Homeಮುಖಪುಟಪಕ್ಷಾಂತರಿ ಶಾಸಕರ ಅನರ್ಹತೆ ನಿರ್ಧರಿಸುವಲ್ಲಿ ವಿಳಂಬ : ತೆಲಂಗಾಣ ಸ್ಪೀಕರ್‌ಗೆ ಸುಪ್ರೀಂ ಕೋರ್ಟ್ ತರಾಟೆ, ನ್ಯಾಯಾಂಗ...

ಪಕ್ಷಾಂತರಿ ಶಾಸಕರ ಅನರ್ಹತೆ ನಿರ್ಧರಿಸುವಲ್ಲಿ ವಿಳಂಬ : ತೆಲಂಗಾಣ ಸ್ಪೀಕರ್‌ಗೆ ಸುಪ್ರೀಂ ಕೋರ್ಟ್ ತರಾಟೆ, ನ್ಯಾಯಾಂಗ ನಿಂದನೆ ಕ್ರಮದ ಎಚ್ಚರಿಕೆ

- Advertisement -
- Advertisement -

ಕಾಂಗ್ರೆಸ್‌ಗೆ ಪಕ್ಷಾಂತರಗೊಂಡ 10 ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿ ಬಿಆರ್‌ಎಸ್ ಶಾಸಕ ಕೌಶಿಕ್ ರೆಡ್ಡಿ ಸಲ್ಲಿಸಿದ್ದ ಅರ್ಜಿಯನ್ನು ಜುಲೈ 31 ರಿಂದ ಅಕ್ಟೋಬರ್ 30ರವರೆಗೆ ನಿಗದಿತ ಮೂರು ತಿಂಗಳೊಳಗೆ ನಿರ್ಧರಿಸಲು ವಿಫಲವಾದ ಕಾರಣ ತೆಲಂಗಾಣ ಸ್ಪೀಕರ್‌ ವಿರುದ್ದ ಸುಪ್ರೀಂ ಕೋರ್ಟ್ ಸೋಮವಾರ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ನ್ಯಾಯಾಂಗ ನಿಂದನೆ ನೋಟಿಸ್ ಜಾರಿ ಮಾಡಿದೆ.

ಎರಡು ವಾರಗಳಲ್ಲಿ ಕ್ರಮ ಕೈಗೊಳ್ಳದಿದ್ದರೆ ಸ್ಪೀಕರ್ ನ್ಯಾಯಾಂಗ ನಿಂದನೆಗೆ ಗುರಿಯಾಗಬೇಕಾಗುತ್ತದೆ ಎಂದು ನ್ಯಾಯಾಲಯ ಎಚ್ಚರಿಸಿದೆ. “ಈ ವಿಷಯವನ್ನು ನಿರ್ಧರಿಸಬೇಕೆ ಅಥವಾ ನ್ಯಾಯಾಂಗ ನಿಂದನೆ ಎದುರಿಸಬೇಕೆ ಎಂಬುದು ಅವರ (ತೆಲಂಗಾಣ ಸ್ಪೀಕರ್) ವೈಯಕ್ತಿಕ ವಿಷಯ. ಇದು ನ್ಯಾಯಾಂಗ ನಿಂದನೆಯಾಗಿದೆ” ಎಂದು ಸಿಜೆಐ ಬಿ.ಆರ್. ಗವಾಯಿ ನೇತೃತ್ವದ ಪೀಠ ಹೇಳಿದೆ.

ಆಡಳಿತಾರೂಢ ಕಾಂಗ್ರೆಸ್ ಪಕ್ಷಕ್ಕೆ ಸೇರಿದ 10 ಶಾಸಕರನ್ನು ಅನರ್ಹಗೊಳಿಸುವ ಬಗ್ಗೆ ಮೂರು ತಿಂಗಳೊಳಗೆನಿರ್ಧರಿಸುವಂತೆ ನ್ಯಾಯಾಲಯ ಜುಲೈ 31 ರಂದು ಸ್ಪೀಕರ್‌ಗೆ ನಿರ್ದೇಶನ ನೀಡಿತ್ತು.

ಸೋಮವಾರದ ವಿಚಾರಣೆಯ ಸಂದರ್ಭದಲ್ಲಿ, ಸಿಜೆಐ ಎಲ್ಲಾ ವಿಷಯಗಳಲ್ಲಿ ನೋಟಿಸ್‌ಗಳನ್ನು ಜಾರಿಗೊಳಿಸಿದ್ದು, ಎರಡು ವಾರಗಳಲ್ಲಿ ತೀರ್ಮಾನ ತೆಗೆದುಕೊಳ್ಳುವಂತೆ ಅಥವಾ ನ್ಯಾಯಾಂಗ ನಿಂದನೆಯನ್ನು ಎದುರಿಸುವಂತೆ ಸ್ಪೀಕರ್‌ಗೆ ಹೇಳಿದೆ. ಇಂತಹ ವಿಷಯಗಳನ್ನು ನಿರ್ಧರಿಸುವಲ್ಲಿ ಸ್ಪೀಕರ್‌ಗೆ ಸಾಂವಿಧಾನಿಕ ವಿನಾಯಿತಿ ಇಲ್ಲ ಎಂದು ನ್ಯಾಯಾಲಯ ಪುನರುಚ್ಚರಿಸಿದೆ.

“ಸ್ಪೀಕರ್ ತಮ್ಮ ಹೊಸ ವರ್ಷದ ಸಂಭ್ರಮವನ್ನು ಎಲ್ಲಿ ಆಚರಿಸಬೇಕು” ಎಂದು ಅವರೇ ನಿರ್ಧರಿಸಲಿ” ಎಂದು ಹೇಳಿದ ಸಿಜೆಐ, ಸಂಭವನೀಯ ಪರಿಣಾಮಗಳ ಬಗ್ಗೆಯೂ ಸುಳಿವು ನೀಡಿದ್ದಾರೆ.

ಬಿಆರ್‌ಎಸ್ ನಾಯಕರಾದ ಕೆ.ಟಿ. ರಾಮರಾವ್, ಪಾಡಿ ಕೌಶಿಕ್ ರೆಡ್ಡಿ ಮತ್ತು ಕೆ.ಒ. ವಿವೇಕಾನಂದ್ ಸಲ್ಲಿಸಿದ್ದ ಅರ್ಜಿಗಳನ್ನು ಈ ಹಿಂದೆ ಅಂಗೀಕರಿಸಿದ್ದ ಪೀಠ, ರಾಜಕೀಯ ಪಕ್ಷಾಂತರಗಳು ರಾಷ್ಟ್ರೀಯ ಕಾಳಜಿಯ ವಿಷಯವಾಗಿದ್ದು, ಅದನ್ನು ತಡೆಯದಿದ್ದರೆ ಪ್ರಜಾಪ್ರಭುತ್ವವನ್ನು ಅಸ್ಥಿರಗೊಳಿಸಬಹುದು ಎಂದು ಹೇಳಿತ್ತು.

“ಪ್ರಸ್ತುತ ಮೇಲ್ಮನವಿಯನ್ನು ನಾವು ಅಂಗೀಕರಿಸಲು ಒಲವು ತೋರುತ್ತೇವೆ. ಹೈಕೋರ್ಟ್ ವಿಭಾಗೀಯ ಪೀಠವು 2024ರ ನವೆಂಬರ್ 22ರಂದು ಹೊರಡಿಸಿದ ಆದೇಶವನ್ನು ರದ್ದುಗೊಳಿಸಲಾಗಿದೆ. 10 ಶಾಸಕರ ವಿರುದ್ಧದ ಅನರ್ಹತಾ ಪ್ರಕ್ರಿಯೆಯನ್ನು ಸಾಧ್ಯವಾದಷ್ಟು ಬೇಗ ಮತ್ತು 3 ತಿಂಗಳೊಳಗೆ ನಿರ್ಧರಿಸಬೇಕು. ಯಾವುದೇ ಶಾಸಕರಿಗೆ ವಿಚಾರಣೆಯನ್ನು ಮುಂದೂಡಲು ಅವಕಾಶ ನೀಡಬಾರದು. ಹಾಗೆ ಮಾಡಿದರೆ, ಸ್ಪೀಕರ್ ಪ್ರತಿಕೂಲ ತೀರ್ಮಾನಗಳನ್ನು ಎದುರಿಸಬೇಕಾಗುತ್ತದೆ” ಎಂದು ನ್ಯಾಯಾಲಯ ಈ ಹಿಂದೆ ಹೇಳಿತ್ತು.

ವಿಚಾರಣೆಗಳನ್ನು ನಿಗದಿಪಡಿಸುವ ಏಕಸದಸ್ಯ ನ್ಯಾಯಾಧೀಶರ ನಿರ್ದೇಶನವನ್ನು ರದ್ದುಗೊಳಿಸಿದ ತೆಲಂಗಾಣ ಹೈಕೋರ್ಟ್ ವಿಭಾಗೀಯ ಪೀಠದ ತೀರ್ಪನ್ನು ಬದಿಗಿಟ್ಟಿದ್ದ ಸುಪ್ರೀಂ ಕೋರ್ಟ್, ಯಾವುದೇ ಶಾಸಕರಿಗೆ ಅನರ್ಹತೆ ಪ್ರಕ್ರಿಯೆಯನ್ನು ವಿಳಂಬ ಮಾಡಲು ಅವಕಾಶ ನೀಡಬಾರದು ಎಂದು ಒತ್ತಿ ಹೇಳಿತ್ತು.

ಶಾಸಕರ ಅನರ್ಹತೆಗೆ ಪ್ರಸ್ತುತ ಇರುವ ಕಾರ್ಯವಿಧಾನವನ್ನು ಸಂಸತ್ತು ಪರಿಶೀಲಿಸಬೇಕು. ಸ್ಪೀಕರ್‌ಗಳು ಆಗಾಗ್ಗೆ ಇಂತಹ ಪ್ರಕರಣಗಳನ್ನು ವಿಳಂಬ ಮಾಡುತ್ತಾರೆ, ಪಕ್ಷಾಂತರಿಗಳ ವಿರುದ್ಧದ ಕ್ರಮವನ್ನು ದುರ್ಬಲಗೊಳಿಸುತ್ತಾರೆ ಮತ್ತು ಪ್ರಜಾಪ್ರಭುತ್ವಕ್ಕೆ ಅಪಾಯವನ್ನುಂಟುಮಾಡುತ್ತಾರೆ ಎಂದಿತ್ತು.

ಬಾಕಿ ಇರುವ ಅನರ್ಹತೆ ಪ್ರಕರಣಗಳ ಕುರಿತು ಸ್ಪೀಕರ್ ಸಕಾಲಿಕ ಕ್ರಮ ಕೈಗೊಳ್ಳಬೇಕೆಂದು ಬಿಆರ್‌ಎಸ್ ನಾಯಕರು ಸಲ್ಲಿಸಿದ್ದ ಅರ್ಜಿಗಳು ಕೋರಿವೆ. ಅರ್ಜಿಗಳು ಸಲ್ಲಿಕೆಯಾದ ಏಳು ತಿಂಗಳ ನಂತರ, ನ್ಯಾಯಾಲಯ ಮಧ್ಯಪ್ರವೇಶಿಸಿದ ನಂತರವೇ ಸ್ಪೀಕರ್ ನೋಟಿಸ್ ನೀಡಿದ್ದು ‘ದುರದೃಷ್ಟಕರ’ ಎಂದು ಸುಪ್ರೀಂ ಕೋರ್ಟ್ ಈ ಹಿಂದೆ ಹೇಳಿತ್ತು.

ಹತ್ತನೇ ಶೆಡ್ಯೂಲ್ ಅಡಿಯಲ್ಲಿ ನ್ಯಾಯಾಧೀಶರಾಗಿ ಕಾರ್ಯನಿರ್ವಹಿಸುವಾಗ ಸ್ಪೀಕರ್ ಹೈಕೋರ್ಟ್‌ಗಳು ಮತ್ತು ಸುಪ್ರೀಂ ಕೋರ್ಟ್‌ನ ಅಧಿಕಾರ ವ್ಯಾಪ್ತಿಗೆ ಒಳಪಟ್ಟ ನ್ಯಾಯಮಂಡಳಿಯಾಗಿ ಕಾರ್ಯನಿರ್ವಹಿಸುತ್ತಾರೆ ಎಂದು ನ್ಯಾಯಾಲಯ ಪುನರುಚ್ಚರಿಸಿದ್ದು, ಹತ್ತನೇ ಶೆಡ್ಯೂಲ್ ಅಡಿಯಲ್ಲಿ ನ್ಯಾಯಮಂಡಳಿಯಾಗಿ ಕಾರ್ಯನಿರ್ವಹಿಸುವಾಗ ಸ್ಪೀಕರ್ ಯಾವುದೇ ಸಾಂವಿಧಾನಿಕ ವಿನಾಯಿತಿಯನ್ನು ಅನುಭವಿಸುವುದಿಲ್ಲ” ಎಂದು ತಿಳಿಸಿದೆ.

ಅನರ್ಹತೆ ಎದುರಿಸುತ್ತಿರುವ ಶಾಸಕರು ಕಲಾಪವನ್ನು ದೀರ್ಘಗೊಳಿಸಲು ಅವಕಾಶ ನೀಡಬಾರದು ಎಂದು ಸ್ಪೀಕರ್‌ಗೆ ನ್ಯಾಯಾಲಯ ನಿರ್ದೇಶನ ನೀಡಿದೆ. ವಿಳಂಬ ಮಾಡುವ ಯಾವುದೇ ಪ್ರಯತ್ನವು ಪ್ರತಿಕೂಲ ತೀರ್ಮಾನಗಳಿಗೆ ಕಾರಣವಾಗಬಹುದು ಎಂದು ಹೇಳಿದೆ.

ಜೈಸಲ್ಮೇರ್‌ನ ಭಾರತ-ಪಾಕ್ ಗಡಿಯಲ್ಲಿ ಪಾಕಿಸ್ತಾನಕ್ಕೆ ನುಸುಳಲು ಯತ್ನಿಸುತ್ತಿದ್ದ ಯುವಕನನ್ನು ಸೆರೆ ಹಿಡಿದ ಬಿಎಸ್ಎಫ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...