್ಳುತ್ತದೆ. ಹಾಗಾಗಿ ಇಂತಹ ಸಮಸ್ಯೆಗಳನ್ನು ‘ಯುದ್ಧೋಪಾದಿ’ಯಲ್ಲಿ ಪರಿಹರಿಸುವುದು ಅತ್ಯಗತ್ಯ ಎಂದು ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್‌ ಒತ್ತಿ ಹೇಳಿದ್ದಾರೆ.

ಅಲಹಾಬಾದ್‌ ಹೈಕೋರ್ಟ್‌ ಆಯೋಜಿಸಿದ್ದ ‘ಅರ್ಜಿದಾರರಿಗೆ ಆನ್‌ಲೈನ್‌ ಕಾನೂನು ನೆರವು ನೀಡಲು ವರ್ಚುವಲ್‌ ಕೋರ್ಟ್‌‌ಗಳು ಮತ್ತು ಇ-ಸೇವಾ ಕೇಂದ್ರಗಳು’ ಎಂಬ ವಿಷಯದ ಕುರಿತ ಆನ್‌ಲೈನ್‌ ಕಾರ್ಯಕ್ರಮದಲ್ಲಿ ನ್ಯಾಯಮೂರ್ತಿ ಚಂದ್ರಚೂಡ್‌ ಮಾತನಾಡಿದ್ದಾರೆ.

ಕ್ರೂಸ್ ಹಡಗಿನ ಡ್ರಗ್ಸ್‌ ಪ್ರಕರಣದಲ್ಲಿ ಬಂಧಿಸಲಾಗಿದ್ದ ಬಾಲಿವುಡ್‌ ನಟ ಶಾರುಖ್‌ಖಾನ್‌ ಅವರ ಮಗ ಆರ್ಯನ್‌ ಖಾನ್‌ಗೆ ಬಾಂಬೆ ಹೈಕೋರ್ಟ್‌ ಜಾಮೀನು ನೀಡಿದ ಮೇಲೂ ಆ ಆದೇಶ ಜೈಲು ಅಧಿಕಾರಿಯನ್ನು ತಲುಪಲು ವಿಳಂಬವಾದ ಕಾರಣಕ್ಕೆ ಎರಡು ದಿನಗಳ ಕಾಲ ಜೈಲಿನಲ್ಲಿರಬೇಕಾಗಿತ್ತು.

ಈ ಮೊದಲು ಸುಪ್ರೀಂ ಕೋರ್ಟ್‌‌ನ ಮುಖ್ಯ ನ್ಯಾಯಮೂರ್ತಿ ಎನ್‌.ವಿ. ರಮಣ ನೇತೃತ್ವದ ಪೀಠವು ಜಾಮೀನು ಆದೇಶ ಜಾರಿ ವಿಳಂಬದ ವರದಿಗಳ ಬಗ್ಗೆ ತೀವ್ರ ಅಸಮಧಾನ ವ್ಯಕ್ತಪಡಿಸಿತ್ತು. ಅದರೊಂದಿಗೆ ಜಾಮೀನು ಆದೇಶಗಳ ರವಾನೆಗಾಗಿ ’ಸುರಕ್ಷಿತ, ವಿಶ್ವಾಸಾರ್ಹ ಮತ್ತು ಅಧಿಕೃತ ಚಾನಲ್‌’ ಅನ್ನು ಸ್ಥಾಪಿಸುವುದಾಗಿ ತಿಳಿಸಿದ್ದರು. “ನಾವು ಡಿಜಿಟಲ್‌ ಯುಗದಲ್ಲಿಯೂ ಆದೇಶಗಳ ಸಂವಹನಕ್ಕಾಗಿ ಆಕಾಶದಲ್ಲಿ ಪಾರಿವಾಳಗಳನ್ನು ನಿರೀಕ್ಷಿಸುತ್ತಿದ್ದೇವೆ’ ಎಂದು ಪೀಠ ಅಭಿಪ್ರಾಯಪಟ್ಟಿತ್ತು.

ಶೀಘ್ರ ಹಾಗೂ ಸುರಕ್ಷಿತ ವಿದ್ಯುನ್ಮಾನ ದಾಖಲೆಗಳ ಪ್ರಸರಣ (ಫಾಸ್ಟ್‌ ಅಂಡ್‌ ಸೆಕ್ಯೂರ್‌ ಟ್ರಾನ್ಸ್‌ ಮಿಷನ್‌ ಆಫ್‌ ಎಲೆಕ್ಟ್ರಾನಿಕ್‌ ರೆಕಾರ್ಡ್ಸ್‌ – FASTER) ಯೋಜನೆಯ ಅನುಷ್ಠಾನಕ್ಕೆ ಸುಪ್ರೀಂ ಕೋರ್ಟ್‌ ಆದೇಶ ನೀಡಿತ್ತು. ಇದಕ್ಕಾಗಿ ಪ್ರತಿ ಜೈಲಿನಲ್ಲಿಯೂ ವೇಗವಾದ ಇಂಟರ್‌ನೆಟ್ ಸೌಲಭ್ಯವನ್ನು ಖಚಿತಪಡಿಸಿಕೊಳ್ಳಲು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳನ್ನು ಕೇಳಿತ್ತು.

ಕಾರ್ಯಕ್ರಮದಲ್ಲಿ ಮಾತನಾಡಿದ ನ್ಯಾಯಮುರ್ತಿ ಚಂದ್ರಚೂಡ್‌ ಅವರು, ಒರಿಸ್ಸಾ ಹೈಕೋರ್ಟ್‌ ಪ್ರತಿ ವಿಚಾರಣಾಧೀನ ಕೈದಿ ಮತ್ತು ಜೈಲು ಶಿಕ್ಷೆಗೆ ಒಳಗಾಗುವ ಅಪರಾಧಿಗಳಿಗೆ ‘ಇ-ಕಸ್ಟಡಿ ಪ್ರಮಾಣಪತ್ರ’ ಮಂಜೂರು ಮಾಡಲು ಆರಂಭಿಸಿದೆ ಎಂದು ಹೇಳಿದ್ದಾರೆ.

‘ಈ ಪ್ರಮಾಣಪತ್ರವು  ನಿರ್ದಿಷ್ಟ ವಿಚಾರಣೆಗೆ ಒಳಪಡುವ ಅಥವಾ ಅಪರಾಧಿಗೆ ಸಂಬಂಧಿಸಿದಂತೆ ಬಂಧನದಿಂದ ಹಿಡಿದು ಪ್ರತಿ ಪ್ರಕರಣದ ಪ್ರಗತಿಯ ಎಲ್ಲಾ ದತ್ತಾಂಶಗಳನ್ನು ನಮಗೆ ನೀಡುತ್ತದೆ. ಇದು ಜಾಮೀನು ಆದೇಶಗಳನ್ನು  ಜೈಲುಗಳೊಂದಿಗೆ ಸಂವಹನ ನಡೆಸಲು ನಮಗೆ ಸಹಾಯ ಮಾಡುತ್ತದೆ’ ಎಂದು ಅವರು ತಿಳಿಸಿದ್ದಾರೆ.

ದೇಶಾದ್ಯಂತ 99.43 ಲಕ್ಷ ಪ್ರಕರಣಗಳ ವಿಚಾರಣೆ ಮುಗಿಸಿದ್ದು, 18.35 ಲಕ್ಷ ಪ್ರಕರಣಗಳಲ್ಲಿ ದಂಡ ವಸೂಲಿ ಮಾಡಲಾಗಿದೆ. ಈವರೆಗೂ ಒಟ್ಟು 119 ಕೋಟಿ ರೂಪಾಯಿ ದಂಡ ವಸೂಲಿಯಾಗಿದೆ’ ಎಂದು ನ್ಯಾಯಾಧೀಶರು ಹೇಳಿದರು.

ದೇಶದ ಜಿಲ್ಲಾ ನ್ಯಾಯಾಲಯಗಳಲ್ಲಿ 2.95 ಕೋಟಿ ಕ್ರಿಮಿನಲ್‌ ಪ್ರಕರಣಗಳು ಇನ್ನೂ ಬಾಕಿ ಉಳಿದಿದ್ದು, ಶೇ. 77 ಕ್ಕೂ ಹೆಚ್ಚು ಪ್ರಕರಣಗಳು ಒಂದು ವರ್ಷಕ್ಕಿಂತ ಹಳೆಯವು ಎಂದು ನ್ಯಾಯಮೂರ್ತಿ ಚಂದ್ರಚೂಡ್‌ ತಿಳಿಸಿದ್ದಾರೆ.

“ನಾವು ಇಲ್ಲಿಯೂ ಮಾಹಿತಿ ಮತ್ತು ಸಂವಹನ ತಂತ್ರಜ್ಞಾನವನ್ನು ಬಳಸಬಹುದು. ಪ್ರಸ್ತುತ ಸುಪ್ರೀಂ ಕೋರ್ಟ್‌ನ ಇ-ಸಮಿತಿಯಲ್ಲಿ ಈ ಬಗ್ಗೆ ಕೆಲಸ ಕೆಲಸ ಮಾಡುತ್ತಿದ್ದೇವೆ” ಎಂದು ನ್ಯಾಯಮೂರ್ತಿ ಚಂದ್ರಚೂಡ್ ವಿವರಿಸಿದ್ದಾರೆ.


ಇದನ್ನೂ ಓದಿ: ರಾಜಕೀಯ ಮುಖಂಡರ ಆರ್‌ಎಸ್‌ಎಸ್ ವಿರೋಧವಷ್ಟೇ ಸಾಲದು; ವಿಷಪೂರಿತ ಸಿದ್ಧಾಂತವನ್ನು ತೊಲಗಿಸುವ ಹೋರಾಟಕ್ಕೆ ಸಜ್ಜಾಗಬೇಕು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಿತೃತ್ವ ರಜೆಗೆ ಕಾನೂನು ತನ್ನಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಪಿತೃತ್ವ ರಜೆಯನ್ನು (paternity leave) ಸಾಮಾಜಿಕ ಭದ್ರತಾ ಸೌಲಭ್ಯವೆಂದು ಪರಿಗಣಿಸಿ ಕಾನೂನು ರೂಪಿಸುವಂತೆ ಸುಪ್ರೀಂ ಕೋರ್ಟ್ ಮಂಗಳವಾರ (ಮಾ.17) ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ಈ ರಜೆಯ ಅವಧಿಯು ಪೋಷಕರು ಮತ್ತು ಮಗು ಇಬ್ಬರ...

‘ಕಾಲ ಎಲ್ಲಕ್ಕೂ ಉತ್ತರಿಸುತ್ತದೆ’; ಟಿವಿಕೆ ನಾಯಕನ ‘ಡಿಎಂಕೆ ಬೆದರಿಕೆ’ ಆರೋಪ ‘ಸತ್ಯಕ್ಕೆ ದೂರವಾದ ಮಾತು’ ಎಂದ ರಜನಿಕಾಂತ್

ರಾಜಕೀಯ ಪ್ರವೇಶಕ್ಕೆ ಯತ್ನಿಸಿದಾಗ ಡಿಎಂಕೆಯಿಂದ ಬೆದರಿಕೆ ಇತ್ತು ಎಂಬ ಟಿವಿಕೆ ನಾಯಕ ಆಧವ್ ಅರ್ಜುನ ಅವರ ಆರೋಪವನ್ನು ಸೂಪರ್‌ಸ್ಟಾರ್ ರಜನಿಕಾಂತ್ ಮಂಗಳವಾರ ನಿರಾಕರಿಸಿದ್ದಾರೆ ಮತ್ತು "ಕಾಲವೇ ಉತ್ತರ ನೀಡುತ್ತದೆ" ಎಂದು ಹೇಳಿದ್ದಾರೆ. ತಮ್ಮ ಅಧಿಕೃತ...

ಕಾಂಗ್ರೆಸ್‌ ಮಾನನಷ್ಟ ಪ್ರಕರಣ : ಅರ್ನಾಬ್ ಗೋಸ್ವಾಮಿ, ರಿಪಬ್ಲಿಕ್ ಟಿವಿಗೆ ದೆಹಲಿ ಹೈಕೋರ್ಟ್ ಸಮನ್ಸ್

ಟರ್ಕಿ ದೇಶದಲ್ಲಿ ಕಾಂಗ್ರೆಸ್‌ ಪಕ್ಷವು ಅಂತಾರಾಷ್ಟ್ರೀಯ ಕಚೇರಿ ಹೊಂದಿದೆ ಎಂಬ ವರದಿಗೆ ಸಂಬಂಧಿಸಿದಂತೆ, ಅರ್ನಾಬ್ ಗೋಸ್ವಾಮಿ ಮತ್ತು ರಿಪಬ್ಲಿಕ್ ಟಿವಿ ವಿರುದ್ಧ ಕಾಂಗ್ರೆಸ್ ಹೂಡಿರುವ ಮಾನನಷ್ಟ ಮೊಕದ್ದಮೆಯಲ್ಲಿ ದೆಹಲಿ ಹೈಕೋರ್ಟ್ ಮಂಗಳವಾರ (ಮಾ.17)...

ನಾಗಾಲ್ಯಾಂಡ್‌| ಕೇಂದ್ರದ ‘ವಂದೇ ಮಾತರಂ’ ಕಡ್ಡಾಯ ನಿರ್ದೇಶನ ವಿರೋಧಿಸಿ ನಾಗಾ ವಿದ್ಯಾರ್ಥಿ ಒಕ್ಕೂಟದಿಂದ ಪ್ರತಿಭಟನೆ

ಸರ್ಕಾರದ ಅಧಿಕೃತ ಕಾರ್ಯಕ್ರಮಗಳ ಸಮಯದಲ್ಲಿ ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ವಂದೇ ಮಾತರಂ ಹಾಡುವುದನ್ನು ಕಡ್ಡಾಯಗೊಳಿಸುವ ರಾಜ್ಯ ಸರ್ಕಾರಕ್ಕೆ ಕೇಂದ್ರ ಸರ್ಕಾರ ನೀಡಿರುವ ನಿರ್ದೇಶನವನ್ನು ವಿರೋಧಿಸಿ ಸೋಮವಾರ ನಾಗಾ ವಿದ್ಯಾರ್ಥಿ ಒಕ್ಕೂಟದ (ಎನ್‌ಎಸ್‌ಎಫ್) ಬ್ಯಾನರ್...

‘ಹೇಡಿತನದ, ಅವಿವೇಕದ ಹಿಂಸಾಚಾರ’: 400 ಜನರನ್ನು ಬಲಿತೆಗೆದುಕೊಂಡ ಕಾಬೂಲ್ ಆಸ್ಪತ್ರೆಯ ಮೇಲಿನ ಪಾಕ್ ದಾಳಿ ಖಂಡಿಸಿದ ಭಾರತ 

ಕಾಬೂಲ್‌ನ ಆಸ್ಪತ್ರೆಯ ಮೇಲೆ ಪಾಕಿಸ್ತಾನ ನಡೆಸಿದ ವಾಯುದಾಳಿಯನ್ನು ಭಾರತ ಮಂಗಳವಾರ ಖಂಡಿಸಿದೆ. ಈ ದಾಳಿಯಲ್ಲಿ ಕನಿಷ್ಠ 400 ಜನರು ಅಸ್ವಸ್ಥರಾಗಿ 250 ಜನರು ಗಾಯಗೊಂಡಿದ್ದರು. ಈ ಬಗ್ಗೆ ವಿದೇಶಾಂಗ ವ್ಯವಹಾರಗಳ ಸಚಿವಾಲಯ (MEA)...

ಮೂಡುಬಿದಿರೆ ಠಾಣೆ ಇನ್‌ಸ್ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪ: ತನಿಖೆಗೆ ಕಮಿಷನರ್ ಆದೇಶ

ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಸಂದೇಶ್ ಬಿ.ಜಿ ವಿರುದ್ಧ ಮಹಿಳೆಯರಿಗೆ ಲೈಂಗಿಕ, ಮಾನಸಿಕ ಕಿರುಕುಳ ನೀಡಿದ್ದಲ್ಲದೆ, ಹಣ ಕೊಡುವಂತೆ ಪೀಡಿಸಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದ್ದು, ಈ...

ಅಸ್ಸಾಂ: ರಂಜಾನ್ ಆಹಾರ ವ್ಯವಸ್ಥೆಗಾಗಿ ಮೀನು ಹಿಡಿಯುತ್ತಿದ್ದ ಮುಸ್ಲಿಂ ಸಹೋದರರ ಮೇಲೆ ಬಿಎಸ್‌ಎಫ್ ಗುಂಡಿನ ದಾಳಿ: ಗಂಭೀರ ಗಾಯ

ಅಸ್ಸಾಂನ ದಕ್ಷಿಣ ಸಲ್ಮಾರಾ–ಮಂಕಚಾರ್ ಜಿಲ್ಲೆಯ ಇಬ್ಬರು ಸಹೋದರರು ಭಾರತದ ಭೂಪ್ರದೇಶದೊಳಗಿನ ನದಿನೀರಿನಲ್ಲಿ ಮೀನುಗಾರಿಕೆ ನಡೆಸುತ್ತಿದ್ದಾಗ ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಸಿಬ್ಬಂದಿ ಗುಂಡು ಹಾರಿಸಿ ಪ್ರಾಣಕ್ಕಾಗಿ ಹೋರಾಡುತ್ತಿದ್ದಾರೆ. ಈ ಘಟನೆ ಮಾರ್ಚ್ 8-9, 2026...

ಊನಾ ದಲಿತ ದೌರ್ಜನ್ಯ ಪ್ರಕರಣ: ಐವರು ದೋಷಿಗಳೆಂದು ತೀರ್ಪು ನೀಡಿದ ನ್ಯಾಯಾಲಯ; 37 ಆರೋಪಿಗಳು ಖುಲಾಸೆ

ದೇಶದಲ್ಲಿ ನಡೆಯುತ್ತಿರುವ ದಲಿತ ದೌರ್ಜನ್ಯ ಪ್ರಕರಣಗಳಲ್ಲಿ ಭಾರಿ ಸಂಚಲನ ಸೃಷ್ಟಿಸಿದ್ದ ಗುಜರಾತ್‌ನ ಊನಾ ದಲಿತರ ಮೇಲೆ ಹಲ್ಲೆ ಪ್ರಕರಣದಲ್ಲಿ, ಗಿರ್ ಸೋಮನಾಥ್ ಜಿಲ್ಲೆಯ ವೆರಾವಲ್ ನ್ಯಾಯಾಲಯವು ಸೋಮವಾರ ತನ್ನ ತೀರ್ಪು ನೀಡಿದ್ದು,...

ರಾಜ್ಯಸಭೆ ಚುನಾವಣೆ : ಬಿಹಾರದ ಎಲ್ಲಾ ಐದು ಸ್ಥಾನಗಳು ಎನ್‌ಡಿಎ ಪಾಲು; ಒಡಿಶಾದ ಮೂರು ಸ್ಥಾನಗಳಲ್ಲಿ ಗೆಲುವು

ರಾಜ್ಯಸಭೆಯ 37 ಸ್ಥಾನಗಳಿಗೆ ಸೋಮವಾರ (ಮಾ.16) ನಡೆದ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟ 21 ಸ್ಥಾನಗಳನ್ನು ಗೆದ್ದುಕೊಂಡಿದೆ. ಈ ಪೈಕಿ ಬಿಜೆಪಿ ಮಾತ್ರ 11 ಸ್ಥಾನಗಳನ್ನು ಪಡೆದಿದೆ. ವಿಪಕ್ಷಗಳ ಇಂಡಿಯಾ ಮೈತ್ರಿಕೂಟ ಒಟ್ಟು 11 ಸ್ಥಾನಗಳನ್ನು...

ಅಫ್ಘಾನಿಸ್ತಾನದ ಆಸ್ಪತ್ರೆ ಮೇಲೆ ಪಾಕಿಸ್ತಾನದಿಂದ ವಾಯುದಾಳಿ ; ಕನಿಷ್ಠ 400 ಸಾವು : ವರದಿ

ರಾಜಧಾನಿ ಕಾಬೂಲ್‌ನಲ್ಲಿ ಮಾದಕ ವ್ಯಸನಿಗಳಿಗೆ ಚಿಕಿತ್ಸೆ ನೀಡುತ್ತಿದ್ದ ಆಸ್ಪತ್ರೆಯ ಮೇಲೆ ಪಾಕಿಸ್ತಾನದ ಮಿಲಿಟರಿ ವಾಯು ದಾಳಿ ನಡೆಸಿದ್ದು, ಕನಿಷ್ಠ 400 ಜನರು ಸಾವನ್ನಪ್ಪಿದ್ದಾರೆ ಎಂದು ಅಫ್ಘಾನಿಸ್ತಾನ ಆರೋಪಿಸಿದೆ. ಅಲ್‌-ಜಝೀರಾ ವರದಿಯ ಪ್ರಕಾರ, ಅಫ್ಘಾನಿಸ್ತಾನದ ಆರೋಪವನ್ನು...