Homeಮುಖಪುಟಜಾಮೀನು ಆದೇಶಗಳ ಸಂವಹನ ವಿಳಂಬ ಗಂಭೀರವಾದ ದೋಷವಾಗಿದೆ: ನ್ಯಾ. ಚಂದ್ರಚೂಡ್‌

ಜಾಮೀನು ಆದೇಶಗಳ ಸಂವಹನ ವಿಳಂಬ ಗಂಭೀರವಾದ ದೋಷವಾಗಿದೆ: ನ್ಯಾ. ಚಂದ್ರಚೂಡ್‌

ಆರ್ಯನ್‌ ಖಾನ್‌ಗೆ ಬಾಂಬೆ ಹೈಕೋರ್ಟ್‌ ಜಾಮೀನು ನೀಡಿದ ಮೇಲೂ ಆ ಆದೇಶ ಜೈಲು ಅಧಿಕಾರಿಯನ್ನು ತಲುಪಲು ವಿಳಂಬವಾದ ಕಾರಣಕ್ಕೆ ಎರಡು ದಿನಗಳ ಕಾಲ ಜೈಲಿನಲ್ಲಿರಬೇಕಾಗಿತ್ತು.

- Advertisement -
- Advertisement -

ಜಾಮೀನು ಆದೇಶಗಳನ್ನು ಜೈಲು ಅಧಿಕಾರಿಗಳಿಗೆ ತಿಳಿಸುವಲ್ಲಿ ಆಗುವ ವಿಳಂಬವು ‘ಅತ್ಯಂತ ಗಂಭೀರವಾದ ದೋಷ’ವಾಗಿದ್ದು, ಇದು ಪ್ರತಿಯೊಬ್ಬ ವಿಚಾರಣಾಧೀನ ಕೈದಿಯ ‘ಮಾನವ ಸ್ವಾತಂತ್ಯ್ರ’ವನ್ನು ಕಸಿದುಕೊಳ್ಳುತ್ತದೆ. ಹಾಗಾಗಿ ಇಂತಹ ಸಮಸ್ಯೆಗಳನ್ನು ‘ಯುದ್ಧೋಪಾದಿ’ಯಲ್ಲಿ ಪರಿಹರಿಸುವುದು ಅತ್ಯಗತ್ಯ ಎಂದು ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್‌ ಒತ್ತಿ ಹೇಳಿದ್ದಾರೆ.

ಅಲಹಾಬಾದ್‌ ಹೈಕೋರ್ಟ್‌ ಆಯೋಜಿಸಿದ್ದ ‘ಅರ್ಜಿದಾರರಿಗೆ ಆನ್‌ಲೈನ್‌ ಕಾನೂನು ನೆರವು ನೀಡಲು ವರ್ಚುವಲ್‌ ಕೋರ್ಟ್‌‌ಗಳು ಮತ್ತು ಇ-ಸೇವಾ ಕೇಂದ್ರಗಳು’ ಎಂಬ ವಿಷಯದ ಕುರಿತ ಆನ್‌ಲೈನ್‌ ಕಾರ್ಯಕ್ರಮದಲ್ಲಿ ನ್ಯಾಯಮೂರ್ತಿ ಚಂದ್ರಚೂಡ್‌ ಮಾತನಾಡಿದ್ದಾರೆ.

ಕ್ರೂಸ್ ಹಡಗಿನ ಡ್ರಗ್ಸ್‌ ಪ್ರಕರಣದಲ್ಲಿ ಬಂಧಿಸಲಾಗಿದ್ದ ಬಾಲಿವುಡ್‌ ನಟ ಶಾರುಖ್‌ಖಾನ್‌ ಅವರ ಮಗ ಆರ್ಯನ್‌ ಖಾನ್‌ಗೆ ಬಾಂಬೆ ಹೈಕೋರ್ಟ್‌ ಜಾಮೀನು ನೀಡಿದ ಮೇಲೂ ಆ ಆದೇಶ ಜೈಲು ಅಧಿಕಾರಿಯನ್ನು ತಲುಪಲು ವಿಳಂಬವಾದ ಕಾರಣಕ್ಕೆ ಎರಡು ದಿನಗಳ ಕಾಲ ಜೈಲಿನಲ್ಲಿರಬೇಕಾಗಿತ್ತು.

ಈ ಮೊದಲು ಸುಪ್ರೀಂ ಕೋರ್ಟ್‌‌ನ ಮುಖ್ಯ ನ್ಯಾಯಮೂರ್ತಿ ಎನ್‌.ವಿ. ರಮಣ ನೇತೃತ್ವದ ಪೀಠವು ಜಾಮೀನು ಆದೇಶ ಜಾರಿ ವಿಳಂಬದ ವರದಿಗಳ ಬಗ್ಗೆ ತೀವ್ರ ಅಸಮಧಾನ ವ್ಯಕ್ತಪಡಿಸಿತ್ತು. ಅದರೊಂದಿಗೆ ಜಾಮೀನು ಆದೇಶಗಳ ರವಾನೆಗಾಗಿ ’ಸುರಕ್ಷಿತ, ವಿಶ್ವಾಸಾರ್ಹ ಮತ್ತು ಅಧಿಕೃತ ಚಾನಲ್‌’ ಅನ್ನು ಸ್ಥಾಪಿಸುವುದಾಗಿ ತಿಳಿಸಿದ್ದರು. “ನಾವು ಡಿಜಿಟಲ್‌ ಯುಗದಲ್ಲಿಯೂ ಆದೇಶಗಳ ಸಂವಹನಕ್ಕಾಗಿ ಆಕಾಶದಲ್ಲಿ ಪಾರಿವಾಳಗಳನ್ನು ನಿರೀಕ್ಷಿಸುತ್ತಿದ್ದೇವೆ’ ಎಂದು ಪೀಠ ಅಭಿಪ್ರಾಯಪಟ್ಟಿತ್ತು.

ಶೀಘ್ರ ಹಾಗೂ ಸುರಕ್ಷಿತ ವಿದ್ಯುನ್ಮಾನ ದಾಖಲೆಗಳ ಪ್ರಸರಣ (ಫಾಸ್ಟ್‌ ಅಂಡ್‌ ಸೆಕ್ಯೂರ್‌ ಟ್ರಾನ್ಸ್‌ ಮಿಷನ್‌ ಆಫ್‌ ಎಲೆಕ್ಟ್ರಾನಿಕ್‌ ರೆಕಾರ್ಡ್ಸ್‌ – FASTER) ಯೋಜನೆಯ ಅನುಷ್ಠಾನಕ್ಕೆ ಸುಪ್ರೀಂ ಕೋರ್ಟ್‌ ಆದೇಶ ನೀಡಿತ್ತು. ಇದಕ್ಕಾಗಿ ಪ್ರತಿ ಜೈಲಿನಲ್ಲಿಯೂ ವೇಗವಾದ ಇಂಟರ್‌ನೆಟ್ ಸೌಲಭ್ಯವನ್ನು ಖಚಿತಪಡಿಸಿಕೊಳ್ಳಲು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳನ್ನು ಕೇಳಿತ್ತು.

ಕಾರ್ಯಕ್ರಮದಲ್ಲಿ ಮಾತನಾಡಿದ ನ್ಯಾಯಮುರ್ತಿ ಚಂದ್ರಚೂಡ್‌ ಅವರು, ಒರಿಸ್ಸಾ ಹೈಕೋರ್ಟ್‌ ಪ್ರತಿ ವಿಚಾರಣಾಧೀನ ಕೈದಿ ಮತ್ತು ಜೈಲು ಶಿಕ್ಷೆಗೆ ಒಳಗಾಗುವ ಅಪರಾಧಿಗಳಿಗೆ ‘ಇ-ಕಸ್ಟಡಿ ಪ್ರಮಾಣಪತ್ರ’ ಮಂಜೂರು ಮಾಡಲು ಆರಂಭಿಸಿದೆ ಎಂದು ಹೇಳಿದ್ದಾರೆ.

‘ಈ ಪ್ರಮಾಣಪತ್ರವು  ನಿರ್ದಿಷ್ಟ ವಿಚಾರಣೆಗೆ ಒಳಪಡುವ ಅಥವಾ ಅಪರಾಧಿಗೆ ಸಂಬಂಧಿಸಿದಂತೆ ಬಂಧನದಿಂದ ಹಿಡಿದು ಪ್ರತಿ ಪ್ರಕರಣದ ಪ್ರಗತಿಯ ಎಲ್ಲಾ ದತ್ತಾಂಶಗಳನ್ನು ನಮಗೆ ನೀಡುತ್ತದೆ. ಇದು ಜಾಮೀನು ಆದೇಶಗಳನ್ನು  ಜೈಲುಗಳೊಂದಿಗೆ ಸಂವಹನ ನಡೆಸಲು ನಮಗೆ ಸಹಾಯ ಮಾಡುತ್ತದೆ’ ಎಂದು ಅವರು ತಿಳಿಸಿದ್ದಾರೆ.

ದೇಶಾದ್ಯಂತ 99.43 ಲಕ್ಷ ಪ್ರಕರಣಗಳ ವಿಚಾರಣೆ ಮುಗಿಸಿದ್ದು, 18.35 ಲಕ್ಷ ಪ್ರಕರಣಗಳಲ್ಲಿ ದಂಡ ವಸೂಲಿ ಮಾಡಲಾಗಿದೆ. ಈವರೆಗೂ ಒಟ್ಟು 119 ಕೋಟಿ ರೂಪಾಯಿ ದಂಡ ವಸೂಲಿಯಾಗಿದೆ’ ಎಂದು ನ್ಯಾಯಾಧೀಶರು ಹೇಳಿದರು.

ದೇಶದ ಜಿಲ್ಲಾ ನ್ಯಾಯಾಲಯಗಳಲ್ಲಿ 2.95 ಕೋಟಿ ಕ್ರಿಮಿನಲ್‌ ಪ್ರಕರಣಗಳು ಇನ್ನೂ ಬಾಕಿ ಉಳಿದಿದ್ದು, ಶೇ. 77 ಕ್ಕೂ ಹೆಚ್ಚು ಪ್ರಕರಣಗಳು ಒಂದು ವರ್ಷಕ್ಕಿಂತ ಹಳೆಯವು ಎಂದು ನ್ಯಾಯಮೂರ್ತಿ ಚಂದ್ರಚೂಡ್‌ ತಿಳಿಸಿದ್ದಾರೆ.

“ನಾವು ಇಲ್ಲಿಯೂ ಮಾಹಿತಿ ಮತ್ತು ಸಂವಹನ ತಂತ್ರಜ್ಞಾನವನ್ನು ಬಳಸಬಹುದು. ಪ್ರಸ್ತುತ ಸುಪ್ರೀಂ ಕೋರ್ಟ್‌ನ ಇ-ಸಮಿತಿಯಲ್ಲಿ ಈ ಬಗ್ಗೆ ಕೆಲಸ ಕೆಲಸ ಮಾಡುತ್ತಿದ್ದೇವೆ” ಎಂದು ನ್ಯಾಯಮೂರ್ತಿ ಚಂದ್ರಚೂಡ್ ವಿವರಿಸಿದ್ದಾರೆ.


ಇದನ್ನೂ ಓದಿ: ರಾಜಕೀಯ ಮುಖಂಡರ ಆರ್‌ಎಸ್‌ಎಸ್ ವಿರೋಧವಷ್ಟೇ ಸಾಲದು; ವಿಷಪೂರಿತ ಸಿದ್ಧಾಂತವನ್ನು ತೊಲಗಿಸುವ ಹೋರಾಟಕ್ಕೆ ಸಜ್ಜಾಗಬೇಕು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...